ಆದಾಯಕ್ಕಿಂತ ಶೇ.25ರಷ್ಟು ಅಧಿಕ ಆಸ್ತಿ ಹೊಂದಿದ ಆರೋಪ: ದೇವನಹಳ್ಳಿ ತಹಶೀಲ್ದಾರ್ ಶಿವರಾಜ್ ಸಸ್ಪೆಂಡ್

ಭ್ರಷ್ಟಾಚಾರದ ಆರೋಪ ಎದುರಿಸುತ್ತಿದ್ದ ದೇವನಹಳ್ಳಿ ತಹಶೀಲ್ದಾರ್ ಶಿವರಾಜ್ ಅವರನ್ನು ಸೋಮವಾರ ಅಮಾನತು ಮಾಡಿ ಕಂದಾಯ ಇಲಾಖೆ ಆದೇಶಿಸಿದೆ.

ಲೋಕಾಯುಕ್ತರ ಶಿಫಾರಸ್ಸಿನಂತೆ ಶಿವರಾಜ್ ಅವರನ್ನು ಅಮಾನತು ಮಾಡಿ ಕಂದಾಯ ಇಲಾಖೆಯ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ.

ತಹಶೀಲ್ದಾರ್ ಶಿವರಾಜ್, ಆದಾಯಕ್ಕಿಂತಲೂ ಶೇ.25ರಷ್ಟು ಅಧಿಕ ಪ್ರಮಾಣದ ಆಸ್ತಿ ಹೊಂದಿದ್ದಾರೆ ಎಂದು ಲೋಕಾಯುಕ್ತ ಪ್ರಾಥಮಿಕ ತನಿಖೆಯಲ್ಲಿ ಧೃಡಪಟ್ಟಿದೆ ಎಂದು ಮೂಲಗಳು ತಿಳಿಸಿವೆ.

ಲೋಕಾಯುಕ್ತ ಪೊಲೀಸರು ಆಗಸ್ಟ್ 17ರಂದು ಶಿವರಾಜ್, ಅವರ ಸ್ನೇಹಿತರು, ಸಂಬಂಧಿಗಳ ಮನೆ ಸೇರಿದಂತೆ ಏಕಕಾಲಕ್ಕೆ 12ಕ್ಕೂ ಹೆಚ್ಚು ಸ್ಥಳಗಳಲ್ಲಿ ತಪಾಸಣೆ ನಡೆಸಿದ್ದರು. ಭ್ರಷ್ಟಾಚಾರ ಪ್ರತಿಬಂಧಕ ಕಾಯಿದೆ ಅಡಿಯಲ್ಲಿ ಆಗಸ್ಟ್ 30ರಂದು ಲೋಕಾಯುಕ್ತದಲ್ಲಿ ದೂರು ದಾಖಲು ಮಾಡಿಕೊಂಡಿದ್ದರು.

ತಹಶೀಲ್ದಾರ್ ಹುದ್ದೆಯಲ್ಲಿ ಶಿವರಾಜ್ ಮುಂದುವರೆದರೆ ಪ್ರಕರಣದ ತನಿಖೆಗೆ ಅಡ್ಡಿಯಾಗುವ ಮತ್ತು ಸಾಕ್ಷ್ಯಗಳ ನಾಶ ಸಾಧ್ಯತೆ ಕಾರಣ ಅವರನ್ನು ಅಮಾನತು ಮಾಡುವಂತೆ ಲೋಕಾಯುಕ್ತರು ಸರ್ಕಾರಕ್ಕೆ ಶಿಫಾರಸು ಮಾಡಿದ್ದರು.

ಇದಕ್ಕೂ ಮೊದಲು ದೇವನಹಳ್ಳಿಯ ತಹಶೀಲ್ದಾರ್ ಹುದ್ದೆಯಿಂದ ಶಿವರಾಜ್ ಅವರನ್ನು ಸರ್ಕಾರ ಜುಲೈ 28ರಂದು ವರ್ಗಾವಣೆ ಮಾಡಿ ಆದೇಶ ಹೊರಡಿಸಿತ್ತು. ಇದನ್ನು ಪ್ರಶ್ನಿಸಿ ಅವರು ಕರ್ನಾಟಕ ಆಡಳಿತ ನ್ಯಾಯಮಂಡಳಿಯಿಂದ (ಕೆಎಟಿ) ತಡೆಯಾಜ್ಞೆ ತಂದಿದ್ದರು.

ನಿವೃತ್ತಿಯ ಹೊಸ್ತಿನಲ್ಲಿ ಅಮಾನತುಗೊಂಡಿರುವ ಅವರು ಲೋಕಾಯುಕ್ತ ತನಿಖೆ ಎದುರಿಸಬೇಕಾಗಿದೆ.

ಒಂದೇ ಕುರ್ಚಿಗೆ ಇಬ್ಬರು ಪೈಪೋಟಿ

ತಹಶೀಲ್ದಾರ್ ಶಿವರಾಜ್ ಅವರನ್ನು ವರ್ಗಾವಣೆ ಮಾಡಿ ಆ ಜಾಗಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕಚೇರಿ ಸಹಾಯಕರಾಗಿದ್ದ ಎಚ್‌.ಬಾಲಕೃಷ್ಣರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿತ್ತು. ಜುಲೈ 28ರ ಮಧ್ಯಾಹ್ನ ತಹಶೀಲ್ದಾರ್ ಆಗಿ ಬಾಲಕೃಷ್ಣ ಅವರು ಅಧಿಕಾರ ಸ್ವೀಕಾರ ಮಾಡಿದ್ದರು. ಅದಕ್ಕೆ ತಡೆ ತಂದಿದ್ದ ಶಿವರಾಜ್ ಹುದ್ದೆಯಲ್ಲಿ ಮುಂದುವರೆದಿದ್ದರು. ಇದೀಗಾ ಲೋಕಾಯುಕ್ತ ಶಿಫಾರಸ್ಸಿನ ಮೇರೆಗೆ ಅಮಾನತ್ತಾಗಿ ಆದೇಶ ಹೊರಬರುತ್ತಿದ್ದಂತೆಯೇ ಸೋಮವಾರ ಮಧ್ಯಾಹ್ನ ಪಟ್ಟಣದ ತಹಶೀಲ್ದಾರ್ ಕಚೇರಿಗೆ ಬಂದ ಎಚ್.ಬಾಲಕೃಷ್ಣರವರು ಮತ್ತೊಮ್ಮೆ ಅಧಿಕಾರ ಸ್ವೀಕಾರ ಮಾಡಿದ್ದಾರೆ. ಈ ಮೊದಲು ದೇವನಹಳ್ಳಿ ತಹಶೀಲ್ದಾರ್ ಆಗಿ ಬಾಲಕೃಷ್ಣ ಅವರು ಎರಡು ತಿಂಗಳು ಕರ್ತವ್ಯ ನಿರ್ವಹಿಸಿದ್ದು ಇದೀಗಾ ಮತ್ತೆ ತಹಶೀಲ್ದಾರ್ ಆಗಿ ನೇಮಕಗೊಂಡಿದ್ದಾರೆ.

Ramesh Babu

Journalist

Recent Posts

ಸಿನಿಮಾ ಸ್ಟೈಲ್‌ನಲ್ಲಿ ಪೊಲೀಸರ ಚೇಸಿಂಗ್: ಎರಡೇ ಗಂಟೆಗಳಲ್ಲಿ ಕಳವು ಮಾಡಿದ್ದ ಕ್ಯಾಷ್‌ ಸಮೇತ ಕಳ್ಳರ ಬಂಧನ

ಚಿಕ್ಕಬಳ್ಳಾಪುರ-‌ ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…

9 hours ago

ನಮ್ಮ ದೇಶದ ಪ್ರಗತಿ ಯುವಜನರಿಂದಲೇ ಆಗಬೇಕಿದೆ-ಇಂಧನ‌ ಸಚಿವ ಕೆ.ಜೆ.ಜಾರ್ಜ್

ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ ಆಫ್…

9 hours ago

ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಭೀಕರ ಅಪಘಾತ: ಬೈಕ್ ಸವಾರ ದುರ್ಮರಣ

ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟಿರುವ ಘಟನೆ ಮೇ.12ರ ರಾತ್ರಿ…

13 hours ago

‘ಪಬ್ಲಿಕ್ ಮಿರ್ಚಿ’ ವರದಿ ಫಲಶೃತಿ: ಕೊನೆಗೂ ಹೊಸಹಳ್ಳಿ ರಸ್ತೆಗೆ ಡಾಂಬರ್ ಭಾಗ್ಯ – ಜನರಲ್ಲಿ ಸಂತಸ

ದೊಡ್ಡಬಳ್ಳಾಪುರ: ತಾಲ್ಲೂಕಿನ ಸಾಸಲು–ಆರೂಢಿ ಭಾಗದ ಜನರ ಪ್ರಮುಖ ಸಂಪರ್ಕ ರಸ್ತೆಯಾಗಿರುವ ಗುಂಡಮಗೆರೆ–ಹೊಸಹಳ್ಳಿ ರಸ್ತೆಗೆ ಕೊನೆಗೂ ಡಾಂಬರೀಕರಣ ಕಾಮಗಾರಿ ಆರಂಭವಾಗಿದ್ದು, ಗ್ರಾಮಸ್ಥರಲ್ಲಿ…

14 hours ago

ಐದು ದಶಕಗಳಿಂದ ಗುಡಿಸಲಲ್ಲೇ ಬದುಕು: ಮೂಲಭೂತ ಸೌಲಭ್ಯಕ್ಕಾಗಿ ಹಕ್ಕಿಪಿಕ್ಕಿ ಕುಟುಂಬಗಳ ನರಳಾಟ

ದೊಡ್ಡಬಳ್ಳಾಪುರ: ಸರ್ಕಾರ ಆಶ್ರಯ ಯೋಜನೆ ಮೂಲಕ ಗುಡಿಸಲು ಮುಕ್ತ ರಾಜ್ಯ ನಿರ್ಮಾಣದ ಘೋಷಣೆ ಮಾಡುತ್ತಿದ್ದರೂ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ…

20 hours ago

ಓದು ಮುಖ್ಯ. ಗ್ರಹಿಕೆ ಅತಿಮುಖ್ಯ. ಮಾನವೀಯ ಸ್ಪಂದನೆ ಎಲ್ಲಕ್ಕಿಂತ ಮುಖ್ಯ

ಅನಕ್ಷರಸ್ಥರ ಬುದ್ದಿವಂತಿಕೆ ಪ್ರಶ್ನಿಸುವವರು ಅಕ್ಷರಸ್ಥರ ಮಾನವೀಯತೆಯನ್ನು ಪ್ರಶ್ನಿಸಬೇಕಲ್ಲವೇ........ ......ಒಂದು ಟ್ವೀಟ್... ಅಕ್ಷರ ಕಲಿಕೆ ಒಂದು ನೈಪುಣ್ಯ ಅಥವಾ ಸುಲಭವಾಗಿ ಮಾಹಿತಿ…

21 hours ago