ಆಟೋ ಎಲ್ಪಿಜಿಗಾಗಿ ಡಿಕ್ರಾಸ್ ರಸ್ತೆಯ ಸೂಪರ್ ಗ್ಯಾಸ್ ಬಂಕ್ ಬಳಿ ನೂರಾರು ಆಟೋಗಳು ಸಾಲುಗಟ್ಟಿ ನಿಂತಿವೆ. ಆಟೋ ಎಲ್ಪಿಜಿ ಇಲ್ಲದೆ ಕಂಗಾಲಾಗಿರುವ ಆಟೋ ಚಾಲಕರಿಗೆ ನಗರದ ಏಕೈಕ ಎಲ್ಪಿಜಿ ಕೇಂದ್ರದಲ್ಲಿ ಎಲ್ಪಿಜಿ ಸಿಗುವ ಮಾಹಿತಿ ಮೇರೆಗೆ ಆಟೋ ಚಾಲಕರು ಕಿಲೊ ಮೀಟರ್ ಗಟ್ಟಲೆ ಸಾಲಿನಲ್ಲಿ ಆಟೋಗಳನ್ನ ನಿಲ್ಲಿಸಿ ಕಾಯುತ್ತಿದ್ದಾರೆ.
ಪಕ್ಕದ ಚಿಕ್ಕಬಳ್ಳಾಪುರ, ವಿಜಯಪುರ, ನೆಲಮಂಗಲ ಗೌರಿಬಿದನೂರು, ಯಲಹಂಕ, ದೇವನಹಳ್ಳಿ, ಕೆಆರ್ ಪುರಂ ಸೇರಿದಂತೆ ಹಲವು ದೂರದ ಊರುಗಳಿಂದಲೂ ಆಟೋ ಚಾಲಕರು ಆಗಮಿಸಿ ಮಧ್ಯಾಹ್ನದಿಂದಲೇ ಕಾಯುತ್ತಿದ್ದಾರೆ.
ಎಲ್ಪಿಜಿ ಇಲ್ಲದೆ ಜೀವನ ನಿರ್ಹವಣೆ ಅಸಾಧ್ಯವಾಗಿದೆ. ನಮ್ಮ ಜೀವನ ಬೆಳಗ್ಗೆಯಿಂದ ಸಂಜೆವರೆಗೂ ದುಡಿದು ಬದುಕುವುದು. ಈಗ ಎಲ್ಪಿಜಿ ಇಲ್ಲದೆ ಆಟೋ ನಿಲ್ಲಿಸಿ 10 ದಿನಗಳಾಗಿವೆ. ಮನೆ ಬಳಿ ಸಾಲ ಕೊಟ್ಟವರು ಬರುತ್ತಿದ್ದಾರೆ. ಸಾಲ ಕಟ್ಟಲಾಗದೆ ಪರಿತಪಿಸುವಂತಾಗಿದೆ. ಒಮ್ಮೆ ಸಾಲ ಕೊಟ್ಟವರು ಮತ್ತೊಮ್ಮೆ ಸಾಲ ನೀಡುತ್ತಿಲ್ಲ. ಸರ್ಕಾರ ಅಧಿಕೃತ ಆಟೊ ಚಾಲಕರನ್ನ ಗುರುತಿಸಿ ಸಹಾಧನ ನೀಡಬೇಕು ಎಂದು ಆಟೋ ಚಾಲಕ ಮಂಜುನಾಥ್ ಮನವಿ ಮಾಡಿದರು.
ಬೆಲೆ ಏರಿಕೆಗೆ ಆಟೋ ಚಾಲಕರು ತತ್ತರ:
ಮಧ್ಯಪ್ರಾಚ್ಯ ಯುದ್ಧ ಆರಂಭಕ್ಕೂ ಮುನ್ನ ಎಲ್ಪಿಜಿ ದರವೂ ಪ್ರತಿ ಕೆಜಿಗೆ 52 ರೂ. ಇತ್ತು. ಕಳೆದ 15 ದಿನಗಳಲ್ಲಿ ಬರೋಬ್ಬರಿ 25 ರಿಂದ 30 ರೂ. ಏರಿಕೆಯಾಗಿದೆ. ಇಂದು ಕೂಡ ಬಂಕ್ ಮಾಲೀಕರು ದರ ನಿಗದಿ ಪಡಿಸಲು ಸಮಯ ತೆಗೆದುಕೊಳ್ಳುತ್ತಿದ್ದಾರೆ. ಕಳೆದ ವಾರ 85 ರೂ. ನೀಡಿ ಆಟೋ ಚಾಲಕರು ಎಲ್ಪಿಜಿ ಖರೀದಿಸಿದ್ದರು. ಬೇಡಿಕೆ ಹೆಚ್ಚಾಗಿರುವ ಹಿನ್ನೆಲೆ ದರವನ್ನು ಏರಿಕೆ ಆಗುವ ಭೀತಿ ಕಾಡುತ್ತಿದೆ. ಸದ್ಯ ಇರುವ ಎಲ್ಪಿಜಿ ಪ್ರಮಾಣದಲ್ಲಿ ಪ್ರತಿ ಆಟೊ ಚಾಲಕರಿಗೆ 500 ರೂ.ಗೆ ವಿತರಿಸಲು ನಿರ್ಧರಿಸಲಾಗಿದೆ ಎನ್ನಲಾಗಿದೆ..
ಸ್ಥಳದಲ್ಲಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ…
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ….
ದೇವನಹಳ್ಳಿ: ದೇವನಹಳ್ಳಿ ಸಮೀಪದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೆಂಗಳೂರಿನಿಂದ ಅಹಮದಾಬಾದ್ಗೆ ತೆರಳಲು ಸಿದ್ಧವಾಗಿದ್ದ ಇಂಡಿಗೋ ಸಂಸ್ಥೆಯ 6E-6423 ವಿಮಾನಕ್ಕೆ…
ಸೋನಂ ವಾಂಗ್ ಚುಕ್...... ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗಿಂತ ಸೋನಂ ವಾಂಗ್ ಚುಕ್ ಅವರ ಜೀವ ಭಾರತೀಯರಿಗೆ…
ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್ಶಿಪ್ ಯೋಜನೆಗಾಗಿ ಯಾವುದೇ ರೈತರ ಜಮೀನನ್ನೂ ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.…
ದೊಡ್ಡಬಳ್ಳಾಪುರ: ತಾಲೂಕಿನ ಕೊಡಿಗೇಹಳ್ಳಿ ಗ್ರಾಮ ಪಂಚಾಯಿತಿಗೆ ಒಳಪಡುವ ಪಾಲನಜೋಗಿಹಳ್ಳಿಯಲ್ಲಿ ತ್ಯಾಜ್ಯ ವಿಲೇವಾರಿ ಸಮಸ್ಯೆ ದಿನದಿಂದ ದಿನಕ್ಕೆ ಗಂಭೀರವಾಗುತ್ತಿದ್ದು, ಗ್ರಾಮ ಪ್ರವೇಶ…
ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ–44ರ ದೇವನಹಳ್ಳಿ ಬೈಪಾಸ್ನ ಕೆಂಪೇಗೌಡ ವೃತ್ತದ ಬಳಿ ಮುಂದೆ ಸಾಗುತ್ತಿದ್ದ ಕಂಟೈನರ್ ಲಾರಿಗೆ ಐಚರ್ ಸರಕು ಸಾಗಣೆ…
ಸೆಲೆಬ್ರಿಟಿ................ ಇತ್ತೀಚಿನ ವರ್ಷಗಳ ಭಾರತೀಯ ಸಮಾಜವನ್ನು ಸೂಕ್ಷ್ಮವಾಗಿ ಗಮನಿಸಿದರೆ ಬದಲಾಗುತ್ತಿರುವ ಯುವಸಮೂಹದ ಗ್ರಹಿಕಾ ಸಾಮರ್ಥ್ಯದ ಬಗ್ಗೆ ಅನುಮಾನ ಮೂಡುತ್ತಿದೆ. ಏಕೆಂದರೆ,…