ಆದಾಯಕ್ಕಿಂತ ಶೇ.25ರಷ್ಟು ಅಧಿಕ ಆಸ್ತಿ ಹೊಂದಿದ ಆರೋಪ: ದೇವನಹಳ್ಳಿ ತಹಶೀಲ್ದಾರ್ ಶಿವರಾಜ್ ಸಸ್ಪೆಂಡ್

ಭ್ರಷ್ಟಾಚಾರದ ಆರೋಪ ಎದುರಿಸುತ್ತಿದ್ದ ದೇವನಹಳ್ಳಿ ತಹಶೀಲ್ದಾರ್ ಶಿವರಾಜ್ ಅವರನ್ನು ಸೋಮವಾರ ಅಮಾನತು ಮಾಡಿ ಕಂದಾಯ ಇಲಾಖೆ ಆದೇಶಿಸಿದೆ.

ಲೋಕಾಯುಕ್ತರ ಶಿಫಾರಸ್ಸಿನಂತೆ ಶಿವರಾಜ್ ಅವರನ್ನು ಅಮಾನತು ಮಾಡಿ ಕಂದಾಯ ಇಲಾಖೆಯ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ.

ತಹಶೀಲ್ದಾರ್ ಶಿವರಾಜ್, ಆದಾಯಕ್ಕಿಂತಲೂ ಶೇ.25ರಷ್ಟು ಅಧಿಕ ಪ್ರಮಾಣದ ಆಸ್ತಿ ಹೊಂದಿದ್ದಾರೆ ಎಂದು ಲೋಕಾಯುಕ್ತ ಪ್ರಾಥಮಿಕ ತನಿಖೆಯಲ್ಲಿ ಧೃಡಪಟ್ಟಿದೆ ಎಂದು ಮೂಲಗಳು ತಿಳಿಸಿವೆ.

ಲೋಕಾಯುಕ್ತ ಪೊಲೀಸರು ಆಗಸ್ಟ್ 17ರಂದು ಶಿವರಾಜ್, ಅವರ ಸ್ನೇಹಿತರು, ಸಂಬಂಧಿಗಳ ಮನೆ ಸೇರಿದಂತೆ ಏಕಕಾಲಕ್ಕೆ 12ಕ್ಕೂ ಹೆಚ್ಚು ಸ್ಥಳಗಳಲ್ಲಿ ತಪಾಸಣೆ ನಡೆಸಿದ್ದರು. ಭ್ರಷ್ಟಾಚಾರ ಪ್ರತಿಬಂಧಕ ಕಾಯಿದೆ ಅಡಿಯಲ್ಲಿ ಆಗಸ್ಟ್ 30ರಂದು ಲೋಕಾಯುಕ್ತದಲ್ಲಿ ದೂರು ದಾಖಲು ಮಾಡಿಕೊಂಡಿದ್ದರು.

ತಹಶೀಲ್ದಾರ್ ಹುದ್ದೆಯಲ್ಲಿ ಶಿವರಾಜ್ ಮುಂದುವರೆದರೆ ಪ್ರಕರಣದ ತನಿಖೆಗೆ ಅಡ್ಡಿಯಾಗುವ ಮತ್ತು ಸಾಕ್ಷ್ಯಗಳ ನಾಶ ಸಾಧ್ಯತೆ ಕಾರಣ ಅವರನ್ನು ಅಮಾನತು ಮಾಡುವಂತೆ ಲೋಕಾಯುಕ್ತರು ಸರ್ಕಾರಕ್ಕೆ ಶಿಫಾರಸು ಮಾಡಿದ್ದರು.

ಇದಕ್ಕೂ ಮೊದಲು ದೇವನಹಳ್ಳಿಯ ತಹಶೀಲ್ದಾರ್ ಹುದ್ದೆಯಿಂದ ಶಿವರಾಜ್ ಅವರನ್ನು ಸರ್ಕಾರ ಜುಲೈ 28ರಂದು ವರ್ಗಾವಣೆ ಮಾಡಿ ಆದೇಶ ಹೊರಡಿಸಿತ್ತು. ಇದನ್ನು ಪ್ರಶ್ನಿಸಿ ಅವರು ಕರ್ನಾಟಕ ಆಡಳಿತ ನ್ಯಾಯಮಂಡಳಿಯಿಂದ (ಕೆಎಟಿ) ತಡೆಯಾಜ್ಞೆ ತಂದಿದ್ದರು.

ನಿವೃತ್ತಿಯ ಹೊಸ್ತಿನಲ್ಲಿ ಅಮಾನತುಗೊಂಡಿರುವ ಅವರು ಲೋಕಾಯುಕ್ತ ತನಿಖೆ ಎದುರಿಸಬೇಕಾಗಿದೆ.

ಒಂದೇ ಕುರ್ಚಿಗೆ ಇಬ್ಬರು ಪೈಪೋಟಿ

ತಹಶೀಲ್ದಾರ್ ಶಿವರಾಜ್ ಅವರನ್ನು ವರ್ಗಾವಣೆ ಮಾಡಿ ಆ ಜಾಗಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕಚೇರಿ ಸಹಾಯಕರಾಗಿದ್ದ ಎಚ್‌.ಬಾಲಕೃಷ್ಣರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿತ್ತು. ಜುಲೈ 28ರ ಮಧ್ಯಾಹ್ನ ತಹಶೀಲ್ದಾರ್ ಆಗಿ ಬಾಲಕೃಷ್ಣ ಅವರು ಅಧಿಕಾರ ಸ್ವೀಕಾರ ಮಾಡಿದ್ದರು. ಅದಕ್ಕೆ ತಡೆ ತಂದಿದ್ದ ಶಿವರಾಜ್ ಹುದ್ದೆಯಲ್ಲಿ ಮುಂದುವರೆದಿದ್ದರು. ಇದೀಗಾ ಲೋಕಾಯುಕ್ತ ಶಿಫಾರಸ್ಸಿನ ಮೇರೆಗೆ ಅಮಾನತ್ತಾಗಿ ಆದೇಶ ಹೊರಬರುತ್ತಿದ್ದಂತೆಯೇ ಸೋಮವಾರ ಮಧ್ಯಾಹ್ನ ಪಟ್ಟಣದ ತಹಶೀಲ್ದಾರ್ ಕಚೇರಿಗೆ ಬಂದ ಎಚ್.ಬಾಲಕೃಷ್ಣರವರು ಮತ್ತೊಮ್ಮೆ ಅಧಿಕಾರ ಸ್ವೀಕಾರ ಮಾಡಿದ್ದಾರೆ. ಈ ಮೊದಲು ದೇವನಹಳ್ಳಿ ತಹಶೀಲ್ದಾರ್ ಆಗಿ ಬಾಲಕೃಷ್ಣ ಅವರು ಎರಡು ತಿಂಗಳು ಕರ್ತವ್ಯ ನಿರ್ವಹಿಸಿದ್ದು ಇದೀಗಾ ಮತ್ತೆ ತಹಶೀಲ್ದಾರ್ ಆಗಿ ನೇಮಕಗೊಂಡಿದ್ದಾರೆ.

Ramesh Babu

Journalist

Recent Posts

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

5 hours ago

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

9 hours ago

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

18 hours ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

1 day ago

ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಸುಸೂತ್ರ; ದೊಡ್ಡಬಳ್ಳಾಪುರದ 7 ಕೇಂದ್ರಗಳಲ್ಲಿ ಯಶಸ್ವಿ ಆಯೋಜನೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…

1 day ago

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…

2 days ago