ಆದಾಯಕ್ಕಿಂತ ಶೇ.25ರಷ್ಟು ಅಧಿಕ ಆಸ್ತಿ ಹೊಂದಿದ ಆರೋಪ: ದೇವನಹಳ್ಳಿ ತಹಶೀಲ್ದಾರ್ ಶಿವರಾಜ್ ಸಸ್ಪೆಂಡ್

ಭ್ರಷ್ಟಾಚಾರದ ಆರೋಪ ಎದುರಿಸುತ್ತಿದ್ದ ದೇವನಹಳ್ಳಿ ತಹಶೀಲ್ದಾರ್ ಶಿವರಾಜ್ ಅವರನ್ನು ಸೋಮವಾರ ಅಮಾನತು ಮಾಡಿ ಕಂದಾಯ ಇಲಾಖೆ ಆದೇಶಿಸಿದೆ.

ಲೋಕಾಯುಕ್ತರ ಶಿಫಾರಸ್ಸಿನಂತೆ ಶಿವರಾಜ್ ಅವರನ್ನು ಅಮಾನತು ಮಾಡಿ ಕಂದಾಯ ಇಲಾಖೆಯ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ.

ತಹಶೀಲ್ದಾರ್ ಶಿವರಾಜ್, ಆದಾಯಕ್ಕಿಂತಲೂ ಶೇ.25ರಷ್ಟು ಅಧಿಕ ಪ್ರಮಾಣದ ಆಸ್ತಿ ಹೊಂದಿದ್ದಾರೆ ಎಂದು ಲೋಕಾಯುಕ್ತ ಪ್ರಾಥಮಿಕ ತನಿಖೆಯಲ್ಲಿ ಧೃಡಪಟ್ಟಿದೆ ಎಂದು ಮೂಲಗಳು ತಿಳಿಸಿವೆ.

ಲೋಕಾಯುಕ್ತ ಪೊಲೀಸರು ಆಗಸ್ಟ್ 17ರಂದು ಶಿವರಾಜ್, ಅವರ ಸ್ನೇಹಿತರು, ಸಂಬಂಧಿಗಳ ಮನೆ ಸೇರಿದಂತೆ ಏಕಕಾಲಕ್ಕೆ 12ಕ್ಕೂ ಹೆಚ್ಚು ಸ್ಥಳಗಳಲ್ಲಿ ತಪಾಸಣೆ ನಡೆಸಿದ್ದರು. ಭ್ರಷ್ಟಾಚಾರ ಪ್ರತಿಬಂಧಕ ಕಾಯಿದೆ ಅಡಿಯಲ್ಲಿ ಆಗಸ್ಟ್ 30ರಂದು ಲೋಕಾಯುಕ್ತದಲ್ಲಿ ದೂರು ದಾಖಲು ಮಾಡಿಕೊಂಡಿದ್ದರು.

ತಹಶೀಲ್ದಾರ್ ಹುದ್ದೆಯಲ್ಲಿ ಶಿವರಾಜ್ ಮುಂದುವರೆದರೆ ಪ್ರಕರಣದ ತನಿಖೆಗೆ ಅಡ್ಡಿಯಾಗುವ ಮತ್ತು ಸಾಕ್ಷ್ಯಗಳ ನಾಶ ಸಾಧ್ಯತೆ ಕಾರಣ ಅವರನ್ನು ಅಮಾನತು ಮಾಡುವಂತೆ ಲೋಕಾಯುಕ್ತರು ಸರ್ಕಾರಕ್ಕೆ ಶಿಫಾರಸು ಮಾಡಿದ್ದರು.

ಇದಕ್ಕೂ ಮೊದಲು ದೇವನಹಳ್ಳಿಯ ತಹಶೀಲ್ದಾರ್ ಹುದ್ದೆಯಿಂದ ಶಿವರಾಜ್ ಅವರನ್ನು ಸರ್ಕಾರ ಜುಲೈ 28ರಂದು ವರ್ಗಾವಣೆ ಮಾಡಿ ಆದೇಶ ಹೊರಡಿಸಿತ್ತು. ಇದನ್ನು ಪ್ರಶ್ನಿಸಿ ಅವರು ಕರ್ನಾಟಕ ಆಡಳಿತ ನ್ಯಾಯಮಂಡಳಿಯಿಂದ (ಕೆಎಟಿ) ತಡೆಯಾಜ್ಞೆ ತಂದಿದ್ದರು.

ನಿವೃತ್ತಿಯ ಹೊಸ್ತಿನಲ್ಲಿ ಅಮಾನತುಗೊಂಡಿರುವ ಅವರು ಲೋಕಾಯುಕ್ತ ತನಿಖೆ ಎದುರಿಸಬೇಕಾಗಿದೆ.

ಒಂದೇ ಕುರ್ಚಿಗೆ ಇಬ್ಬರು ಪೈಪೋಟಿ

ತಹಶೀಲ್ದಾರ್ ಶಿವರಾಜ್ ಅವರನ್ನು ವರ್ಗಾವಣೆ ಮಾಡಿ ಆ ಜಾಗಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕಚೇರಿ ಸಹಾಯಕರಾಗಿದ್ದ ಎಚ್‌.ಬಾಲಕೃಷ್ಣರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿತ್ತು. ಜುಲೈ 28ರ ಮಧ್ಯಾಹ್ನ ತಹಶೀಲ್ದಾರ್ ಆಗಿ ಬಾಲಕೃಷ್ಣ ಅವರು ಅಧಿಕಾರ ಸ್ವೀಕಾರ ಮಾಡಿದ್ದರು. ಅದಕ್ಕೆ ತಡೆ ತಂದಿದ್ದ ಶಿವರಾಜ್ ಹುದ್ದೆಯಲ್ಲಿ ಮುಂದುವರೆದಿದ್ದರು. ಇದೀಗಾ ಲೋಕಾಯುಕ್ತ ಶಿಫಾರಸ್ಸಿನ ಮೇರೆಗೆ ಅಮಾನತ್ತಾಗಿ ಆದೇಶ ಹೊರಬರುತ್ತಿದ್ದಂತೆಯೇ ಸೋಮವಾರ ಮಧ್ಯಾಹ್ನ ಪಟ್ಟಣದ ತಹಶೀಲ್ದಾರ್ ಕಚೇರಿಗೆ ಬಂದ ಎಚ್.ಬಾಲಕೃಷ್ಣರವರು ಮತ್ತೊಮ್ಮೆ ಅಧಿಕಾರ ಸ್ವೀಕಾರ ಮಾಡಿದ್ದಾರೆ. ಈ ಮೊದಲು ದೇವನಹಳ್ಳಿ ತಹಶೀಲ್ದಾರ್ ಆಗಿ ಬಾಲಕೃಷ್ಣ ಅವರು ಎರಡು ತಿಂಗಳು ಕರ್ತವ್ಯ ನಿರ್ವಹಿಸಿದ್ದು ಇದೀಗಾ ಮತ್ತೆ ತಹಶೀಲ್ದಾರ್ ಆಗಿ ನೇಮಕಗೊಂಡಿದ್ದಾರೆ.

Ramesh Babu

Journalist

Recent Posts

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

14 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

15 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

16 hours ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

16 hours ago

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

20 hours ago

ವಿಯೆಟ್ನಾಂನಿಂದ 1.38 ಕೋಟಿ ಮೌಲ್ಯದ ಹೈಡ್ರೋಫೋನಿಕ್ ಗಾಂಜಾ ಸಾಗಾಟ: ಆರೋಪಿ ಬಂಧನ

ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…

22 hours ago