ಆನ್ಲೈನ್ ಗೇಮ್ನಲ್ಲಿ ಬರೋಬ್ಬರಿ 18 ಲಕ್ಷ ರೂ. ಹಣ ಕಳೆದುಕೊಂಡು ಯುವಕನೊಬ್ಬ ನೇಣಿಗೆ ಶರಣಾದ ಘಟನೆ ದಾವಣಗೆರೆಯಲ್ಲಿ ನಡೆದಿದೆ.
ಮೃತನನ್ನು ಸರಸ್ವತಿ ನಗರದ ಶಶಿ ಕುಮಾರ್ (25), ಎಂದು ಗುರುತಿಸಲಾಗಿದೆ.
ಮೃತ ಯುವಕ ಆನ್ಲೈನ್ ಗೇಮ್ನಲ್ಲಿ 18 ಲಕ್ಷ ರೂ. ಕಳೆದುಕೊಂಡಿದ್ದ. ಇದರಿಂದ ಮನನೊಂದು ಆನ್ಲೈನ್ ಗೇಮ್ ನಿಷೇಧಿಸುವಂತೆ ಪ್ರಧಾನಿ, ಮುಖ್ಯಮಂತ್ರಿಗಳಿಗೆ ಡಿಸಿ ಹಾಗೂ ಎಸ್ಪಿ ಮುಖಾಂತರ ಮನವಿ ಮಾಡಿಕೊಂಡಿದ್ದ.
ದೂರು ನೀಡಿದರು ಯಾವುದೇ ಕ್ರಮವಾಗದ ಹಿನ್ನಲೆ ಸೆಲ್ಫಿ ವಿಡಿಯೋ ಮಾಡಿ ಯುವಕ ನೋವು ತೋಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.
ಡೆತ್ನೋಟ್ನಲ್ಲಿ ಗೇಮ್ನ ಅಕ್ರಮದ ಬಗ್ಗೆ ಯುವಕ ಅನಾವರಣ ಮಾಡಿದ್ದಾನೆ. ಅದರಲ್ಲಿ, ಸಂಸದೆ ಪ್ರಭಾ ಮಲ್ಲಿಕಾರ್ಜುನ್ ಅವರ ಹೆಸರು ಪ್ರಸ್ತಾಪ ಮಾಡಿ, ಕ್ರಮಕೈಗೊಳ್ಳುವಂತೆ ಮನವಿ ಮಾಡಿದ್ದಾನೆ. ನನ್ನಂತೆ ಹಣ ಕಳೆದುಕೊಂಡು ನೋವು ಅನುಭವಿಸುವುದು ಕಡಿಮೆಯಾಗಲಿ ಎಂದು ವಿಡಿಯೋದಲ್ಲಿ ಹೇಳಿಕೊಂಡಿದ್ದಾನೆ.
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…