ಆದಾಯಕ್ಕಿಂತ ಶೇ.25ರಷ್ಟು ಅಧಿಕ ಆಸ್ತಿ ಹೊಂದಿದ ಆರೋಪ: ದೇವನಹಳ್ಳಿ ತಹಶೀಲ್ದಾರ್ ಶಿವರಾಜ್ ಸಸ್ಪೆಂಡ್

ಭ್ರಷ್ಟಾಚಾರದ ಆರೋಪ ಎದುರಿಸುತ್ತಿದ್ದ ದೇವನಹಳ್ಳಿ ತಹಶೀಲ್ದಾರ್ ಶಿವರಾಜ್ ಅವರನ್ನು ಸೋಮವಾರ ಅಮಾನತು ಮಾಡಿ ಕಂದಾಯ ಇಲಾಖೆ ಆದೇಶಿಸಿದೆ.

ಲೋಕಾಯುಕ್ತರ ಶಿಫಾರಸ್ಸಿನಂತೆ ಶಿವರಾಜ್ ಅವರನ್ನು ಅಮಾನತು ಮಾಡಿ ಕಂದಾಯ ಇಲಾಖೆಯ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ.

ತಹಶೀಲ್ದಾರ್ ಶಿವರಾಜ್, ಆದಾಯಕ್ಕಿಂತಲೂ ಶೇ.25ರಷ್ಟು ಅಧಿಕ ಪ್ರಮಾಣದ ಆಸ್ತಿ ಹೊಂದಿದ್ದಾರೆ ಎಂದು ಲೋಕಾಯುಕ್ತ ಪ್ರಾಥಮಿಕ ತನಿಖೆಯಲ್ಲಿ ಧೃಡಪಟ್ಟಿದೆ ಎಂದು ಮೂಲಗಳು ತಿಳಿಸಿವೆ.

ಲೋಕಾಯುಕ್ತ ಪೊಲೀಸರು ಆಗಸ್ಟ್ 17ರಂದು ಶಿವರಾಜ್, ಅವರ ಸ್ನೇಹಿತರು, ಸಂಬಂಧಿಗಳ ಮನೆ ಸೇರಿದಂತೆ ಏಕಕಾಲಕ್ಕೆ 12ಕ್ಕೂ ಹೆಚ್ಚು ಸ್ಥಳಗಳಲ್ಲಿ ತಪಾಸಣೆ ನಡೆಸಿದ್ದರು. ಭ್ರಷ್ಟಾಚಾರ ಪ್ರತಿಬಂಧಕ ಕಾಯಿದೆ ಅಡಿಯಲ್ಲಿ ಆಗಸ್ಟ್ 30ರಂದು ಲೋಕಾಯುಕ್ತದಲ್ಲಿ ದೂರು ದಾಖಲು ಮಾಡಿಕೊಂಡಿದ್ದರು.

ತಹಶೀಲ್ದಾರ್ ಹುದ್ದೆಯಲ್ಲಿ ಶಿವರಾಜ್ ಮುಂದುವರೆದರೆ ಪ್ರಕರಣದ ತನಿಖೆಗೆ ಅಡ್ಡಿಯಾಗುವ ಮತ್ತು ಸಾಕ್ಷ್ಯಗಳ ನಾಶ ಸಾಧ್ಯತೆ ಕಾರಣ ಅವರನ್ನು ಅಮಾನತು ಮಾಡುವಂತೆ ಲೋಕಾಯುಕ್ತರು ಸರ್ಕಾರಕ್ಕೆ ಶಿಫಾರಸು ಮಾಡಿದ್ದರು.

ಇದಕ್ಕೂ ಮೊದಲು ದೇವನಹಳ್ಳಿಯ ತಹಶೀಲ್ದಾರ್ ಹುದ್ದೆಯಿಂದ ಶಿವರಾಜ್ ಅವರನ್ನು ಸರ್ಕಾರ ಜುಲೈ 28ರಂದು ವರ್ಗಾವಣೆ ಮಾಡಿ ಆದೇಶ ಹೊರಡಿಸಿತ್ತು. ಇದನ್ನು ಪ್ರಶ್ನಿಸಿ ಅವರು ಕರ್ನಾಟಕ ಆಡಳಿತ ನ್ಯಾಯಮಂಡಳಿಯಿಂದ (ಕೆಎಟಿ) ತಡೆಯಾಜ್ಞೆ ತಂದಿದ್ದರು.

ನಿವೃತ್ತಿಯ ಹೊಸ್ತಿನಲ್ಲಿ ಅಮಾನತುಗೊಂಡಿರುವ ಅವರು ಲೋಕಾಯುಕ್ತ ತನಿಖೆ ಎದುರಿಸಬೇಕಾಗಿದೆ.

ಒಂದೇ ಕುರ್ಚಿಗೆ ಇಬ್ಬರು ಪೈಪೋಟಿ

ತಹಶೀಲ್ದಾರ್ ಶಿವರಾಜ್ ಅವರನ್ನು ವರ್ಗಾವಣೆ ಮಾಡಿ ಆ ಜಾಗಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕಚೇರಿ ಸಹಾಯಕರಾಗಿದ್ದ ಎಚ್‌.ಬಾಲಕೃಷ್ಣರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿತ್ತು. ಜುಲೈ 28ರ ಮಧ್ಯಾಹ್ನ ತಹಶೀಲ್ದಾರ್ ಆಗಿ ಬಾಲಕೃಷ್ಣ ಅವರು ಅಧಿಕಾರ ಸ್ವೀಕಾರ ಮಾಡಿದ್ದರು. ಅದಕ್ಕೆ ತಡೆ ತಂದಿದ್ದ ಶಿವರಾಜ್ ಹುದ್ದೆಯಲ್ಲಿ ಮುಂದುವರೆದಿದ್ದರು. ಇದೀಗಾ ಲೋಕಾಯುಕ್ತ ಶಿಫಾರಸ್ಸಿನ ಮೇರೆಗೆ ಅಮಾನತ್ತಾಗಿ ಆದೇಶ ಹೊರಬರುತ್ತಿದ್ದಂತೆಯೇ ಸೋಮವಾರ ಮಧ್ಯಾಹ್ನ ಪಟ್ಟಣದ ತಹಶೀಲ್ದಾರ್ ಕಚೇರಿಗೆ ಬಂದ ಎಚ್.ಬಾಲಕೃಷ್ಣರವರು ಮತ್ತೊಮ್ಮೆ ಅಧಿಕಾರ ಸ್ವೀಕಾರ ಮಾಡಿದ್ದಾರೆ. ಈ ಮೊದಲು ದೇವನಹಳ್ಳಿ ತಹಶೀಲ್ದಾರ್ ಆಗಿ ಬಾಲಕೃಷ್ಣ ಅವರು ಎರಡು ತಿಂಗಳು ಕರ್ತವ್ಯ ನಿರ್ವಹಿಸಿದ್ದು ಇದೀಗಾ ಮತ್ತೆ ತಹಶೀಲ್ದಾರ್ ಆಗಿ ನೇಮಕಗೊಂಡಿದ್ದಾರೆ.

Ramesh Babu

Journalist

Recent Posts

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

6 hours ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

10 hours ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

1 day ago

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

2 days ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

2 days ago

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

3 days ago