ಆಟದಲ್ಲಿ ಸೋಲು-ಗೆಲುವು ಸಾಮಾನ್ಯ: ಆರೋಗ್ಯಕರ ಆಟಕ್ಕೆ ಉತ್ತೇಜಿಸಿ: ಸಚಿವ ಕೆ‌.ಹೆಚ್.ಮುನಿಯಪ್ಪ

ಆಟದಲ್ಲಿ ಸೋಲು-ಗೆಲುವು ಸರ್ವೇ ಸಾಮಾನ್ಯ ಆದ್ದರಿಂದ ಕ್ರೀಡಾಪಟುಗಳು ಸ್ಫೂರ್ತಿದಾಯಕ, ಆರೋಗ್ಯಕರವಾದ ಆಟವಾಡಬೇಕು ಎಂದು ಆಹಾರ ಸಚಿವ ಕೆ‌.ಹೆಚ್.ಮುನಿಯಪ್ಪ ತಿಳಿಸಿದರು.

ತೂಬಗೆರೆ ಗ್ರಾಮದಲ್ಲಿ ಆಯೋಜಿಸಿದ್ದ ಹೋಬಳಿ ಮಟ್ಟದ ಕ್ರೀಡಾಕೂಟಕ್ಕೆ ದೀಪ ಬೆಳಗುವುದರ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು, ಕ್ರೀಡಾ ಆಯೋಜಕರು, ತರಬೇತುದಾರರು ಕ್ರೀಡಾಪಟುಗಳಿಗೆ ಸೂಕ್ತ ತರಬೇತಿ, ಪ್ರೋತ್ಸಾಹ ನೀಡಿ ಜಿಲ್ಲಾಮಟ್ಟಕ್ಕೆ, ರಾಜ್ಯಮಟ್ಟಕ್ಕೆ ಹೋಗಲು ತಯಾರು ಮಾಡಬೇಕು ಎಂದರು.

ಕ್ರೀಡೆಗೆ ಹಾಗೂ ಕ್ರೀಡಾಪಟುಗಳಿಗೆ ಬೇಕಾದಂತಹ ಸೌಲಭ್ಯಗಳನ್ನು ಕೊಡಲು ನಮ್ಮ ಸರ್ಕಾರ ತಯಾರಿದೆ. ಗುಣಮಟ್ಟದ ವಿದ್ಯಾಭ್ಯಾಸ ನೀಡಲು ಹೊಸ ಚಿಂತನೆ ಮಾಡಲಾಗುತ್ತಿದೆ. ಹಳ್ಳಿಯ ಮಕ್ಕಳು ಅತ್ಯುತ್ತಮ ವ್ಯಾಸಂಗ ಮಾಡಬೇಕು. ಗಾಂಧಿ ಜಯಂತಿಯಂದು ಈ ಹೋಬಳಿಯಲ್ಲಿ ಒಂದು ಶಾಲೆಯನ್ನು ಗುರುತಿಸಿ ಮಾದರಿ ಶಾಲೆಯನ್ನು ಮಾಡುತ್ತೇವೆ ಎಂದರು.

ಈ ವೇಳೆ ತೂಬಗೆರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಂಗಪ್ಪ, ಕೆಪಿಸಿಸಿ ಸದಸ್ಯ ಎಸ್.ಎಸ್.ಮುನಿರಾಜು, ತೂಬಗೆರೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ನಂಜಮ್ಮ ನರಸಿಂಹಮೂರ್ತಿ, ಮೇಳೆಕೊಟೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಬಿ.ಎನ್.ಶ್ರೀನಿವಾಸ್, ಹಾಡೋನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ನಾಗರಾಜು, ಡಿ.ಡಿ.ಪಿ.ಐ ಶ್ರೀಕಂಠ, ಶಿಕ್ಷಣ ಸಂಯೋಜಕರ ಮೂರ್ತಿ, ಪ್ರಾಥಮಿಕ ಶಿಕ್ಷಕರ ಸಂಘದ ಅಧ್ಯಕ್ಷ ಕೆ.ಜಯಕುಮಾರ್, ಪ್ರಧಾನ ಕಾರ್ಯದರ್ಶಿ ವಸಂತ್ ಗೌಡ, ಹಾಗು ಶಾಲೆಯ ಎಲ್ಲಾ ಶಿಕ್ಷಕ ವೃಂದದವರು ಹಾಜರಿದ್ದರು,

Ramesh Babu

Journalist

Recent Posts

ಪ್ರತಿಷ್ಠಿತ ಗೀತಂ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿ ಹಾಸ್ಟೆಲ್ ಕಟ್ಟಡದ ಮೇಲಿಂದ ಬಿದ್ದು ಆತ್ಮಹತ್ಯೆ

ದೊಡ್ಡಬಳ್ಳಾಪುರ ಹೊರವಲಯದಲ್ಲಿರುವ ನಾಗದೇನಹಳ್ಳಿಯ ಸಮೀಪದ‌ ಪ್ರತಿಷ್ಠಿತ ಗೀತಂ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿ ಹಾಸ್ಟೆಲ್ ಕಟ್ಟಡದ ಮೇಲಿಂದ ಬಿದ್ದು ಆತ್ಮಹತ್ಯೆ…

4 hours ago

ಪೊಲೀಸ್‌ ಡ್ರೆಸ್‌ನಲ್ಲಿ ಬಂದು ದರೋಡೆ – 20 ಲಕ್ಷ ನಗದು, ಅರ್ಧ ಕೆಜಿ ಚಿನ್ನಾಭರಣ ದೋಚಿ ಪರಾರಿ.!

ಸಬ್ ಇನ್ಸ್‌ಪೆಕ್ಟರ್‌ ಡ್ರೆಸ್‌ನಲ್ಲಿ ಬಂದು 20 ಲಕ್ಷ ರೂ. ನಗದು, ಅರ್ಧ ಕೆಜಿ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ಬೆಂಗಳೂರಿನ…

6 hours ago

2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್​​

2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್​​ ಆಗಿದೆ. ಸಿಎಂ ಕುರ್ಚಿ ಕಾಳಗದ ನಡುವೆಯೇ ಹಣಕಾಸು ಖಾತೆಯನ್ನ ಹೊಂದಿರುವ…

18 hours ago

ನಟ ವಿಜಯ್ ದೇವರಕೊಂಡ – ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ಅವರದ್ದು ಎನ್ನಲಾದ ವಿವಾಹ ಆಮಂತ್ರಣ ಪತ್ರಿಕೆ ಸೋಷಿಯಲ್ ಮೀಡಿಯಾದಲ್ಲಿ ಫುಲ್ ವೈರಲ್

ಕೊಡಗಿನ ಬೆಡಗಿ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಮತ್ತು ಟಾಲಿವುಡ್ ನಟ ವಿಜಯ್ ದೇವರಕೊಂಡ ಹಲವು ವರ್ಷಗಳಿಂದ ಡೇಟಿಂಗ್‌ನಲ್ಲಿದ್ದಾರೆ ಎನ್ನುವುದು…

19 hours ago

ಜಿಲ್ಲಾ ಮಟ್ಟದ ಕೈಗಾರಿಕಾ ಸಂವಾದ ಸಭೆ: ಸ್ಥಳೀಯರಿಗೆ ಉದ್ಯೋಗಾವಕಾಶ ಮೊದಲ ಆದ್ಯತೆ ಆಗಲಿ- ಸಚಿವ ಕೆ.ಎಚ್ ಮುನಿಯಪ್ಪ

ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕ ಮಾಡಿಕೊಳ್ಳುವ ಸಂದರ್ಭದಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲು ಜಿಲ್ಲಾ ಉಸ್ತುವಾರಿ ಸಚಿವರಾದ…

21 hours ago

ಆಸ್ತಿ ವಿವರ ಮುಚ್ಚಿಟ್ಟು ಸುಳ್ಳು ಪ್ರಮಾಣಪತ್ರ ಸಲ್ಲಿಕೆ ವಿಚಾರ: ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರ ಕಾಂಗ್ರೆಸ್​ ಶಾಸಕ ಎಸ್‌.ಎನ್‌. ಸುಬ್ಬಾರೆಡ್ಡಿ ಆಯ್ಕೆ ಅಸಿಂಧುಗೊಳಿಸಿ ಕರ್ನಾಟಕ ಹೈಕೋರ್ಟ್ ಆದೇಶ

ಬಾಗೇಪಲ್ಲಿ ಕಾಂಗ್ರೆಸ್‌ ಶಾಸಕ ಎಸ್ ಎನ್ ಸುಬ್ಬಾರೆಡ್ಡಿ ಆಯ್ಕೆ ಅಸಿಂಧು ಎಂದು ಕರ್ನಾಟಕ ಹೈಕೋರ್ಟ್‌ ಆದೇಶ ನೀಡಿದೆ. ಚುನಾವಣಾ ಆಯೋಗ…

23 hours ago