Categories: ಲೇಖನ

ಆಡಂಬರದ, ಅಹಂಕಾರದ ಜೀವನಕ್ಕಿಂತ ಸಹಜ ಸರಳ ಪ್ರಾಮಾಣಿಕ ಬದುಕೇ ನೆಮ್ಮದಿಯ ತಾಣ

ಸಾಕು ಸಂಬಳ – ಬೇಕು ನೆಮ್ಮದಿ…..

ಜೈಲಿನ ಗೋಡೆಗಳ ನಡುವೆ…….

ನನ್ನೊಳಗಿನ ಜ್ಞಾನೋದಯ ನಿಮ್ಮೊಳಗೂ ಆಗಬಾರದೇ……

ಲೋಕಾಯುಕ್ತ ದಾಳಿ ಮತ್ತು ಮುದ್ದೆ ಸೊಪ್ಪಿನ ಸಾರು……………

ಕಂತೆ ಕಂತೆಗಳ ನಡುವೆ ಮಗುವಿನ ಮುಗ್ದತೆಗೆ ಮನಸ್ಸು ಮರಳಬಾರದೇ…..

ನನ್ನ ಬಾಲ್ಯದಲ್ಲಿ ವಾರ ಪೂರ್ತಿ ಒಂದೇ ಹರಿದ ಬಟ್ಟೆ ಧರಿಸುತ್ತಿದ್ದೆ.

ವಾರದಲ್ಲಿ ಒಂದೇ ದಿನ ಅಂದರೆ ಭಾನುವಾರ ಮಾತ್ರ ಸ್ನಾನ.

ಪ್ರತಿದಿನ ಮುಂಜಾನೆ ಕಾಡಿಗೆ ಹೋಗಿ ಒಣಗಿದ ಸೌದೆ ತರಬೇಕಾಗಿತ್ತು.

ಪ್ರತಿದಿನದ ಊಟ ರಾತ್ರಿಯ ತಂಗಳು ಮತ್ತು ಬೆಳಗಿನ ಗಂಜಿ ಮಾತ್ರ.

ಶಾಲೆಯ ಮಧ್ಯಾಹ್ನದ ಉಪ್ಪಿಟ್ಟೇ ನನಗೆ ಪಂಚಾಮೃತ.

ರಾತ್ರಿ ಸೀಮೆಎಣ್ಣೆಯ ಬುಡ್ಡಿ ದೀಪಗಳೇ ನಮಗೆ ಬೆಳಕಿನ ಮೂಲಗಳು.

ಸರ್ಕಾರದ ಪಾಳುಬಿದ್ದ ಕಟ್ಟಡಗಳೇ ನಮ್ಮ ಶಾಲಾ ತರಗತಿಗಳು.

ಅತ್ಯುತ್ತಮ ಶಿಕ್ಷಕರ ಜೊತೆ ಕ್ರೌರ್ಯತೆ ಇದ್ದ ಶಿಕ್ಷಕರೂ ನಮ್ಮ ಮೇಷ್ಟುಗಳು.

ಆದರೂ SSLC ಪರೀಕ್ಷೆಯಲ್ಲಿ FIRST CLASS ನಲ್ಲಿ ಪಾಸಾದೆ.

ಅನಂತರ PUC ಮತ್ತು BA ಕೂಡ ಸರ್ಕಾರಿ ಕಾಲೇಜಿನಲ್ಲೇ
ಓದಿ ಒಳ್ಳೆಯ ಅಂಕಗಳೊಂದಿಗೆ ಪಾಸಾದೆ.

ಆಗಲೂ ಹೊಟ್ಟೆ ತುಂಬಾ ಊಟ ಮಾಡುತ್ತಿದ್ದುದು ಕೇವಲ
ಮದುವೆ ಸಮಾರಂಭಗಳಲ್ಲಿ ಮಾತ್ರ.

ಸೇಬು ಹಣ್ಣು ನಾನು ಕೆಲಸಕ್ಕೆ ಸೇರುವವರೆಗೂ ತಿಂದೇ ಇರಲಿಲ್ಲ.

ಹಾಗೂ ಹೀಗೂ ಕಷ್ಟಪಟ್ಟು ಓದಿ KAS ( KPSC ) ಬರೆದು ಅದರಲ್ಲಿ SELECT ಆದೆ.

ಯಾರದೋ ಕ್ಯೆಕಾಲು ಹಿಡಿದು ತಹಶೀಲ್ದಾರ್ ಆಗಿ ನೇಮಕವಾದೆ.

ಬಾಲ್ಯ, ಯೌವನದ ಹಸಿವು ಅವಮಾನಗಳು ಒಮ್ಮೆಲೇ ಎಗರಿ ಬಿದ್ದವು,

ಸಂಬಳದ ಜೊತೆಗೆ ಕುಳಿತಲ್ಲೇ ಲಕ್ಷಾಂತರ ಹಣ ಲಂಚದ ರೂಪದಲ್ಲಿ ಹರಿದು ಬರತೊಡಗಿತು.

ಹಣ ಎಲ್ಲಿ ಇಡುವುದು ಎಂಬುದೇ ಸಮಸ್ಯೆಯಾಯಿತು.

ಬಡತನದಲ್ಲಿ ನನ್ನನ್ನು ಮೂದಲಿಸಿದ್ದ ತುಚ್ಚವಾಗಿ ಕಂಡಿದ್ದ ನಾಯಿ ನರಿಗಳು ಕೂಡ ಮಹಾರಾಜನಂತೆ ನೋಡತೊಡಗಿದರು.

ಪ್ರತಿದಿನವೂ ಭರ್ಜರಿ ಸಂತೋಷ ಕೂಟಗಳೇ ಶ್ರೀಮಂತ ಹೋಟೇಲ್ ಗಳಲ್ಲಿ.

ಬೇರೆ ಬೇರೆ ಕಡೆ ಆಸ್ತಿಗಳು ನನ್ನ ಹೆಸರಿಗೆ ಸೇರತೊಡಗಿದವು,

ಸ್ವರ್ಗಕ್ಕೆ ಮೂರೇ ಗೇಣು. ನನಗೆ ಗೊತ್ತಿಲ್ಲದೆ ನನ್ನ ಅಹಂಕಾರವೂ ಮೇರೆ ಮೀರಿತ್ತು.

ಬಾಲ್ಯದ ಕೀಳರಿಮೆ ಅದಕ್ಕೆ ಕಾರಣವಾಗಿರಬಹುದು.

ಆದರೆ……….,

ಒಂದು ಬೆಳಗಿನ ಜಾವ ಇದ್ದಕ್ಕಿದ್ದಂತೆ ಲೋಕಾಯುಕ್ತ ಪೊಲೀಸರಿಂದ ನನ್ನ ಮನೆ ಮೇಲೆ ದಾಳಿ,

ಎಚ್ಚೆತ್ತುಕೊಳ್ಳುವ ಮುನ್ನ ಎಲ್ಲಾ ಬಟಾ ಬಯಲು,

ಬೆಳಕು ಹರಿಯುವ ಮುನ್ನ ಅಪಾರ ಹಣ ಆಸ್ತಿ ವಶ. ಟಿವಿಯಲ್ಲಿ ಮಾನ ಹರಾಜು, ಬಂಧನ, ಸಂಜೆಯೊಳಗೆ ಜೈಲಿಗೆ ರವಾನೆ.

ಈಗ ತಾನೇ ಕ್ಯೂನಲ್ಲಿ ನಿಂತು, ತಟ್ಟೆ ಹಿಡಿದು ಊಟ ಹಾಕಿಸಿಕೊಂಡು ಮುದ್ದೆ ಮುರಿಯುತ್ತಿದ್ದೇನೆ.

ಈಗ, ಒಮ್ಮೆಗೇ ಆ ಬಡತನದ ದಿನಗಳು ನೆನಪಾಗುತ್ತಿವೆ.
ಕಣ್ಣ ನೀರು ತಟ್ಟೆಗೆ ಬೀಳುತ್ತಿದೆ.

ಆ ದಿನಗಳು, ಆ ಬೆಳದಿಂಗಳ ರಾತ್ರಿಗಳಲ್ಲಿ ಮನೆಯ ಮುಂದೆ ತಿನ್ನುತ್ತಿದ್ದ ಮುದ್ದೆ ಸೊಪ್ಪಿನ ಸಾರು
ಯಾಕೋ ನೆನಪಾಗುತ್ತಿದೆ.

ಈ ನೋವಿನಲ್ಲೂ ಆ ಮಧುರ ನೆನಪುಗಳು ಮುದ ನೀಡುತ್ತಿದೆ.

ಹಾಗೇ ಅತ್ತು ಅತ್ತು ಮನಸ್ಸು ಹಗುರಾಯಿತು. ಬದುಕಿನ ನಿಜ ಅರ್ಥ ಅರಿವಾಯಿತು.

ಎಲ್ಲವನ್ನೂ ಕಳೆದುಕೊಂಡರೂ ನನ್ನನ್ನು ನಾ ಪಡೆದೆ ಎಂಬ ಸಮಾಧಾನದ ಭಾವ ಮೂಡಿತು.

ಆಡಂಬರದ ಅಹಂಕಾರದ ಜೀವನಕ್ಕಿಂತ ಸಹಜ ಸರಳ ಪ್ರಾಮಾಣಿಕ ಬದುಕೇ ನೆಮ್ಮದಿಯ ತಾಣ ಎಂಬ ಜ್ಞಾನೋದಯವಾಯಿತು……..

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ – ಮನೆಗಳಲ್ಲಿ – ಮತಗಳಲ್ಲಿ – ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ-ವಿವೇಕಾನಂದ. ಎಚ್. ಕೆ

Ramesh Babu

Journalist

Recent Posts

“ರೆಕಾರ್ಡ್ ಮಾಡಲು ನೀಡಿದ ಒಪ್ಪಿಗೆಯು ಪ್ರಸಾರ ಮಾಡಲು ನೀಡಿದ ಒಪ್ಪಿಗೆಯಲ್ಲ” – ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಪ್ರತೀಕಾರಾತ್ಮಕ ಅಶ್ಲೀಲತೆ , ಸೆಕ್ಸ್‌ಟಾರ್ಷನ್ ಹಾಗೂ ಬ್ಲ್ಯಾಕ್‌ಮೇಲ್ ವಿಡಿಯೋಗಳಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಕಡ್ಡಾಯವಾಗಿ ಎಫ್‌ಐಆರ್ ದಾಖಲಿಸುವಂತೆ ಗೃಹ ಇಲಾಖೆಗೆ ಸೂಚನೆ…

11 hours ago

ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮಾ ನೋಂದಣಿಗೆ ಕರೆ

ಕೃಷಿ ಇಲಾಖೆ ವತಿಯಿಂದ 2026-27 ನೇ ಸಾಲಿನ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮಾ…

1 day ago

ತಮ್ಮನ ಮೇಲೆ ಅಣ್ಣನಿಂದ ಗುಂಡಿನ ದಾಳಿ..?

ದೇವನಹಳ್ಳಿ: ತೋಟಕ್ಕೆ ನೀರು ಬಿಡುವ ವಿಚಾರವಾಗಿ ಉಂಟಾದ ಕುಟುಂಬ ಕಲಹ ಗುಂಡಿನ ದಾಳಿಗೆ ತಿರುಗಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

1 day ago

ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸಲು ಮ್ಯಾರಥಾನ್: ಎಸ್‌ಪಿ ಚಂದ್ರಕಾಂತ್ ಎಂ.ವಿ

ದೊಡ್ಡಬಳ್ಳಾಪುರ: ಮಕ್ಕಳು ಹಾಗೂ ಯುವಜನತೆ ದೇಶದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರವಹಿಸುತ್ತಿದ್ದು, ಯಾವುದೇ ಕೆಟ್ಟ ಚಟಗಳಿಗೆ ಬಲಿಯಾಗದೆ ಉತ್ತಮ ಜೀವನ ರೂಪಿಸಿಕೊಳ್ಳಬೇಕು…

1 day ago

ಸಚಿವರಿಗೆ ಜಿಲ್ಲಾವಾರು ಜವಾಬ್ದಾರಿ ಹಂಚಿಕೆ

ಬೆಂಗಳೂರು: ಕರ್ನಾಟಕ ಸರ್ಕಾರವು ಉಪಮುಖ್ಯಮಂತ್ರಿಗಳು ಹಾಗೂ ಸಚಿವರಿಗೆ ಜಿಲ್ಲಾವಾರು ಜವಾಬ್ದಾರಿಗಳನ್ನು ಹಂಚಿಕೆ ಮಾಡಿ ಹೊಸ ಅಧಿಸೂಚನೆ ಹೊರಡಿಸಿದೆ. ರಾಜ್ಯಪಾಲರ ಅನುಮೋದನೆಯೊಂದಿಗೆ…

2 days ago

ಬೈಕ್ ಕಳ್ಳತನ ಪ್ರಕರಣ ಭೇದಿಸಿದ ವಿಜಯಪುರ ಪೊಲೀಸರು; ಲಕ್ಷಾಂತರ ಮೌಲ್ಯದ 42 ದ್ವಿಚಕ್ರ ವಾಹನ ವಶ

ವಿಜಯಪುರ (ದೇವನಹಳ್ಳಿ): ಮನೆಗಳ ಮುಂಭಾಗ ಹಾಗೂ ಸಾರ್ವಜನಿಕ ಪಾರ್ಕಿಂಗ್ ಪ್ರದೇಶಗಳಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಆರೋಪಿಯನ್ನು ವಿಜಯಪುರ…

2 days ago