Categories: ಲೇಖನ

ಆಡಂಬರದ, ಅಹಂಕಾರದ ಜೀವನಕ್ಕಿಂತ ಸಹಜ ಸರಳ ಪ್ರಾಮಾಣಿಕ ಬದುಕೇ ನೆಮ್ಮದಿಯ ತಾಣ

ಸಾಕು ಸಂಬಳ – ಬೇಕು ನೆಮ್ಮದಿ…..

ಜೈಲಿನ ಗೋಡೆಗಳ ನಡುವೆ…….

ನನ್ನೊಳಗಿನ ಜ್ಞಾನೋದಯ ನಿಮ್ಮೊಳಗೂ ಆಗಬಾರದೇ……

ಲೋಕಾಯುಕ್ತ ದಾಳಿ ಮತ್ತು ಮುದ್ದೆ ಸೊಪ್ಪಿನ ಸಾರು……………

ಕಂತೆ ಕಂತೆಗಳ ನಡುವೆ ಮಗುವಿನ ಮುಗ್ದತೆಗೆ ಮನಸ್ಸು ಮರಳಬಾರದೇ…..

ನನ್ನ ಬಾಲ್ಯದಲ್ಲಿ ವಾರ ಪೂರ್ತಿ ಒಂದೇ ಹರಿದ ಬಟ್ಟೆ ಧರಿಸುತ್ತಿದ್ದೆ.

ವಾರದಲ್ಲಿ ಒಂದೇ ದಿನ ಅಂದರೆ ಭಾನುವಾರ ಮಾತ್ರ ಸ್ನಾನ.

ಪ್ರತಿದಿನ ಮುಂಜಾನೆ ಕಾಡಿಗೆ ಹೋಗಿ ಒಣಗಿದ ಸೌದೆ ತರಬೇಕಾಗಿತ್ತು.

ಪ್ರತಿದಿನದ ಊಟ ರಾತ್ರಿಯ ತಂಗಳು ಮತ್ತು ಬೆಳಗಿನ ಗಂಜಿ ಮಾತ್ರ.

ಶಾಲೆಯ ಮಧ್ಯಾಹ್ನದ ಉಪ್ಪಿಟ್ಟೇ ನನಗೆ ಪಂಚಾಮೃತ.

ರಾತ್ರಿ ಸೀಮೆಎಣ್ಣೆಯ ಬುಡ್ಡಿ ದೀಪಗಳೇ ನಮಗೆ ಬೆಳಕಿನ ಮೂಲಗಳು.

ಸರ್ಕಾರದ ಪಾಳುಬಿದ್ದ ಕಟ್ಟಡಗಳೇ ನಮ್ಮ ಶಾಲಾ ತರಗತಿಗಳು.

ಅತ್ಯುತ್ತಮ ಶಿಕ್ಷಕರ ಜೊತೆ ಕ್ರೌರ್ಯತೆ ಇದ್ದ ಶಿಕ್ಷಕರೂ ನಮ್ಮ ಮೇಷ್ಟುಗಳು.

ಆದರೂ SSLC ಪರೀಕ್ಷೆಯಲ್ಲಿ FIRST CLASS ನಲ್ಲಿ ಪಾಸಾದೆ.

ಅನಂತರ PUC ಮತ್ತು BA ಕೂಡ ಸರ್ಕಾರಿ ಕಾಲೇಜಿನಲ್ಲೇ
ಓದಿ ಒಳ್ಳೆಯ ಅಂಕಗಳೊಂದಿಗೆ ಪಾಸಾದೆ.

ಆಗಲೂ ಹೊಟ್ಟೆ ತುಂಬಾ ಊಟ ಮಾಡುತ್ತಿದ್ದುದು ಕೇವಲ
ಮದುವೆ ಸಮಾರಂಭಗಳಲ್ಲಿ ಮಾತ್ರ.

ಸೇಬು ಹಣ್ಣು ನಾನು ಕೆಲಸಕ್ಕೆ ಸೇರುವವರೆಗೂ ತಿಂದೇ ಇರಲಿಲ್ಲ.

ಹಾಗೂ ಹೀಗೂ ಕಷ್ಟಪಟ್ಟು ಓದಿ KAS ( KPSC ) ಬರೆದು ಅದರಲ್ಲಿ SELECT ಆದೆ.

ಯಾರದೋ ಕ್ಯೆಕಾಲು ಹಿಡಿದು ತಹಶೀಲ್ದಾರ್ ಆಗಿ ನೇಮಕವಾದೆ.

ಬಾಲ್ಯ, ಯೌವನದ ಹಸಿವು ಅವಮಾನಗಳು ಒಮ್ಮೆಲೇ ಎಗರಿ ಬಿದ್ದವು,

ಸಂಬಳದ ಜೊತೆಗೆ ಕುಳಿತಲ್ಲೇ ಲಕ್ಷಾಂತರ ಹಣ ಲಂಚದ ರೂಪದಲ್ಲಿ ಹರಿದು ಬರತೊಡಗಿತು.

ಹಣ ಎಲ್ಲಿ ಇಡುವುದು ಎಂಬುದೇ ಸಮಸ್ಯೆಯಾಯಿತು.

ಬಡತನದಲ್ಲಿ ನನ್ನನ್ನು ಮೂದಲಿಸಿದ್ದ ತುಚ್ಚವಾಗಿ ಕಂಡಿದ್ದ ನಾಯಿ ನರಿಗಳು ಕೂಡ ಮಹಾರಾಜನಂತೆ ನೋಡತೊಡಗಿದರು.

ಪ್ರತಿದಿನವೂ ಭರ್ಜರಿ ಸಂತೋಷ ಕೂಟಗಳೇ ಶ್ರೀಮಂತ ಹೋಟೇಲ್ ಗಳಲ್ಲಿ.

ಬೇರೆ ಬೇರೆ ಕಡೆ ಆಸ್ತಿಗಳು ನನ್ನ ಹೆಸರಿಗೆ ಸೇರತೊಡಗಿದವು,

ಸ್ವರ್ಗಕ್ಕೆ ಮೂರೇ ಗೇಣು. ನನಗೆ ಗೊತ್ತಿಲ್ಲದೆ ನನ್ನ ಅಹಂಕಾರವೂ ಮೇರೆ ಮೀರಿತ್ತು.

ಬಾಲ್ಯದ ಕೀಳರಿಮೆ ಅದಕ್ಕೆ ಕಾರಣವಾಗಿರಬಹುದು.

ಆದರೆ……….,

ಒಂದು ಬೆಳಗಿನ ಜಾವ ಇದ್ದಕ್ಕಿದ್ದಂತೆ ಲೋಕಾಯುಕ್ತ ಪೊಲೀಸರಿಂದ ನನ್ನ ಮನೆ ಮೇಲೆ ದಾಳಿ,

ಎಚ್ಚೆತ್ತುಕೊಳ್ಳುವ ಮುನ್ನ ಎಲ್ಲಾ ಬಟಾ ಬಯಲು,

ಬೆಳಕು ಹರಿಯುವ ಮುನ್ನ ಅಪಾರ ಹಣ ಆಸ್ತಿ ವಶ. ಟಿವಿಯಲ್ಲಿ ಮಾನ ಹರಾಜು, ಬಂಧನ, ಸಂಜೆಯೊಳಗೆ ಜೈಲಿಗೆ ರವಾನೆ.

ಈಗ ತಾನೇ ಕ್ಯೂನಲ್ಲಿ ನಿಂತು, ತಟ್ಟೆ ಹಿಡಿದು ಊಟ ಹಾಕಿಸಿಕೊಂಡು ಮುದ್ದೆ ಮುರಿಯುತ್ತಿದ್ದೇನೆ.

ಈಗ, ಒಮ್ಮೆಗೇ ಆ ಬಡತನದ ದಿನಗಳು ನೆನಪಾಗುತ್ತಿವೆ.
ಕಣ್ಣ ನೀರು ತಟ್ಟೆಗೆ ಬೀಳುತ್ತಿದೆ.

ಆ ದಿನಗಳು, ಆ ಬೆಳದಿಂಗಳ ರಾತ್ರಿಗಳಲ್ಲಿ ಮನೆಯ ಮುಂದೆ ತಿನ್ನುತ್ತಿದ್ದ ಮುದ್ದೆ ಸೊಪ್ಪಿನ ಸಾರು
ಯಾಕೋ ನೆನಪಾಗುತ್ತಿದೆ.

ಈ ನೋವಿನಲ್ಲೂ ಆ ಮಧುರ ನೆನಪುಗಳು ಮುದ ನೀಡುತ್ತಿದೆ.

ಹಾಗೇ ಅತ್ತು ಅತ್ತು ಮನಸ್ಸು ಹಗುರಾಯಿತು. ಬದುಕಿನ ನಿಜ ಅರ್ಥ ಅರಿವಾಯಿತು.

ಎಲ್ಲವನ್ನೂ ಕಳೆದುಕೊಂಡರೂ ನನ್ನನ್ನು ನಾ ಪಡೆದೆ ಎಂಬ ಸಮಾಧಾನದ ಭಾವ ಮೂಡಿತು.

ಆಡಂಬರದ ಅಹಂಕಾರದ ಜೀವನಕ್ಕಿಂತ ಸಹಜ ಸರಳ ಪ್ರಾಮಾಣಿಕ ಬದುಕೇ ನೆಮ್ಮದಿಯ ತಾಣ ಎಂಬ ಜ್ಞಾನೋದಯವಾಯಿತು……..

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ – ಮನೆಗಳಲ್ಲಿ – ಮತಗಳಲ್ಲಿ – ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ-ವಿವೇಕಾನಂದ. ಎಚ್. ಕೆ

Ramesh Babu

Journalist

Recent Posts

ಬೆಳ್ಳಂಬೆಳಗ್ಗೆ ಕಂಟೇನರ್-ಸಿಮೆಂಟ್ ಲಾರಿ ನಡುವೆ ಅಪಘಾತ

ಬೆಳ್ಳಂಬೆಳಗ್ಗೆ ಕಂಟೇನರ್-ಸಿಮೆಂಟ್ ಲಾರಿ ನಡುವೆ ಅಪಘಾತ ಸಂಭವಿಸಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಚೆನ್ನಾದೇವಿ ಅಗ್ರಹಾರದ ಪೆಟ್ರೋಲ್ ಬಂಕ್ ಸಮೀಪ ನಡೆದಿದೆ....…

6 hours ago

9 ತಿಂಗಳಲ್ಲಿ ಬಮೂಲ್ ಒಕ್ಕೂಟಕ್ಕೆ 60 ಕೋಟಿ ಲಾಭ: ಸಂಪೂರ್ಣ ರೈತರ ಖಾತೆಗೆ ಲಾಭಾಂಶ ಹಣ

ಪಶು ಆಹಾರಗಳ ಬೆಲೆ ಏರಿಕೆ.. ಬೇಸಿಗೆಯಿಂದಾಗಿ ಹಾಲು ಉತ್ಪಾದನೆ ಕುಂಠಿತ.. ಹಸುಗಳಲ್ಲಿ ಹೆಚ್ಚಿದ ಕೆಚ್ಚಲುಬಾವು ರೋಗ.. ರಾಸುಗಳಿಗೆ ಮೇವು ಇಲ್ಲದೆ…

22 hours ago

ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಚಿಂತನೆ: ₹184 ಕೋಟಿ ಮೊತ್ತದ ಕೇಂದ್ರ ಸರ್ಕಾರದ ಯೋಜನೆಗೆ ಶೀಘ್ರವೇ ಅನುಮೋದನೆ – ಸಂಸದ ಡಾ.ಕೆ‌ ಸುಧಾಕರ್

ಇಂದು ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಿ, 'ಪ್ರಸಾದ್ 2.0' (PRASHAD…

22 hours ago

ಮಹಿಳೆಯರು ಸ್ವಾವಲಂಬಿಗಳಾಗಿ ಬದುಕಬೇಕು- ಪೊಲೀಸ್ ಸಬ್ ಇನ್ಸ್ಪೆಕ್ಟರ್ ವರಲಕ್ಷ್ಮಿ .ವಿ

ದೊಡ್ಡಬಳ್ಳಾಪುರ: ಮಹಿಳಾ ದಿನ ಕೇವಲ ಒಂದು ದಿನದ ಆಚರಣೆಯಲ್ಲ ಬದಲಾಗಿ ಮಹಿಳೆಯರ ಸಮಾನತೆಗಾಗಿ ನಡೆಯುತ್ತಿರುವ ನಿರಂತರ ಹೋರಾಟದ ಸಂಕೇತ ಎಂದು…

2 days ago

ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 87ನೇ ಸ್ಥಾಪನಾ ದಿನಾಚರಣೆ: ಉಚಿತ ಆರೋಗ್ಯ ಶಿಬರ ಮತ್ತು ರಕ್ತದಾನ ಶಿಬಿರ ಆಯೋಜನೆ

ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 87ನೇ ಸ್ಥಾಪನಾ ದಿನಾಚರಣೆ ಹಿನ್ನೆಲೆ ಕರ್ನಾಟಕ ಮತ್ತು ಕೇರಳ ವಲಯದ CRPF ಬೆಂಗಳೂರು…

2 days ago