ಆಧುನಿಕ ಕರ್ಣ ಎಂಬ ಬಿರುದು ಪಡೆದ ಪೊಲೀಸಪ್ಪ: ಬಡವರ ಸೇವೆಗೆ ತಮ್ಮ ಬದುಕನ್ನೇ ಅರ್ಪಣೆ

ಚಿಕ್ಕಬಳ್ಳಾಪುರ ಜಿಲ್ಲೆಯ ಮಂಚೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾನ್‌ಸ್ಟೆಬಲ್ ಪ್ರಮೋದ್ ರೆಡ್ಡಿ… ಸರ್ಕಾರಿ ಕರ್ತವ್ಯವನ್ನು ನೆರವೇರಿಸುತ್ತಿದ್ದರೂ, ತಮ್ಮ ರಜಾದಿನಗಳಲ್ಲಿ ಬಡವರ ಸೇವೆಗೆ ತಮ್ಮ ಬದುಕನ್ನೇ ಅರ್ಪಿಸುವ ಮೂಲಕ ಆಧುನಿಕ ಕರ್ಣ ಎಂಬ ಬಿರುದನ್ನು ಪಡೆದಿದ್ದಾರೆ.

30 ವರ್ಷದ ಪ್ರಮೋದ್ ರೆಡ್ಡಿ, ಮಂಚೇನಹಳ್ಳಿ ತಾಲ್ಲೂಕಿನಲ್ಲೇ ಅಲ್ಲದೆ, ವಿವಿಧ ಗ್ರಾಮಗಳಲ್ಲಿ ಬಡವರ ನೆರವಿಗೆ ಸದಾ ಸಿದ್ಧರಾಗಿದ್ದಾರೆ. ವಾರದಲ್ಲಿ ಒಂದು ದಿನ ಅನ್ನದಾನ ಮಾಡುವುದರ ಜೊತೆಗೆ ಹಾಸಿಗೆಗಳು, ಸೊಳ್ಳೆ ಪರದೆಗಳು, ಬಟ್ಟೆಗಳು ಮತ್ತು ಅಗತ್ಯ ವೈದ್ಯಕೀಯ ಸಾಮಗ್ರಿಗಳನ್ನು ಒದಗಿಸುವ ಮೂಲಕ ಅವರು ಸೇವೆಯನ್ನು ಸಲ್ಲಿಸುತ್ತಿದ್ದಾರೆ.

ಮಾನವರಷ್ಟೇ ಅಲ್ಲದೆ, ಪ್ರಾಣಿಗಳ ಮೇಲೂ ಪ್ರಮೋದ್ ರೆಡ್ಡಿಯವರಿಗೆ ಅಷ್ಟೇ ಮಮತೆ. ರಸ್ತೆಗಳಲ್ಲಿ ಅಪಘಾತದಲ್ಲಿ ಮೃತಪಟ್ಟ ಬೀದಿ ನಾಯಿಗಳಿಗೆ ಹೂವು, ಹಾಲು ಅರ್ಪಿಸಿ ಶಾಸ್ತ್ರೋಕ್ತವಾಗಿ ಅಂತ್ಯಕ್ರಿಯೆ ನೆರವೇರಿಸುತ್ತಾರೆ. ಹಕ್ಕಿ, ಪ್ರಾಣಿ ಯಾವುದೇ ಪ್ರಾಣಿ ಸತ್ತರೂ, ಅವುಗಳಿಗೂ ಗೌರವ ನೀಡಿ ಅಂತ್ಯಸಂಸ್ಕಾರ ಮಾಡುವ ಮೂಲಕ ತಮ್ಮ ಕರ್ತವ್ಯವನ್ನು ಪೂರೈಸುತ್ತಾರೆ.

ಶಿಡ್ಲಘಟ್ಟ ತಾಲ್ಲೂಕಿನ ಎಸ್ ಗೊಲ್ಲಹಳ್ಳಿ ಮೂಲದ ಪ್ರಮೋದ್ ರೆಡ್ಡಿ ಹುಟ್ಟು ಹರಿಭಕ್ತ, ಜನಸೇವೆಯೇ ಜನಾರ್ದನ ಸೇವೆ ಎಂದು ಭಾವಿಸುವ ಪ್ರಮೋದ್ ರೆಡ್ಡಿ, ರೈತ ನಂಜಪ್ಪ ರೆಡ್ಡಿ ಮತ್ತು ಪಾರ್ವತಮ್ಮ ಅವರ ಪುತ್ರ. ತಮ್ಮ ಮಾವ ಅಶ್ವತ್ಥ ರೆಡ್ಡಿಯ ಸಹಾಯದಿಂದ ಬಿ.ಇ. ಸಿವಿಲ್ ಎಂಜಿನಿಯರಿಂಗ್ ಮುಗಿಸಿದ ಅವರು, ಬಾಲ್ಯದಿಂದಲೇ ವಿಷ್ಣು ಭಕ್ತರಾಗಿದ್ದು, ಕಳೆದ 5 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ತಮ್ಮ ಸಂಬಳದ 10% ಅನ್ನು ಸಮಾಜ ಸೇವೆಗೆ ಮೀಸಲಿಟ್ಟಿರುವುದಾಗಿ ಅವರು ಸ್ಪಷ್ಟಪಡಿಸಿದ್ದಾರೆ.

ಗರ್ಭಿಣಿಯರಿಗೆ ಹೆರಿಗೆ ನೆರವು, ಡಯಾಲಿಸಿಸ್ ಚಿಕಿತ್ಸೆ, ಔಷಧಿ ಸಹಾಯ, ಮಕ್ಕಳ ಶಿಕ್ಷಣ… ಹೀಗೆ ಹಲವು ಸಾಮಾಜಿಕ ಸೇವೆಗಳನ್ನು ಪ್ರಮೋದ್ ರೆಡ್ಡಿ ಇದುವರೆಗೆ ಮಾಡಿದ್ದಾರೆ. 30 ವರ್ಷ ವಯಸ್ಸಿನ ಅವಿವಾಹಿತ ಪ್ರಮೋದ್ ರೆಡ್ಡಿ ಮಾಂಸ, ಮದ್ಯ ಸೇವನೆ ಮಾಡದೇ, ಭಕ್ತಿ-ಸೇವೆ ಮಾರ್ಗದಲ್ಲಿ ತೊಡಗಿಸಿಕೊಂಡಿದ್ದಾರೆ.

ಸಮಾಜ ಸೇವೆಯಲ್ಲಿ ಪ್ರತಿಯೊಬ್ಬರೂ ಕೈಜೋಡಿಸಿದರೆ ಸಮಾಜದಲ್ಲಿ ಬದಲಾವಣೆ ತರುವುದೇ ಅಲ್ಲ, ಬದುಕಿನಲ್ಲಿ ತೃಪ್ತಿಯನ್ನೂ ನೀಡುತ್ತದೆ ಎಂದು ಹೇಳುವ ಪ್ರಮೋದ್ ರೆಡ್ಡಿಯವರ ಸೇವಾಭಾವ ಇಂದು ಎಲ್ಲರ ಮೆಚ್ಚುಗೆಯಾಗಿದೆ.

Ramesh Babu

Journalist

Recent Posts

ಸೋನಂ ವಾಂಗ್ ಚುಕ್……

ಸೋನಂ ವಾಂಗ್ ಚುಕ್...... ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗಿಂತ ಸೋನಂ ವಾಂಗ್ ಚುಕ್ ಅವರ ಜೀವ ಭಾರತೀಯರಿಗೆ…

23 hours ago

ರೈತರ ಜಮೀನು ಬಲವಂತವಾಗಿ ವಶಪಡಿಸಿಕೊಳ್ಳುವುದಿಲ್ಲ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆಗಾಗಿ ಯಾವುದೇ ರೈತರ ಜಮೀನನ್ನೂ ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.…

1 day ago

ಶಾಲೆ, ಅಂಗನವಾಡಿ ಮುಂಭಾಗವೇ ಕಸದ ರಾಶಿ; ದುರ್ವಾಸನೆಯ ನಡುವೆ ಪಾಠ ಕೇಳುವ ಮಕ್ಕಳು ಪಾಲನಜೋಗಿಹಳ್ಳಿ ಪ್ರವೇಶ ದ್ವಾರದಲ್ಲೇ ತ್ಯಾಜ್ಯ ರಾಶಿ – ಸ್ವಚ್ಛತೆಗೆ ಗ್ರಾಮಸ್ಥರ ಆಗ್ರಹ

ದೊಡ್ಡಬಳ್ಳಾಪುರ: ತಾಲೂಕಿನ ಕೊಡಿಗೇಹಳ್ಳಿ ಗ್ರಾಮ ಪಂಚಾಯಿತಿಗೆ ಒಳಪಡುವ ಪಾಲನಜೋಗಿಹಳ್ಳಿಯಲ್ಲಿ ತ್ಯಾಜ್ಯ ವಿಲೇವಾರಿ ಸಮಸ್ಯೆ ದಿನದಿಂದ ದಿನಕ್ಕೆ ಗಂಭೀರವಾಗುತ್ತಿದ್ದು, ಗ್ರಾಮ ಪ್ರವೇಶ…

1 day ago

ಮುಂದೆ ಸಾಗುತ್ತಿದ್ದ ಕಂಟೈನರ್ ಲಾರಿಗೆ ಐಚರ್ ವಾಹನ ಡಿಕ್ಕಿ: ಚಾಲಕ ಸಾವು

ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ–44ರ ದೇವನಹಳ್ಳಿ ಬೈಪಾಸ್‌ನ ಕೆಂಪೇಗೌಡ ವೃತ್ತದ ಬಳಿ ಮುಂದೆ ಸಾಗುತ್ತಿದ್ದ ಕಂಟೈನರ್ ಲಾರಿಗೆ ಐಚರ್ ಸರಕು ಸಾಗಣೆ…

1 day ago

ಸೆಲೆಬ್ರಿಟಿ…………….

ಸೆಲೆಬ್ರಿಟಿ................ ಇತ್ತೀಚಿನ ವರ್ಷಗಳ ಭಾರತೀಯ ಸಮಾಜವನ್ನು ಸೂಕ್ಷ್ಮವಾಗಿ ಗಮನಿಸಿದರೆ ಬದಲಾಗುತ್ತಿರುವ ಯುವಸಮೂಹದ ಗ್ರಹಿಕಾ ಸಾಮರ್ಥ್ಯದ ಬಗ್ಗೆ ಅನುಮಾನ ಮೂಡುತ್ತಿದೆ. ಏಕೆಂದರೆ,…

2 days ago

ಎಲ್-ನಿನೋ ಪರಿಣಾಮ, ಮಳೆಯ ಕೊರತೆ, ತಾಪಮಾನದ ಏರಿಕೆ, ಒಣ ಹವಾಮಾನ ಹೆಚ್ಚಳ ಸಾಧ್ಯತೆ: ತೋಟಗಾರಿಕಾ ಬೆಳೆಗಳ ರಕ್ಷಣೆಗೆ ಇರಲಿ ಆದ್ಯತೆ

ಎಲ್-ನಿನೋ ಪರಿಣಾಮದಿಂದ ರಾಜ್ಯದ ಹಲವು ಭಾಗಗಳಲ್ಲಿ ಮಳೆಯ ಕೊರತೆ, ತಾಪಮಾನದ ಏರಿಕೆ ಹಾಗೂ ಒಣ ಹವಾಮಾನ ಹೆಚ್ಚಾಗುವ ಸಾಧ್ಯತೆ ಇರುವ…

2 days ago