ಆನ್ಲೈನ್ ಗೇಮ್ನಲ್ಲಿ ಬರೋಬ್ಬರಿ 18 ಲಕ್ಷ ರೂ. ಹಣ ಕಳೆದುಕೊಂಡು ಯುವಕನೊಬ್ಬ ನೇಣಿಗೆ ಶರಣಾದ ಘಟನೆ ದಾವಣಗೆರೆಯಲ್ಲಿ ನಡೆದಿದೆ.
ಮೃತನನ್ನು ಸರಸ್ವತಿ ನಗರದ ಶಶಿ ಕುಮಾರ್ (25), ಎಂದು ಗುರುತಿಸಲಾಗಿದೆ.
ಮೃತ ಯುವಕ ಆನ್ಲೈನ್ ಗೇಮ್ನಲ್ಲಿ 18 ಲಕ್ಷ ರೂ. ಕಳೆದುಕೊಂಡಿದ್ದ. ಇದರಿಂದ ಮನನೊಂದು ಆನ್ಲೈನ್ ಗೇಮ್ ನಿಷೇಧಿಸುವಂತೆ ಪ್ರಧಾನಿ, ಮುಖ್ಯಮಂತ್ರಿಗಳಿಗೆ ಡಿಸಿ ಹಾಗೂ ಎಸ್ಪಿ ಮುಖಾಂತರ ಮನವಿ ಮಾಡಿಕೊಂಡಿದ್ದ.
ದೂರು ನೀಡಿದರು ಯಾವುದೇ ಕ್ರಮವಾಗದ ಹಿನ್ನಲೆ ಸೆಲ್ಫಿ ವಿಡಿಯೋ ಮಾಡಿ ಯುವಕ ನೋವು ತೋಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.
ಡೆತ್ನೋಟ್ನಲ್ಲಿ ಗೇಮ್ನ ಅಕ್ರಮದ ಬಗ್ಗೆ ಯುವಕ ಅನಾವರಣ ಮಾಡಿದ್ದಾನೆ. ಅದರಲ್ಲಿ, ಸಂಸದೆ ಪ್ರಭಾ ಮಲ್ಲಿಕಾರ್ಜುನ್ ಅವರ ಹೆಸರು ಪ್ರಸ್ತಾಪ ಮಾಡಿ, ಕ್ರಮಕೈಗೊಳ್ಳುವಂತೆ ಮನವಿ ಮಾಡಿದ್ದಾನೆ. ನನ್ನಂತೆ ಹಣ ಕಳೆದುಕೊಂಡು ನೋವು ಅನುಭವಿಸುವುದು ಕಡಿಮೆಯಾಗಲಿ ಎಂದು ವಿಡಿಯೋದಲ್ಲಿ ಹೇಳಿಕೊಂಡಿದ್ದಾನೆ.
ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…
ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…
ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…