ಆದಾಯಕ್ಕಿಂತ ಶೇ.25ರಷ್ಟು ಅಧಿಕ ಆಸ್ತಿ ಹೊಂದಿದ ಆರೋಪ: ದೇವನಹಳ್ಳಿ ತಹಶೀಲ್ದಾರ್ ಶಿವರಾಜ್ ಸಸ್ಪೆಂಡ್

ಭ್ರಷ್ಟಾಚಾರದ ಆರೋಪ ಎದುರಿಸುತ್ತಿದ್ದ ದೇವನಹಳ್ಳಿ ತಹಶೀಲ್ದಾರ್ ಶಿವರಾಜ್ ಅವರನ್ನು ಸೋಮವಾರ ಅಮಾನತು ಮಾಡಿ ಕಂದಾಯ ಇಲಾಖೆ ಆದೇಶಿಸಿದೆ.

ಲೋಕಾಯುಕ್ತರ ಶಿಫಾರಸ್ಸಿನಂತೆ ಶಿವರಾಜ್ ಅವರನ್ನು ಅಮಾನತು ಮಾಡಿ ಕಂದಾಯ ಇಲಾಖೆಯ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ.

ತಹಶೀಲ್ದಾರ್ ಶಿವರಾಜ್, ಆದಾಯಕ್ಕಿಂತಲೂ ಶೇ.25ರಷ್ಟು ಅಧಿಕ ಪ್ರಮಾಣದ ಆಸ್ತಿ ಹೊಂದಿದ್ದಾರೆ ಎಂದು ಲೋಕಾಯುಕ್ತ ಪ್ರಾಥಮಿಕ ತನಿಖೆಯಲ್ಲಿ ಧೃಡಪಟ್ಟಿದೆ ಎಂದು ಮೂಲಗಳು ತಿಳಿಸಿವೆ.

ಲೋಕಾಯುಕ್ತ ಪೊಲೀಸರು ಆಗಸ್ಟ್ 17ರಂದು ಶಿವರಾಜ್, ಅವರ ಸ್ನೇಹಿತರು, ಸಂಬಂಧಿಗಳ ಮನೆ ಸೇರಿದಂತೆ ಏಕಕಾಲಕ್ಕೆ 12ಕ್ಕೂ ಹೆಚ್ಚು ಸ್ಥಳಗಳಲ್ಲಿ ತಪಾಸಣೆ ನಡೆಸಿದ್ದರು. ಭ್ರಷ್ಟಾಚಾರ ಪ್ರತಿಬಂಧಕ ಕಾಯಿದೆ ಅಡಿಯಲ್ಲಿ ಆಗಸ್ಟ್ 30ರಂದು ಲೋಕಾಯುಕ್ತದಲ್ಲಿ ದೂರು ದಾಖಲು ಮಾಡಿಕೊಂಡಿದ್ದರು.

ತಹಶೀಲ್ದಾರ್ ಹುದ್ದೆಯಲ್ಲಿ ಶಿವರಾಜ್ ಮುಂದುವರೆದರೆ ಪ್ರಕರಣದ ತನಿಖೆಗೆ ಅಡ್ಡಿಯಾಗುವ ಮತ್ತು ಸಾಕ್ಷ್ಯಗಳ ನಾಶ ಸಾಧ್ಯತೆ ಕಾರಣ ಅವರನ್ನು ಅಮಾನತು ಮಾಡುವಂತೆ ಲೋಕಾಯುಕ್ತರು ಸರ್ಕಾರಕ್ಕೆ ಶಿಫಾರಸು ಮಾಡಿದ್ದರು.

ಇದಕ್ಕೂ ಮೊದಲು ದೇವನಹಳ್ಳಿಯ ತಹಶೀಲ್ದಾರ್ ಹುದ್ದೆಯಿಂದ ಶಿವರಾಜ್ ಅವರನ್ನು ಸರ್ಕಾರ ಜುಲೈ 28ರಂದು ವರ್ಗಾವಣೆ ಮಾಡಿ ಆದೇಶ ಹೊರಡಿಸಿತ್ತು. ಇದನ್ನು ಪ್ರಶ್ನಿಸಿ ಅವರು ಕರ್ನಾಟಕ ಆಡಳಿತ ನ್ಯಾಯಮಂಡಳಿಯಿಂದ (ಕೆಎಟಿ) ತಡೆಯಾಜ್ಞೆ ತಂದಿದ್ದರು.

ನಿವೃತ್ತಿಯ ಹೊಸ್ತಿನಲ್ಲಿ ಅಮಾನತುಗೊಂಡಿರುವ ಅವರು ಲೋಕಾಯುಕ್ತ ತನಿಖೆ ಎದುರಿಸಬೇಕಾಗಿದೆ.

ಒಂದೇ ಕುರ್ಚಿಗೆ ಇಬ್ಬರು ಪೈಪೋಟಿ

ತಹಶೀಲ್ದಾರ್ ಶಿವರಾಜ್ ಅವರನ್ನು ವರ್ಗಾವಣೆ ಮಾಡಿ ಆ ಜಾಗಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕಚೇರಿ ಸಹಾಯಕರಾಗಿದ್ದ ಎಚ್‌.ಬಾಲಕೃಷ್ಣರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿತ್ತು. ಜುಲೈ 28ರ ಮಧ್ಯಾಹ್ನ ತಹಶೀಲ್ದಾರ್ ಆಗಿ ಬಾಲಕೃಷ್ಣ ಅವರು ಅಧಿಕಾರ ಸ್ವೀಕಾರ ಮಾಡಿದ್ದರು. ಅದಕ್ಕೆ ತಡೆ ತಂದಿದ್ದ ಶಿವರಾಜ್ ಹುದ್ದೆಯಲ್ಲಿ ಮುಂದುವರೆದಿದ್ದರು. ಇದೀಗಾ ಲೋಕಾಯುಕ್ತ ಶಿಫಾರಸ್ಸಿನ ಮೇರೆಗೆ ಅಮಾನತ್ತಾಗಿ ಆದೇಶ ಹೊರಬರುತ್ತಿದ್ದಂತೆಯೇ ಸೋಮವಾರ ಮಧ್ಯಾಹ್ನ ಪಟ್ಟಣದ ತಹಶೀಲ್ದಾರ್ ಕಚೇರಿಗೆ ಬಂದ ಎಚ್.ಬಾಲಕೃಷ್ಣರವರು ಮತ್ತೊಮ್ಮೆ ಅಧಿಕಾರ ಸ್ವೀಕಾರ ಮಾಡಿದ್ದಾರೆ. ಈ ಮೊದಲು ದೇವನಹಳ್ಳಿ ತಹಶೀಲ್ದಾರ್ ಆಗಿ ಬಾಲಕೃಷ್ಣ ಅವರು ಎರಡು ತಿಂಗಳು ಕರ್ತವ್ಯ ನಿರ್ವಹಿಸಿದ್ದು ಇದೀಗಾ ಮತ್ತೆ ತಹಶೀಲ್ದಾರ್ ಆಗಿ ನೇಮಕಗೊಂಡಿದ್ದಾರೆ.

Ramesh Babu

Journalist

Recent Posts

ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಾಗುವುದು- ಎಸ್ಪಿ ಸಿ.ಕೆ ಬಾಬಾ

ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಜನರ ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ. ಇದರಿಂದಾಗಿ ಕಾನೂನಿಗೆ ಸಂಬಂಧಿತ ಸಮಸ್ಯೆಗಳ…

2 hours ago

ಗೊತ್ತಿರದ ವಿಷಯ ಕಲಿಯುವ ಕಡೆ ಗಮನ ಕೇಂದ್ರೀಕರಿಸಿ- ಡಾ. ಸೀಮಾ ಚೋಪ್ರಾ

"ನೀವು ಮಾಡುವ ಕೆಲಸವನ್ನು ಪ್ರೀತಿಸಿ. ನಿಮಗೆ ಗೊತ್ತಿಲ್ಲದ ವಿಷಯಗಳನ್ನು ಕಲಿಯುವ ಕಡೆಗೆ ಗಮನ ಕೇಂದ್ರೀಕರಿಸಿ ಮತ್ತು ಜೀವನಪರ್ಯಂತ ಕಲಿಯುತ್ತಲೇ ಇರಿ,…

2 hours ago

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನಿಂದ ಕ್ರೂರವಾಗಿ ಹಲ್ಲೆ: ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವು: ಒಬ್ಬ ಬಾಲಕ ಜೀವನ್ಮರಣ ಹೋರಾಟ

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…

10 hours ago

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

1 day ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

1 day ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

1 day ago