ಆಣೆ ಪ್ರಮಾಣ ರಾಜಕೀಯ ವಿಚಾರ: ಶಾಸಕ ಧೀರಜ್ ಮುನಿರಾಜ್ ಪ್ರತಿಕ್ರಿಯೆ: ನಾನೇನು ನಿತ್ಯಾನಂದ ಸ್ವಾಮಿ ಅಲ್ಲ- ಅವರ ರೀತಿ ಹೊಸ ದೇಶ ಕಟ್ಟಿ, ಹೊಸ ಕರೆನ್ಸಿ ಜಾರಿ ಮಾಡಿ, ಕೈಲಾಸ ಸೃಷ್ಟಿ ಮಾಡೋದಕ್ಕೆ ಆಗಲ್ಲ- ನಾನು ದೊಡ್ಡಬಳ್ಳಾಪುರ ಅಭಿವೃದ್ಧಿ ಮಾಡುತ್ತೇನೆ- ಶಾಸಕ ಧೀರಜ್ ಮುನಿರಾಜ್

ತಾಲ್ಲೂಕಿನ ರಾಜಕಾರಣದ ಇತಿಹಾಸದಲ್ಲಿ ಸಿದ್ದಲಿಂಗಯ್ಯ, ರಾಮೇಗೌಡ, ಆರ್.ಎಲ್ ಜಾಲಪ್ಪ, ನರಸಿಂಹಸ್ವಾಮಿ ಸೇರಿದಂತೆ ಘಟಾನುಘಟಿ ನಾಯಕರ ರಾಜಕಾರಣದಲ್ಲಿ ಈವರೆಗೆ ರಾಜಕೀಯದ ಎಲ್ಲೆ ಮೀರಿ ಮಾತನಾಡಿದ್ದಾಗಲಿ.. ಆಣೆ ಪ್ರಮಾಣ ರಾಜಕೀಯಗಳಾಗಲಿ.. ವೈಯಕ್ತಿಯ ಆರೋಪ – ಪ್ರತ್ಯಾರೋಪಗಳಾಗಿ ನಡೆದಿರಲಿಲ್ಲ. ಇದೀಗ ಬದಲಾದ ರಾಜಕಾರಣದಲ್ಲಿ ಹಾಲಿ ಶಾಸಕ ಧೀರಜ್ ಮುನಿರಾಜು ಮತ್ತು ಮಾಜಿ ಶಾಸಕ ವೆಂಕಟರಮಣಯ್ಯ ಮಧ್ಯೆ ವೈಯಕ್ತಿಯ ಆರೋಪ-ಪ್ರತ್ಯಾರೋಪಗಳು ಆರಂಭವಾಗಿದ್ದು, ಸವಾಲು – ಎದಿರು ಸವಾಲುಗಳು ನಡೆಯುತ್ತಿವೆ. ಮಾಜಿ ಶಾಸಕರ ವೆಂಕಟರಮಣಯ್ಯ ಅಭಿವೃದ್ಧಿ ಕೆಲಸಗಳಿಗೆ ಅಡ್ಡಿ ಮಾಡುತ್ತಿದ್ದಾರೆ ಎಂದು ಅನುದಾನ ವಿಚಾರಗಳಿಗೆ ಸರ್ಕಾರದಲ್ಲಿ ಪರೋಕ್ಷವಾಗಿ ಅಡ್ಡಿಪಡಿಸುತ್ತಿದ್ದಾರೆ ಎಂದು ಶಾಸಕ ಧೀರಜ್ ಮುನಿರಾಜು ನೇರವಾಗಿ ದೂರುತ್ತಿದ್ದಾರೆ. ಇತ್ತ ಮಾಜಿ ಶಾಸಕ ವೆಂಕಟರಮಣಯ್ಯ ನಾನು ಯಾವುದೇ ಅಭಿವೃದ್ಧಿ ಕೆಲಸಗಳಿಗೆ ಅಡ್ಡಿಪಡಿಸಿಲ್ಲ. ಕುಣಿಯಲಾರದೆ ನೆಲ ಡೋಂಕು ಎನ್ನುತ್ತಿದ್ದಾರೆ. ಪ್ರಬುದ್ಧತೆಯೇ ಇಲ್ಲ, ಬೇಕಾದರೆ ಧರ್ಮಸ್ಥಳದ ಮಂಜುನಾಥಸ್ವಾಮಿ ದೇವರ ಸನ್ನಿಧಿಯಲ್ಲಿ ಪ್ರಮಾಣ ಮಾಡಿ ಹೇಳುತ್ತೇನೆ. ನೀನು ಬಂದು ಪ್ರಮಾಣ ಮಾಡು ಎಂದು ಶಾಸಕ ಧೀರಜ್ ಮುನಿರಾಜುಗೆ ಸವಾಲು ಹಾಕಿದ್ದರು. ಇದಕ್ಕೆ ಶಾಸಕ ಧೀರಜ್ ಮುನಿರಾಜ್ ಇಂದು ಪ್ರತಿಕ್ರಿಯಿಸಿ, ಐದು ವರ್ಷ ಕ್ಷೇತ್ರದ ಕೆಲಸ ಮಾಡೋದಕ್ಕೆ ಜನ ವೋಟ್ ಹಾಕಿ ಗೆಲ್ಲಿಸಿದ್ದಾರೆ. ಅದೇ ಜನ ಈ ಹಿಂದೆ ಮಾಜಿ ಶಾಸಕ ಟಿ ವೆಂಕಟರಮಣಯ್ಯ ನವರಿಗೆ 10 ವರ್ಷ ಅವಕಾಶ ಮಾಡಿಕೊಟ್ಟಿದ್ದರು. ಯಾವುದೇ ಮಾಜಿ ಶಾಸಕರ ಬಗ್ಗೆ ಧೀರಜ್ ಮುನಿರಾಜ್ ಮಾತಾಡೋದಿಲ್ಲ ಎಂದರು.

ಸಿದ್ದಲಿಂಗಪ್ಪ, ರಾಮೇಗೌಡ, ಜಾಲಪ್ಪ, ಗಂಟಿಗಾನಹಳ್ಳಿ ಕೃಷ್ಣಪ್ಪ, ಆರ್ ಜಿ ವೆಂಕಟಾಚಲಯ್ಯ, ನರಸಿಂಹಸ್ವಾಮಿ ಕಾಲದಿಂದ ಮಾಜಿ ಶಾಸಕ ಟಿ ವೆಂಕಟರಮಣಯ್ಯ ಕಾಲದವರೆಗೆ ಕೆಲಸ ಆಗಿದೆ. ಅದೇ ಕೆಲಸವನ್ನ ಶಾಸಕನಾಗಿ ನಾನು ಮುಂದುವರಿಸಿಕೊಂಡು ಹೋಗಬೇಕು. ನಾನೇನು ನಿತ್ಯಾನಂದ ಸ್ವಾಮಿ ಅಲ್ಲ. ಅವರ ರೀತಿ ಹೊಸ ದೇಶ ಕಟ್ಟಿ, ಹೊಸ ಕರೆನ್ಸಿ ಜಾರಿ ಮಾಡಿ, ಕೈಲಾಸ ಸೃಷ್ಟಿ ಮಾಡೋದಕ್ಕೆ ಆಗಲ್ಲ. ನಾನು ದೊಡ್ಡಬಳ್ಳಾಪುರ ಅಭಿವೃದ್ಧಿ ಮಾಡುತ್ತೇನೆ. ನಾನು ದೊಡ್ಡಬಳ್ಳಾಪುರವನ್ನೇ ಅಭಿವೃದ್ಧಿ ಮಾಡಬೇಕು. ಅದರಲ್ಲಿ ಏನು ಬೇಕೋ ಅದನ್ನ ಮಾಡ್ತೀನಿ. ಮಾಜಿ ಶಾಸಕರ ಬಗ್ಗೆ ಮಾತನಾಡೋದಿಲ್ಲ ಎಂದು ಹೇಳಿದರು.

ಏನಾದರೂ ಅವರು ಅಂದರೆ ಮಾಜಿ ಶಾಸಕ ಟಿ.ವೆಂಕಟರಮಣಯ್ಯನವರು ನನ್ನ ಪ್ರತಿ ಸ್ಪರ್ಧಿಯಾಗಿ ಟಿಕೆಟ್ ತಂದರೆ ನಡೆಯುವಂತಹ ವಿಚಾರಗಳು ಬೇರೆ ಇರುತ್ತವೆ. ಸಾರ್ವಜನಿಕವಾಗಿ ನಾನು ಅವರ ಬಗ್ಗೆ ಮಾತಾಡಲ್ಲ. ಅವರ ಬಗ್ಗೆ ಮಾತನಾಡುವಷ್ಟು ನಾನು ದೊಡ್ಡವನಾಗಿಲ್ಲ. ಅವರು ಹತ್ತು ವರ್ಷಗಳ ಕಾಲ ಶಾಸಕರಾಗಿ ಕೆಲಸ ಮಾಡಿರುವುದು ಹಾಗೂ ನಾನು ಮಾಡಿರುವ ಕೆಲಸಗಳ ರಿಪೋರ್ಟ್ ಕಾರ್ಡ್ ಇಟ್ಟುಕೊಂಡು ಚುನಾವಣೆಗೆ ಬರುತ್ತೇನೆ. ಆಣೆ ಪ್ರಮಾಣ ವಿಚಾರವನ್ನು ರಾಜಕೀಯದಲ್ಲಿ ನಾನು ತರಲು ನಾನು ಇಷ್ಟಪಡುವುದಿಲ್ಲ. ದೇವರ ಮೇಲೆ ಆಣೆ ಪ್ರಮಾಣ ಮಾಡಿದರೆ ಬರುವಂತಹ ಕಷ್ಟಗಳು ಅಷ್ಟಿಷ್ಟಲ್ಲ. ನಮ್ಮ ಆತ್ಮಸಾಕ್ಷಿಗಿಂತ ದೊಡ್ಡ ದೇವರಿಲ್ಲ. ನಾನು ಇಡೀ ಜಗತ್ತಿಗೆ ಮೋಸ ಮಾಡಬಹುದು, ನನ್ನ ಆತ್ಮಸಾಕ್ಷಿಗೆ ನಾನು ಮೋಸ ಮಾಡಿಕೊಳ್ಳುವುದಿಲ್ಲ. ಅವರು ಟಿಕೆಟ್ ತರಲಿ, ಟಿಕೆಟ್ ತಂದಾಗ ಮಾತನಾಡುತ್ತೇನೆ. ಟಿಕೆಟ್ ತರುವ ಕಡೆ ಗಮನಹರಿಸಲಿ ಎಂದು ತಿಳಿಸಿದರು.

Ramesh Babu

Journalist

Recent Posts

ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಹುಂಡಿ ಎಣಿಕೆ ಪೂರ್ಣ; 81.94.583 ರೂ. ಸಂಗ್ರಹ

ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದಲ್ಲಿ ಶುಕ್ರವಾರ ಹುಂಡಿ ಕಾಣಿಕೆ ಎಣಿಕೆ ಕಾರ್ಯ ಮಾಡಲಾಗಿದೆ. ದೊಡ್ಡಬಳ್ಳಾಪುರ ತಾಲೂಕಿನ ಇತಿಹಾಸ ಪ್ರಸಿದ್ಧ…

25 minutes ago

ಇಂದಿನಿಂದ ದೊಡ್ಡಬಳ್ಳಾಪುರ ರಾಗಿ ಖರೀದಿ ಕೇಂದ್ರದಲ್ಲಿ ಕನಿಷ್ಠ ಬೆಂಬಲ ಯೋಜನೆಯಡಿ ರಾಗಿ ಖರೀದಿ ಪ್ರಕ್ರಿಯೆ ಆರಂಭ

2025-26ನೇ ಸಾಲಿನ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ನೇರವಾಗಿ ರಾಗಿಯನ್ನು ಖರೀದಿಸುವ ಕಾರ್ಯ ದೊಡ್ಡಬಳ್ಳಾಪುರದ ಎಂಪಿಎಂಸಿ ಆವರಣದಲ್ಲಿರುವ ರಾಗಿ…

2 hours ago

ಫೆ.20, 21, 22ರವರೆಗೆ “ದೊಡ್ಡಬಳ್ಳಾಪುರ ಸೀರೆ ಸಂತೆ”-ಶಾಸಕ ಧೀರಜ್ ಮುನಿರಾಜ್

ದೊಡ್ಡಬಳ್ಳಾಪುರ ಸೀರೆಗಳಿಗೆ ಬ್ರ್ಯಾಂಡ್ ಸೃಷ್ಟಿಸುವ ಉದ್ದೇಶದಿಂದ ಫೆ.20ರಿಂದ ಮೂರು ದಿನಗಳ ಕಾಲ "ದೊಡ್ಡಬಳ್ಳಾಪುರ ಸೀರೆ ಸಂತೆ" ಕಾರ್ಯಕ್ರಮವನ್ನು ದೊಡ್ಡಬಳ್ಳಾಪುರ ನಗರದ…

5 hours ago

ಬೆಳ್ಳಂಬೆಳಗ್ಗೆ ಭೀಕರ ಸರಣಿ ಅಪಘಾತ: 7 ಮಂದಿ ಸ್ಥಳದಲ್ಲೇ ದುರ್ಮರಣ ಕೇಸ್: ಔಟಿಂಗ್ ಹೋದ ಟೀನೆಜರ್ಸ್ ಸೇರಿದ್ದು ಮಸಣ

ಇಂದು ಬೆಳ್ಳಂಬೆಳಗ್ಗೆ ಭೀಕರ ಸರಣಿ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ಸುಮಾರು 7 ಮಂದಿ ಸ್ಥಳದಲ್ಲೇ ದುರ್ಮರಣ ಹೊಂದಿರುವ ಘಟನೆ ಬೆಂಗಳೂರು…

5 hours ago

ಬೆಳ್ಳಂಬೆಳಗ್ಗೆ ಭೀಕರ ಸರಣಿ ಅಪಘಾತ: 7 ಮಂದಿ ಸ್ಥಳದಲ್ಲೇ ದುರ್ಮರಣ ಕೇಸ್: ಸ್ಥಳಕ್ಕೆ ಐಜಿ ಲಾಭೂ ರಾಮ್, ಎಸ್ಪಿ ಚಂದ್ರಕಾಂತ್ ಭೇಟಿ ಪರಿಶೀಲನೆ

ಇಂದು ಬೆಳ್ಳಂಬೆಳಗ್ಗೆ ಭೀಕರ ಸರಣಿ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ಸುಮಾರು 7 ಮಂದಿ ಸ್ಥಳದಲ್ಲೇ ದುರ್ಮರಣ ಹೊಂದಿರುವ ಘಟನೆ ಬೆಂಗಳೂರು…

9 hours ago

ಸಂವಿಧಾನ – ತಿಳಿವಳಿಕೆ ಮತ್ತು ನಡವಳಿಕೆ……….

ಸಂವಿಧಾನ - ತಿಳಿವಳಿಕೆ ಮತ್ತು ನಡವಳಿಕೆ.......... ಈ ಬಗ್ಗೆ ಗೆಳೆಯರ ಬಳಿ ಚರ್ಚೆ ಮಾಡುತ್ತಿದ್ದಾಗ ಅವರು ಹೇಳಿದರು " ಭಾರತದ…

10 hours ago