Categories: ಲೇಖನ

ಆಡಂಬರದ, ಅಹಂಕಾರದ ಜೀವನಕ್ಕಿಂತ ಸಹಜ ಸರಳ ಪ್ರಾಮಾಣಿಕ ಬದುಕೇ ನೆಮ್ಮದಿಯ ತಾಣ

ಸಾಕು ಸಂಬಳ – ಬೇಕು ನೆಮ್ಮದಿ…..

ಜೈಲಿನ ಗೋಡೆಗಳ ನಡುವೆ…….

ನನ್ನೊಳಗಿನ ಜ್ಞಾನೋದಯ ನಿಮ್ಮೊಳಗೂ ಆಗಬಾರದೇ……

ಲೋಕಾಯುಕ್ತ ದಾಳಿ ಮತ್ತು ಮುದ್ದೆ ಸೊಪ್ಪಿನ ಸಾರು……………

ಕಂತೆ ಕಂತೆಗಳ ನಡುವೆ ಮಗುವಿನ ಮುಗ್ದತೆಗೆ ಮನಸ್ಸು ಮರಳಬಾರದೇ…..

ನನ್ನ ಬಾಲ್ಯದಲ್ಲಿ ವಾರ ಪೂರ್ತಿ ಒಂದೇ ಹರಿದ ಬಟ್ಟೆ ಧರಿಸುತ್ತಿದ್ದೆ.

ವಾರದಲ್ಲಿ ಒಂದೇ ದಿನ ಅಂದರೆ ಭಾನುವಾರ ಮಾತ್ರ ಸ್ನಾನ.

ಪ್ರತಿದಿನ ಮುಂಜಾನೆ ಕಾಡಿಗೆ ಹೋಗಿ ಒಣಗಿದ ಸೌದೆ ತರಬೇಕಾಗಿತ್ತು.

ಪ್ರತಿದಿನದ ಊಟ ರಾತ್ರಿಯ ತಂಗಳು ಮತ್ತು ಬೆಳಗಿನ ಗಂಜಿ ಮಾತ್ರ.

ಶಾಲೆಯ ಮಧ್ಯಾಹ್ನದ ಉಪ್ಪಿಟ್ಟೇ ನನಗೆ ಪಂಚಾಮೃತ.

ರಾತ್ರಿ ಸೀಮೆಎಣ್ಣೆಯ ಬುಡ್ಡಿ ದೀಪಗಳೇ ನಮಗೆ ಬೆಳಕಿನ ಮೂಲಗಳು.

ಸರ್ಕಾರದ ಪಾಳುಬಿದ್ದ ಕಟ್ಟಡಗಳೇ ನಮ್ಮ ಶಾಲಾ ತರಗತಿಗಳು.

ಅತ್ಯುತ್ತಮ ಶಿಕ್ಷಕರ ಜೊತೆ ಕ್ರೌರ್ಯತೆ ಇದ್ದ ಶಿಕ್ಷಕರೂ ನಮ್ಮ ಮೇಷ್ಟುಗಳು.

ಆದರೂ SSLC ಪರೀಕ್ಷೆಯಲ್ಲಿ FIRST CLASS ನಲ್ಲಿ ಪಾಸಾದೆ.

ಅನಂತರ PUC ಮತ್ತು BA ಕೂಡ ಸರ್ಕಾರಿ ಕಾಲೇಜಿನಲ್ಲೇ
ಓದಿ ಒಳ್ಳೆಯ ಅಂಕಗಳೊಂದಿಗೆ ಪಾಸಾದೆ.

ಆಗಲೂ ಹೊಟ್ಟೆ ತುಂಬಾ ಊಟ ಮಾಡುತ್ತಿದ್ದುದು ಕೇವಲ
ಮದುವೆ ಸಮಾರಂಭಗಳಲ್ಲಿ ಮಾತ್ರ.

ಸೇಬು ಹಣ್ಣು ನಾನು ಕೆಲಸಕ್ಕೆ ಸೇರುವವರೆಗೂ ತಿಂದೇ ಇರಲಿಲ್ಲ.

ಹಾಗೂ ಹೀಗೂ ಕಷ್ಟಪಟ್ಟು ಓದಿ KAS ( KPSC ) ಬರೆದು ಅದರಲ್ಲಿ SELECT ಆದೆ.

ಯಾರದೋ ಕ್ಯೆಕಾಲು ಹಿಡಿದು ತಹಶೀಲ್ದಾರ್ ಆಗಿ ನೇಮಕವಾದೆ.

ಬಾಲ್ಯ, ಯೌವನದ ಹಸಿವು ಅವಮಾನಗಳು ಒಮ್ಮೆಲೇ ಎಗರಿ ಬಿದ್ದವು,

ಸಂಬಳದ ಜೊತೆಗೆ ಕುಳಿತಲ್ಲೇ ಲಕ್ಷಾಂತರ ಹಣ ಲಂಚದ ರೂಪದಲ್ಲಿ ಹರಿದು ಬರತೊಡಗಿತು.

ಹಣ ಎಲ್ಲಿ ಇಡುವುದು ಎಂಬುದೇ ಸಮಸ್ಯೆಯಾಯಿತು.

ಬಡತನದಲ್ಲಿ ನನ್ನನ್ನು ಮೂದಲಿಸಿದ್ದ ತುಚ್ಚವಾಗಿ ಕಂಡಿದ್ದ ನಾಯಿ ನರಿಗಳು ಕೂಡ ಮಹಾರಾಜನಂತೆ ನೋಡತೊಡಗಿದರು.

ಪ್ರತಿದಿನವೂ ಭರ್ಜರಿ ಸಂತೋಷ ಕೂಟಗಳೇ ಶ್ರೀಮಂತ ಹೋಟೇಲ್ ಗಳಲ್ಲಿ.

ಬೇರೆ ಬೇರೆ ಕಡೆ ಆಸ್ತಿಗಳು ನನ್ನ ಹೆಸರಿಗೆ ಸೇರತೊಡಗಿದವು,

ಸ್ವರ್ಗಕ್ಕೆ ಮೂರೇ ಗೇಣು. ನನಗೆ ಗೊತ್ತಿಲ್ಲದೆ ನನ್ನ ಅಹಂಕಾರವೂ ಮೇರೆ ಮೀರಿತ್ತು.

ಬಾಲ್ಯದ ಕೀಳರಿಮೆ ಅದಕ್ಕೆ ಕಾರಣವಾಗಿರಬಹುದು.

ಆದರೆ……….,

ಒಂದು ಬೆಳಗಿನ ಜಾವ ಇದ್ದಕ್ಕಿದ್ದಂತೆ ಲೋಕಾಯುಕ್ತ ಪೊಲೀಸರಿಂದ ನನ್ನ ಮನೆ ಮೇಲೆ ದಾಳಿ,

ಎಚ್ಚೆತ್ತುಕೊಳ್ಳುವ ಮುನ್ನ ಎಲ್ಲಾ ಬಟಾ ಬಯಲು,

ಬೆಳಕು ಹರಿಯುವ ಮುನ್ನ ಅಪಾರ ಹಣ ಆಸ್ತಿ ವಶ. ಟಿವಿಯಲ್ಲಿ ಮಾನ ಹರಾಜು, ಬಂಧನ, ಸಂಜೆಯೊಳಗೆ ಜೈಲಿಗೆ ರವಾನೆ.

ಈಗ ತಾನೇ ಕ್ಯೂನಲ್ಲಿ ನಿಂತು, ತಟ್ಟೆ ಹಿಡಿದು ಊಟ ಹಾಕಿಸಿಕೊಂಡು ಮುದ್ದೆ ಮುರಿಯುತ್ತಿದ್ದೇನೆ.

ಈಗ, ಒಮ್ಮೆಗೇ ಆ ಬಡತನದ ದಿನಗಳು ನೆನಪಾಗುತ್ತಿವೆ.
ಕಣ್ಣ ನೀರು ತಟ್ಟೆಗೆ ಬೀಳುತ್ತಿದೆ.

ಆ ದಿನಗಳು, ಆ ಬೆಳದಿಂಗಳ ರಾತ್ರಿಗಳಲ್ಲಿ ಮನೆಯ ಮುಂದೆ ತಿನ್ನುತ್ತಿದ್ದ ಮುದ್ದೆ ಸೊಪ್ಪಿನ ಸಾರು
ಯಾಕೋ ನೆನಪಾಗುತ್ತಿದೆ.

ಈ ನೋವಿನಲ್ಲೂ ಆ ಮಧುರ ನೆನಪುಗಳು ಮುದ ನೀಡುತ್ತಿದೆ.

ಹಾಗೇ ಅತ್ತು ಅತ್ತು ಮನಸ್ಸು ಹಗುರಾಯಿತು. ಬದುಕಿನ ನಿಜ ಅರ್ಥ ಅರಿವಾಯಿತು.

ಎಲ್ಲವನ್ನೂ ಕಳೆದುಕೊಂಡರೂ ನನ್ನನ್ನು ನಾ ಪಡೆದೆ ಎಂಬ ಸಮಾಧಾನದ ಭಾವ ಮೂಡಿತು.

ಆಡಂಬರದ ಅಹಂಕಾರದ ಜೀವನಕ್ಕಿಂತ ಸಹಜ ಸರಳ ಪ್ರಾಮಾಣಿಕ ಬದುಕೇ ನೆಮ್ಮದಿಯ ತಾಣ ಎಂಬ ಜ್ಞಾನೋದಯವಾಯಿತು……..

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ – ಮನೆಗಳಲ್ಲಿ – ಮತಗಳಲ್ಲಿ – ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ-ವಿವೇಕಾನಂದ. ಎಚ್. ಕೆ

Ramesh Babu

Journalist

Recent Posts

ವೃದ್ಧ ದಂಪತಿ ಆತ್ನಹತ್ಯೆಗೆ ಯತ್ನ: ಪತಿ ಶಿವಪ್ಪ ಸಾವು

ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…

3 hours ago

ಗ್ರಾಹಕರ ಸೋಗಿನಲ್ಲಿ ಬಂದು ಜ್ಯುವೆಲ್ಲರಿ ಅಂಗಡಿಯಲ್ಲಿ ದರೋಡೆ ಯತ್ನ

ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…

4 hours ago

ಗ್ಯಾಸ್ ಸೋರಿಕೆಯಿಂದ ಬೆಂಕಿ ಅವಘಡ: ಇಬ್ಬರು ಯುವಕರಿಗೆ ಸುಟ್ಟ ಗಾಯ

ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…

13 hours ago

ಬರ ವೀಕ್ಷಣೆ ನಡೆಸಿದ ಸಚಿವ ಕೆ.ಎಚ್ ಮುನಿಯಪ್ಪ: ಬೆಳೆ ವಿಮೆ ಮಾಡಿಸಲು ರೈತರಲ್ಲಿ ಮನವಿ

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

1 day ago

28ಕ್ಕೂ ಹೆಚ್ಚು ಜಿಲ್ಲೆಗಳು ಬರದ ಸಂಕಷ್ಟದಲ್ಲಿ; ರೈತರಿಗೆ ತಕ್ಷಣ ₹10 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…

2 days ago

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

2 days ago