Categories: ಲೇಖನ

ಆಧುನಿಕ ಸಮಾಜಕ್ಕೆ ಅತಿ ಅವಶ್ಯಕವಾಗಿ ಬೇಕಾಗಿರುವುದು ಬುದ್ದಿವಂತರಿಗಿಂತ ಹೆಚ್ಚಾಗಿ ಹೃದಯವಂತರು….

ಅನಕ್ಷರಸ್ಥರ ಬುದ್ದಿವಂತಿಕೆ ಪ್ರಶ್ನಿಸುವವರು ಅಕ್ಷರಸ್ಥರ ಮಾನವೀಯತೆಯನ್ನು ಪ್ರಶ್ನಿಸಬೇಕಲ್ಲವೇ……..

……ಒಂದು ಎಕ್ಸ್ ತುಣುಕು …

ಅಕ್ಷರ ಕಲಿಕೆ ಒಂದು ನೈಪುಣ್ಯ ಅಥವಾ ಸುಲಭವಾಗಿ ಮಾಹಿತಿ ತಿಳಿಯುವ ಒಂದು ವಿಧಾನ ಅಥವಾ ಜೀವನ ಕೌಶಲ್ಯದ ಸಾಧನವೇ ಹೊರತು ಅದೇ ಜ್ಞಾನವಲ್ಲ, ಅರಿವಲ್ಲ, ಮೌಲ್ಯವಲ್ಲ, ಬದುಕಲ್ಲ….

ಅಕ್ಷರ ಕಲಿಕೆ ಎಂಬುದು ಅಡುಗೆ ಮಾಡುವ, ಹೊಲಿಗೆ ಮಾಡುವ, ವಾಹನ ಚಾಲನೆ ಮಾಡುವ, ಮನೆ ಕಟ್ಟುವ, ಭೇಟೆಯಾಡುವ ರೀತಿಯ ಒಂದು ಕೌಶಲವೇ ಹೊರತು ಅದು ಎಲ್ಲವನ್ನೂ ಒಳಗೊಂಡ ವಿಶೇಷ ಅತಿಮಾನುಷ ಶಕ್ತಿಯೇನು ಅಲ್ಲ…..

ಅಕ್ಷರ ಕಲಿಯದೆಯೂ ವ್ಯಕ್ತಿತ್ವವಿದೆ, ಜ್ಞಾನವಿದೆ, ನಾಗರೀಕತೆಯಿದೆ ಬದುಕಿದೆ,
ಹಾಗೆಯೇ ಅಕ್ಷರ ಕಲಿತೂ ಅಜ಼್ಞಾನವಿದೆ, ಮೋಸವಿದೆ, ಅಮಾನವೀಯತೆಯಿದೆ, ಅನಾಗರಿಕತೆ ಇದೆ……

ಅಕ್ಷರಸ್ಥರ ಈಗಿನ ಮೋಸ, ವಂಚನೆ, ದುಷ್ಟತನ, ಭ್ರಷ್ಟಾಚಾರ, ಜಾತಿವಾದ, ಶೋಷಣೆ, ಅಪನಂಬಿಕೆ ಎಲ್ಲವನ್ನೂ ಗಮನಿಸಿದಾಗ ಅನಕ್ಷರಸ್ಥರ ಕೈ, ಬಾಯಿ, ಮೆದುಳು, ಮನಸ್ಸು, ಹೃದಯ, ನಾಲಿಗೆ, ನಂಬಿಕೆ, ವ್ಯವಹಾರ, ಆ ಮುಗ್ಧತೆ ಮತ್ತು ಆ ಶುದ್ಧತೆಯ ಮಹತ್ವ ನಮಗೆ ಅರಿವಾಗುತ್ತದೆ….

ನ್ಯಾಯಾಂಗ, ಕಾರ್ಯಾಂಗ, ಶಾಸಕಾಂಗ, ಪತ್ರಿಕಾರಂಗ, ಧರ್ಮಾಂಗ, ಶಿಕ್ಷಕರು, ಪೋಲೀಸರು, ವಕೀಲರು ಎಲ್ಲವನ್ನೂ ಬಹುತೇಕ ಅಕ್ಷರಸ್ಥರೇ ನಿರ್ವಹಿಸುವಾಗಲೂ ಇಡೀ ವ್ಯವಸ್ಥೆ ಸರಿಪಡಿಸಲಾಗದಷ್ಟು ಹದಗೆಟ್ಟಿದೆ. ಎಲ್ಲಾ ಸ್ವಾತಂತ್ರ್ಯ ಇರುವಾಗಲು ಮನಸ್ಸುಗಳು ಗುಲಾಮಿತನದತ್ತ ಅಥವಾ ಜೀತ ಪದ್ಧತಿಯತ್ತ ಸಾಗುತ್ತಿವೆ…..

ಕೊಲೆಗಡುಕರು, ಅತ್ಯಾಚಾರಿಗಳು, ಭ್ರಷ್ಟರು, ಧರ್ಮಾಂಧರು, ಜಾತಿವಾದಿಗಳು, ವಂಶಾಡಳಿತದ ಒಂದೇ ಕುಟುಂಬದವರು, ಜೈಲಿನ ಕಂಬಿ ಎಣಿಸಿದವರು, ಗಡೀಪಾರಾದವರು ಹೀಗೆ ನೀಚಾತಿನೀಚರನ್ನು ಗುಪ್ತ ಮತದಾನದ ಮೂಲಕ ನಮ್ಮ ಜನಪ್ರತಿನಿಧಿಗಳಾಗಿ ಆಯ್ಕೆ ಮಾಡುವವರು ಸಹ ಬಹುತೇಕ ಅಕ್ಷರಸ್ಥರೇ ಎಂಬುದನ್ನು ಹೇಗೆ ಮರೆಯುವುದು…..

ಅನಕ್ಷರಸ್ಥರ ಕ್ರೌರ್ಯ ಮತ್ತು ತಪ್ಪುಗಳು ಅವರ ಅಜ್ಞಾನದಿಂದ, ತಪ್ಪು ತಿಳಿವಳಿಕೆಯಿಂದ, ಸಂಪರ್ಕದ ಕೊರತೆಯಿಂದ, ಸಹಜ ಸಂಪ್ರದಾಯಗಳ ಒತ್ತಡದಿಂದ ಘಟಿಸಿದರೆ ಅಕ್ಷರಸ್ಥರ ಕ್ರಿಮಿನಲ್ ಚಟುವಟಿಕೆಗಳು ಉದ್ದೇಶಪೂರ್ವಕವಾಗಿ, ಅತಿ ಸ್ವಾರ್ಥದಿಂದ ಅರಿವಿನ ಅಂಚಿನಲ್ಲಿಯೇ ಸಂಭವಿಸುತ್ತವೆ…..

ಪೋಲೀಸ್ ಸ್ಟೇಷನ್ ಅಥವಾ ನ್ಯಾಯಾಲಯದಲ್ಲಿ ದಾಖಲಾಗಿರುವ ಶೇಕಡಾ 90% ರಷ್ಟು ಮೊಕದ್ದಮೆಗಳಲ್ಲಿ ವಾದಿ ಅಥವಾ ಪ್ರತಿವಾದಿಗಳು ಅಕ್ಷರಸ್ಥ ವಂಚಕರೇ ಆಗಿರುತ್ತಾರೆ. ದುರುದ್ದೇಶವೇ ಅದರ ಮೂಲ ಕಾರಣವಾಗಿರುತ್ತದೆ…..

ಹೆಬ್ಬೆಟ್ಟು ಅಥವಾ ಅನಕ್ಷರಸ್ಥ ಎಂದು ಮೂದಲಿಸಿದರೆ ಅಕ್ಷರ ಸಂಶೋಧನೆಯ ಹಿಂದಿನ, ಅಕ್ಷರ ಕಲಿಯದ ಇಂದಿನ ಇಡೀ ಜನಾಂಗ ಅಥವಾ ಸಮುದಾಯಗಳನ್ನೇ ಅಗೌರವಿಸಿದಂತೆ ಆಗುತ್ತದೆ…..

ಅನಕ್ಷರಸ್ಥರಿಗೆ ಮಾಹಿತಿಯ ಕೊರತೆ ಇರಬಹುದು ಅಥವಾ ತಂತ್ರಜ್ಞಾನದ ಕೊರತೆ ಇರಬಹುದು. ಆದರೆ ಮಾನವೀಯತೆಯ ಕೊರತೆ ಇರುವುದಿಲ್ಲ. ಜ್ಞಾನದ ಕೊರತೆ ಇರುವುದಿಲ್ಲ. ಭತ್ತ, ರಾಗಿ, ಜೋಳ, ಹಣ್ಣು, ತರಕಾರಿ, ಬೇಳೆಕಾಳುಗಳು, ಹೈನುಗಾರಿಕೆ, ಕೌಟುಂಬಿಕ ವ್ಯವಸ್ಥೆ, ಗೌರವ, ಅಭಿಮಾನ, ಭಕ್ತಿ, ಧೈರ್ಯ ಎಲ್ಲವೂ, ಎಲ್ಲಾ ರೀತಿಯ ಅನುಭಾವಿಕ ವಿಜ್ಞಾನಿಗಳು ರೂಪಗೊಂಡಿದ್ದೇ ಅನಕ್ಷರಸ್ಥರಿಂದ……

ಹಾಗೆಂದು ಅನಕ್ಷರತೆಯನ್ನು ಬೆಂಬಲಿಸುತ್ತಿಲ್ಲ. ಈಗಿನ ಕಾಲಕ್ಕೆ ಎಲ್ಲರೂ ಅಕ್ಷರಸ್ಥರು ಆಗಲೇ ಬೇಕು. ಅದಕ್ಕೆ ಸಂಪೂರ್ಣ ಬೆಂಬಲವಿದೆ. ಆದರೆ ಅನಕ್ಷರಸ್ಥರು ದಡ್ಡರು – ಮೂರ್ಖರು, ವಿವೇಚನೆ ಇಲ್ಲದವರು ಎಂಬ ಟೀಕೆ ದುರಹಂಕಾರದ ಮಾತಾಗುತ್ತದೆ…..

ಪ್ರಕೃತಿಯ ಸಹಜ ಬದುಕು ಅಕ್ಷರಗಳ ಮೇಲೆ ನಿಂತಿಲ್ಲ. ಅದು ಅನಿವಾರ್ಯವೂ ಅಲ್ಲ. ಬದುಕು ನಿಂತಿರುವುದು ಜೀವಪರ ನಿಲುವಿನ ಮೇಲೆ ಮತ್ತು ಮಾನವೀಯ ಧರ್ಮದ ಮೇಲೆ ಮಾತ್ರ…..

ಇಂದಿನ ಆಧುನಿಕ ಸಮಾಜಕ್ಕೆ ಅತಿ ಅವಶ್ಯಕವಾಗಿ ಬೇಕಾಗಿರುವುದು ಬುದ್ದಿವಂತರಿಗಿಂತ ಹೆಚ್ಚಾಗಿ ಹೃದಯವಂತರು……..

ಪ್ರಬುದ್ಧ ಮನಸ್ಸು ಪ್ರಬುದ್ಧ ‌ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ – ಮನೆಗಳಲ್ಲಿ – ಮತಗಳಲ್ಲಿ – ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ-ವಿವೇಕಾನಂದ‌. ಎಚ್.ಕೆ

Ramesh Babu

Journalist

Recent Posts

ಮೆಳೇಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಕಳ್ಳತನ: ರಾಮ ಲಕ್ಷ್ಮಣರಿಗೆ ಅಳವಡಿಸಿದ್ದ ಬೆಳ್ಳಿ ಕಿರೀಟ ಕದ್ದೊಯ್ದ ಐನಾತಿಗಳು

ಮುಜರಾಯಿ ಇಲಾಖೆಗೆ ಒಳಪಡುವ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ರಾಮ ಲಕ್ಷ್ಮಣರಿಗೆ ಅಳವಡಿಸಿದ್ದ ಬೆಳ್ಳಿ ಕಿರೀಟವನ್ನು ಕಳ್ಳರು ಕದ್ದೊಯ್ದಿರುವ ಘಟನೆ ಕಳೆದ…

13 minutes ago

ಮಾರಮ್ಮ ದೇವಿಯ ಮೂರು ಚಿನ್ನದ ತಾಳಿ, ನಾಲ್ಕು ಗುಂಡುಗಳನ್ನ ಕದ್ದ ಖದೀಮರು

ದೊಡ್ಡಬಳ್ಳಾಪುರ ತಾಲೂಕಿನ ಕಲ್ಲುದೇವನಹಳ್ಳಿ ಮಾರಮ್ಮ ದೇವಿ ದೇವಸ್ಥಾನದಲ್ಲಿ ಕಳೆದ ರಾತ್ರಿ ಕಳ್ಳತನ‌ ನಡೆದಿದೆ.. ಕಲ್ಲುದೇವನಹಳ್ಳಿ ಗ್ರಾಮದ ಮಧ್ಯ ಭಾಗದಲ್ಲಿರುವ ಮಾರಮ್ಮ…

1 hour ago

T20 World Cup: ವಿಶ್ವ ವಿಜೇತ ಟೀಂ ಇಂಡಿಯಾಗೆ ದಾಖಲೆಯ ಮೂರನೇ T20 ವಿಶ್ವಕಪ್ ಕಿರೀಟ

ಅಹ್ಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಟಿ20 ವಿಶ್ವಕಪ್ ಫೈನಲ್ಸ್ ಪಂದ್ಯದಲ್ಲಿ ಭಾರತ ತಂಡ ನ್ಯೂಜಿಲ್ಯಾಂಡ್ ವಿರುದ್ಧ ಅದ್ಭುತವಾದ…

12 hours ago

2026-27ನೇ ಸಾಲಿನ ರಾಜ್ಯ ಬಜೆಟ್: ಬಜೆಟ್ ಬಗ್ಗೆ ಶಾಸಕ ಧೀರಜ್ ಮುನಿರಾಜ್ ಏನಂದ್ರು ಗೊತ್ತಾ….? ಅವರ ಪ್ರತಿಕ್ರಿಯೆ ಇಲ್ಲಿದೆ ನೋಡಿ….

ಸಿಎಂ ಸಿದ್ದರಾಮಯ್ಯ ಮಂಡಿಸಿರುವ ಎಲ್ಲಾ ಬಜೆಟ್ ಗಳ ಪೈಕಿ 2026-27ರ ಬಜೆಟ್ ಅತ್ಯಂತ ನಿರಾಶಾದಾಯಕವಾಗಿದೆ. ಈ ಬಜೆಟ್ ನಲ್ಲಿ ಹೊಸ…

21 hours ago

ವಸತಿ ಶಾಲಾ ಸಹಪಾಠಿಗಳ ಮೇಲೆ ಕಬ್ಬಿಣದ ಸರಳು, ಸ್ಕ್ರೂಡ್ರೈವರ್‌, ಚಾಕುವಿನಿಂದ ದಾಳಿ: ಒಬ್ಬ ವಿದ್ಯಾರ್ಥಿ ಸಾವು: 8 ಮಂದಿಗೆ ಗಾಯ

ಬಳ್ಳಾರಿ ನಗರದ "ಗುರುಕುಲ ವಸತಿ ಶಾಲೆ"ಯಲ್ಲಿ ಶನಿವಾರ ರಾತ್ರಿ ವಿದ್ಯಾರ್ಥಿಯೊಬ್ಬ ತನ್ನ ಸಹಪಾಠಿಗಳ ಮೇಲೆ ಕಬ್ಬಿಣದ ಸರಳು, ಸ್ಕ್ರೂಡ್ರೈವರ್‌, ಚಾಕುವಿನಿಂದ…

1 day ago

ತಮಿಳುನಾಡಿನ ಮಹಿಳೆಯರಿಗೆ ಬಂಪರ್‌ ಕೊಡುಗೆ ಘೋಷಿಸಿ ಹೆಣ್ಮಕ್ಕಳ ಕಣ್ಮಣಿಯಾಗಲು ಹೊರಟ ನಟ, ಟಿವಿಕೆ ಪಕ್ಷದ ಅಧ್ಯಕ್ಷ ವಿಜಯ್

ನಟಿ ತ್ರಿಷಾ ಜತೆ ಅಫೇರ್‌ ಆರೋಪ, ಹೆಂಡ್ತಿ ಡಿವೋರ್ಸ್‌ ಗೆ ಅರ್ಜಿ ವಿಚಾರ, ವಿಪಕ್ಷಗಳ ಟೀಕಾ ಪ್ರಹಾರ, ಸೋಷಿಯಲ್‌ ಮೀಡಿಯಾದಲ್ಲಿ…

1 day ago