Categories: ಕೋಲಾರ

ಆನ್ಲೈನ್ ನಕಲಿ ಚೈನ್ ಲಿಂಕ್ ಕಂಪನಿಗಳ ವಿರುದ್ದ ಕ್ರಮಕ್ಕೆ ರೈತ ಸಂಘ ಒತ್ತಾಯ

ಕೋಲಾರ: ಗ್ರಾಮೀಣ ಪ್ರದೇಶದ ರೈತ ಕೂಲಿ ಕಾರ್ಮಿಕರು ಹಾಗೂ ಯುವ ಪೀಳಿಗೆಯನ್ನು ದಾರಿ ತಪ್ಪಿಸುತ್ತಿರುವ ಆನ್ ಲೈನ್ ಹಾಗೂ ನಕಲಿ ಚೈನ್ ಲಿಂಕ್ ಬ್ಲೇಡ್ ಕಂಪನಿಗಳಿಗೆ ಕಡಿವಾಣ ಹಾಕಲು ವಿಶೇಷ ಪೊಲೀಸ್ ತಂಡ ರಚನೆ ಮಾಡಬೇಕೆಂದು ರೈತಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ ಪೊಲೀಸ್ ವರಿಷ್ಠಾಧಿಕಾರಿಗಳನ್ನು ಒತ್ತಾಯಿಸಿದರು.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿ ಮಾತನಾಡಿದ ಅವರು ಸಹಕಾರ ಬ್ಯಾಂಕ್ ಗಳಲ್ಲಿ ಸಾಲ ಸಿಗದೆ ಆರ್ಥಿಕ ತೊಂದರೆಯಲ್ಲಿರುವ ಗ್ರಾಮೀಣ ಪ್ರದೇಶದ ರೈತ ಕೂಲಿಕಾರ್ಮಿಕರು ಹಾಗೂ ಮಹಿಳೆಯರನ್ನು ಟಾರ್ಗೆಟ್ ಮಾಡಿಕೊಂಡು ತಮ್ಮ ನಯವಾದ ವಂಚನೆ ಮಾತುಗಳಿಂದ ಬಡವರನ್ನು ಮರಳು ಮಾಡಿ ಚೈನ್ ಲಿಂಕ್ ಕಂಪನಿಗಳಿಗೆ ಹಣ ಹೂಡಿಕೆ ಮಾಡಿ ದ್ವಿಗುಣಗೊಳಿಸುವ ಆಸೆ ಹುಟ್ಟಿಸಿ ಕೋಟಿಕೋಟಿ ಹಣ ಲೂಟಿ ಮಾಡಿ ನಾಪತ್ತೆಯಾಗುವ ಬ್ಲೇಡ್ ಕಂಪನಿಗಳಿಂದ ಬಡವರನ್ನು ರಕ್ಷಣೆ ಮಾಡಲು ಕರ ಪತ್ರದ ಮುಖಾಂತರ ಪೊಲೀಸ್ ಇಲಾಖೆ ಜಾಗೃತಿ ಮೂಡಿಸಬೇಕೆಂದು ಆಗ್ರಹಿಸಿದರು.

ಒಂದು ಕಡೆ ಸರ್ಕಾರಿ ಬ್ಯಾಂಕ್ ಗಳಲ್ಲಿ ಸಾಲ ಸಿಗದೆ ಖಾಸಗಿ ಮೈಕ್ರೋ ಫೈನಾನ್ಸ್ ಹಾವಳಿಗೆ ಸಿಲುಕಿ ರಾಜ್ಯಾದ್ಯಂತ ಫೈನಾನ್ಸ್ ಕಂಪನಿಗಳ ಕಿರುಕುಳಕ್ಕೆ ರಾಜ್ಯಾದ್ಯಂತ ನೂರಾರು ಜನ ಆತ್ಮಹತ್ಯೆಗಳು ನಡೆಯುತ್ತಿರುವ ಸಮಸ್ಯೆ ಗಂಭೀರವಾಗಿರುವ ಸಮಯದಲ್ಲಿ ಮತ್ತೊಂದು ಚೈನ್ ಲಿಂಕ್ ಡ್ರೀಮ್ ಡೀಲ್ ಗ್ರೂಪ್ ಹೆಸರಿನಲ್ಲಿ ಬಡ ರೈತ ಕೂಲಿಕಾರ್ಮಿಕರನ್ನು ವಂಚನೆ ಮಾಡಲು ಮುಂದಾಗಿರುವುದನ್ನು ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಿ ಮೋಸ ಹೋಗದಂತೆ ಜಾಗೃತಿ ಮೂಡಿಸಬೇಕೆಂದು ಒತ್ತಾಯಿಸಿದರು.

ರಾಜ್ಯ ಸಂಚಾಲಕ ಬಂಗವಾದಿ ನಾಗರಾಜಗೌಡ ಮಾತನಾಡಿ, ವಿದ್ಯಾಭ್ಯಾಸ ಮಾಡಿ ಕೆಲಸ ಸಿಗದ ಸಾವಿರಾರು ಯುವಕರು ತಮ್ಮ ಭವಿಷ್ಯ ರೂಪಿಸಿಕೊಳ್ಳಲಾಗದೆ ಕೆಲಸವೂ ಸಿಗದೆ ಮಾನಸಿಕವಾಗಿ ಹಿಂಸೆ ಪಡುತ್ತಿರುವ ಯುವಕರನ್ನೇ ಗುರಿಯಾಗಿಸಿಕೊಂಡು ಕೆಲವು ಆನ್ ಲೈನ್ ಜೂಜಾಟದಲ್ಲಿ ಹಣಗಳಿಸಿ ಶ್ರೀಮಂತರಾಗಿ ಎಂಬ ಜಾಹಿರಾತುಗಳಿಗೆ ಯುವ ಪೀಳಿಗೆ ಬಲಿಯಾಗುತ್ತಿದ್ದು, ಕೆಲಸವಿಲ್ಲದೆ ನಿರುದ್ಯೋಗಿಯಾಗಿರುವವರಿಗೆ ಮತ್ತೆ ಸುಲಭ ರೀತಿಯಲ್ಲಿ ಹಣ ಗಳಿಸಲು ಅನ್ಯ ಮಾರ್ಗಗಳನ್ನು ಆಯ್ಕೆ ಮಾಡಿಕೊಂಡು ಮತ್ತೆ ಸೋತು ಸಾಲಗಾರರಗಾಗಿ ಜೀವವನ್ನು ಕಳೆದುಕೊಳ್ಳುತ್ತಿದ್ದು, ಈ ವಿಚಾರವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ ಮುಂದಿನ ಭವಿಷ್ಯದ ಯುವಕರನ್ನು ರಕ್ಷಣೆ ಮಾಡಬೇಕೆಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಈಕಂಬಳ್ಳಿ ಮಂಜುನಾಥ್, ತೆರ್ನಹಳ್ಳಿ ಆಂಜಿನಪ್ಪ, ಸುಪ್ರೀಂಚಲ, ಆಲವಾಟ ಶಿವು, ರಾಜೇಂದ್ರಗೌಡ, ಶೇಖ್ ಷಫೀಉಲ್ಲಾ, ಮುನಿರಾಜು, ಹೆಬ್ಬಣಿ ಆನಂದರೆಡ್ಡಿ, ಮಂಗಸಂದ್ರ ತಿಮ್ಮಣ್ಣ, ಶಿವಾರೆಡ್ಡಿ ಮುಂತಾದವರಿದ್ದರು.

Ramesh Babu

Journalist

Recent Posts

ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು: ವಾರಸುದಾರರ ಪತ್ತೆಗೆ ರೈಲ್ವೆ ಪೊಲೀಸರ ಮನವಿ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ರೈಲ್ವೆ ಪೊಲೀಸ್ ಠಾಣೆ ವ್ಯಾಪ್ತಿಯ ಒಡ್ಡರಹಳ್ಳಿ ಮತ್ತು ಮಾಕಳೀದುರ್ಗ ರೈಲು ನಿಲ್ದಾಣಗಳ ನಡುವಿನ ಮಾಕಳಿ ಗೋಶಾಲೆ ಸಮೀಪದ…

12 hours ago

ಪತ್ನಿಯ ಶೀಲ ಶಂಕಿಸಿ ಗೃಹಿಣಿಯ ಕೊಲೆ: ಪತಿ ಬಂಧನಕ್ಕೆ ಬಲೆ

ಚಿಕ್ಕಬಳ್ಳಾಪುರ: ಪತ್ನಿಯ ಶೀಲದ ಬಗ್ಗೆ ಅನುಮಾನ ಹಾಗೂ ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದ ಕುಟುಂಬ ಕಲಹದ ಹಿನ್ನೆಲೆಯಲ್ಲಿ ಗೃಹಿಣಿಯನ್ನು ಪತಿಯೇ ಕೊಲೆ…

12 hours ago

ಕೌಟುಂಬಿಕ ಕಲಹ ಡಬಲ್ ಮರ್ಡರ್: ಅಕ್ಕ-ತಂಗಿಯ ಹತ್ಯೆ, ಆರೋಪಿ ಪೊಲೀಸರಿಗೆ ಶರಣು

ಚಿಂತಾಮಣಿ: ಕಳೆದ ಕೆಲವು ದಿನಗಳಿಂದ ನಡೆಯುತ್ತಿದ್ದ ಕೌಟುಂಬಿಕ ಕಲಹ ಕೊನೆಗೆ ಭೀಕರ ತಿರುವು ಪಡೆದು, ವ್ಯಕ್ತಿಯೊಬ್ಬ ತನ್ನ ಪತ್ನಿ ಹಾಗೂ…

12 hours ago

ಪ್ರತಿ ಲೀಟರ್ ಹಾಲಿಗೆ 10‌ ರೂ. ಪ್ರೋತ್ಸಾಹಧನ ಹೆಚ್ಚಳಕ್ಕೆ ಆಗ್ರಹ: ಜು.9ರಂದು ಸಿಎಂಗೆ ಮನವಿ ಸಲ್ಲಿಕೆ

ದೊಡ್ಡಬಳ್ಳಾಪುರ: ಹೈನುಗಾರಿಕೆಗೆ ಅಗತ್ಯವಾದ ಹಿಂಡಿ, ಬೂಸ, ಮೇವು ಸೇರಿದಂತೆ ಕಚ್ಚಾ ವಸ್ತುಗಳ ಬೆಲೆ ನಿರಂತರ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತರ ಸಂಕಷ್ಟವನ್ನು…

17 hours ago

ಜು.7 ರಂದು ಕೆಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಜು.7 ರಂದು 66/11 ಕೆವಿ ಡಿಕ್ರಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F15-Tropical Flavours ಮತ್ತು 220/66/11ಕೆವಿ…

23 hours ago

ಬ್ಲಾಕ್‌ಸ್ಪಾಟ್‌ಗಳೀಗ ಸುಂದರ ತಾಣ: ಕಸ ಸುರಿಯುತ್ತಿದ್ದ ಪ್ರದೇಶಗಳಿಗೆ ಸುಣ್ಣ ಬಣ್ಣ ಬಳಿದು ಅಲಂಕಾರ: ಹೊಸ ಪ್ರಯೋಗಕ್ಕೆ ಮುಂದಾದ ನಗರಸಭೆ

ದೊಡ್ಡಬಳ್ಳಾಪುರ ನಗರದ ರಸ್ತೆ ಬದಿ, ಖಾಲಿ ಜಾಗಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಕಸದ ರಾಶಿ ಕಾಣುವುದು ಸಾಮಾನ್ಯ ದೃಶ್ಯವಾಗಿತ್ತು. ಸ್ವಚ್ಛತಾ…

23 hours ago