ಆಟದಲ್ಲಿ ಸೋಲು-ಗೆಲುವು ಸರ್ವೇ ಸಾಮಾನ್ಯ ಆದ್ದರಿಂದ ಕ್ರೀಡಾಪಟುಗಳು ಸ್ಫೂರ್ತಿದಾಯಕ, ಆರೋಗ್ಯಕರವಾದ ಆಟವಾಡಬೇಕು ಎಂದು ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ ತಿಳಿಸಿದರು.
ತೂಬಗೆರೆ ಗ್ರಾಮದಲ್ಲಿ ಆಯೋಜಿಸಿದ್ದ ಹೋಬಳಿ ಮಟ್ಟದ ಕ್ರೀಡಾಕೂಟಕ್ಕೆ ದೀಪ ಬೆಳಗುವುದರ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು, ಕ್ರೀಡಾ ಆಯೋಜಕರು, ತರಬೇತುದಾರರು ಕ್ರೀಡಾಪಟುಗಳಿಗೆ ಸೂಕ್ತ ತರಬೇತಿ, ಪ್ರೋತ್ಸಾಹ ನೀಡಿ ಜಿಲ್ಲಾಮಟ್ಟಕ್ಕೆ, ರಾಜ್ಯಮಟ್ಟಕ್ಕೆ ಹೋಗಲು ತಯಾರು ಮಾಡಬೇಕು ಎಂದರು.
ಕ್ರೀಡೆಗೆ ಹಾಗೂ ಕ್ರೀಡಾಪಟುಗಳಿಗೆ ಬೇಕಾದಂತಹ ಸೌಲಭ್ಯಗಳನ್ನು ಕೊಡಲು ನಮ್ಮ ಸರ್ಕಾರ ತಯಾರಿದೆ. ಗುಣಮಟ್ಟದ ವಿದ್ಯಾಭ್ಯಾಸ ನೀಡಲು ಹೊಸ ಚಿಂತನೆ ಮಾಡಲಾಗುತ್ತಿದೆ. ಹಳ್ಳಿಯ ಮಕ್ಕಳು ಅತ್ಯುತ್ತಮ ವ್ಯಾಸಂಗ ಮಾಡಬೇಕು. ಗಾಂಧಿ ಜಯಂತಿಯಂದು ಈ ಹೋಬಳಿಯಲ್ಲಿ ಒಂದು ಶಾಲೆಯನ್ನು ಗುರುತಿಸಿ ಮಾದರಿ ಶಾಲೆಯನ್ನು ಮಾಡುತ್ತೇವೆ ಎಂದರು.
ಈ ವೇಳೆ ತೂಬಗೆರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಂಗಪ್ಪ, ಕೆಪಿಸಿಸಿ ಸದಸ್ಯ ಎಸ್.ಎಸ್.ಮುನಿರಾಜು, ತೂಬಗೆರೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ನಂಜಮ್ಮ ನರಸಿಂಹಮೂರ್ತಿ, ಮೇಳೆಕೊಟೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಬಿ.ಎನ್.ಶ್ರೀನಿವಾಸ್, ಹಾಡೋನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ನಾಗರಾಜು, ಡಿ.ಡಿ.ಪಿ.ಐ ಶ್ರೀಕಂಠ, ಶಿಕ್ಷಣ ಸಂಯೋಜಕರ ಮೂರ್ತಿ, ಪ್ರಾಥಮಿಕ ಶಿಕ್ಷಕರ ಸಂಘದ ಅಧ್ಯಕ್ಷ ಕೆ.ಜಯಕುಮಾರ್, ಪ್ರಧಾನ ಕಾರ್ಯದರ್ಶಿ ವಸಂತ್ ಗೌಡ, ಹಾಗು ಶಾಲೆಯ ಎಲ್ಲಾ ಶಿಕ್ಷಕ ವೃಂದದವರು ಹಾಜರಿದ್ದರು,
ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…
ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…
ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…
ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…
ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…