ಭೋಪಾಲ್: ಆದಿವಾಸಿ ಯುವಕನ ಮುಖದ ಮೇಲೆ ಮಧ್ಯಪ್ರದೇಶ ಬಿಜೆಪಿ ನಾಯಕನೆನ್ನಲಾದ ಪ್ರವೇಶ್ ಶುಕ್ಲಾ ಎಂಬ ವ್ಯಕ್ತಿ ಮೂತ್ರ ವಿಸರ್ಜಿಸಿರುವ ಅಮಾನವೀಯ ಘಟನೆ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಅಮಾನವೀಯ ಕೃತ್ಯ ಎಸಗಿರುವ ಶುಕ್ಲಾನನ್ನು ಮಂಗಳವಾರ ಮಧ್ಯರಾತ್ರಿ ಮಧ್ಯಪ್ರದೇಶ ಪೊಲೀಸರು ಬಂಧಿಸಿದ್ದಾರೆ.
ಮೂತ್ರ ವಿಸರ್ಜನೆ ಮಾಡುವ ಘಟನೆಯ ವೀಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ಆರೋಪಿ ಶುಕ್ಲಾ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಹಲವರು ಆಗ್ರಹಿಸಿದ್ದರು.
ವೈರಲ್ ವೀಡಿಯೋದಲ್ಲಿರುವ ವ್ಯಕ್ತಿಯನ್ನ ಪ್ರವೇಶ್ ಶುಕ್ಲಾ ಎಂದು ಗುರುತಿಸಲಾಗಿದೆ. ಈತ ನೆಲದ ಮೇಲೆ ಕುಳಿತಿರುವ ಬುಡಕಟ್ಟು ಸಮುದಾಯದ ಯುವಕನ ಮೇಲೆ ಮೂತ್ರ ವಿಸರ್ಜಿಸುತ್ತಿರುವಾಗ ಸಿಗರೇಟ್ ಸೇದುತ್ತಿರುವುದು ಕಂಡುಬಂದಿದೆ. ಈ ವಿಡಿಯೋ ರಾಜ್ಯದಲ್ಲಿ ರಾಜಕೀಯ ಕೋಲಾಹಲಕ್ಕೆ ಕಾರಣವಾಗಿದ್ದು, ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಆರೋಪಿ ವಿರುದ್ಧ ಕಟ್ಟುನಿಟ್ಟಿನ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಪ್ರಕರಣ ದಾಖಲಿಸುವಂತೆ ಆದೇಶಿಸಿದ್ದಾರೆ.
ಶುಕ್ಲಾ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 294 (ಅಶ್ಲೀಲ ವರ್ತನೆ) ಹಾಗೂ ಸೆಕ್ಷನ್ 504 (ಶಾಂತಿಭಂಗಗೊಳಿಸಲು ಉದ್ದೇಶಪೂರ್ವಕ ಅವಮಾನ) ಹಾಗೂ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಾಥಮಿಕ ಮಾಹಿತಿ ವರದಿಯನ್ನು ದಾಖಲಿಸಿಕೊಳ್ಳಲಾಗಿದೆ.
ಬೈಕ್ ಮತ್ತು ಕಾರಿನ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ರಾತ್ರಿ ದೊಡ್ಡಬಳ್ಳಾಪುರ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕೃಷಿಚಟುವಟಿಕೆಗಳು ಬಿರುಸುಗೊಂಡಿದ್ದು, ರೈತರು ಡಿಎಪಿ ರಸಗೊಬ್ಬರ ಬದಲಿಗೆ ಸಂಯುಕ್ತ ರಸಗೊಬ್ಬರ ಬಳಕೆ ಮಾಡಲು ಕೃಷಿ ಇಲಾಖೆ…
ಹೊಸಕೋಟೆ: ಕೋಲಾರ-ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ KSRTC ಬಸ್ ಹಾಗೂ ಕಂಟೇನರ್ ಲಾರಿ ನಡುವೆ ಅಪಘಾತ ಸಂಭವಿಸಿರುವ ಘಟನೆ ಹೊಸಕೋಟೆ ಸಮೀಪದ…
ಬೆಂಗಳೂರು: 2026ರ ರಾಜ್ಯಸಭೆ ಹಾಗೂ ಕರ್ನಾಟಕ ವಿಧಾನ ಪರಿಷತ್ ಚುನಾವಣೆಗೆ ಎನ್ಡಿಎ ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿ ಪ್ರಕಟಿಸಿದ್ದು, ಕರ್ನಾಟಕದಿಂದ ರಾಜ್ಯಸಭೆಗೆ…
ನಾನು ವಿದ್ಯಾವಂತನಾಗಿರಲಿಲ್ಲ, ಅದರಿಂದಾಗಿ ಯಶಸ್ವಿಯಾಗಲಿಲ್ಲ. ನಾನು ಬುದ್ದಿವಂತನಾಗಿರಲಿಲ್ಲ, ಅದರಿಂದಾಗಿ ಜನಪ್ರಿಯನಾಗಲಿಲ್ಲ. ನಾನು ಪ್ರತಿಭಾವಂತನಾಗಿರಲಿಲ್ಲ, ಅದರಿಂದಾಗಿ ಪ್ರಖ್ಯಾತನಾಗಲಿಲ್ಲ. ನಾನು ಶ್ರೀಮಂತನಾಗಿರಲಿಲ್ಲ, ಅದರಿಂದಾಗಿ…
ಕರ್ನಾಟಕ ಸ್ಟೇಟ್ ಅಮೆಚೂರು ಯೋಗ ಸ್ಪೋರ್ಟ್ಸ್ ಅಸೋಸಿಯೇಷನ್ ವತಿಯಿಂದ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ಜೂ.6, 7ರಂದು ನಡೆದ ರಾಜ್ಯಮಟ್ಟದ…