ಆಣೆ ಪ್ರಮಾಣ ರಾಜಕೀಯ ವಿಚಾರ: ಶಾಸಕ ಧೀರಜ್ ಮುನಿರಾಜ್ ಪ್ರತಿಕ್ರಿಯೆ: ನಾನೇನು ನಿತ್ಯಾನಂದ ಸ್ವಾಮಿ ಅಲ್ಲ- ಅವರ ರೀತಿ ಹೊಸ ದೇಶ ಕಟ್ಟಿ, ಹೊಸ ಕರೆನ್ಸಿ ಜಾರಿ ಮಾಡಿ, ಕೈಲಾಸ ಸೃಷ್ಟಿ ಮಾಡೋದಕ್ಕೆ ಆಗಲ್ಲ- ನಾನು ದೊಡ್ಡಬಳ್ಳಾಪುರ ಅಭಿವೃದ್ಧಿ ಮಾಡುತ್ತೇನೆ- ಶಾಸಕ ಧೀರಜ್ ಮುನಿರಾಜ್

ತಾಲ್ಲೂಕಿನ ರಾಜಕಾರಣದ ಇತಿಹಾಸದಲ್ಲಿ ಸಿದ್ದಲಿಂಗಯ್ಯ, ರಾಮೇಗೌಡ, ಆರ್.ಎಲ್ ಜಾಲಪ್ಪ, ನರಸಿಂಹಸ್ವಾಮಿ ಸೇರಿದಂತೆ ಘಟಾನುಘಟಿ ನಾಯಕರ ರಾಜಕಾರಣದಲ್ಲಿ ಈವರೆಗೆ ರಾಜಕೀಯದ ಎಲ್ಲೆ ಮೀರಿ ಮಾತನಾಡಿದ್ದಾಗಲಿ.. ಆಣೆ ಪ್ರಮಾಣ ರಾಜಕೀಯಗಳಾಗಲಿ.. ವೈಯಕ್ತಿಯ ಆರೋಪ – ಪ್ರತ್ಯಾರೋಪಗಳಾಗಿ ನಡೆದಿರಲಿಲ್ಲ. ಇದೀಗ ಬದಲಾದ ರಾಜಕಾರಣದಲ್ಲಿ ಹಾಲಿ ಶಾಸಕ ಧೀರಜ್ ಮುನಿರಾಜು ಮತ್ತು ಮಾಜಿ ಶಾಸಕ ವೆಂಕಟರಮಣಯ್ಯ ಮಧ್ಯೆ ವೈಯಕ್ತಿಯ ಆರೋಪ-ಪ್ರತ್ಯಾರೋಪಗಳು ಆರಂಭವಾಗಿದ್ದು, ಸವಾಲು – ಎದಿರು ಸವಾಲುಗಳು ನಡೆಯುತ್ತಿವೆ. ಮಾಜಿ ಶಾಸಕರ ವೆಂಕಟರಮಣಯ್ಯ ಅಭಿವೃದ್ಧಿ ಕೆಲಸಗಳಿಗೆ ಅಡ್ಡಿ ಮಾಡುತ್ತಿದ್ದಾರೆ ಎಂದು ಅನುದಾನ ವಿಚಾರಗಳಿಗೆ ಸರ್ಕಾರದಲ್ಲಿ ಪರೋಕ್ಷವಾಗಿ ಅಡ್ಡಿಪಡಿಸುತ್ತಿದ್ದಾರೆ ಎಂದು ಶಾಸಕ ಧೀರಜ್ ಮುನಿರಾಜು ನೇರವಾಗಿ ದೂರುತ್ತಿದ್ದಾರೆ. ಇತ್ತ ಮಾಜಿ ಶಾಸಕ ವೆಂಕಟರಮಣಯ್ಯ ನಾನು ಯಾವುದೇ ಅಭಿವೃದ್ಧಿ ಕೆಲಸಗಳಿಗೆ ಅಡ್ಡಿಪಡಿಸಿಲ್ಲ. ಕುಣಿಯಲಾರದೆ ನೆಲ ಡೋಂಕು ಎನ್ನುತ್ತಿದ್ದಾರೆ. ಪ್ರಬುದ್ಧತೆಯೇ ಇಲ್ಲ, ಬೇಕಾದರೆ ಧರ್ಮಸ್ಥಳದ ಮಂಜುನಾಥಸ್ವಾಮಿ ದೇವರ ಸನ್ನಿಧಿಯಲ್ಲಿ ಪ್ರಮಾಣ ಮಾಡಿ ಹೇಳುತ್ತೇನೆ. ನೀನು ಬಂದು ಪ್ರಮಾಣ ಮಾಡು ಎಂದು ಶಾಸಕ ಧೀರಜ್ ಮುನಿರಾಜುಗೆ ಸವಾಲು ಹಾಕಿದ್ದರು. ಇದಕ್ಕೆ ಶಾಸಕ ಧೀರಜ್ ಮುನಿರಾಜ್ ಇಂದು ಪ್ರತಿಕ್ರಿಯಿಸಿ, ಐದು ವರ್ಷ ಕ್ಷೇತ್ರದ ಕೆಲಸ ಮಾಡೋದಕ್ಕೆ ಜನ ವೋಟ್ ಹಾಕಿ ಗೆಲ್ಲಿಸಿದ್ದಾರೆ. ಅದೇ ಜನ ಈ ಹಿಂದೆ ಮಾಜಿ ಶಾಸಕ ಟಿ ವೆಂಕಟರಮಣಯ್ಯ ನವರಿಗೆ 10 ವರ್ಷ ಅವಕಾಶ ಮಾಡಿಕೊಟ್ಟಿದ್ದರು. ಯಾವುದೇ ಮಾಜಿ ಶಾಸಕರ ಬಗ್ಗೆ ಧೀರಜ್ ಮುನಿರಾಜ್ ಮಾತಾಡೋದಿಲ್ಲ ಎಂದರು.

ಸಿದ್ದಲಿಂಗಪ್ಪ, ರಾಮೇಗೌಡ, ಜಾಲಪ್ಪ, ಗಂಟಿಗಾನಹಳ್ಳಿ ಕೃಷ್ಣಪ್ಪ, ಆರ್ ಜಿ ವೆಂಕಟಾಚಲಯ್ಯ, ನರಸಿಂಹಸ್ವಾಮಿ ಕಾಲದಿಂದ ಮಾಜಿ ಶಾಸಕ ಟಿ ವೆಂಕಟರಮಣಯ್ಯ ಕಾಲದವರೆಗೆ ಕೆಲಸ ಆಗಿದೆ. ಅದೇ ಕೆಲಸವನ್ನ ಶಾಸಕನಾಗಿ ನಾನು ಮುಂದುವರಿಸಿಕೊಂಡು ಹೋಗಬೇಕು. ನಾನೇನು ನಿತ್ಯಾನಂದ ಸ್ವಾಮಿ ಅಲ್ಲ. ಅವರ ರೀತಿ ಹೊಸ ದೇಶ ಕಟ್ಟಿ, ಹೊಸ ಕರೆನ್ಸಿ ಜಾರಿ ಮಾಡಿ, ಕೈಲಾಸ ಸೃಷ್ಟಿ ಮಾಡೋದಕ್ಕೆ ಆಗಲ್ಲ. ನಾನು ದೊಡ್ಡಬಳ್ಳಾಪುರ ಅಭಿವೃದ್ಧಿ ಮಾಡುತ್ತೇನೆ. ನಾನು ದೊಡ್ಡಬಳ್ಳಾಪುರವನ್ನೇ ಅಭಿವೃದ್ಧಿ ಮಾಡಬೇಕು. ಅದರಲ್ಲಿ ಏನು ಬೇಕೋ ಅದನ್ನ ಮಾಡ್ತೀನಿ. ಮಾಜಿ ಶಾಸಕರ ಬಗ್ಗೆ ಮಾತನಾಡೋದಿಲ್ಲ ಎಂದು ಹೇಳಿದರು.

ಏನಾದರೂ ಅವರು ಅಂದರೆ ಮಾಜಿ ಶಾಸಕ ಟಿ.ವೆಂಕಟರಮಣಯ್ಯನವರು ನನ್ನ ಪ್ರತಿ ಸ್ಪರ್ಧಿಯಾಗಿ ಟಿಕೆಟ್ ತಂದರೆ ನಡೆಯುವಂತಹ ವಿಚಾರಗಳು ಬೇರೆ ಇರುತ್ತವೆ. ಸಾರ್ವಜನಿಕವಾಗಿ ನಾನು ಅವರ ಬಗ್ಗೆ ಮಾತಾಡಲ್ಲ. ಅವರ ಬಗ್ಗೆ ಮಾತನಾಡುವಷ್ಟು ನಾನು ದೊಡ್ಡವನಾಗಿಲ್ಲ. ಅವರು ಹತ್ತು ವರ್ಷಗಳ ಕಾಲ ಶಾಸಕರಾಗಿ ಕೆಲಸ ಮಾಡಿರುವುದು ಹಾಗೂ ನಾನು ಮಾಡಿರುವ ಕೆಲಸಗಳ ರಿಪೋರ್ಟ್ ಕಾರ್ಡ್ ಇಟ್ಟುಕೊಂಡು ಚುನಾವಣೆಗೆ ಬರುತ್ತೇನೆ. ಆಣೆ ಪ್ರಮಾಣ ವಿಚಾರವನ್ನು ರಾಜಕೀಯದಲ್ಲಿ ನಾನು ತರಲು ನಾನು ಇಷ್ಟಪಡುವುದಿಲ್ಲ. ದೇವರ ಮೇಲೆ ಆಣೆ ಪ್ರಮಾಣ ಮಾಡಿದರೆ ಬರುವಂತಹ ಕಷ್ಟಗಳು ಅಷ್ಟಿಷ್ಟಲ್ಲ. ನಮ್ಮ ಆತ್ಮಸಾಕ್ಷಿಗಿಂತ ದೊಡ್ಡ ದೇವರಿಲ್ಲ. ನಾನು ಇಡೀ ಜಗತ್ತಿಗೆ ಮೋಸ ಮಾಡಬಹುದು, ನನ್ನ ಆತ್ಮಸಾಕ್ಷಿಗೆ ನಾನು ಮೋಸ ಮಾಡಿಕೊಳ್ಳುವುದಿಲ್ಲ. ಅವರು ಟಿಕೆಟ್ ತರಲಿ, ಟಿಕೆಟ್ ತಂದಾಗ ಮಾತನಾಡುತ್ತೇನೆ. ಟಿಕೆಟ್ ತರುವ ಕಡೆ ಗಮನಹರಿಸಲಿ ಎಂದು ತಿಳಿಸಿದರು.

Ramesh Babu

Journalist

Recent Posts

ಬಾಶೆಟ್ಟಿಹಳ್ಳಿ ಕೋಟ್ಯಂತರ ಹಗರಣ ಆರೋಪ: ಶಾಸಕರು ಮೌನ ಏಕೆ ಎಂದು ಸ್ಥಳೀಯರ ಪ್ರಶ್ನೆ

ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…

9 hours ago

ಅಗಸ್ಟ್ 2ರ ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆ: ಸಿದ್ಧತೆ ಪರಿಶೀಲಿಸಿದ ಜಿಲ್ಲಾಧಿಕಾರಿ, ಎಸ್ಪಿ

ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…

10 hours ago

ದೊಡ್ಡಬಳ್ಳಾಪುರದಲ್ಲಿ ನೈತಿಕ ಪೊಲೀಸ್‌ಗಿರಿ ಆರೋಪ: ಯುವಕನ ಮೇಲೆ ಹಲ್ಲೆ, 6 ಜನರ ವಿರುದ್ಧ ಪ್ರಕರಣ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್‌ಗಿರಿ ನಡೆಸಿ…

1 day ago

ಮಳೆಗಾಗಿ ಆಚರಣೆಗಳ ಮೊರೆ: ಬರದ ನಡುವೆ ಭರವಸೆಯ ಸಂಪ್ರದಾಯಗಳು

ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…

3 days ago

ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಾರು–ಅಶೋಕ್ ಲೇಲ್ಯಾಂಡ್ ನಡುವೆ ಅಪಘಾತ

ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…

4 days ago

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

5 days ago