Categories: ರಾಜ್ಯ

ಆದಿವಾಸಿ/ಅರಣ್ಯವಾಸಿಗಳ ಅಭಿವೃದ್ಧಿ ನಿಗಮ ಸ್ಥಾಪನೆಗೆ ಸದ್ಯದಲ್ಲೇ ಸೂಕ್ತ ಕ್ರಮ- ಸಿಎಂ ಸಿದ್ದರಾಮಯ್ಯ

ಆದಿವಾಸಿ/ಅರಣ್ಯವಾಸಿಗಳ ಅಭಿವೃದ್ಧಿ ನಿಗಮ ಸ್ಥಾಪನೆ ಕುರಿತಾಗಿ ಸದ್ಯದಲ್ಲೇ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ವನ್ಯಜೀವಿ ಮಂಡಳಿ ಸಭೆ ಕರೆದು ಅರಣ್ಯಾಧಿಕಾರಿಗಳಿಂದ ಅರಣ್ಯವಾಸಿಗಳಿಗೆ ಆಗುತ್ತಿರುವ ಸಮಸ್ಯೆಗಳ ಕುರಿತಾಗಿ ಚರ್ಚಿಸಿ ಪರಿಹಾರ ಕಂಡುಕೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಹಲವು ದಶಲಗಳಿಂದ ಕೆರೆಹಾಡಿ ಸೇರಿದಂತೆ ಒಂಬತ್ತು ಹಾಡಿಗಳಿಗೆ ವಿದ್ಯುತ್ ಸಂಪರ್ಕ ಇಲ್ಲ, ಕುಡಿಯುವ ನೀರಿಗೆ ಸಮಸ್ಯೆ ಇದೆ. ಇದು ಗಂಭಿರವಾದುದ್ದು. ಯಾವ ಅರಣ್ಯ ಕಾಯ್ದೆ ಕೂಡ ಅರಣ್ಯವಾಸಿಗಳಿಗೆ ಕರೆಂಟು, ನೀರು ಕೊಡಬೇಡಿ ಎಂದು ಹೇಳುವುದಿಲ್ಲ. ಅರಣ್ಯಾಧಿಕಾರಗಳು ಅನಗತ್ಯ ಕಿರುಕುಳ, ತೊಂದರೆ ಕೊಡಬಾರದು ಎಂದರು.

ಜಿಲ್ಲಾಧಿಕಾರಿ ಲಕ್ಷ್ಮೀಕಾಂತ್ ರೆಡ್ಡಿಯವರು ಎಲ್ಲಾ ಅಡೆತಡೆಗಳನ್ನು ನಿವಾರಿಸಿ ಒಂದು ತಿಂಗಳಲ್ಲಿ ಕೆರೆಹಾಡಿ ಮತ್ತು ಇತರೆ ಎಂಟು ಹಾಡಿಗಳ ಕುಡಿಯುವ ನೀರು ಮತ್ತು ವಿದ್ಯುತ್ ಸಂಪರ್ಕದ ಸಮಸ್ಯೆ ಬಗೆಹರಿಸಲಿದ್ದಾರೆ ಎಂದು ಹೇಳಿದರು.

ಹಕ್ಕುಪತ್ರ ಇದ್ದರೂ ಅರಣ್ಯಾಧಿಕಾರಿಗಳು ಮನೆ ಕಟ್ಟಲು ಬಿಡುತ್ತಿಲ್ಲ, ಎರಡು-ಮೂರು ಎಕರೆ ಜಾಗದಲ್ಲಿ ಹಲವಾರು ದಶಕಗಳಿಂದ ಉಳುಮೆ ಮಾಡುತ್ತಿದ್ದರೂ ಕೇವಲ 2, 3 ಗುಂಟೆಗೆ ಹಕ್ಕು ಪತ್ರ ನೀಡಿದ್ದಾರೆ. ಜಮೀನಿನಲ್ಲಿ ಟ್ರಾಕ್ಟರ್ ಬಳಸಲು ಅವಕಾಶ ನೀಡುತ್ತಿಲ್ಲ ಎನ್ನುವ ದೂರು ಬಂದಿದೆ ಎಂದು ತಿಳಿಸಿದರು.

ಆದಿವಾಸಿಗಳು ಅಂದರೆ ಅವರು ಅರಣ್ಯದ ಭಾಗವೇ ಆಗಿದ್ದಾರೆ. ಇವರಿಂದ ಅರಣ್ಯಕ್ಕೆ ಯಾವುದೇ ತೊಂದರೆ ಆಗುವುದಿಲ್ಲ. ಆದ್ದರಿಂದ ಇವರಿಗೆ ಅನಗತ್ಯ ತೊಂದರೆ ಕೊಡಬಾರದು ಎಂಬ ಸ್ಪಷ್ಟ ಸೂಚನೆ ನೀಡಿದ್ದೇನೆ ಎಂದರು.

ವನ್ಯ ಜೀವಿ ಮಂಡಳಿಗೆ ನಾನೇ ಅಧ್ಯಕ್ಷ ಆಗಿದ್ದೀನಿ. ಸದ್ಯದಲ್ಲೇ ಮಂಡಳಿ ಸಭೆ ಕರೆದು ಇಲ್ಲಿನ ಬುಡಕಟ್ಟು ಜನರ ಸಮಸ್ಯೆಗಳಿಗೆ ಪರಿಹಾರ ಒದಗಿಸುತ್ತೇನೆ ಎಂದು ಹೇಳಿದರು.

ತಾವು ಅಲೆಮಾರಿಗಳಲ್ಲ. ಊರ ನಾಯಕರೂ ಅಲ್ಲ. ತಾವೆಲ್ಲರೂ ಕಾಡಲ್ಲೇ ಒಂದೇ ಕಡೆ ನೆಲೆಸಿರುವ ಆದಿವಾಸಿಗಳು. ಆದ್ದರಿಂದ ಅಲೆಮಾರಿ ಅಭಿವೃದ್ಧಿ ನಿಗಮದಲ್ಲಿ ತಮ್ಮನ್ನು ಸೇರಿಸಬೇಡಿ. ನಮಗೆ ಪ್ರತ್ಯೇಕವಾದ ಆದಿವಾಸಿ ಅಭಿವೃದ್ಧಿ ನಿಗಮ ಸ್ಥಾಪಿಸಿ ಎನ್ನುವ ಬೇಡಿಕೆ ಇಟ್ಟಿದ್ದಾರೆ. ಪ್ರತ್ಯೇಕ ಆದಿವಾಸಿ ನಿಗಮ ಸ್ಥಾಪನೆ ಸಂಬಂಧ ಆದಷ್ಟು ಶೀಘ್ರ ಕ್ರಮ ವಹಿಸುತ್ತೇನೆ ಎಂದರು.

ನಮ್ಮಪ್ಪ ಕೂಡ ಜನಪದ ನೃತ್ಯ ಕಲಿಯೋಕೆ ನನ್ನನ್ನು ಹಾಕ್ಬಿಟ್ಟಿದ್ರು. ನಾನು ಹಠತೊಟ್ಟು ಕಾನೂನು ಪದವಿ ಮಾಡಿದ್ದಕ್ಕೆ ಇಂದು ಮುಖ್ಯಮಂತ್ರಿ ಆಗುವ ಮಟ್ಟಕ್ಕೆ ಬೆಳೆದೆ. ಈ ಆದಿವಾಸಿ ಸಮುದಾಯದ ಮಕ್ಕಳು ಕೂಡ ಅರ್ಧಕ್ಕೇ ಶಾಲೆ ನಿಲ್ಲಿಸದೆ ಶಿಕ್ಷಣ ಪಡೆಯಬೇಕು. ಆಗ ಮಾತ್ರ ಮುಖ್ಯವಾಹಿನಿಗೆ ಬರಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.

ಮೊದಲು ನಾಲ್ಕನೇ ತರಗತಿವರೆಗೂ ಮಾತ್ರ ಆಶ್ರಮ ಶಾಲೆಗಳನ್ನು ನಾನು ಎಂಟನೇ ತರಗತಿವರೆಗೂ ವಿಸ್ತರಿಸಿದ್ದೆ. ಇದನ್ನು ಪಿಯುಸಿ ವರೆಗೂ ವಿಸ್ತರಿಸಿ ಎನ್ನುವುದು ಆದಿವಾಸಿಗಳು ಬೇಡಿಕೆಯಾಗಿದೆ, ಈ ಬಗ್ಗೆ ಸಭೆ ಕರೆದು ಪರಿಶೀಲನೆ ನಡೆಸುತ್ತೇನೆ ಎಂದರು.

ಪರಿಶಿಷ್ಟ ಜಾತಿಯವರ ಒಳ ಮೀಸಲಾತಿಗೆ ಮುಂದಾಗಿರುವ ರೀತಿಯಲ್ಲೇ , ಪರಿಶಿಷ್ಠ ವರ್ಗದವರ ಒಳ ಮೀಸಲಾತಿಗೆ ಕ್ರಮ ವಹಿಸಬೇಕು ಎನ್ನುವ ಬೇಡಿಕೆ ಇದೆ. ಆದರೆ ಎಸ್ ಸಿ ಒಳಮೀಸಲಾತಿ ಕುರಿತಂತೆ ಸುಪ್ರೀಂಕೋರ್ಟ್ ತೀರ್ಪು ನೀಡಿದೆ. ಅದರ ಆಧಾರದಲ್ಲಿ ಮುಂದುವರೆದಿದ್ದೇವೆ. ಎಸ್ ಟಿ ಒಳ ಮೀಸಲಾತಿ ಬಗ್ಗೆ ಏನೂ ತೀರ್ಪು ಬಂದಿಲ್ಲ. ಈ ಬಗ್ಗೆ ಕಾನೂನು ತಜ್ಞರ ಜೊತೆ ಚರ್ಚಿಸಲಾಗುವುದು ಎಂದು ತಿಳಿಸಿದರು.

Ramesh Babu

Journalist

Recent Posts

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

13 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

15 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

15 hours ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

15 hours ago

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

20 hours ago

ವಿಯೆಟ್ನಾಂನಿಂದ 1.38 ಕೋಟಿ ಮೌಲ್ಯದ ಹೈಡ್ರೋಫೋನಿಕ್ ಗಾಂಜಾ ಸಾಗಾಟ: ಆರೋಪಿ ಬಂಧನ

ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…

21 hours ago