Categories: ಲೇಖನ

ಆಧುನಿಕ ಸಮಾಜಕ್ಕೆ ಅತಿ ಅವಶ್ಯಕವಾಗಿ ಬೇಕಾಗಿರುವುದು ಬುದ್ದಿವಂತರಿಗಿಂತ ಹೆಚ್ಚಾಗಿ ಹೃದಯವಂತರು….

ಅನಕ್ಷರಸ್ಥರ ಬುದ್ದಿವಂತಿಕೆ ಪ್ರಶ್ನಿಸುವವರು ಅಕ್ಷರಸ್ಥರ ಮಾನವೀಯತೆಯನ್ನು ಪ್ರಶ್ನಿಸಬೇಕಲ್ಲವೇ……..

……ಒಂದು ಎಕ್ಸ್ ತುಣುಕು …

ಅಕ್ಷರ ಕಲಿಕೆ ಒಂದು ನೈಪುಣ್ಯ ಅಥವಾ ಸುಲಭವಾಗಿ ಮಾಹಿತಿ ತಿಳಿಯುವ ಒಂದು ವಿಧಾನ ಅಥವಾ ಜೀವನ ಕೌಶಲ್ಯದ ಸಾಧನವೇ ಹೊರತು ಅದೇ ಜ್ಞಾನವಲ್ಲ, ಅರಿವಲ್ಲ, ಮೌಲ್ಯವಲ್ಲ, ಬದುಕಲ್ಲ….

ಅಕ್ಷರ ಕಲಿಕೆ ಎಂಬುದು ಅಡುಗೆ ಮಾಡುವ, ಹೊಲಿಗೆ ಮಾಡುವ, ವಾಹನ ಚಾಲನೆ ಮಾಡುವ, ಮನೆ ಕಟ್ಟುವ, ಭೇಟೆಯಾಡುವ ರೀತಿಯ ಒಂದು ಕೌಶಲವೇ ಹೊರತು ಅದು ಎಲ್ಲವನ್ನೂ ಒಳಗೊಂಡ ವಿಶೇಷ ಅತಿಮಾನುಷ ಶಕ್ತಿಯೇನು ಅಲ್ಲ…..

ಅಕ್ಷರ ಕಲಿಯದೆಯೂ ವ್ಯಕ್ತಿತ್ವವಿದೆ, ಜ್ಞಾನವಿದೆ, ನಾಗರೀಕತೆಯಿದೆ ಬದುಕಿದೆ,
ಹಾಗೆಯೇ ಅಕ್ಷರ ಕಲಿತೂ ಅಜ಼್ಞಾನವಿದೆ, ಮೋಸವಿದೆ, ಅಮಾನವೀಯತೆಯಿದೆ, ಅನಾಗರಿಕತೆ ಇದೆ……

ಅಕ್ಷರಸ್ಥರ ಈಗಿನ ಮೋಸ, ವಂಚನೆ, ದುಷ್ಟತನ, ಭ್ರಷ್ಟಾಚಾರ, ಜಾತಿವಾದ, ಶೋಷಣೆ, ಅಪನಂಬಿಕೆ ಎಲ್ಲವನ್ನೂ ಗಮನಿಸಿದಾಗ ಅನಕ್ಷರಸ್ಥರ ಕೈ, ಬಾಯಿ, ಮೆದುಳು, ಮನಸ್ಸು, ಹೃದಯ, ನಾಲಿಗೆ, ನಂಬಿಕೆ, ವ್ಯವಹಾರ, ಆ ಮುಗ್ಧತೆ ಮತ್ತು ಆ ಶುದ್ಧತೆಯ ಮಹತ್ವ ನಮಗೆ ಅರಿವಾಗುತ್ತದೆ….

ನ್ಯಾಯಾಂಗ, ಕಾರ್ಯಾಂಗ, ಶಾಸಕಾಂಗ, ಪತ್ರಿಕಾರಂಗ, ಧರ್ಮಾಂಗ, ಶಿಕ್ಷಕರು, ಪೋಲೀಸರು, ವಕೀಲರು ಎಲ್ಲವನ್ನೂ ಬಹುತೇಕ ಅಕ್ಷರಸ್ಥರೇ ನಿರ್ವಹಿಸುವಾಗಲೂ ಇಡೀ ವ್ಯವಸ್ಥೆ ಸರಿಪಡಿಸಲಾಗದಷ್ಟು ಹದಗೆಟ್ಟಿದೆ. ಎಲ್ಲಾ ಸ್ವಾತಂತ್ರ್ಯ ಇರುವಾಗಲು ಮನಸ್ಸುಗಳು ಗುಲಾಮಿತನದತ್ತ ಅಥವಾ ಜೀತ ಪದ್ಧತಿಯತ್ತ ಸಾಗುತ್ತಿವೆ…..

ಕೊಲೆಗಡುಕರು, ಅತ್ಯಾಚಾರಿಗಳು, ಭ್ರಷ್ಟರು, ಧರ್ಮಾಂಧರು, ಜಾತಿವಾದಿಗಳು, ವಂಶಾಡಳಿತದ ಒಂದೇ ಕುಟುಂಬದವರು, ಜೈಲಿನ ಕಂಬಿ ಎಣಿಸಿದವರು, ಗಡೀಪಾರಾದವರು ಹೀಗೆ ನೀಚಾತಿನೀಚರನ್ನು ಗುಪ್ತ ಮತದಾನದ ಮೂಲಕ ನಮ್ಮ ಜನಪ್ರತಿನಿಧಿಗಳಾಗಿ ಆಯ್ಕೆ ಮಾಡುವವರು ಸಹ ಬಹುತೇಕ ಅಕ್ಷರಸ್ಥರೇ ಎಂಬುದನ್ನು ಹೇಗೆ ಮರೆಯುವುದು…..

ಅನಕ್ಷರಸ್ಥರ ಕ್ರೌರ್ಯ ಮತ್ತು ತಪ್ಪುಗಳು ಅವರ ಅಜ್ಞಾನದಿಂದ, ತಪ್ಪು ತಿಳಿವಳಿಕೆಯಿಂದ, ಸಂಪರ್ಕದ ಕೊರತೆಯಿಂದ, ಸಹಜ ಸಂಪ್ರದಾಯಗಳ ಒತ್ತಡದಿಂದ ಘಟಿಸಿದರೆ ಅಕ್ಷರಸ್ಥರ ಕ್ರಿಮಿನಲ್ ಚಟುವಟಿಕೆಗಳು ಉದ್ದೇಶಪೂರ್ವಕವಾಗಿ, ಅತಿ ಸ್ವಾರ್ಥದಿಂದ ಅರಿವಿನ ಅಂಚಿನಲ್ಲಿಯೇ ಸಂಭವಿಸುತ್ತವೆ…..

ಪೋಲೀಸ್ ಸ್ಟೇಷನ್ ಅಥವಾ ನ್ಯಾಯಾಲಯದಲ್ಲಿ ದಾಖಲಾಗಿರುವ ಶೇಕಡಾ 90% ರಷ್ಟು ಮೊಕದ್ದಮೆಗಳಲ್ಲಿ ವಾದಿ ಅಥವಾ ಪ್ರತಿವಾದಿಗಳು ಅಕ್ಷರಸ್ಥ ವಂಚಕರೇ ಆಗಿರುತ್ತಾರೆ. ದುರುದ್ದೇಶವೇ ಅದರ ಮೂಲ ಕಾರಣವಾಗಿರುತ್ತದೆ…..

ಹೆಬ್ಬೆಟ್ಟು ಅಥವಾ ಅನಕ್ಷರಸ್ಥ ಎಂದು ಮೂದಲಿಸಿದರೆ ಅಕ್ಷರ ಸಂಶೋಧನೆಯ ಹಿಂದಿನ, ಅಕ್ಷರ ಕಲಿಯದ ಇಂದಿನ ಇಡೀ ಜನಾಂಗ ಅಥವಾ ಸಮುದಾಯಗಳನ್ನೇ ಅಗೌರವಿಸಿದಂತೆ ಆಗುತ್ತದೆ…..

ಅನಕ್ಷರಸ್ಥರಿಗೆ ಮಾಹಿತಿಯ ಕೊರತೆ ಇರಬಹುದು ಅಥವಾ ತಂತ್ರಜ್ಞಾನದ ಕೊರತೆ ಇರಬಹುದು. ಆದರೆ ಮಾನವೀಯತೆಯ ಕೊರತೆ ಇರುವುದಿಲ್ಲ. ಜ್ಞಾನದ ಕೊರತೆ ಇರುವುದಿಲ್ಲ. ಭತ್ತ, ರಾಗಿ, ಜೋಳ, ಹಣ್ಣು, ತರಕಾರಿ, ಬೇಳೆಕಾಳುಗಳು, ಹೈನುಗಾರಿಕೆ, ಕೌಟುಂಬಿಕ ವ್ಯವಸ್ಥೆ, ಗೌರವ, ಅಭಿಮಾನ, ಭಕ್ತಿ, ಧೈರ್ಯ ಎಲ್ಲವೂ, ಎಲ್ಲಾ ರೀತಿಯ ಅನುಭಾವಿಕ ವಿಜ್ಞಾನಿಗಳು ರೂಪಗೊಂಡಿದ್ದೇ ಅನಕ್ಷರಸ್ಥರಿಂದ……

ಹಾಗೆಂದು ಅನಕ್ಷರತೆಯನ್ನು ಬೆಂಬಲಿಸುತ್ತಿಲ್ಲ. ಈಗಿನ ಕಾಲಕ್ಕೆ ಎಲ್ಲರೂ ಅಕ್ಷರಸ್ಥರು ಆಗಲೇ ಬೇಕು. ಅದಕ್ಕೆ ಸಂಪೂರ್ಣ ಬೆಂಬಲವಿದೆ. ಆದರೆ ಅನಕ್ಷರಸ್ಥರು ದಡ್ಡರು – ಮೂರ್ಖರು, ವಿವೇಚನೆ ಇಲ್ಲದವರು ಎಂಬ ಟೀಕೆ ದುರಹಂಕಾರದ ಮಾತಾಗುತ್ತದೆ…..

ಪ್ರಕೃತಿಯ ಸಹಜ ಬದುಕು ಅಕ್ಷರಗಳ ಮೇಲೆ ನಿಂತಿಲ್ಲ. ಅದು ಅನಿವಾರ್ಯವೂ ಅಲ್ಲ. ಬದುಕು ನಿಂತಿರುವುದು ಜೀವಪರ ನಿಲುವಿನ ಮೇಲೆ ಮತ್ತು ಮಾನವೀಯ ಧರ್ಮದ ಮೇಲೆ ಮಾತ್ರ…..

ಇಂದಿನ ಆಧುನಿಕ ಸಮಾಜಕ್ಕೆ ಅತಿ ಅವಶ್ಯಕವಾಗಿ ಬೇಕಾಗಿರುವುದು ಬುದ್ದಿವಂತರಿಗಿಂತ ಹೆಚ್ಚಾಗಿ ಹೃದಯವಂತರು……..

ಪ್ರಬುದ್ಧ ಮನಸ್ಸು ಪ್ರಬುದ್ಧ ‌ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ – ಮನೆಗಳಲ್ಲಿ – ಮತಗಳಲ್ಲಿ – ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ-ವಿವೇಕಾನಂದ‌. ಎಚ್.ಕೆ

Ramesh Babu

Journalist

Recent Posts

ವೃದ್ಧ ದಂಪತಿ ಆತ್ನಹತ್ಯೆಗೆ ಯತ್ನ: ಪತಿ ಶಿವಪ್ಪ ಸಾವು

ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…

1 hour ago

ಗ್ರಾಹಕರ ಸೋಗಿನಲ್ಲಿ ಬಂದು ಜ್ಯುವೆಲ್ಲರಿ ಅಂಗಡಿಯಲ್ಲಿ ದರೋಡೆ ಯತ್ನ

ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…

2 hours ago

ಗ್ಯಾಸ್ ಸೋರಿಕೆಯಿಂದ ಬೆಂಕಿ ಅವಘಡ: ಇಬ್ಬರು ಯುವಕರಿಗೆ ಸುಟ್ಟ ಗಾಯ

ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…

11 hours ago

ಬರ ವೀಕ್ಷಣೆ ನಡೆಸಿದ ಸಚಿವ ಕೆ.ಎಚ್ ಮುನಿಯಪ್ಪ: ಬೆಳೆ ವಿಮೆ ಮಾಡಿಸಲು ರೈತರಲ್ಲಿ ಮನವಿ

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

1 day ago

28ಕ್ಕೂ ಹೆಚ್ಚು ಜಿಲ್ಲೆಗಳು ಬರದ ಸಂಕಷ್ಟದಲ್ಲಿ; ರೈತರಿಗೆ ತಕ್ಷಣ ₹10 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…

2 days ago

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

2 days ago