ಆನೇಕಲ್ ನಲ್ಲಿ ಮತ್ತೆ ಪೊಲೀಸ್ ಗನ್ ಸದ್ದು ಮಾಡಿದೆ. ರೌಡಿ ಶೀಟರ್ ವೆಂಕಟರಾಜು@ತುಕಡಿಯ ಕಾಲಿಗೆ ಜಿಗಣಿ ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದಾರೆ.
ಜಿಗಣಿ ಠಾಣಾ ಇನ್ಸ್ಪೆಕ್ಟರ್ ಮಂಜುನಾಥ್ ಅವರು ರೌಡಿ ಶೀಟರ್ ತುಕಡಿ ಕಾಲಿಗೆ ಗುಂಡೇಟು ಹೊಡೆದು ಬಂಧಿಸಿದ್ದಾರೆ.
ಇಂದು ಸಂಜೆ ರಾಗಿಹಳ್ಳಿ ಬಳಿ ಬಂಧನಕ್ಕೆ ತೆರಳಿದ್ದ ಜಿಗಣಿ ಪೊಲೀಸ್ ಸಿಬ್ಬಂದಿ ಮೇಲೆ ರೌಡಿ ಶೀಟರ್ ವೆಂಕಟರಾಜು@ತುಕಡಿ ಮಾರಕಾಸ್ತ್ರಗಳಿಂದ ದಾಳಿಗೆ ಯತ್ನ ನಡೆಸಿದ್ದ. ಈ ವೇಳೆ ಗಾಳಿಯಲ್ಲಿ ಎರಡು ಸುತ್ತು ಗುಂಡು ಹಾರಿಸಿ ಶರಣಾಗುಂತೆ ವಾರ್ನಿಂಗ್ ಮಾಡಲಾಗಿತ್ತು, ಆದರೆ ಪೊಲೀಸರ ಮಾತು ಕೇಳದೆ ಇದ್ದಾಗ ಆತ್ಮರಕ್ಷಣೆಗಾಗಿ ರೌಡಿಶೀಟರ್ ಕಾಲಿಗೆ ಗುಂಡು ಹಾರಿಸಿದ್ದಾರೆ.
ಕಳೆದ ಎರಡು ತಿಂಗಳ ಹಿಂದೆ ಈ ರೌಡಿ ಶೀಟರ್ ಶೆಟ್ಟಿಹಳ್ಳಿ ಬಳಿ ಕೊಲೆ ಯತ್ನ ನಡೆಸಿದ್ದ. ಅತ್ತಿಬೆಲೆ ಪೊಲೀಸ್ ಠಾಣೆಯಲ್ಲಿ 307 ಪ್ರಕರಣ ದಾಖಲಾಗಿತ್ತು. ಅಂದಿನಿಂದ ಪೊಲೀಸರು ಆರೋಪಿ ಬಂಧನಕ್ಕೆ ಬಲೆ ಬೀಸಿದ್ದರು. ಕೊಲೆ, ಕೊಲೆ ಯತ್ನ ಪ್ರಕರಣಗಳಲ್ಲಿ ಬೇಕಾಗಿದ್ದ ಈ ರೌಡಿ ಶೀಟರ್.
ಹತ್ತಕ್ಕೂ ಹೆಚ್ಚು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದ. ಹಲವು ದಿನಗಳಿಂದ ತಲೆಮರೆಸಿಕೊಂಡಿದ್ದನು. ಇಂದು ಕಾಲಿಗೆ ಗುಂಡು ಹಾರಿಸಿ ಬಂಧಿಸಲಾಗಿದೆ.
ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್ಆರ್ಟಿಸಿ ಬಸ್ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…
ದೊಡ್ಡಬಳ್ಳಾಪುರ: ಗೌರಿ ಗಣೇಶ ಹಬ್ಬದ ಸಂಭ್ರಮ ನಾಡಿನಾದ್ಯಂತ ಮನೆಮಾಡಿದ್ದು, ದೊಡ್ಡಬಳ್ಳಾಪುರ ನಗರದಲ್ಲೂ ಗಣೇಶೋತ್ಸವದ ಕಳೆ ಹೆಚ್ಚಾಗಿದೆ. ನಗರದ ವಿವಿಧೆಡೆ ಗಣೇಶ…
ದೊಡ್ಡಬಳ್ಳಾಪುರ: ಗಣೇಶೋತ್ಸವದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಅನುಕೂಲವಾಗುವಂತೆ ಹೊಸಹಳ್ಳಿ ಪೊಲೀಸ್ ಠಾಣೆ ವತಿಯಿಂದ ಗುಂಡಮಗೆರೆ ಕೆರೆಯಲ್ಲಿ ವಿಶೇಷ ವ್ಯವಸ್ಥೆ…
ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…
ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…