ಕೊಡಗಿನಲ್ಲಿ ಪರಿಸರ ಮಾಲಿನ್ಯ ಹೆಚ್ಚಾಗುತ್ತಿದೆ. ಪ್ರವಾಸಿಗರು, ಸ್ಥಳೀಯರು, ಸಾರ್ವಜನಿಕರು ಸೇರಿದಂತೆ ಬಹುತೇಕರು ತ್ಯಾಜ್ಯವನ್ನು ವಿಲೇವಾರಿ ಮಾಡಲು ಅರಣ್ಯ ಪ್ರದೇಶವನ್ನು ಅವಲಂಬಿಸಿರುವುದು ಸಹಜವಾಗಿದೆ.
ಇದೀಗ ಸರ್ಕಾರ ಕೋಟ್ಯಂತರ ರೂಪಾಯಿ ಖರ್ಚು ಮಾಡಿ ಆನೆ ಕಂದಕವನ್ನು ನಿರ್ಮಿಸಿದ್ದು, ಇದೀಗ ಈ ಕಂದಕಗಳೆಲ್ಲವೂ ಕೂಡ ತ್ಯಾಜ್ಯ ವಿಲೇವಾರಿ ಕೇಂದ್ರವಾಗಿ ಮಾರ್ಪಟ್ಟಿದೆ. ಮಾಲ್ದರೆಯ ಅರಣ್ಯದಲ್ಲಿ ಆನೆ ಕಂದಕವನ್ನೇ ಕಸದ ತೊಟ್ಟಿ ಮಾಡಿ ವನ್ಯ ಸಂಕುಲವನ್ನು ನಾಶ ಮಾಡುತ್ತಿರುವ ಕಿಡಿಗೇಡಿಗಳು. ಅರಣ್ಯ ಇಲಾಖೆ ಸಿ.ಸಿ.ಟಿ.ವಿ ಅಳವಡಿಸಿ ಇಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತಾಗಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.
ಕೊಡಗಿನಲ್ಲಿ ತ್ಯಾಜ್ಯವಿಲೇವಾರಿಗೆ ಸೂಕ್ತವಾದ ಕೇಂದ್ರವಿಲ್ಲದೆ ಮೈಸೂರು ಮತ್ತು ಬೇರೆ ಜಿಲ್ಲೆಗಳಲ್ಲಿ ಆಧುನಿಕ ತಂತ್ರಜ್ಞಾನದ ವಿವಿಧ ಕಸಗಳನ್ನು ನಿರ್ಮೂಲನೆ ಮಾಡುವ ಘಟಕಗಳು ಇವೆ. ಜಿಲ್ಲೆಯಲ್ಲಿ ಇದುವರೆಗೂ ಕೂಡ ಇದನ್ನು ಆರಂಭಿಸುವ ಸಾಹಸ ಸರ್ಕಾರವಾಗಲಿ ಅಥವಾ ಖಾಸಗಿ ಸಂಸ್ಥೆಯವರಾಗಲಿ ಮಾಡದಿರುವುದೇ ಎಲ್ಲ ಸಮಸ್ಯೆಗೆ ಮೂಲ ಕಾರಣವಾಗಿದೆ ಎನ್ನಲಾಗಿದೆ.
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…