ಆಣೆ ಪ್ರಮಾಣ ರಾಜಕೀಯ ವಿಚಾರ: ಶಾಸಕ ಧೀರಜ್ ಮುನಿರಾಜ್ ಪ್ರತಿಕ್ರಿಯೆ: ನಾನೇನು ನಿತ್ಯಾನಂದ ಸ್ವಾಮಿ ಅಲ್ಲ- ಅವರ ರೀತಿ ಹೊಸ ದೇಶ ಕಟ್ಟಿ, ಹೊಸ ಕರೆನ್ಸಿ ಜಾರಿ ಮಾಡಿ, ಕೈಲಾಸ ಸೃಷ್ಟಿ ಮಾಡೋದಕ್ಕೆ ಆಗಲ್ಲ- ನಾನು ದೊಡ್ಡಬಳ್ಳಾಪುರ ಅಭಿವೃದ್ಧಿ ಮಾಡುತ್ತೇನೆ- ಶಾಸಕ ಧೀರಜ್ ಮುನಿರಾಜ್

ತಾಲ್ಲೂಕಿನ ರಾಜಕಾರಣದ ಇತಿಹಾಸದಲ್ಲಿ ಸಿದ್ದಲಿಂಗಯ್ಯ, ರಾಮೇಗೌಡ, ಆರ್.ಎಲ್ ಜಾಲಪ್ಪ, ನರಸಿಂಹಸ್ವಾಮಿ ಸೇರಿದಂತೆ ಘಟಾನುಘಟಿ ನಾಯಕರ ರಾಜಕಾರಣದಲ್ಲಿ ಈವರೆಗೆ ರಾಜಕೀಯದ ಎಲ್ಲೆ ಮೀರಿ ಮಾತನಾಡಿದ್ದಾಗಲಿ.. ಆಣೆ ಪ್ರಮಾಣ ರಾಜಕೀಯಗಳಾಗಲಿ.. ವೈಯಕ್ತಿಯ ಆರೋಪ – ಪ್ರತ್ಯಾರೋಪಗಳಾಗಿ ನಡೆದಿರಲಿಲ್ಲ. ಇದೀಗ ಬದಲಾದ ರಾಜಕಾರಣದಲ್ಲಿ ಹಾಲಿ ಶಾಸಕ ಧೀರಜ್ ಮುನಿರಾಜು ಮತ್ತು ಮಾಜಿ ಶಾಸಕ ವೆಂಕಟರಮಣಯ್ಯ ಮಧ್ಯೆ ವೈಯಕ್ತಿಯ ಆರೋಪ-ಪ್ರತ್ಯಾರೋಪಗಳು ಆರಂಭವಾಗಿದ್ದು, ಸವಾಲು – ಎದಿರು ಸವಾಲುಗಳು ನಡೆಯುತ್ತಿವೆ. ಮಾಜಿ ಶಾಸಕರ ವೆಂಕಟರಮಣಯ್ಯ ಅಭಿವೃದ್ಧಿ ಕೆಲಸಗಳಿಗೆ ಅಡ್ಡಿ ಮಾಡುತ್ತಿದ್ದಾರೆ ಎಂದು ಅನುದಾನ ವಿಚಾರಗಳಿಗೆ ಸರ್ಕಾರದಲ್ಲಿ ಪರೋಕ್ಷವಾಗಿ ಅಡ್ಡಿಪಡಿಸುತ್ತಿದ್ದಾರೆ ಎಂದು ಶಾಸಕ ಧೀರಜ್ ಮುನಿರಾಜು ನೇರವಾಗಿ ದೂರುತ್ತಿದ್ದಾರೆ. ಇತ್ತ ಮಾಜಿ ಶಾಸಕ ವೆಂಕಟರಮಣಯ್ಯ ನಾನು ಯಾವುದೇ ಅಭಿವೃದ್ಧಿ ಕೆಲಸಗಳಿಗೆ ಅಡ್ಡಿಪಡಿಸಿಲ್ಲ. ಕುಣಿಯಲಾರದೆ ನೆಲ ಡೋಂಕು ಎನ್ನುತ್ತಿದ್ದಾರೆ. ಪ್ರಬುದ್ಧತೆಯೇ ಇಲ್ಲ, ಬೇಕಾದರೆ ಧರ್ಮಸ್ಥಳದ ಮಂಜುನಾಥಸ್ವಾಮಿ ದೇವರ ಸನ್ನಿಧಿಯಲ್ಲಿ ಪ್ರಮಾಣ ಮಾಡಿ ಹೇಳುತ್ತೇನೆ. ನೀನು ಬಂದು ಪ್ರಮಾಣ ಮಾಡು ಎಂದು ಶಾಸಕ ಧೀರಜ್ ಮುನಿರಾಜುಗೆ ಸವಾಲು ಹಾಕಿದ್ದರು. ಇದಕ್ಕೆ ಶಾಸಕ ಧೀರಜ್ ಮುನಿರಾಜ್ ಇಂದು ಪ್ರತಿಕ್ರಿಯಿಸಿ, ಐದು ವರ್ಷ ಕ್ಷೇತ್ರದ ಕೆಲಸ ಮಾಡೋದಕ್ಕೆ ಜನ ವೋಟ್ ಹಾಕಿ ಗೆಲ್ಲಿಸಿದ್ದಾರೆ. ಅದೇ ಜನ ಈ ಹಿಂದೆ ಮಾಜಿ ಶಾಸಕ ಟಿ ವೆಂಕಟರಮಣಯ್ಯ ನವರಿಗೆ 10 ವರ್ಷ ಅವಕಾಶ ಮಾಡಿಕೊಟ್ಟಿದ್ದರು. ಯಾವುದೇ ಮಾಜಿ ಶಾಸಕರ ಬಗ್ಗೆ ಧೀರಜ್ ಮುನಿರಾಜ್ ಮಾತಾಡೋದಿಲ್ಲ ಎಂದರು.

ಸಿದ್ದಲಿಂಗಪ್ಪ, ರಾಮೇಗೌಡ, ಜಾಲಪ್ಪ, ಗಂಟಿಗಾನಹಳ್ಳಿ ಕೃಷ್ಣಪ್ಪ, ಆರ್ ಜಿ ವೆಂಕಟಾಚಲಯ್ಯ, ನರಸಿಂಹಸ್ವಾಮಿ ಕಾಲದಿಂದ ಮಾಜಿ ಶಾಸಕ ಟಿ ವೆಂಕಟರಮಣಯ್ಯ ಕಾಲದವರೆಗೆ ಕೆಲಸ ಆಗಿದೆ. ಅದೇ ಕೆಲಸವನ್ನ ಶಾಸಕನಾಗಿ ನಾನು ಮುಂದುವರಿಸಿಕೊಂಡು ಹೋಗಬೇಕು. ನಾನೇನು ನಿತ್ಯಾನಂದ ಸ್ವಾಮಿ ಅಲ್ಲ. ಅವರ ರೀತಿ ಹೊಸ ದೇಶ ಕಟ್ಟಿ, ಹೊಸ ಕರೆನ್ಸಿ ಜಾರಿ ಮಾಡಿ, ಕೈಲಾಸ ಸೃಷ್ಟಿ ಮಾಡೋದಕ್ಕೆ ಆಗಲ್ಲ. ನಾನು ದೊಡ್ಡಬಳ್ಳಾಪುರ ಅಭಿವೃದ್ಧಿ ಮಾಡುತ್ತೇನೆ. ನಾನು ದೊಡ್ಡಬಳ್ಳಾಪುರವನ್ನೇ ಅಭಿವೃದ್ಧಿ ಮಾಡಬೇಕು. ಅದರಲ್ಲಿ ಏನು ಬೇಕೋ ಅದನ್ನ ಮಾಡ್ತೀನಿ. ಮಾಜಿ ಶಾಸಕರ ಬಗ್ಗೆ ಮಾತನಾಡೋದಿಲ್ಲ ಎಂದು ಹೇಳಿದರು.

ಏನಾದರೂ ಅವರು ಅಂದರೆ ಮಾಜಿ ಶಾಸಕ ಟಿ.ವೆಂಕಟರಮಣಯ್ಯನವರು ನನ್ನ ಪ್ರತಿ ಸ್ಪರ್ಧಿಯಾಗಿ ಟಿಕೆಟ್ ತಂದರೆ ನಡೆಯುವಂತಹ ವಿಚಾರಗಳು ಬೇರೆ ಇರುತ್ತವೆ. ಸಾರ್ವಜನಿಕವಾಗಿ ನಾನು ಅವರ ಬಗ್ಗೆ ಮಾತಾಡಲ್ಲ. ಅವರ ಬಗ್ಗೆ ಮಾತನಾಡುವಷ್ಟು ನಾನು ದೊಡ್ಡವನಾಗಿಲ್ಲ. ಅವರು ಹತ್ತು ವರ್ಷಗಳ ಕಾಲ ಶಾಸಕರಾಗಿ ಕೆಲಸ ಮಾಡಿರುವುದು ಹಾಗೂ ನಾನು ಮಾಡಿರುವ ಕೆಲಸಗಳ ರಿಪೋರ್ಟ್ ಕಾರ್ಡ್ ಇಟ್ಟುಕೊಂಡು ಚುನಾವಣೆಗೆ ಬರುತ್ತೇನೆ. ಆಣೆ ಪ್ರಮಾಣ ವಿಚಾರವನ್ನು ರಾಜಕೀಯದಲ್ಲಿ ನಾನು ತರಲು ನಾನು ಇಷ್ಟಪಡುವುದಿಲ್ಲ. ದೇವರ ಮೇಲೆ ಆಣೆ ಪ್ರಮಾಣ ಮಾಡಿದರೆ ಬರುವಂತಹ ಕಷ್ಟಗಳು ಅಷ್ಟಿಷ್ಟಲ್ಲ. ನಮ್ಮ ಆತ್ಮಸಾಕ್ಷಿಗಿಂತ ದೊಡ್ಡ ದೇವರಿಲ್ಲ. ನಾನು ಇಡೀ ಜಗತ್ತಿಗೆ ಮೋಸ ಮಾಡಬಹುದು, ನನ್ನ ಆತ್ಮಸಾಕ್ಷಿಗೆ ನಾನು ಮೋಸ ಮಾಡಿಕೊಳ್ಳುವುದಿಲ್ಲ. ಅವರು ಟಿಕೆಟ್ ತರಲಿ, ಟಿಕೆಟ್ ತಂದಾಗ ಮಾತನಾಡುತ್ತೇನೆ. ಟಿಕೆಟ್ ತರುವ ಕಡೆ ಗಮನಹರಿಸಲಿ ಎಂದು ತಿಳಿಸಿದರು.

Ramesh Babu

Journalist

Recent Posts

ಮಧ್ಯಪ್ರಾಚ್ಯದಲ್ಲಿ ಯುದ್ಧ ಹಿನ್ನೆಲೆ: ರಾಜ್ಯದ ಹಲವೆಡೆ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಅಭಾವ: ಗೃಹ ಬಳಕೆಯ ಗ್ಯಾಸ್ ಸಿಲಿಂಡರ್ ಸಮಸ್ಯೆ ಇಲ್ಲ- ಆಹಾರ ಸಚಿವ ಕೆ.ಎಚ್. ಮುನಿಯಪ್ಪ

ಮಧ್ಯಪ್ರಾಚ್ಯದಲ್ಲಿ ಯುದ್ಧದ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಅಭಾವದ ಪರಿಸ್ಥಿತಿ ಸೃಷ್ಟಿಯಾಗಿರುವ ವರದಿಗಳ ನಡುವೆ ಗೃಹ ಬಳಕೆಯ…

58 minutes ago

Arizona’s New Wave of Home‑Buying Assistance: What Buyers Need to Know

The desert sun has always promised a bright future for Arizona residents, but the rising…

7 hours ago

ರಾಜಕೀಯ ಮತ್ತು ಸಾಂಸ್ಕೃತಿಕ ಜನಜೀವನದಲ್ಲಿ ಅತಿಮುಖ್ಯ ಪಾತ್ರವಹಿಸಿದ ಕೆಲವೇ ಪ್ರಮುಖರಲ್ಲಿ ಲಂಕೇಶ್ ಒಬ್ಬರು

ಪಿ. ಲಂಕೇಶ್........ ಮಾರ್ಚ್ 8, 1935, ಜನವರಿ 25, 2000.... ಎರಡು ವೈರುಧ್ಯಗಳ ಚಿಂತನೆಯ ಜನರಲ್ಲಿ ಪ್ರೀತಿ - ದ್ವೇಷ…

9 hours ago

ನಾಳೆ(ಮಾರ್ಚ್ 11ರಿಂದ) ರಾಜ್ಯ ಸರ್ಕಾರಿ ಆಸ್ಪತ್ರೆಗಳ ವೈದ್ಯರ‌ ಮುಷ್ಕರ: ಸರ್ಕಾರಿ ಆಸ್ಪತ್ರೆಗಳಲ್ಲಿ ಓಪಿಡಿ ಸೇವೆಗಳು ಸ್ಥಗಿತ ಸಾಧ್ಯತೆ

ಕರ್ನಾಟಕದ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವ ರೋಗಿಗಳಿಗೆ ಮಾರ್ಚ್ 11ರಿಂದ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು…

21 hours ago

ಮಾ.19 ರಿಂದ ಮಾ.22ರವರೆಗೆ ಮೇಲಿನ ಜೂಗಾನಹಳ್ಳಿಯಲ್ಲಿ ವಿಕ್ಕಿ ಬಾಲ್ ಕ್ರಿಕೆಟ್ ಟೂರ್ನಿಮೆಂಟ್ ಆಯೋಜನೆ

ಮೇಲಿನ ಜೂಗಾನಹಳ್ಳಿ ಕ್ರಿಕೆಟರ್ಸ್ ವತಿಯಿಂದ (ದಿವಂಗತ ಡಾ. ಪುನಿತ್ ರಾಜ್‌ಕುಮಾರ್‌ ಸವಿನೆನಪಿಗಾಗಿ) ವಿಕ್ಕಿ ಬಾಲ್ ಕ್ರಿಕೆಟ್ ಟೂರ್ನಿಮೆಂಟನ್ನು ಮಾ.19 ರಿಂದ…

22 hours ago

25 ವರ್ಷಗಳ ನಂತರ ತಮಗೆ ಶಿಕ್ಷಣ ನೀಡಿದ ಗುರುಗಳ ಪಾದಪೂಜೆ

ನನ್ನ ಶಾಲೆ ನನ್ನ ಜವಾಬ್ದಾರಿ ಎಂಬ ಧ್ಯೇಯ ವಾಕ್ಯದೊಂದಿಗೆ ತಾನು ಓದಿದ ಸರ್ಕಾರಿ ಶಾಲೆಯ ಪರಿಸ್ಥಿತಿ ಹೇಗಿದೆ ಎಂಬುದನ್ನು ಹಿಂದಿರುಗಿ…

1 day ago