Categories: ಲೇಖನ

ಆಡಂಬರದ, ಅಹಂಕಾರದ ಜೀವನಕ್ಕಿಂತ ಸಹಜ ಸರಳ ಪ್ರಾಮಾಣಿಕ ಬದುಕೇ ನೆಮ್ಮದಿಯ ತಾಣ

ಸಾಕು ಸಂಬಳ – ಬೇಕು ನೆಮ್ಮದಿ…..

ಜೈಲಿನ ಗೋಡೆಗಳ ನಡುವೆ…….

ನನ್ನೊಳಗಿನ ಜ್ಞಾನೋದಯ ನಿಮ್ಮೊಳಗೂ ಆಗಬಾರದೇ……

ಲೋಕಾಯುಕ್ತ ದಾಳಿ ಮತ್ತು ಮುದ್ದೆ ಸೊಪ್ಪಿನ ಸಾರು……………

ಕಂತೆ ಕಂತೆಗಳ ನಡುವೆ ಮಗುವಿನ ಮುಗ್ದತೆಗೆ ಮನಸ್ಸು ಮರಳಬಾರದೇ…..

ನನ್ನ ಬಾಲ್ಯದಲ್ಲಿ ವಾರ ಪೂರ್ತಿ ಒಂದೇ ಹರಿದ ಬಟ್ಟೆ ಧರಿಸುತ್ತಿದ್ದೆ.

ವಾರದಲ್ಲಿ ಒಂದೇ ದಿನ ಅಂದರೆ ಭಾನುವಾರ ಮಾತ್ರ ಸ್ನಾನ.

ಪ್ರತಿದಿನ ಮುಂಜಾನೆ ಕಾಡಿಗೆ ಹೋಗಿ ಒಣಗಿದ ಸೌದೆ ತರಬೇಕಾಗಿತ್ತು.

ಪ್ರತಿದಿನದ ಊಟ ರಾತ್ರಿಯ ತಂಗಳು ಮತ್ತು ಬೆಳಗಿನ ಗಂಜಿ ಮಾತ್ರ.

ಶಾಲೆಯ ಮಧ್ಯಾಹ್ನದ ಉಪ್ಪಿಟ್ಟೇ ನನಗೆ ಪಂಚಾಮೃತ.

ರಾತ್ರಿ ಸೀಮೆಎಣ್ಣೆಯ ಬುಡ್ಡಿ ದೀಪಗಳೇ ನಮಗೆ ಬೆಳಕಿನ ಮೂಲಗಳು.

ಸರ್ಕಾರದ ಪಾಳುಬಿದ್ದ ಕಟ್ಟಡಗಳೇ ನಮ್ಮ ಶಾಲಾ ತರಗತಿಗಳು.

ಅತ್ಯುತ್ತಮ ಶಿಕ್ಷಕರ ಜೊತೆ ಕ್ರೌರ್ಯತೆ ಇದ್ದ ಶಿಕ್ಷಕರೂ ನಮ್ಮ ಮೇಷ್ಟುಗಳು.

ಆದರೂ SSLC ಪರೀಕ್ಷೆಯಲ್ಲಿ FIRST CLASS ನಲ್ಲಿ ಪಾಸಾದೆ.

ಅನಂತರ PUC ಮತ್ತು BA ಕೂಡ ಸರ್ಕಾರಿ ಕಾಲೇಜಿನಲ್ಲೇ
ಓದಿ ಒಳ್ಳೆಯ ಅಂಕಗಳೊಂದಿಗೆ ಪಾಸಾದೆ.

ಆಗಲೂ ಹೊಟ್ಟೆ ತುಂಬಾ ಊಟ ಮಾಡುತ್ತಿದ್ದುದು ಕೇವಲ
ಮದುವೆ ಸಮಾರಂಭಗಳಲ್ಲಿ ಮಾತ್ರ.

ಸೇಬು ಹಣ್ಣು ನಾನು ಕೆಲಸಕ್ಕೆ ಸೇರುವವರೆಗೂ ತಿಂದೇ ಇರಲಿಲ್ಲ.

ಹಾಗೂ ಹೀಗೂ ಕಷ್ಟಪಟ್ಟು ಓದಿ KAS ( KPSC ) ಬರೆದು ಅದರಲ್ಲಿ SELECT ಆದೆ.

ಯಾರದೋ ಕ್ಯೆಕಾಲು ಹಿಡಿದು ತಹಶೀಲ್ದಾರ್ ಆಗಿ ನೇಮಕವಾದೆ.

ಬಾಲ್ಯ, ಯೌವನದ ಹಸಿವು ಅವಮಾನಗಳು ಒಮ್ಮೆಲೇ ಎಗರಿ ಬಿದ್ದವು,

ಸಂಬಳದ ಜೊತೆಗೆ ಕುಳಿತಲ್ಲೇ ಲಕ್ಷಾಂತರ ಹಣ ಲಂಚದ ರೂಪದಲ್ಲಿ ಹರಿದು ಬರತೊಡಗಿತು.

ಹಣ ಎಲ್ಲಿ ಇಡುವುದು ಎಂಬುದೇ ಸಮಸ್ಯೆಯಾಯಿತು.

ಬಡತನದಲ್ಲಿ ನನ್ನನ್ನು ಮೂದಲಿಸಿದ್ದ ತುಚ್ಚವಾಗಿ ಕಂಡಿದ್ದ ನಾಯಿ ನರಿಗಳು ಕೂಡ ಮಹಾರಾಜನಂತೆ ನೋಡತೊಡಗಿದರು.

ಪ್ರತಿದಿನವೂ ಭರ್ಜರಿ ಸಂತೋಷ ಕೂಟಗಳೇ ಶ್ರೀಮಂತ ಹೋಟೇಲ್ ಗಳಲ್ಲಿ.

ಬೇರೆ ಬೇರೆ ಕಡೆ ಆಸ್ತಿಗಳು ನನ್ನ ಹೆಸರಿಗೆ ಸೇರತೊಡಗಿದವು,

ಸ್ವರ್ಗಕ್ಕೆ ಮೂರೇ ಗೇಣು. ನನಗೆ ಗೊತ್ತಿಲ್ಲದೆ ನನ್ನ ಅಹಂಕಾರವೂ ಮೇರೆ ಮೀರಿತ್ತು.

ಬಾಲ್ಯದ ಕೀಳರಿಮೆ ಅದಕ್ಕೆ ಕಾರಣವಾಗಿರಬಹುದು.

ಆದರೆ……….,

ಒಂದು ಬೆಳಗಿನ ಜಾವ ಇದ್ದಕ್ಕಿದ್ದಂತೆ ಲೋಕಾಯುಕ್ತ ಪೊಲೀಸರಿಂದ ನನ್ನ ಮನೆ ಮೇಲೆ ದಾಳಿ,

ಎಚ್ಚೆತ್ತುಕೊಳ್ಳುವ ಮುನ್ನ ಎಲ್ಲಾ ಬಟಾ ಬಯಲು,

ಬೆಳಕು ಹರಿಯುವ ಮುನ್ನ ಅಪಾರ ಹಣ ಆಸ್ತಿ ವಶ. ಟಿವಿಯಲ್ಲಿ ಮಾನ ಹರಾಜು, ಬಂಧನ, ಸಂಜೆಯೊಳಗೆ ಜೈಲಿಗೆ ರವಾನೆ.

ಈಗ ತಾನೇ ಕ್ಯೂನಲ್ಲಿ ನಿಂತು, ತಟ್ಟೆ ಹಿಡಿದು ಊಟ ಹಾಕಿಸಿಕೊಂಡು ಮುದ್ದೆ ಮುರಿಯುತ್ತಿದ್ದೇನೆ.

ಈಗ, ಒಮ್ಮೆಗೇ ಆ ಬಡತನದ ದಿನಗಳು ನೆನಪಾಗುತ್ತಿವೆ.
ಕಣ್ಣ ನೀರು ತಟ್ಟೆಗೆ ಬೀಳುತ್ತಿದೆ.

ಆ ದಿನಗಳು, ಆ ಬೆಳದಿಂಗಳ ರಾತ್ರಿಗಳಲ್ಲಿ ಮನೆಯ ಮುಂದೆ ತಿನ್ನುತ್ತಿದ್ದ ಮುದ್ದೆ ಸೊಪ್ಪಿನ ಸಾರು
ಯಾಕೋ ನೆನಪಾಗುತ್ತಿದೆ.

ಈ ನೋವಿನಲ್ಲೂ ಆ ಮಧುರ ನೆನಪುಗಳು ಮುದ ನೀಡುತ್ತಿದೆ.

ಹಾಗೇ ಅತ್ತು ಅತ್ತು ಮನಸ್ಸು ಹಗುರಾಯಿತು. ಬದುಕಿನ ನಿಜ ಅರ್ಥ ಅರಿವಾಯಿತು.

ಎಲ್ಲವನ್ನೂ ಕಳೆದುಕೊಂಡರೂ ನನ್ನನ್ನು ನಾ ಪಡೆದೆ ಎಂಬ ಸಮಾಧಾನದ ಭಾವ ಮೂಡಿತು.

ಆಡಂಬರದ ಅಹಂಕಾರದ ಜೀವನಕ್ಕಿಂತ ಸಹಜ ಸರಳ ಪ್ರಾಮಾಣಿಕ ಬದುಕೇ ನೆಮ್ಮದಿಯ ತಾಣ ಎಂಬ ಜ್ಞಾನೋದಯವಾಯಿತು……..

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ – ಮನೆಗಳಲ್ಲಿ – ಮತಗಳಲ್ಲಿ – ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ-ವಿವೇಕಾನಂದ. ಎಚ್. ಕೆ

Ramesh Babu

Journalist

Recent Posts

ಹೊಸ ವರ್ಷ ದಿನದಂದೇ ದೊಡ್ಡಬಳ್ಳಾಪುರದಲ್ಲಿ ಯುವಕನ ಕೊಲೆ…? ನ್ಯೂ ಇಯರ್ ಸೆಲೆಬ್ರೇಷನ್ ನೆಪದಲ್ಲಿ ರೂಮಿನಲ್ಲಿ ಎಣ್ಣೆ ಪಾರ್ಟಿ ಅರೆಂಜ್: ನ್ಯೂ ಇಯರ್ ಪಾರ್ಟಿ ಮಾಡೋಣ ಬಾ ಎಂದು ಫ್ರೆಂಡ್ನ ಕರೆಸಿಕೊಂಡು ಜೀವ ತೆಗೆದ್ನಾ ಆಸಾಮಿ….?

ಒರಿಸ್ಸಾದಿಂದ ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿಯಲ್ಲಿ ಕೆಲಸಕ್ಕೆಂದು ಬಂದು ಹೊಸ ವರ್ಷ ದಿನದಂದೇ ತನ್ನ ಸ್ನೇಹಿತನಿಂದಲೇ ಕೊಲೆಯಾದ್ನಾ ಯುವಕ....? 2025ರ ಡಿಸೆಂಬರ್ 31…

4 hours ago

ದೊಡ್ಡಬಳ್ಳಾಪುರ ಸರ್ಕಾರಿ ಆಸ್ಪತ್ರೆಯಲ್ಲಿ 300ಕ್ಕೂ ಹೆಚ್ಚು ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ಪೂರ್ಣ- ನೇತ್ರ ತಜ್ಞ ಡಾ. ಅರುಣ್ ಹನುಮಂತರಾಯ

ದೊಡ್ಡಬಳ್ಳಾಪುರದ ಸರ್ಕಾರಿ ಆಸ್ಪತ್ರೆಯಲ್ಲಿ 2025ನೇ ಸಾಲಿನಲ್ಲಿ 300ಕ್ಕೂ ಹೆಚ್ಚು ಉಚಿತವಾಗಿ ಕಣ್ಣಿನ ಶಸ್ತ್ರಚಿಕಿತ್ಸೆಗಳನ್ನು ಪೂರ್ಣಗೊಳಿಸುವ ಮೂಲಕ, ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಗಳಲ್ಲಿ…

5 hours ago

800 ವರ್ಷಗಳ ಇತಿಹಾಸಯುಳ್ಳ ಆವತಿ ತಿಮ್ಮರಾಯಸ್ವಾಮಿ ಬೆಟ್ಟದಲ್ಲಿ ಭಕ್ತರ ದಂಡು

ಇಂದು ಹೊಸ ವರ್ಷ ಹಿನ್ನೆಲೆ 800 ವರ್ಷಗಳ ಇತಿಹಾಸಯುಳ್ಳ ಆವತಿ ತಿಮ್ಮರಾಯಸ್ವಾಮಿ ಬೆಟ್ಟದಲ್ಲಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ದೇವರ…

7 hours ago

12 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿ: ಹಾನಿಗೊಳಗಾದ ರೈತರಿಗೆ ಪರಿಹಾರ ಒದಗಿಸುವುದು ಸರ್ಕಾರದ ಕರ್ತವ್ಯ- ಸಿಎಂ ಸಿದ್ದರಾಮಯ್ಯ

ಹೊಸ ವರ್ಷದ ಮೊದಲ ದಿನವಾದ ಇಂದು ಶುಭಾಶಯಗಳನ್ನು ವಿನಿಮಯ ಮಾಡಿಕೊಳ್ಳುವುದು ನಮ್ಮ ಪದ್ಧತಿ. ಹಿಂದೂ ಪದ್ಧತಿಯಲ್ಲಿ ಯುಗಾದಿ ಹೊಸ ವರ್ಷವಾಗಿದ್ದರೂ,…

8 hours ago

ಬೆಂ. ಗ್ರಾ ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಚಂದ್ರಕಾಂತ್ ಎಂ.ವಿ ಅಧಿಕಾರ ಸ್ವೀಕಾರ

ಇಂದು ಬೆಂಗಳೂರಿನ ಎಸ್ಪಿ ಕಚೇರಿಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಚಂದ್ರಕಾಂತ್ ಎಂ.ವಿ ಅಧಿಕಾರ ವಹಿಸಿಕೊಂಡಿದ್ದಾರೆ.... ​ಬೆಂಗಳೂರು…

9 hours ago

ಬಾಶೆಟ್ಟಿಹಳ್ಳಿ ಅಜಾಕ್ಸ್ ಶಾಲೆ ಹಿಂಭಾಗ ಯುವಕನ ಶವ ಪತ್ತೆ

ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಅಜಾಕ್ಸ್ ಶಾಲೆ ಹಿಂಭಾಗ ಶವ ಪತ್ತೆಯಾಗಿದೆ... ಮೃತ ದುರ್ದೈವಿಯನ್ನು ಒರಿಸ್ಸಾ ಮೂಲದ ಸುಮಂತ್(24) ಎಂದು ಗುರುತಿಸಲಾಗಿದೆ....…

14 hours ago