ಕರ್ತವ್ಯದ ವೇಳೆ ಮಡಿದ ಬೆಸ್ಕಾಂನ ಮೂವರು ಸಿಬ್ಬಂದಿಯ ಕುಟುಂಬಸ್ಥರಿಗೆ ಇಂಧನ ಸಚಿವ ಕೆ.ಜೆ ಜಾರ್ಜ್ ತಲಾ ಒಂದು ಕೋಟಿ ರೂ. ಪರಿಹಾರದ ಚೆಕ್ ವಿತರಿಸಿದರು.
ಬೆಸ್ಕಾಂ ಕಾರ್ಪೋರೇಟ್ ಕಚೇರಿಯಲ್ಲಿ ಸಂತ್ರಸ್ತರ ಕುಟುಂಬದವರನ್ನು ಬುಧವಾರ ಭೇಟಿಯಾದ ಸಚಿವರು, ಅವರಿಗೆ ವಿಮಾ ಸಹಾಯವಾಗಿ ಚೆಕ್ ವಿತರಿಸಿದರು.
ವಿದ್ಯುದಾಘಾತದಲ್ಲಿ ಮೃತಪಟ್ಟ ಗೌರಿಬಿದನೂರು ಉಪವಿಭಾಗದ ಸಹಾಯಕ ಪವರ್ಮ್ಯಾನ್ ಉದಯ್ ಕುಮಾರ್ ಅವರ ಪತ್ನಿ ವಿ. ಕೀರ್ತನಾ, ರಸ್ತೆ ಅಪಘಾತಗಳಲ್ಲಿ ಮೃತರಾದ ಗುಡಿಬಂಡೆ ಉಪವಿಭಾಗದ ಪವರ್ಮ್ಯಾನ್ ಬಿ.ವಿ. ಮಂಜಪ್ಪ ಅವರ ಪತ್ನಿ ದಾಕ್ಷಾಯಿಣಿ ಹಾಗೂ ಚಿಂತಾಮಣಿ ಉಪವಿಭಾಗದ ಪವರ್ ಮ್ಯಾನ್ ಅಮರನಾಥ್ ಅವರ ಪತ್ನಿ ಮುನಿರತ್ನಮ್ಮ ಅವರು ಸಚಿವರಿಂದ ಪರಿಹಾರದ ಚೆಕ್ ಸ್ವೀಕರಿಸಿದರು.
“ನಮ್ಮ ಇಲಾಖೆಯ ಸಿಬ್ಬಂದಿ, ವಿಶೇಷವಾಗಿ ಲೈನ್ಮ್ಯಾನ್ಗಳ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ. ಅವರಿಗೆ ಅಗತ್ಯ ವೈಯಕ್ತಿಕ ರಕ್ಷಣಾ ಸಾಧನಗಳನ್ನು ಒದಗಿಸಲಾಗುತ್ತದೆ. ಆದರೂ, ಅನಿರೀಕ್ಷಿತ ಘಟನೆಗಳಲ್ಲಿ ಮೃತಪಟ್ಟ ಸಿಬ್ಬಂದಿಯ ಕುಟುಂಬದವರಿಗೆ ನೆರವಿನ ಹಸ್ತ ಚಾಚಲಾಗುತ್ತದೆ. ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಸೂಪರ್ ಸ್ಯಾಲರಿ ಅಕೌಂಟ್ ವಿಮಾ ಪ್ರಯೋಜನದಡಿ ಸಂತ್ರಸ್ತರ ಕುಟುಂಬದವರಿಗೆ ಈ ಚೆಕ್ ಹಸ್ತಾಂತರಿಸಲಾಗಿದೆ,” ಎಂದು ಸಚಿವರು ತಿಳಿಸಿದರು.
ಈ ಸಂದರ್ಭದಲ್ಲಿ ಇಂಧನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ, ಕೆಪಿಟಿಸಿಎಲ್ನ ವ್ಯವಸ್ಥಾಕ ನಿರ್ದೇಶಕ ರಾಮ್ ಪ್ರಸಾತ್ ಮನೋಹರ್, ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಡಾ. ಎನ್. ಶಿವಶಂಕರ ಹಾಗೂ ಹಿರಿಯ ಅಧಿಕಾರಿಗಳು ಇದ್ದರು.
ಗಣೇಶ್ ಕುಮಾರ್ ಮತ್ತು ಪೂರ್ಣಿಮಾ ಅವರ ಪೋಷಕತ್ವದಲ್ಲಿ, ಕೇಶವ ಮತ್ತು ಸುಷ್ಮಾ ದಂಪತಿಯ ಪುತ್ರಿ ಅದ್ವಿತಾ ಅವರ ಜನ್ಮದಿನವನ್ನು ಬಿಸವನಹಳ್ಳಿ…
ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…
ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…
ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ…
ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜೂನ್ 20 ರಿಂದ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಯನ್ನು…
ದೊಡ್ಡಬಳ್ಳಾಪುರ: ಪರಿಸರವನ್ನು ಕಾಪಾಡುವುದು ಕೇವಲ ಸರ್ಕಾರದ ಜವಾಬ್ದಾರಿಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ನಾವು ಇಂದು ಮಾಡುವ ಸಣ್ಣ…