ಆಧುನಿಕ ಕರ್ಣ ಎಂಬ ಬಿರುದು ಪಡೆದ ಪೊಲೀಸಪ್ಪ: ಬಡವರ ಸೇವೆಗೆ ತಮ್ಮ ಬದುಕನ್ನೇ ಅರ್ಪಣೆ

ಚಿಕ್ಕಬಳ್ಳಾಪುರ ಜಿಲ್ಲೆಯ ಮಂಚೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾನ್‌ಸ್ಟೆಬಲ್ ಪ್ರಮೋದ್ ರೆಡ್ಡಿ… ಸರ್ಕಾರಿ ಕರ್ತವ್ಯವನ್ನು ನೆರವೇರಿಸುತ್ತಿದ್ದರೂ, ತಮ್ಮ ರಜಾದಿನಗಳಲ್ಲಿ ಬಡವರ ಸೇವೆಗೆ ತಮ್ಮ ಬದುಕನ್ನೇ ಅರ್ಪಿಸುವ ಮೂಲಕ ಆಧುನಿಕ ಕರ್ಣ ಎಂಬ ಬಿರುದನ್ನು ಪಡೆದಿದ್ದಾರೆ.

30 ವರ್ಷದ ಪ್ರಮೋದ್ ರೆಡ್ಡಿ, ಮಂಚೇನಹಳ್ಳಿ ತಾಲ್ಲೂಕಿನಲ್ಲೇ ಅಲ್ಲದೆ, ವಿವಿಧ ಗ್ರಾಮಗಳಲ್ಲಿ ಬಡವರ ನೆರವಿಗೆ ಸದಾ ಸಿದ್ಧರಾಗಿದ್ದಾರೆ. ವಾರದಲ್ಲಿ ಒಂದು ದಿನ ಅನ್ನದಾನ ಮಾಡುವುದರ ಜೊತೆಗೆ ಹಾಸಿಗೆಗಳು, ಸೊಳ್ಳೆ ಪರದೆಗಳು, ಬಟ್ಟೆಗಳು ಮತ್ತು ಅಗತ್ಯ ವೈದ್ಯಕೀಯ ಸಾಮಗ್ರಿಗಳನ್ನು ಒದಗಿಸುವ ಮೂಲಕ ಅವರು ಸೇವೆಯನ್ನು ಸಲ್ಲಿಸುತ್ತಿದ್ದಾರೆ.

ಮಾನವರಷ್ಟೇ ಅಲ್ಲದೆ, ಪ್ರಾಣಿಗಳ ಮೇಲೂ ಪ್ರಮೋದ್ ರೆಡ್ಡಿಯವರಿಗೆ ಅಷ್ಟೇ ಮಮತೆ. ರಸ್ತೆಗಳಲ್ಲಿ ಅಪಘಾತದಲ್ಲಿ ಮೃತಪಟ್ಟ ಬೀದಿ ನಾಯಿಗಳಿಗೆ ಹೂವು, ಹಾಲು ಅರ್ಪಿಸಿ ಶಾಸ್ತ್ರೋಕ್ತವಾಗಿ ಅಂತ್ಯಕ್ರಿಯೆ ನೆರವೇರಿಸುತ್ತಾರೆ. ಹಕ್ಕಿ, ಪ್ರಾಣಿ ಯಾವುದೇ ಪ್ರಾಣಿ ಸತ್ತರೂ, ಅವುಗಳಿಗೂ ಗೌರವ ನೀಡಿ ಅಂತ್ಯಸಂಸ್ಕಾರ ಮಾಡುವ ಮೂಲಕ ತಮ್ಮ ಕರ್ತವ್ಯವನ್ನು ಪೂರೈಸುತ್ತಾರೆ.

ಶಿಡ್ಲಘಟ್ಟ ತಾಲ್ಲೂಕಿನ ಎಸ್ ಗೊಲ್ಲಹಳ್ಳಿ ಮೂಲದ ಪ್ರಮೋದ್ ರೆಡ್ಡಿ ಹುಟ್ಟು ಹರಿಭಕ್ತ, ಜನಸೇವೆಯೇ ಜನಾರ್ದನ ಸೇವೆ ಎಂದು ಭಾವಿಸುವ ಪ್ರಮೋದ್ ರೆಡ್ಡಿ, ರೈತ ನಂಜಪ್ಪ ರೆಡ್ಡಿ ಮತ್ತು ಪಾರ್ವತಮ್ಮ ಅವರ ಪುತ್ರ. ತಮ್ಮ ಮಾವ ಅಶ್ವತ್ಥ ರೆಡ್ಡಿಯ ಸಹಾಯದಿಂದ ಬಿ.ಇ. ಸಿವಿಲ್ ಎಂಜಿನಿಯರಿಂಗ್ ಮುಗಿಸಿದ ಅವರು, ಬಾಲ್ಯದಿಂದಲೇ ವಿಷ್ಣು ಭಕ್ತರಾಗಿದ್ದು, ಕಳೆದ 5 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ತಮ್ಮ ಸಂಬಳದ 10% ಅನ್ನು ಸಮಾಜ ಸೇವೆಗೆ ಮೀಸಲಿಟ್ಟಿರುವುದಾಗಿ ಅವರು ಸ್ಪಷ್ಟಪಡಿಸಿದ್ದಾರೆ.

ಗರ್ಭಿಣಿಯರಿಗೆ ಹೆರಿಗೆ ನೆರವು, ಡಯಾಲಿಸಿಸ್ ಚಿಕಿತ್ಸೆ, ಔಷಧಿ ಸಹಾಯ, ಮಕ್ಕಳ ಶಿಕ್ಷಣ… ಹೀಗೆ ಹಲವು ಸಾಮಾಜಿಕ ಸೇವೆಗಳನ್ನು ಪ್ರಮೋದ್ ರೆಡ್ಡಿ ಇದುವರೆಗೆ ಮಾಡಿದ್ದಾರೆ. 30 ವರ್ಷ ವಯಸ್ಸಿನ ಅವಿವಾಹಿತ ಪ್ರಮೋದ್ ರೆಡ್ಡಿ ಮಾಂಸ, ಮದ್ಯ ಸೇವನೆ ಮಾಡದೇ, ಭಕ್ತಿ-ಸೇವೆ ಮಾರ್ಗದಲ್ಲಿ ತೊಡಗಿಸಿಕೊಂಡಿದ್ದಾರೆ.

ಸಮಾಜ ಸೇವೆಯಲ್ಲಿ ಪ್ರತಿಯೊಬ್ಬರೂ ಕೈಜೋಡಿಸಿದರೆ ಸಮಾಜದಲ್ಲಿ ಬದಲಾವಣೆ ತರುವುದೇ ಅಲ್ಲ, ಬದುಕಿನಲ್ಲಿ ತೃಪ್ತಿಯನ್ನೂ ನೀಡುತ್ತದೆ ಎಂದು ಹೇಳುವ ಪ್ರಮೋದ್ ರೆಡ್ಡಿಯವರ ಸೇವಾಭಾವ ಇಂದು ಎಲ್ಲರ ಮೆಚ್ಚುಗೆಯಾಗಿದೆ.

Ramesh Babu

Journalist

Recent Posts

ಸ್ಥಳೀಯ ಸಂಸ್ಥೆಗಳಲ್ಲಿ ಚುರುಕಾಗಬೇಕಿದೆ ಬಿಎಂಸಿ: ಕೆರೆ, ಕುಂಟೆ, ಗೋಮಾಳ, ಅರಣ್ಯ ಸಂರಕ್ಷಣೆಗೆ ನಿರ್ಲಕ್ಷ್ಯ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…

8 hours ago

ಅಪರೂಪದ ದುಬಾರಿ ಖಾಯಿಲೆಗಳು…….

ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…

1 day ago

ಮತದಾರರ ಪಟ್ಟಿ ಪರಿಷ್ಕರಣೆ ಚುರುಕು: 7.96 ಲಕ್ಷ ಮತದಾರರ ಹೆಸರು ಅಂತಿಮ ಹಂತಕ್ಕೆ

ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…

2 days ago

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

3 days ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

3 days ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

4 days ago