ಆಟೋ ಎಲ್‌ಪಿಜಿಗಾಗಿ ಸಾಲುಗಟ್ಟಿ ನಿಂತ ನೂರಾರು ಆಟೋಗಳು

ಆಟೋ ಎಲ್‌ಪಿಜಿಗಾಗಿ ಡಿಕ್ರಾಸ್ ರಸ್ತೆಯ ಸೂಪರ್ ಗ್ಯಾಸ್ ಬಂಕ್ ಬಳಿ ನೂರಾರು ಆಟೋಗಳು ಸಾಲುಗಟ್ಟಿ ನಿಂತಿವೆ. ಆಟೋ ಎಲ್ಪಿಜಿ ಇಲ್ಲದೆ ಕಂಗಾಲಾಗಿರುವ ಆಟೋ ಚಾಲಕರಿಗೆ ನಗರದ ಏಕೈಕ ಎಲ್ಪಿಜಿ ಕೇಂದ್ರದಲ್ಲಿ ಎಲ್ಪಿಜಿ ಸಿಗುವ ಮಾಹಿತಿ ಮೇರೆಗೆ ಆಟೋ ಚಾಲಕರು ಕಿಲೊ ಮೀಟರ್ ಗಟ್ಟಲೆ ಸಾಲಿನಲ್ಲಿ ಆಟೋಗಳನ್ನ ನಿಲ್ಲಿಸಿ ಕಾಯುತ್ತಿದ್ದಾರೆ.

ಪಕ್ಕದ ಚಿಕ್ಕಬಳ್ಳಾಪುರ, ವಿಜಯಪುರ, ನೆಲಮಂಗಲ ಗೌರಿಬಿದನೂರು, ಯಲಹಂಕ, ದೇವನಹಳ್ಳಿ, ಕೆಆರ್ ಪುರಂ ಸೇರಿದಂತೆ ಹಲವು ದೂರದ ಊರುಗಳಿಂದಲೂ ಆಟೋ ಚಾಲಕರು ಆಗಮಿಸಿ ಮಧ್ಯಾಹ್ನದಿಂದಲೇ ಕಾಯುತ್ತಿದ್ದಾರೆ.

ಎಲ್ಪಿಜಿ ಇಲ್ಲದೆ ಜೀವನ ನಿರ್ಹವಣೆ ಅಸಾಧ್ಯವಾಗಿದೆ. ನಮ್ಮ ಜೀವನ ಬೆಳಗ್ಗೆಯಿಂದ ಸಂಜೆವರೆಗೂ ದುಡಿದು ಬದುಕುವುದು. ಈಗ ಎಲ್ಪಿಜಿ ಇಲ್ಲದೆ ಆಟೋ ನಿಲ್ಲಿಸಿ 10 ದಿನಗಳಾಗಿವೆ. ಮನೆ ಬಳಿ ಸಾಲ ಕೊಟ್ಟವರು ಬರುತ್ತಿದ್ದಾರೆ. ಸಾಲ ಕಟ್ಟಲಾಗದೆ ಪರಿತಪಿಸುವಂತಾಗಿದೆ. ಒಮ್ಮೆ ಸಾಲ ಕೊಟ್ಟವರು ಮತ್ತೊಮ್ಮೆ ಸಾಲ ನೀಡುತ್ತಿಲ್ಲ. ಸರ್ಕಾರ ಅಧಿಕೃತ ಆಟೊ ಚಾಲಕರನ್ನ ಗುರುತಿಸಿ ಸಹಾಧನ ನೀಡಬೇಕು ಎಂದು ಆಟೋ ಚಾಲಕ ಮಂಜುನಾಥ‌್ ಮನವಿ ಮಾಡಿದರು.

ಬೆಲೆ ಏರಿಕೆಗೆ ಆಟೋ ಚಾಲಕರು ತತ್ತರ: 

ಮಧ್ಯಪ್ರಾಚ್ಯ ಯುದ್ಧ ಆರಂಭಕ್ಕೂ ಮುನ್ನ ಎಲ್ಪಿಜಿ ದರವೂ ಪ್ರತಿ ಕೆಜಿಗೆ 52 ರೂ. ಇತ್ತು. ಕಳೆದ 15 ದಿನಗಳಲ್ಲಿ ಬರೋಬ್ಬರಿ 25 ರಿಂದ 30 ರೂ. ಏರಿಕೆಯಾಗಿದೆ. ಇಂದು ಕೂಡ ಬಂಕ್ ಮಾಲೀಕರು ದರ ನಿಗದಿ ಪಡಿಸಲು ಸಮಯ ತೆಗೆದುಕೊಳ್ಳುತ್ತಿದ್ದಾರೆ. ಕಳೆದ ವಾರ 85 ರೂ. ನೀಡಿ ಆಟೋ ಚಾಲಕರು ಎಲ್ಪಿಜಿ ಖರೀದಿಸಿದ್ದರು. ಬೇಡಿಕೆ ಹೆಚ್ಚಾಗಿರುವ ಹಿನ್ನೆಲೆ ದರವನ್ನು ಏರಿಕೆ ಆಗುವ ಭೀತಿ ಕಾಡುತ್ತಿದೆ. ಸದ್ಯ ಇರುವ ಎಲ್ಪಿಜಿ ಪ್ರಮಾಣದಲ್ಲಿ ಪ್ರತಿ ಆಟೊ ಚಾಲಕರಿಗೆ 500 ರೂ.ಗೆ ವಿತರಿಸಲು ನಿರ್ಧರಿಸಲಾಗಿದೆ ಎನ್ನಲಾಗಿದೆ..

ಸ್ಥಳದಲ್ಲಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ…

ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ….

Ramesh Babu

Journalist

Recent Posts

ಬಿಸವನಹಳ್ಳಿಯಲ್ಲಿ ಅದ್ವಿತಾ ಜನ್ಮದಿನ ಅರ್ಥಪೂರ್ಣ ಆಚರಣೆ

ಗಣೇಶ್ ಕುಮಾರ್ ಮತ್ತು ಪೂರ್ಣಿಮಾ ಅವರ ಪೋಷಕತ್ವದಲ್ಲಿ, ಕೇಶವ ಮತ್ತು ಸುಷ್ಮಾ ದಂಪತಿಯ ಪುತ್ರಿ ಅದ್ವಿತಾ ಅವರ ಜನ್ಮದಿನವನ್ನು ಬಿಸವನಹಳ್ಳಿ…

4 hours ago

ಕಾರಿಗೆ ಅಡ್ಡ ಬಂದ ನಾಯಿ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ

ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…

7 hours ago

ಅನುಭವ, ಹಿರಿತನಕ್ಕೆ ತಕ್ಕಂತೆ ಸಚಿವ ಸ್ಥಾನ ನೀಡಿ- ಮನು.ಆರ್.ವಿ ಒತ್ತಾಯ

ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…

19 hours ago

ಜೂ..7ರಂದು ‘ವಾಸ್ತುವಿನ ನಡಿಗೆ ಗ್ರಾಮದ ಕಡೆಗೆ’ ಕಾರ್ಯಕ್ರಮ: ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಭಾಗಿ- ಪೂತಮಾನಸ ಜ್ಯೋತಿಷ್ಯಾಲಯ ವ್ಯವಸ್ಥಾಪಕ ಡಾ.ಗಿರೀಶ್ ಕೆ

ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ…

20 hours ago

ಜೂ. 20 ರಿಂದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಅರಂಭ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜೂನ್ 20 ರಿಂದ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಯನ್ನು…

22 hours ago

ಪರಿಸರ ಸಂರಕ್ಷಣೆ ಪ್ರತಿಯೊಬ್ಬ ನಾಗರಿಕನ ಕರ್ತವ್ಯ

  ದೊಡ್ಡಬಳ್ಳಾಪುರ: ಪರಿಸರವನ್ನು ಕಾಪಾಡುವುದು ಕೇವಲ ಸರ್ಕಾರದ ಜವಾಬ್ದಾರಿಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ನಾವು ಇಂದು ಮಾಡುವ ಸಣ್ಣ…

1 day ago