ಆಟೋ ಎಲ್ಪಿಜಿಗಾಗಿ ಡಿಕ್ರಾಸ್ ರಸ್ತೆಯ ಸೂಪರ್ ಗ್ಯಾಸ್ ಬಂಕ್ ಬಳಿ ನೂರಾರು ಆಟೋಗಳು ಸಾಲುಗಟ್ಟಿ ನಿಂತಿವೆ. ಆಟೋ ಎಲ್ಪಿಜಿ ಇಲ್ಲದೆ ಕಂಗಾಲಾಗಿರುವ ಆಟೋ ಚಾಲಕರಿಗೆ ನಗರದ ಏಕೈಕ ಎಲ್ಪಿಜಿ ಕೇಂದ್ರದಲ್ಲಿ ಎಲ್ಪಿಜಿ ಸಿಗುವ ಮಾಹಿತಿ ಮೇರೆಗೆ ಆಟೋ ಚಾಲಕರು ಕಿಲೊ ಮೀಟರ್ ಗಟ್ಟಲೆ ಸಾಲಿನಲ್ಲಿ ಆಟೋಗಳನ್ನ ನಿಲ್ಲಿಸಿ ಕಾಯುತ್ತಿದ್ದಾರೆ.
ಪಕ್ಕದ ಚಿಕ್ಕಬಳ್ಳಾಪುರ, ವಿಜಯಪುರ, ನೆಲಮಂಗಲ ಗೌರಿಬಿದನೂರು, ಯಲಹಂಕ, ದೇವನಹಳ್ಳಿ, ಕೆಆರ್ ಪುರಂ ಸೇರಿದಂತೆ ಹಲವು ದೂರದ ಊರುಗಳಿಂದಲೂ ಆಟೋ ಚಾಲಕರು ಆಗಮಿಸಿ ಮಧ್ಯಾಹ್ನದಿಂದಲೇ ಕಾಯುತ್ತಿದ್ದಾರೆ.
ಎಲ್ಪಿಜಿ ಇಲ್ಲದೆ ಜೀವನ ನಿರ್ಹವಣೆ ಅಸಾಧ್ಯವಾಗಿದೆ. ನಮ್ಮ ಜೀವನ ಬೆಳಗ್ಗೆಯಿಂದ ಸಂಜೆವರೆಗೂ ದುಡಿದು ಬದುಕುವುದು. ಈಗ ಎಲ್ಪಿಜಿ ಇಲ್ಲದೆ ಆಟೋ ನಿಲ್ಲಿಸಿ 10 ದಿನಗಳಾಗಿವೆ. ಮನೆ ಬಳಿ ಸಾಲ ಕೊಟ್ಟವರು ಬರುತ್ತಿದ್ದಾರೆ. ಸಾಲ ಕಟ್ಟಲಾಗದೆ ಪರಿತಪಿಸುವಂತಾಗಿದೆ. ಒಮ್ಮೆ ಸಾಲ ಕೊಟ್ಟವರು ಮತ್ತೊಮ್ಮೆ ಸಾಲ ನೀಡುತ್ತಿಲ್ಲ. ಸರ್ಕಾರ ಅಧಿಕೃತ ಆಟೊ ಚಾಲಕರನ್ನ ಗುರುತಿಸಿ ಸಹಾಧನ ನೀಡಬೇಕು ಎಂದು ಆಟೋ ಚಾಲಕ ಮಂಜುನಾಥ್ ಮನವಿ ಮಾಡಿದರು.
ಬೆಲೆ ಏರಿಕೆಗೆ ಆಟೋ ಚಾಲಕರು ತತ್ತರ:
ಮಧ್ಯಪ್ರಾಚ್ಯ ಯುದ್ಧ ಆರಂಭಕ್ಕೂ ಮುನ್ನ ಎಲ್ಪಿಜಿ ದರವೂ ಪ್ರತಿ ಕೆಜಿಗೆ 52 ರೂ. ಇತ್ತು. ಕಳೆದ 15 ದಿನಗಳಲ್ಲಿ ಬರೋಬ್ಬರಿ 25 ರಿಂದ 30 ರೂ. ಏರಿಕೆಯಾಗಿದೆ. ಇಂದು ಕೂಡ ಬಂಕ್ ಮಾಲೀಕರು ದರ ನಿಗದಿ ಪಡಿಸಲು ಸಮಯ ತೆಗೆದುಕೊಳ್ಳುತ್ತಿದ್ದಾರೆ. ಕಳೆದ ವಾರ 85 ರೂ. ನೀಡಿ ಆಟೋ ಚಾಲಕರು ಎಲ್ಪಿಜಿ ಖರೀದಿಸಿದ್ದರು. ಬೇಡಿಕೆ ಹೆಚ್ಚಾಗಿರುವ ಹಿನ್ನೆಲೆ ದರವನ್ನು ಏರಿಕೆ ಆಗುವ ಭೀತಿ ಕಾಡುತ್ತಿದೆ. ಸದ್ಯ ಇರುವ ಎಲ್ಪಿಜಿ ಪ್ರಮಾಣದಲ್ಲಿ ಪ್ರತಿ ಆಟೊ ಚಾಲಕರಿಗೆ 500 ರೂ.ಗೆ ವಿತರಿಸಲು ನಿರ್ಧರಿಸಲಾಗಿದೆ ಎನ್ನಲಾಗಿದೆ..
ಸ್ಥಳದಲ್ಲಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ…
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ….
ಬೆಂಗಳೂರು: ಆರೋಪಿಯ ಹುಡುಕಾಟಕ್ಕೆ ತೆರಳುತ್ತಿದ್ದ ಬೆಂಗಳೂರು ಸೈಬರ್ ಕ್ರೈಂ ತಂಡ ಪ್ರಯಾಣಿಸುತ್ತಿದ್ದ ಬಸ್ ಮಧ್ಯಪ್ರದೇಶದಲ್ಲಿ ಭೀಕರ ಅಪಘಾತಕ್ಕೀಡಾಗಿ, ಪೊಲೀಸ್ ಇನ್ಸ್ಪೆಕ್ಟರ್…
ಮದರ್ ತೆರೇಸಾ - ಆಗಸ್ಟ್ 26, 1910..... ರಸ್ತೆ ಬದಿಯ ಹರಕಲು ಬಟ್ಟೆಯ ಭಿಕ್ಷುಕರನ್ನು ನೋಡಲೇ ಅಸಹ್ಯಪಡುವ ಪರಿಸ್ಥಿತಿ ಇರುವಾಗ…
ಚಿಕ್ಕನಾಯಕನಹಳ್ಳಿ: ರೈತರಿಗೆ ಅನುಕೂಲವಾಗಬೇಕೆಂಬ ಉದ್ದೇಶದಿಂದ ಜುಲೈ.1 ರಿಂದ ವಿಕಸಿತ ಭಾರತ್ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ)…
ಬೆಂಗಳೂರು ಗ್ರಾಮಾಂತರ: ಮುಂಗಾರು ಮಳೆ ಕೊರತೆಯಿಂದ ರಾಜ್ಯದ 101 ತಾಲೂಕುಗಳನ್ನು ಬರಪೀಡಿತ ಎಂದು ಸರ್ಕಾರ ಘೋಷಿಸಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ನೇಪಾಳದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪ ಹಾಗೂ ದಿಢೀರ್ ಪ್ರವಾಹ (ಫ್ಲ್ಯಾಶ್ ಫ್ಲಡ್ಸ್) ದುರಂತಕ್ಕೆ ಸಂಬಂಧಿಸಿದಂತೆ, ಕರ್ನಾಟಕ ಮೂಲದ ಪ್ರವಾಸಿಗರು ಅಥವಾ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…