ಆಟೋ ಎಲ್‌ಪಿಜಿಗಾಗಿ ಸಾಲುಗಟ್ಟಿ ನಿಂತ ನೂರಾರು ಆಟೋಗಳು

ಆಟೋ ಎಲ್‌ಪಿಜಿಗಾಗಿ ಡಿಕ್ರಾಸ್ ರಸ್ತೆಯ ಸೂಪರ್ ಗ್ಯಾಸ್ ಬಂಕ್ ಬಳಿ ನೂರಾರು ಆಟೋಗಳು ಸಾಲುಗಟ್ಟಿ ನಿಂತಿವೆ. ಆಟೋ ಎಲ್ಪಿಜಿ ಇಲ್ಲದೆ ಕಂಗಾಲಾಗಿರುವ ಆಟೋ ಚಾಲಕರಿಗೆ ನಗರದ ಏಕೈಕ ಎಲ್ಪಿಜಿ ಕೇಂದ್ರದಲ್ಲಿ ಎಲ್ಪಿಜಿ ಸಿಗುವ ಮಾಹಿತಿ ಮೇರೆಗೆ ಆಟೋ ಚಾಲಕರು ಕಿಲೊ ಮೀಟರ್ ಗಟ್ಟಲೆ ಸಾಲಿನಲ್ಲಿ ಆಟೋಗಳನ್ನ ನಿಲ್ಲಿಸಿ ಕಾಯುತ್ತಿದ್ದಾರೆ.

ಪಕ್ಕದ ಚಿಕ್ಕಬಳ್ಳಾಪುರ, ವಿಜಯಪುರ, ನೆಲಮಂಗಲ ಗೌರಿಬಿದನೂರು, ಯಲಹಂಕ, ದೇವನಹಳ್ಳಿ, ಕೆಆರ್ ಪುರಂ ಸೇರಿದಂತೆ ಹಲವು ದೂರದ ಊರುಗಳಿಂದಲೂ ಆಟೋ ಚಾಲಕರು ಆಗಮಿಸಿ ಮಧ್ಯಾಹ್ನದಿಂದಲೇ ಕಾಯುತ್ತಿದ್ದಾರೆ.

ಎಲ್ಪಿಜಿ ಇಲ್ಲದೆ ಜೀವನ ನಿರ್ಹವಣೆ ಅಸಾಧ್ಯವಾಗಿದೆ. ನಮ್ಮ ಜೀವನ ಬೆಳಗ್ಗೆಯಿಂದ ಸಂಜೆವರೆಗೂ ದುಡಿದು ಬದುಕುವುದು. ಈಗ ಎಲ್ಪಿಜಿ ಇಲ್ಲದೆ ಆಟೋ ನಿಲ್ಲಿಸಿ 10 ದಿನಗಳಾಗಿವೆ. ಮನೆ ಬಳಿ ಸಾಲ ಕೊಟ್ಟವರು ಬರುತ್ತಿದ್ದಾರೆ. ಸಾಲ ಕಟ್ಟಲಾಗದೆ ಪರಿತಪಿಸುವಂತಾಗಿದೆ. ಒಮ್ಮೆ ಸಾಲ ಕೊಟ್ಟವರು ಮತ್ತೊಮ್ಮೆ ಸಾಲ ನೀಡುತ್ತಿಲ್ಲ. ಸರ್ಕಾರ ಅಧಿಕೃತ ಆಟೊ ಚಾಲಕರನ್ನ ಗುರುತಿಸಿ ಸಹಾಧನ ನೀಡಬೇಕು ಎಂದು ಆಟೋ ಚಾಲಕ ಮಂಜುನಾಥ‌್ ಮನವಿ ಮಾಡಿದರು.

ಬೆಲೆ ಏರಿಕೆಗೆ ಆಟೋ ಚಾಲಕರು ತತ್ತರ: 

ಮಧ್ಯಪ್ರಾಚ್ಯ ಯುದ್ಧ ಆರಂಭಕ್ಕೂ ಮುನ್ನ ಎಲ್ಪಿಜಿ ದರವೂ ಪ್ರತಿ ಕೆಜಿಗೆ 52 ರೂ. ಇತ್ತು. ಕಳೆದ 15 ದಿನಗಳಲ್ಲಿ ಬರೋಬ್ಬರಿ 25 ರಿಂದ 30 ರೂ. ಏರಿಕೆಯಾಗಿದೆ. ಇಂದು ಕೂಡ ಬಂಕ್ ಮಾಲೀಕರು ದರ ನಿಗದಿ ಪಡಿಸಲು ಸಮಯ ತೆಗೆದುಕೊಳ್ಳುತ್ತಿದ್ದಾರೆ. ಕಳೆದ ವಾರ 85 ರೂ. ನೀಡಿ ಆಟೋ ಚಾಲಕರು ಎಲ್ಪಿಜಿ ಖರೀದಿಸಿದ್ದರು. ಬೇಡಿಕೆ ಹೆಚ್ಚಾಗಿರುವ ಹಿನ್ನೆಲೆ ದರವನ್ನು ಏರಿಕೆ ಆಗುವ ಭೀತಿ ಕಾಡುತ್ತಿದೆ. ಸದ್ಯ ಇರುವ ಎಲ್ಪಿಜಿ ಪ್ರಮಾಣದಲ್ಲಿ ಪ್ರತಿ ಆಟೊ ಚಾಲಕರಿಗೆ 500 ರೂ.ಗೆ ವಿತರಿಸಲು ನಿರ್ಧರಿಸಲಾಗಿದೆ ಎನ್ನಲಾಗಿದೆ..

ಸ್ಥಳದಲ್ಲಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ…

ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ….

Ramesh Babu

Journalist

Recent Posts

ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿ ಹುದ್ದೆಗಳ ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆ ಪಟ್ಟಿ…

17 hours ago

ಬರದ ಬವಣೆಗೆ ಸಿಲುಕಿದ ದೊಡ್ಡಬಳ್ಳಾಪುರ: ಬರಪೀಡಿತ ಪಟ್ಟಿಗೆ ಸೇರ್ಪಡೆ

ಬೆಂಗಳೂರು ಗ್ರಾಮಾಂತರ: ಮಳೆ ಕೊರತೆ ಹಾಗೂ ಬೆಳೆ ನಷ್ಟದಿಂದ ಸಂಕಷ್ಟಕ್ಕೆ ಸಿಲುಕಿದ್ದ ದೊಡ್ಡಬಳ್ಳಾಪುರ ತಾಲೂಕು ಇದೀಗ ಬರಪೀಡಿತ ತಾಲೂಕುಗಳ ಪಟ್ಟಿಗೆ…

18 hours ago

50 ಲಕ್ಷ ಲಂಚ ಪಡೆಯುವಾಗ ತಹಶೀಲ್ದಾರ್ ಲೋಕಾಯುಕ್ತ ಬಲೆಗೆ!

ಧಾರವಾಡ: ಭೂಮಿಯ ‘ಅ-ಖರಾಬ್’ ತೆರವುಗೊಳಿಸಲು 1 ಕೋಟಿ ಲಂಚಕ್ಕೆ ಬೇಡಿಕೆ ಇಟ್ಟ ಆರೋಪ ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರ್ ವಿರುದ್ಧ…

19 hours ago

ನವೆಂಬರ್ ಅಂತ್ಯದೊಳಗೆ ತುಮಕೂರಿಗೆ ಎತ್ತಿನಹೊಳೆ ನೀರು-ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ

ರಾಜ್ಯದ ಮಹತ್ವಾಕಾಂಕ್ಷಿ ನೀರಾವರಿ ಯೋಜನೆಗಳಿಗೆ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಭೂತಪೂರ್ವ ವೇಗ ನೀಡಿದ್ದಾರೆ. ಒಂದೆಡೆ ಮೇಕೆದಾಟು ಯೋಜನೆ…

24 hours ago

ಪತಿಯೊಂದಿಗೆ ಲಾಡ್ಜ್‌ಗೆ ತೆರಳಿದ್ದ ಪತ್ನಿ ಶವವಾಗಿ ಪತ್ತೆ: ಸಾವಿನ ಹಿಂದೆ ಕೊಲೆ ಶಂಕೆ; ಪತಿಯ ಚಲನವಲನಗಳ ಕುರಿತು ಪೊಲೀಸರಿಂದ ತನಿಖೆ

ದೊಡ್ಡಬಳ್ಳಾಪುರ: ಪತಿಯೊಂದಿಗೆ ಲಾಡ್ಜ್‌ಗೆ ತೆರಳಿದ್ದ 21 ವರ್ಷದ ಪತ್ನಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಮೃತರನ್ನು ಗೌರಿಬಿದನೂರು ತಾಲೂಕಿನ…

1 day ago

ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ನವೀನ್ ಕುಮಾರ್ ಡಿ.ಜಿ. ನೇಮಕ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…

1 day ago