Categories: ಕೋಲಾರ

ಆನ್ಲೈನ್ ನಕಲಿ ಚೈನ್ ಲಿಂಕ್ ಕಂಪನಿಗಳ ವಿರುದ್ದ ಕ್ರಮಕ್ಕೆ ರೈತ ಸಂಘ ಒತ್ತಾಯ

ಕೋಲಾರ: ಗ್ರಾಮೀಣ ಪ್ರದೇಶದ ರೈತ ಕೂಲಿ ಕಾರ್ಮಿಕರು ಹಾಗೂ ಯುವ ಪೀಳಿಗೆಯನ್ನು ದಾರಿ ತಪ್ಪಿಸುತ್ತಿರುವ ಆನ್ ಲೈನ್ ಹಾಗೂ ನಕಲಿ ಚೈನ್ ಲಿಂಕ್ ಬ್ಲೇಡ್ ಕಂಪನಿಗಳಿಗೆ ಕಡಿವಾಣ ಹಾಕಲು ವಿಶೇಷ ಪೊಲೀಸ್ ತಂಡ ರಚನೆ ಮಾಡಬೇಕೆಂದು ರೈತಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ ಪೊಲೀಸ್ ವರಿಷ್ಠಾಧಿಕಾರಿಗಳನ್ನು ಒತ್ತಾಯಿಸಿದರು.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿ ಮಾತನಾಡಿದ ಅವರು ಸಹಕಾರ ಬ್ಯಾಂಕ್ ಗಳಲ್ಲಿ ಸಾಲ ಸಿಗದೆ ಆರ್ಥಿಕ ತೊಂದರೆಯಲ್ಲಿರುವ ಗ್ರಾಮೀಣ ಪ್ರದೇಶದ ರೈತ ಕೂಲಿಕಾರ್ಮಿಕರು ಹಾಗೂ ಮಹಿಳೆಯರನ್ನು ಟಾರ್ಗೆಟ್ ಮಾಡಿಕೊಂಡು ತಮ್ಮ ನಯವಾದ ವಂಚನೆ ಮಾತುಗಳಿಂದ ಬಡವರನ್ನು ಮರಳು ಮಾಡಿ ಚೈನ್ ಲಿಂಕ್ ಕಂಪನಿಗಳಿಗೆ ಹಣ ಹೂಡಿಕೆ ಮಾಡಿ ದ್ವಿಗುಣಗೊಳಿಸುವ ಆಸೆ ಹುಟ್ಟಿಸಿ ಕೋಟಿಕೋಟಿ ಹಣ ಲೂಟಿ ಮಾಡಿ ನಾಪತ್ತೆಯಾಗುವ ಬ್ಲೇಡ್ ಕಂಪನಿಗಳಿಂದ ಬಡವರನ್ನು ರಕ್ಷಣೆ ಮಾಡಲು ಕರ ಪತ್ರದ ಮುಖಾಂತರ ಪೊಲೀಸ್ ಇಲಾಖೆ ಜಾಗೃತಿ ಮೂಡಿಸಬೇಕೆಂದು ಆಗ್ರಹಿಸಿದರು.

ಒಂದು ಕಡೆ ಸರ್ಕಾರಿ ಬ್ಯಾಂಕ್ ಗಳಲ್ಲಿ ಸಾಲ ಸಿಗದೆ ಖಾಸಗಿ ಮೈಕ್ರೋ ಫೈನಾನ್ಸ್ ಹಾವಳಿಗೆ ಸಿಲುಕಿ ರಾಜ್ಯಾದ್ಯಂತ ಫೈನಾನ್ಸ್ ಕಂಪನಿಗಳ ಕಿರುಕುಳಕ್ಕೆ ರಾಜ್ಯಾದ್ಯಂತ ನೂರಾರು ಜನ ಆತ್ಮಹತ್ಯೆಗಳು ನಡೆಯುತ್ತಿರುವ ಸಮಸ್ಯೆ ಗಂಭೀರವಾಗಿರುವ ಸಮಯದಲ್ಲಿ ಮತ್ತೊಂದು ಚೈನ್ ಲಿಂಕ್ ಡ್ರೀಮ್ ಡೀಲ್ ಗ್ರೂಪ್ ಹೆಸರಿನಲ್ಲಿ ಬಡ ರೈತ ಕೂಲಿಕಾರ್ಮಿಕರನ್ನು ವಂಚನೆ ಮಾಡಲು ಮುಂದಾಗಿರುವುದನ್ನು ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಿ ಮೋಸ ಹೋಗದಂತೆ ಜಾಗೃತಿ ಮೂಡಿಸಬೇಕೆಂದು ಒತ್ತಾಯಿಸಿದರು.

ರಾಜ್ಯ ಸಂಚಾಲಕ ಬಂಗವಾದಿ ನಾಗರಾಜಗೌಡ ಮಾತನಾಡಿ, ವಿದ್ಯಾಭ್ಯಾಸ ಮಾಡಿ ಕೆಲಸ ಸಿಗದ ಸಾವಿರಾರು ಯುವಕರು ತಮ್ಮ ಭವಿಷ್ಯ ರೂಪಿಸಿಕೊಳ್ಳಲಾಗದೆ ಕೆಲಸವೂ ಸಿಗದೆ ಮಾನಸಿಕವಾಗಿ ಹಿಂಸೆ ಪಡುತ್ತಿರುವ ಯುವಕರನ್ನೇ ಗುರಿಯಾಗಿಸಿಕೊಂಡು ಕೆಲವು ಆನ್ ಲೈನ್ ಜೂಜಾಟದಲ್ಲಿ ಹಣಗಳಿಸಿ ಶ್ರೀಮಂತರಾಗಿ ಎಂಬ ಜಾಹಿರಾತುಗಳಿಗೆ ಯುವ ಪೀಳಿಗೆ ಬಲಿಯಾಗುತ್ತಿದ್ದು, ಕೆಲಸವಿಲ್ಲದೆ ನಿರುದ್ಯೋಗಿಯಾಗಿರುವವರಿಗೆ ಮತ್ತೆ ಸುಲಭ ರೀತಿಯಲ್ಲಿ ಹಣ ಗಳಿಸಲು ಅನ್ಯ ಮಾರ್ಗಗಳನ್ನು ಆಯ್ಕೆ ಮಾಡಿಕೊಂಡು ಮತ್ತೆ ಸೋತು ಸಾಲಗಾರರಗಾಗಿ ಜೀವವನ್ನು ಕಳೆದುಕೊಳ್ಳುತ್ತಿದ್ದು, ಈ ವಿಚಾರವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ ಮುಂದಿನ ಭವಿಷ್ಯದ ಯುವಕರನ್ನು ರಕ್ಷಣೆ ಮಾಡಬೇಕೆಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಈಕಂಬಳ್ಳಿ ಮಂಜುನಾಥ್, ತೆರ್ನಹಳ್ಳಿ ಆಂಜಿನಪ್ಪ, ಸುಪ್ರೀಂಚಲ, ಆಲವಾಟ ಶಿವು, ರಾಜೇಂದ್ರಗೌಡ, ಶೇಖ್ ಷಫೀಉಲ್ಲಾ, ಮುನಿರಾಜು, ಹೆಬ್ಬಣಿ ಆನಂದರೆಡ್ಡಿ, ಮಂಗಸಂದ್ರ ತಿಮ್ಮಣ್ಣ, ಶಿವಾರೆಡ್ಡಿ ಮುಂತಾದವರಿದ್ದರು.

Ramesh Babu

Journalist

Recent Posts

ಮದುವೆ ಸಂಭ್ರಮದ ನಡುವೆ ಬೈಕ್ ಗೆ ಬೆಂಕಿ ಇಟ್ಟ ಕಿಡಿಗೇಡಿಗಳು

ಚಿಕ್ಕಬಳ್ಳಾಪುರ: ಜಿಲ್ಲೆಯ ತಾಲೂಕಿನ ಅರಸನಹಳ್ಳಿಯಲ್ಲಿ ತಡರಾತ್ರಿ ಭೀಕರ ಘಟನೆಯೊಂದು ನಡೆದಿದೆ. ಮದುವೆ ಕಾರ್ಯಕ್ರಮವಿದ್ದ ಮನೆಯ ಮುಂದೆ ನಿಲ್ಲಿಸಿದ್ದ ವಾಹನಗಳಿಗೆ ಕಿಡಿಗೇಡಿಗಳು…

1 minute ago

ಶನೇಶ್ವರ ಜಯಂತಿ ಹಾಗೂ ಅಮಾವಾಸ್ಯೆ ಹಿನ್ನೆಲೆ: ಮಧುರೆ ಶನೇಶ್ವರ ದೇವಸ್ಥಾನದಲ್ಲಿ ಅಪಾರ ಭಕ್ತಸಾಗರ

ಶನೇಶ್ವರ ಜಯಂತಿ ಹಾಗೂ ಅಮಾವಾಸ್ಯೆ ಒಂದೇ ದಿನ ಬಂದಿರುವ ಹಿನ್ನೆಲೆ ದೊಡ್ಡಬಳ್ಳಾಪುರ ತಾಲೂಕಿನ ಮಧುರೆ ಶನೇಶ್ವರ ದೇವಸ್ಥಾನದಲ್ಲಿ ಅಪಾರ ಭಕ್ತಸಾಗರ…

16 minutes ago

ಮೆಜೆಸ್ಟಿಕ್‌ನಿಂದ ಘಾಟಿ ಸುಬ್ರಮಣ್ಯಕ್ಕೆ ಬಿಎಂಟಿಸಿ ಹೊಸದಾಗಿ ನೇರ ಬಸ್‌ ಸೇವೆ ಆರಂಭ

ಬೆಂಗಳೂರು: ಬೆಂಗಳೂರು‌ ನಗರ ಹಾಗೂ ಗ್ರಾಮಾಂತರ ಭಾಗಗಳಿಗೆ ಪ್ರಯಾಣಿಸುವ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಬಿಎಂಟಿಸಿ(Bangalore Metropolitan Transport Corporation) ಮೇ 18ರಿಂದ…

11 hours ago

ಅರಣ್ಯದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಿ ಮಾನವೀಯತೆ ಮೆರೆದ ಇನ್ಸ್‌ಪೆಕ್ಟರ್ ಅಮರೇಶ್ ಗೌಡ

ದೊಡ್ಡಬಳ್ಳಾಪುರ: ತಾಲೂಕಿನ ಹೊಸಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು.…

13 hours ago

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ‌ ವಿಚಾರ: ಬೆಲೆ ಏರಿಕೆ ಹಿಂಪಡೆಯಲು ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ಒತ್ತಾಯ

ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ಬೆಲೆ ಏರಿಸಿರುವುದನ್ನು ರಾಜ್ಯ ಸರ್ಕಾರ ಖಂಡಿಸಲಿದ್ದು, ಬೆಲೆ ಏರಿಕೆಯನ್ನು ಹಿಂಪಡೆಯಲು ಒತ್ತಾಯಿಸುತ್ತೇವೆ ಎಂದು ಸಿಎಂ…

14 hours ago

ಬೆಂ ಗ್ರಾ ಜಿಲ್ಲೆಯಲ್ಲಿ 24 ಬಾಲ್ಯ ವಿವಾಹ ತಡೆ: ಜಿಲ್ಲಾಧಿಕಾರಿ ಡಾ. ಅನುರಾಧ

ಬಾಲ್ಯ ವಿವಾಹಗಳನ್ನು ತಡೆಯುವ ನಿಟ್ಟಿನಲ್ಲಿ ಅಧಿಕಾರಿಗಳು ಸದಾ ಜಾಗೃತರಾಗಿದ್ದು, ಕಳೆದ ಆರ್ಥಿಕ ವರ್ಷ ಜಿಲ್ಲೆಯಲ್ಲಿ 24 ಬಾಲ್ಯ ವಿವಾಹ ಪ್ರಕರಣಗಳನ್ನು…

14 hours ago