ಭೋಪಾಲ್: ಆದಿವಾಸಿ ಯುವಕನ ಮುಖದ ಮೇಲೆ ಮಧ್ಯಪ್ರದೇಶ ಬಿಜೆಪಿ ನಾಯಕನೆನ್ನಲಾದ ಪ್ರವೇಶ್ ಶುಕ್ಲಾ ಎಂಬ ವ್ಯಕ್ತಿ ಮೂತ್ರ ವಿಸರ್ಜಿಸಿರುವ ಅಮಾನವೀಯ ಘಟನೆ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಅಮಾನವೀಯ ಕೃತ್ಯ ಎಸಗಿರುವ ಶುಕ್ಲಾನನ್ನು ಮಂಗಳವಾರ ಮಧ್ಯರಾತ್ರಿ ಮಧ್ಯಪ್ರದೇಶ ಪೊಲೀಸರು ಬಂಧಿಸಿದ್ದಾರೆ.
ಮೂತ್ರ ವಿಸರ್ಜನೆ ಮಾಡುವ ಘಟನೆಯ ವೀಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ಆರೋಪಿ ಶುಕ್ಲಾ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಹಲವರು ಆಗ್ರಹಿಸಿದ್ದರು.
ವೈರಲ್ ವೀಡಿಯೋದಲ್ಲಿರುವ ವ್ಯಕ್ತಿಯನ್ನ ಪ್ರವೇಶ್ ಶುಕ್ಲಾ ಎಂದು ಗುರುತಿಸಲಾಗಿದೆ. ಈತ ನೆಲದ ಮೇಲೆ ಕುಳಿತಿರುವ ಬುಡಕಟ್ಟು ಸಮುದಾಯದ ಯುವಕನ ಮೇಲೆ ಮೂತ್ರ ವಿಸರ್ಜಿಸುತ್ತಿರುವಾಗ ಸಿಗರೇಟ್ ಸೇದುತ್ತಿರುವುದು ಕಂಡುಬಂದಿದೆ. ಈ ವಿಡಿಯೋ ರಾಜ್ಯದಲ್ಲಿ ರಾಜಕೀಯ ಕೋಲಾಹಲಕ್ಕೆ ಕಾರಣವಾಗಿದ್ದು, ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಆರೋಪಿ ವಿರುದ್ಧ ಕಟ್ಟುನಿಟ್ಟಿನ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಪ್ರಕರಣ ದಾಖಲಿಸುವಂತೆ ಆದೇಶಿಸಿದ್ದಾರೆ.
ಶುಕ್ಲಾ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 294 (ಅಶ್ಲೀಲ ವರ್ತನೆ) ಹಾಗೂ ಸೆಕ್ಷನ್ 504 (ಶಾಂತಿಭಂಗಗೊಳಿಸಲು ಉದ್ದೇಶಪೂರ್ವಕ ಅವಮಾನ) ಹಾಗೂ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಾಥಮಿಕ ಮಾಹಿತಿ ವರದಿಯನ್ನು ದಾಖಲಿಸಿಕೊಳ್ಳಲಾಗಿದೆ.
ದೊಡ್ಡಬಳ್ಳಾಪುರ: ಸಾಯಿರಾಂ ಡ್ರಿಪ್ ಇರಿಗೇಷನ್ ಹಾಗೂ ಕನ್ಸ್ಟ್ರಕ್ಷನ್ ಸಂಸ್ಥೆಯ ಮಾಲೀಕರಾದ ಬಿ. ಮಹೇಂದ್ರ ಬಾಬು ಅವರ 46ನೇ ವರ್ಷದ ಹುಟ್ಟುಹಬ್ಬವನ್ನು…
ದೊಡ್ಡಬಳ್ಳಾಪುರ: ಅಲ್ಯೂಮಿನಿಯಂ ವಿದ್ಯುತ್ ಕೇಬಲ್ ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು, ಅಂತರರಾಜ್ಯ ಕೇಬಲ್ ಕಳ್ಳರ ಜಾಲವನ್ನು…
ದೊಡ್ಡಬಳ್ಳಾಪುರ : ಹೊರದೇಶಗಳಲ್ಲಿ ಅಲ್ಲಿನ ನೆಲದ ಕಾನೂನಿಗೆ ಬದ್ಧವಾಗಿ ನೋಂದಣಿ ಮಾಡಿಸಿಕೊಂಡಿರುವ ಸಂಘ ಪರಿವಾರ, ಇಲ್ಲಿನ ನೆಲದ ಕಾನೂನಿಗೆ ವ್ಯತಿರಿಕ್ತವಾಗಿ…
ದೊಡ್ಡಬಳ್ಳಾಪುರ: ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಂಗಳವಾರ ನಡೆಯಬೇಕಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಕೊನೆಯ ಕ್ಷಣದಲ್ಲಿ ಕಾಲೇಜು ವತಿಯಿಂದ…
ಮುಂಗಾರು ಆರಂಭವಾಗಿದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಆತಂಕಕಾರಿ ರೀತಿಯಲ್ಲಿ ಕುಸಿಯುತ್ತಿದೆ. ಸಾಮಾನ್ಯವಾಗಿ…
ರಕ್ತ ಸಿಕ್ತ ದೆಹಲಿ...... ಇದು ಒಳ್ಳೆಯ ಬೆಳವಣಿಗೆಯಲ್ಲ.... ದೆಹಲಿ ವಿದ್ಯಾರ್ಥಿಗಳ ಪ್ರತಿಭಟನೆ ಲಾಟಿಚಾರ್ಜ್ ಹಂತಕ್ಕೆ ತಲುಪುವ ಮೊದಲೇ ಸರ್ಕಾರ ಒಂದಷ್ಟು…