ಕರ್ತವ್ಯದ ವೇಳೆ ಮಡಿದ ಬೆಸ್ಕಾಂನ ಮೂವರು ಸಿಬ್ಬಂದಿಯ ಕುಟುಂಬಸ್ಥರಿಗೆ ಇಂಧನ ಸಚಿವ ಕೆ.ಜೆ ಜಾರ್ಜ್ ತಲಾ ಒಂದು ಕೋಟಿ ರೂ. ಪರಿಹಾರದ ಚೆಕ್ ವಿತರಿಸಿದರು.
ಬೆಸ್ಕಾಂ ಕಾರ್ಪೋರೇಟ್ ಕಚೇರಿಯಲ್ಲಿ ಸಂತ್ರಸ್ತರ ಕುಟುಂಬದವರನ್ನು ಬುಧವಾರ ಭೇಟಿಯಾದ ಸಚಿವರು, ಅವರಿಗೆ ವಿಮಾ ಸಹಾಯವಾಗಿ ಚೆಕ್ ವಿತರಿಸಿದರು.
ವಿದ್ಯುದಾಘಾತದಲ್ಲಿ ಮೃತಪಟ್ಟ ಗೌರಿಬಿದನೂರು ಉಪವಿಭಾಗದ ಸಹಾಯಕ ಪವರ್ಮ್ಯಾನ್ ಉದಯ್ ಕುಮಾರ್ ಅವರ ಪತ್ನಿ ವಿ. ಕೀರ್ತನಾ, ರಸ್ತೆ ಅಪಘಾತಗಳಲ್ಲಿ ಮೃತರಾದ ಗುಡಿಬಂಡೆ ಉಪವಿಭಾಗದ ಪವರ್ಮ್ಯಾನ್ ಬಿ.ವಿ. ಮಂಜಪ್ಪ ಅವರ ಪತ್ನಿ ದಾಕ್ಷಾಯಿಣಿ ಹಾಗೂ ಚಿಂತಾಮಣಿ ಉಪವಿಭಾಗದ ಪವರ್ ಮ್ಯಾನ್ ಅಮರನಾಥ್ ಅವರ ಪತ್ನಿ ಮುನಿರತ್ನಮ್ಮ ಅವರು ಸಚಿವರಿಂದ ಪರಿಹಾರದ ಚೆಕ್ ಸ್ವೀಕರಿಸಿದರು.
“ನಮ್ಮ ಇಲಾಖೆಯ ಸಿಬ್ಬಂದಿ, ವಿಶೇಷವಾಗಿ ಲೈನ್ಮ್ಯಾನ್ಗಳ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ. ಅವರಿಗೆ ಅಗತ್ಯ ವೈಯಕ್ತಿಕ ರಕ್ಷಣಾ ಸಾಧನಗಳನ್ನು ಒದಗಿಸಲಾಗುತ್ತದೆ. ಆದರೂ, ಅನಿರೀಕ್ಷಿತ ಘಟನೆಗಳಲ್ಲಿ ಮೃತಪಟ್ಟ ಸಿಬ್ಬಂದಿಯ ಕುಟುಂಬದವರಿಗೆ ನೆರವಿನ ಹಸ್ತ ಚಾಚಲಾಗುತ್ತದೆ. ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಸೂಪರ್ ಸ್ಯಾಲರಿ ಅಕೌಂಟ್ ವಿಮಾ ಪ್ರಯೋಜನದಡಿ ಸಂತ್ರಸ್ತರ ಕುಟುಂಬದವರಿಗೆ ಈ ಚೆಕ್ ಹಸ್ತಾಂತರಿಸಲಾಗಿದೆ,” ಎಂದು ಸಚಿವರು ತಿಳಿಸಿದರು.
ಈ ಸಂದರ್ಭದಲ್ಲಿ ಇಂಧನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ, ಕೆಪಿಟಿಸಿಎಲ್ನ ವ್ಯವಸ್ಥಾಕ ನಿರ್ದೇಶಕ ರಾಮ್ ಪ್ರಸಾತ್ ಮನೋಹರ್, ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಡಾ. ಎನ್. ಶಿವಶಂಕರ ಹಾಗೂ ಹಿರಿಯ ಅಧಿಕಾರಿಗಳು ಇದ್ದರು.
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…
ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…
ದೊಡ್ಡಬಳ್ಳಾಪುರ: ಒಡ್ಡರಹಳ್ಳಿ ಹಾಗೂ ದೊಡ್ಡಬಳ್ಳಾಪುರ ರೈಲು ನಿಲ್ದಾಣಗಳ ನಡುವಿನ ಡಿ ಕ್ರಾಸ್ ರೈಲ್ವೆ ಬ್ರಿಡ್ಜ್ ಸಮೀಪ ಶುಕ್ರವಾರ (ಸೆ.11) ಮಧ್ಯಾಹ್ನ…
ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಗೆ ಸರ್ಕಾರವು ಮೂವರು ನಾಮನಿರ್ದೇಶಿತ ಸದಸ್ಯರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಕರ್ನಾಟಕ ಪೌರಸಭೆಗಳ…