ಆಟದಲ್ಲಿ ಸೋಲು-ಗೆಲುವು ಸರ್ವೇ ಸಾಮಾನ್ಯ ಆದ್ದರಿಂದ ಕ್ರೀಡಾಪಟುಗಳು ಸ್ಫೂರ್ತಿದಾಯಕ, ಆರೋಗ್ಯಕರವಾದ ಆಟವಾಡಬೇಕು ಎಂದು ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ ತಿಳಿಸಿದರು.
ತೂಬಗೆರೆ ಗ್ರಾಮದಲ್ಲಿ ಆಯೋಜಿಸಿದ್ದ ಹೋಬಳಿ ಮಟ್ಟದ ಕ್ರೀಡಾಕೂಟಕ್ಕೆ ದೀಪ ಬೆಳಗುವುದರ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು, ಕ್ರೀಡಾ ಆಯೋಜಕರು, ತರಬೇತುದಾರರು ಕ್ರೀಡಾಪಟುಗಳಿಗೆ ಸೂಕ್ತ ತರಬೇತಿ, ಪ್ರೋತ್ಸಾಹ ನೀಡಿ ಜಿಲ್ಲಾಮಟ್ಟಕ್ಕೆ, ರಾಜ್ಯಮಟ್ಟಕ್ಕೆ ಹೋಗಲು ತಯಾರು ಮಾಡಬೇಕು ಎಂದರು.
ಕ್ರೀಡೆಗೆ ಹಾಗೂ ಕ್ರೀಡಾಪಟುಗಳಿಗೆ ಬೇಕಾದಂತಹ ಸೌಲಭ್ಯಗಳನ್ನು ಕೊಡಲು ನಮ್ಮ ಸರ್ಕಾರ ತಯಾರಿದೆ. ಗುಣಮಟ್ಟದ ವಿದ್ಯಾಭ್ಯಾಸ ನೀಡಲು ಹೊಸ ಚಿಂತನೆ ಮಾಡಲಾಗುತ್ತಿದೆ. ಹಳ್ಳಿಯ ಮಕ್ಕಳು ಅತ್ಯುತ್ತಮ ವ್ಯಾಸಂಗ ಮಾಡಬೇಕು. ಗಾಂಧಿ ಜಯಂತಿಯಂದು ಈ ಹೋಬಳಿಯಲ್ಲಿ ಒಂದು ಶಾಲೆಯನ್ನು ಗುರುತಿಸಿ ಮಾದರಿ ಶಾಲೆಯನ್ನು ಮಾಡುತ್ತೇವೆ ಎಂದರು.
ಈ ವೇಳೆ ತೂಬಗೆರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಂಗಪ್ಪ, ಕೆಪಿಸಿಸಿ ಸದಸ್ಯ ಎಸ್.ಎಸ್.ಮುನಿರಾಜು, ತೂಬಗೆರೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ನಂಜಮ್ಮ ನರಸಿಂಹಮೂರ್ತಿ, ಮೇಳೆಕೊಟೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಬಿ.ಎನ್.ಶ್ರೀನಿವಾಸ್, ಹಾಡೋನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ನಾಗರಾಜು, ಡಿ.ಡಿ.ಪಿ.ಐ ಶ್ರೀಕಂಠ, ಶಿಕ್ಷಣ ಸಂಯೋಜಕರ ಮೂರ್ತಿ, ಪ್ರಾಥಮಿಕ ಶಿಕ್ಷಕರ ಸಂಘದ ಅಧ್ಯಕ್ಷ ಕೆ.ಜಯಕುಮಾರ್, ಪ್ರಧಾನ ಕಾರ್ಯದರ್ಶಿ ವಸಂತ್ ಗೌಡ, ಹಾಗು ಶಾಲೆಯ ಎಲ್ಲಾ ಶಿಕ್ಷಕ ವೃಂದದವರು ಹಾಜರಿದ್ದರು,
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…
ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…