Categories: ಲೇಖನ

ಆಧುನಿಕತೆ ಸೃಷ್ಟಿಸಿದ ಮಾನಸಿಕ ತಲ್ಲಣಗಳು…

ಹಾಲಿನಿಂದ ಆಲ್ಕೋಹಾಲಿನತ್ತಾ ಬದಲಾವಣೆ……..

ಕೃಷಿ ಭೂಮಿಯನ್ನೂ ಬಿಡದೆ 30/40 ಸೈಟ್ ಗಳಾಗಿ ಸ್ಕ್ವೇರ್ ಫೀಟ್ ಲೆಕ್ಕದಲ್ಲಿ ಹಂಚಿಕೊಂಡೆವು.

ಬೆಂಗಳೂರಿನ ಮಹಾತ್ಮ ಗಾಂಧಿ ರಸ್ತೆಯಲ್ಲಿ ಒಂದು ಚದರ ಅಡಿಗೆ ಮಾರುಕಟ್ಟೆ ದರದಲ್ಲಿ ಸುಮಾರು 75000 ರೂಪಾಯಿಗೂ ಹೆಚ್ಚು ಇದೆಯಂತೆ…….

500/510/520/530 ರೂಪಾಯಿಗಳ ದರದಲ್ಲಿ ಒಂದು ಗ್ರಾಂಗೆ ಒಂದು ವರ್ಷದ ಅವಧಿಯಲ್ಲಿ ಏರಿಕೆಯಾಗುತ್ತಿತ್ತು ಹಳದಿ ಲೋಹ ಚಿನ್ನ . ಆದರೆ ಈಗ ಕೆಲವೇ ವರ್ಷಗಳಲ್ಲಿ 8000 ರೂಪಾಯಿ ತಲುಪಿದೆ……..

ಸಣ್ಣ ಕಟ್ಟಡಗಳ, ವಿಶಾಲ ಮೈದಾನದಲ್ಲಿ ಹಸಿರು ಗಿಡಗಳ ನಡುವೆ ಸರಳವಾಗಿ ನಡೆಯುತ್ತಿದ್ದ ಶಾಲೆಗಳು ಖಾಸಗಿ ಜನರ ಕೈಸೇರಿ ಅದ್ದೂರಿ ಕಾಂಕ್ರೀಟ್ ಕಟ್ಟಡಗಳಾಗಿ ಕೇವಲ ಒಂದನೇ ತರಗತಿಗೆ ಒಂದು ವರ್ಷಕ್ಕೆ ಲಕ್ಷ ರೂಪಾಯಿಗಳನ್ನು ಮೀರಿದ ಹಣ ಪಾವತಿ ಮಾಡಬೇಕಿದೆ…….

ರೋಗಿಗಳಿಗೆ ಚಿಕಿತ್ಸೆ ನೀಡುವ ಆಸ್ಪತ್ರೆಗಳು ಐಷಾರಾಮಿ ಹೋಟೆಲುಗಳನ್ನು ಮೀರಿಸುವ ಭವ್ಯತೆ ಪಡೆದು ಕೆಮ್ಮು ಜ್ವರಕ್ಕೂ ಸಾವಿರಾರು ರೂಪಾಯಿ ತೆರುವಂತಾಗಿದೆ…….

ಸಾಮಾನ್ಯ ಜನರು ಕನಸಿನಲ್ಲೂ ಯೋಚಿಸದ ಐಷಾರಾಮಿ ಕಾರುಗಳು ಸಾಮಾನ್ಯರ ಕಾಲ ಕೆಳಗೆ ಸೇರಿ ಅವರನ್ನು ಹೊತ್ತು ತಿರುಗುತ್ತಿವೆ…..

ಪಿಎಚ್ ಡಿ ಮಾಡಿರುವವರೂ ಕೂಡ ಪಡೆಯದ ಲಕ್ಷ ರೂಪಾಯಿ ಸಂಬಳ ಕೇವಲ ಪಿಯುಸಿ ಮತ್ತು ಕಂಪ್ಯೂಟರ್ ಡಿಪ್ಲೊಮಾ ಮಾಡಿದ 20 ವಯಸ್ಸಿನ ಹುಡುಗ ಹುಡುಗಿಯರು ಎಣಿಸತೊಡಗಿದ್ದಾರೆ….

ಫೇಶೀಯಲ್ ಮಸಾಜ್, ಲಿಪ್ ಸ್ಟಿಕ್, ಡ್ಯಾನ್ಸ್ ಕ್ಲಬ್, ಫ್ಯಾಷನ್ ಡಿಸೈನಿಂಗ್ ಗಳು, ಶಾಪಿಂಗ್ ಮಾಲ್ ಗಳು ಒಂದು ಕಡೆ,….

ಮಾಸ್ಟರ್ ಬೆಡ್ ರೂಂ,
ಚಿಲ್ಡ್ರನ್ಸ್ ಬೆಡ್ ರೂಂ,
ಸರ್ವೆಂಟ್ ಬೆಡ್ ರೂಂ,
ಗೆಸ್ಟ್ ಬೆಡ್ ರೂಂ ಗಳೆಂಬ ಐಷಾರಾಮಿ ಇನ್ನೊಂದು ಕಡೆ……

ಪ್ರಕೃತಿಯ ಸಂಪನ್ಮೂಲಗಳು ಯಾರಪ್ಪನದು…..

ತಿನ್ನುವ, ಅಪಾರ ಪೌಷ್ಠಿಕಾಂಶದ ಹಣ್ಣು ತರಕಾರಿ ಎಳನೀರುಗಳು ಬೀದಿ ಬದಿಯ ಬಿಸಿಲಿನಲ್ಲಿ ಅತ್ಯಂತ ಕಡಿಮೆ ಬೆಲೆಗೆ ಬಿಕರಿಯಾಗತೊಡಗಿದವು,
ಅದನ್ನು ಬೆಳೆಯುವವರು ಬದುಕಲಾರದೆ ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ …..

ಪೆಪ್ಸಿ ಕೋಲಾ ವಿಸ್ಕಿ ಸಿಗರೇಟ್ ಎಂಬ ಸಾವಿನ ವಿಷಗಳನ್ನು ರಾಜಾರೋಷವಾಗಿ ಎಸಿ ರೂಮುಗಳಲ್ಲಿ ಅಪಾರ ಬೆಲೆ ಕೊಟ್ಟು ‌ಸೇವಿಸುವುದೇ ಒಂದು ಪ್ರತಿಷ್ಠೆಯಾಯಿತು. ಅದನ್ನು ‌ಸೃಷ್ಟಿಸುವವರು ಅತ್ಯಂತ ಶ್ರೀಮಂತರಾಗಿ ಬದುಕನ್ನು ಮಜಾ ಉಡಾಯಿಸುತ್ತಿದ್ದಾರೆ……

ತಲೆ ಒಡೆದು – ತಲೆ ಹಿಡಿದು
ಕೊಂದು – ವಂಚಿಸಿ
ಹಣ ಮಾಡಿ ಅದನ್ನು ಪ್ರದರ್ಶನ ಮಾಡುವುದೇ
ಬದುಕಿನ ಧ್ಯೇಯವಾಯಿತು…….

ಶಿಕ್ಷಕ ವೃತ್ತಿ ಕಾಲ ಕಸವಾಯಿತು,
ಬ್ರೋಕರ್ ಗಿರಿ ಪವಿತ್ರ ವೃತ್ತಿಯಾಯಿತು.
ಸಮಾಜ ಸೇವೆ ರಾಜಕೀಯವಾಯಿತು,
ರಾಜಕೀಯ ದಂಧೆಯಾಯಿತು……
ಹಣ ಅಧಿಕಾರ ಜಾತಿ ಧರ್ಮ ಸಾಮಾಜಿಕ ಮೌಲ್ಯಗಳಾದವು.
ಪ್ರೀತಿ ಸ್ನೇಹ ವಿಶ್ವಾಸ ಕರುಣೆ ಸಹಕಾರ
ನೆಲ ಇಲ್ಲದೆ ವಿನಾಶದ ಅಂಚಿಗೆ ತಲುಪಿದವು…….

ಸೇವಿಸುವ ಗಾಳಿ,
ಕುಡಿಯುವ ನೀರು,
ತಿನ್ನುವ ಆಹಾರ ವಿಷವಾದವು..
ಇಟಾಲಿಯನ್ ಮಾರ್ಬಲ್, ಅಮೆರಿಕನ್ ಟೈಲ್ಸ್, ಮಲೇಷಿಯನ್ ವುಡ್, ಜರ್ಮನಿ ಕಮೋಡ್ ಗಳಿಂದ ನೆಲ ಗೋಡೆ ಕಿಚನ್ ಒಳಾಂಗಣ ಹೊರಾಂಗಣಗಳು ಫಳಫಳ ಹೊಳೆಯು ತೊಡಗಿದವು…..

ಮನಸ್ಸುಗಳ ಚಿಕ್ಕದಾದವು,
ಮನೆಗಳು ದೊಡ್ಡದಾದವು,
ವಸ್ತುಗಳು ಹತ್ತಿರವಾದವು,
ಸಂಬಂಧಗಳು ದೂರವಾದವು…..

ಕ್ಷಮಿಸಿ,
ಆಧುನಿಕತೆ ಸೃಷ್ಟಿಸಿದ ಮಾನಸಿಕ ತಲ್ಲಣಗಳು ಏಕಾಂತದಲ್ಲಿ ನೆನಪಿನ ಅಲೆಅಲೆಯಾಗಿ ಅಪ್ಪಳಿಸಿದಾಗ ಮೂಡಿದ ಭಾವನೆಗಳು………

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ.
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ, ಮನೆಗಳಲ್ಲಿ, ಮತಗಳಲ್ಲಿ, ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ-ವಿವೇಕಾನಂದ. ಎಚ್. ಕೆ

Ramesh Babu

Journalist

Recent Posts

ಸ್ಲೋಚ್ ಕ್ಯಾಪ್ ಗೆ ವಿದಾಯ: ನೀಲಿ ಬಣ್ಣದ ಪೀಕ್ ಕ್ಯಾಪ್ ಧರಿಸಿ ಮಿಂಚಿದ ಬೆಂ ಗ್ರಾ ಜಿಲ್ಲಾ ಪೊಲೀಸ್ ಸಿಬ್ಬಂದಿ

1956ರ ದಶಕದಿಂದಲೂ ಪೊಲೀಸರು ಧರಿಸುತ್ತಿದ್ದ ಸ್ಲೋಚ್ ಕ್ಯಾಪ್ ಗೆ ವಿದಾಯ ಹೇಳುವ ಮೂಲಕ ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಮಹತ್ವದ ಬದಲಾವಣೆ…

9 hours ago

ಹೊಸ ವರ್ಷಾಚರಣೆ: ಮಹಿಳೆಯರ ಸುರಕ್ಷತೆಗೆ ಮುನ್ನೆಚ್ಚರಿಕೆ ಕ್ರಮ ಪೊಲೀಸ್ ಇಲಾಖೆ ಕೈಗೊಳ್ಳಬೇಕು- ಸಿಎಂ ಸಿದ್ದರಾಮಯ್ಯ

ಹೊಸ ವರ್ಷಾಚರಣೆಯ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಚರ್ಚಿಸಲು ಕರೆಯಲಾಗಿದ್ದ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿದ ಸೂಚನೆಗಳು…

10 hours ago

ಜ.1ರಿಂದ ದ್ವಿಚಕ್ರ ವಾಹನ ಸವಾರರಿಗೆ ಹೆಲೈಟ್ ಕಡ್ಡಾಯ – ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ- ಡಿವೈಎಸ್ಪಿ ಪಾಂಡುರಂಗ

ಹೆಲ್ಮೆಟ್ ಧರಿಸದ ಕಾರಣದಿಂದಲೇ ಅಪಘಾತಗಳಲ್ಲಿ ಹೆಚ್ಚಿನ ಸಾವು, ನೋವುಗಳು ಸಂಭವಿಸುತ್ತಲೇ ಇವೆ. ಇತ್ತೀಚಿನ ದಿನಗಳಲ್ಲಿ ಯುವ ಸಮುದಾಯ ಸಂಚಾರ ನಿಯಮ…

13 hours ago

ಹಿಟ್ & ರನ್: ಸಿಮೆಂಟ್ ಬಲ್ಕರ್ ಗೆ ಬೈಕ್ ಡಿಕ್ಕಿ: ಇಬ್ಬರು ಬೈಕ್ ಸವಾರರು ಸಾವು: ಸಿಮೆಂಟ್ ಬಲ್ಕರ್ ಪರಾರಿ

ಸಿಮೆಂಟ್ ಬಲ್ಕರ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಬೈಕ್ ಸವಾರರು ಸಾವನ್ನಪ್ಪಿರುವ ಘಟನೆ ನಿನ್ನೆ ರಾತ್ರಿ ಸುಮಾರು…

16 hours ago

“ಕುವೆಂಪು”….. ಸಾಹಿತ್ಯ – ವಿಶ್ವ ಮಾನವ ಪ್ರಜ್ಞೆ……

ಕುವೆಂಪು......... ಸಾಹಿತ್ಯ - ವಿಶ್ವ ಮಾನವ ಪ್ರಜ್ಞೆ...... ಅಕ್ಷರಗಳ ಸಂಶೋಧನೆ - ಬರವಣಿಗೆ - ಸಾಹಿತ್ಯ - ಕನ್ನಡ ಭಾಷೆ…

22 hours ago

ಬಾಂಗ್ಲಾದೇಶದ ಅಮಾನವೀಯವಾದ ‌ಹಿಂದೂ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ ಖಂಡಿಸುತ್ತಾ, ನಮ್ಮ ಜವಾಬ್ದಾರಿ ನೆನಪಿಸುತ್ತಾ……

ಬಾಂಗ್ಲಾ......... ಒಂದು ಎಚ್ಚರಿಕೆಯ ಪಾಠ......... ಬಾಂಗ್ಲಾದೇಶದ ಅಮಾನವೀಯವಾದ ‌ಹಿಂದೂ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ ಖಂಡಿಸುತ್ತಾ, ನಮ್ಮ ಜವಾಬ್ದಾರಿ ನೆನಪಿಸುತ್ತಾ...... ಬಾಂಗ್ಲಾದೇಶದಲ್ಲಿ…

2 days ago