ಆನೇಕಲ್ ನಲ್ಲಿ ಮತ್ತೆ  ಪೊಲೀಸ್ ಗನ್ ಸದ್ದು: ರೌಡಿ ಶೀಟರ್ ವೆಂಕಟರಾಜು ಕಾಲಿಗೆ ಗುಂಡು ಹಾರಿಸಿ ಬಂಧನ

ಆನೇಕಲ್ ನಲ್ಲಿ ಮತ್ತೆ  ಪೊಲೀಸ್ ಗನ್ ಸದ್ದು ಮಾಡಿದೆ.‌ ರೌಡಿ ಶೀಟರ್ ವೆಂಕಟರಾಜು@ತುಕಡಿಯ ಕಾಲಿಗೆ ಜಿಗಣಿ ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದಾರೆ.

ಜಿಗಣಿ ಠಾಣಾ ಇನ್ಸ್ಪೆಕ್ಟರ್ ಮಂಜುನಾಥ್ ಅವರು ರೌಡಿ ಶೀಟರ್ ತುಕಡಿ ಕಾಲಿಗೆ ಗುಂಡೇಟು ಹೊಡೆದು ಬಂಧಿಸಿದ್ದಾರೆ.

ಇಂದು ಸಂಜೆ ರಾಗಿಹಳ್ಳಿ ಬಳಿ ಬಂಧನಕ್ಕೆ ತೆರಳಿದ್ದ ಜಿಗಣಿ ‌ಪೊಲೀಸ್ ಸಿಬ್ಬಂದಿ ಮೇಲೆ ರೌಡಿ ಶೀಟರ್ ವೆಂಕಟರಾಜು@ತುಕಡಿ ಮಾರಕಾಸ್ತ್ರಗಳಿಂದ ದಾಳಿಗೆ ಯತ್ನ ನಡೆಸಿದ್ದ. ಈ ವೇಳೆ ಗಾಳಿಯಲ್ಲಿ ಎರಡು ಸುತ್ತು ಗುಂಡು ಹಾರಿಸಿ ಶರಣಾಗುಂತೆ ವಾರ್ನಿಂಗ್ ಮಾಡಲಾಗಿತ್ತು, ಆದರೆ ಪೊಲೀಸರ ಮಾತು ಕೇಳದೆ ಇದ್ದಾಗ ಆತ್ಮರಕ್ಷಣೆಗಾಗಿ ರೌಡಿಶೀಟರ್ ಕಾಲಿಗೆ ಗುಂಡು ಹಾರಿಸಿದ್ದಾರೆ.

ಕಳೆದ ಎರಡು ತಿಂಗಳ ಹಿಂದೆ ಈ ರೌಡಿ ಶೀಟರ್ ಶೆಟ್ಟಿಹಳ್ಳಿ ಬಳಿ ಕೊಲೆ ಯತ್ನ ನಡೆಸಿದ್ದ. ಅತ್ತಿಬೆಲೆ ಪೊಲೀಸ್ ಠಾಣೆಯಲ್ಲಿ 307 ಪ್ರಕರಣ ದಾಖಲಾಗಿತ್ತು. ಅಂದಿನಿಂದ ಪೊಲೀಸರು ಆರೋಪಿ ಬಂಧನಕ್ಕೆ ಬಲೆ ಬೀಸಿದ್ದರು. ಕೊಲೆ, ಕೊಲೆ ಯತ್ನ ಪ್ರಕರಣಗಳಲ್ಲಿ ಬೇಕಾಗಿದ್ದ ಈ ರೌಡಿ ಶೀಟರ್.

ಹತ್ತಕ್ಕೂ ಹೆಚ್ಚು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದ. ಹಲವು ದಿನಗಳಿಂದ ತಲೆಮರೆಸಿಕೊಂಡಿದ್ದನು. ಇಂದು ಕಾಲಿಗೆ ಗುಂಡು ಹಾರಿಸಿ ಬಂಧಿಸಲಾಗಿದೆ.

Ramesh Babu

Journalist

Recent Posts

ಮುಂಗಾರು ಪೂರ್ವ ಮಳೆ: ಮಳೆಯಲ್ಲಿ ಸಾಲುಗಟ್ಟಿ ನಿಂತ ರಾಗಿ‌ ಮಾರಾಟ ಮಾಡಲು ಬಂದ ಟ್ರ್ಯಾಕ್ಟರ್ ಗಳು

ಇಂದು ಸಂಜೆ ಸುಮಾರು 4:30ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪ್ರಾರಂಭವಾದ ಮಳೆಯು ಸತತವಾಗಿ 7ಗಂಟೆಯವರೆಗೆ ಬಿದ್ದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿತು. ಅದೇರೀತಿ…

2 hours ago

ರಣ ಬಿಸಿಲಿನಿಂದ ಕಂಗೆಟ್ಟಿದ್ದ ಜನ: ಧರೆಗಿಳಿದ ವರ್ಷದ ಮೊದಲ ಮಳೆ: ಬಿಸಿಲಿನ ಬೇಗೆಗೆ ಬೆಂದಿದ್ದ ಭೂಮಿ ತಂಪು ತಂಪು: ಗುಡುಗು ಸಹಿತ ಬಿದ್ದ ಮಳೆ ಹನಿಗೆ ಜನ ಫುಲ್ ಖುಷ್

ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರದ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿಯಿತು. ಬಂಗಾಳ…

3 hours ago

ನಾಳೆ (ಮಾ.18) ಎಸ್.ಎಸ್.ಎಲ್.ಸಿ ಪರೀಕ್ಷೆ -01: ಬೆಂ. ಗ್ರಾ ಜಿಲ್ಲೆಯಲ್ಲಿ 14,314 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…

4 hours ago

ನೂತನ ಶಾಲಾ ಕಟ್ಟಡ ಮತ್ತು ಅಂಗನವಾಡಿ ಕೇಂದ್ರ ಉದ್ಘಾಟನೆ

ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್‌ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ…

11 hours ago

ಮೂಡಬಿದ್ರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿಜಿ ಕಾಮಕಾಂಡ ಬಯಲು: ದೂರು ನೀಡಲು ಬಂದ ಮಹಿಳೆಯನ್ನೇ ಲೈಂಗಿಕವಾಗಿ ಬಳಸಿಕೊಳ್ಳಲು ಸಂಚು: ಸಂತ್ರಸ್ತೆಯ ಅಪ್ರಾಪ್ತ ಮಗಳಿಗೂ ಇನ್ಸ್‌ಪೆಕ್ಟರ್ ಬೆದರಿಕೆ ಆರೋಪ

ಕಾನೂನು ರಕ್ಷಕನೇ ಭಕ್ಷಕನಾದರೆ ಸಾಮಾನ್ಯ ಜನರ ಗತಿ ಏನು? ದೂರು ನೀಡಲು ಬಂದವರನ್ನೇ ಲೈಂಗಿಕವಾಗಿ ಬಳಸಿಕೊಳ್ಳುವ ಕಾಮುಕ ಪೊಲೀಸ್ ಅಧಿಕಾರಿಯೊಬ್ಬನ…

12 hours ago

ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆ: ಮುಗಿಲು ಮುಟ್ಟಿದ ಕುಟುಂಬಸ್ಥರ ಅಳಲು

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಅಲಸಹಳ್ಳಿ ಗೇಟ್ ಸಮೀಪದ ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನೊಬ್ಬನ ಶವ…

12 hours ago