Categories: ಕೋಲಾರ

ಆನ್ಲೈನ್ ನಕಲಿ ಚೈನ್ ಲಿಂಕ್ ಕಂಪನಿಗಳ ವಿರುದ್ದ ಕ್ರಮಕ್ಕೆ ರೈತ ಸಂಘ ಒತ್ತಾಯ

ಕೋಲಾರ: ಗ್ರಾಮೀಣ ಪ್ರದೇಶದ ರೈತ ಕೂಲಿ ಕಾರ್ಮಿಕರು ಹಾಗೂ ಯುವ ಪೀಳಿಗೆಯನ್ನು ದಾರಿ ತಪ್ಪಿಸುತ್ತಿರುವ ಆನ್ ಲೈನ್ ಹಾಗೂ ನಕಲಿ ಚೈನ್ ಲಿಂಕ್ ಬ್ಲೇಡ್ ಕಂಪನಿಗಳಿಗೆ ಕಡಿವಾಣ ಹಾಕಲು ವಿಶೇಷ ಪೊಲೀಸ್ ತಂಡ ರಚನೆ ಮಾಡಬೇಕೆಂದು ರೈತಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ ಪೊಲೀಸ್ ವರಿಷ್ಠಾಧಿಕಾರಿಗಳನ್ನು ಒತ್ತಾಯಿಸಿದರು.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿ ಮಾತನಾಡಿದ ಅವರು ಸಹಕಾರ ಬ್ಯಾಂಕ್ ಗಳಲ್ಲಿ ಸಾಲ ಸಿಗದೆ ಆರ್ಥಿಕ ತೊಂದರೆಯಲ್ಲಿರುವ ಗ್ರಾಮೀಣ ಪ್ರದೇಶದ ರೈತ ಕೂಲಿಕಾರ್ಮಿಕರು ಹಾಗೂ ಮಹಿಳೆಯರನ್ನು ಟಾರ್ಗೆಟ್ ಮಾಡಿಕೊಂಡು ತಮ್ಮ ನಯವಾದ ವಂಚನೆ ಮಾತುಗಳಿಂದ ಬಡವರನ್ನು ಮರಳು ಮಾಡಿ ಚೈನ್ ಲಿಂಕ್ ಕಂಪನಿಗಳಿಗೆ ಹಣ ಹೂಡಿಕೆ ಮಾಡಿ ದ್ವಿಗುಣಗೊಳಿಸುವ ಆಸೆ ಹುಟ್ಟಿಸಿ ಕೋಟಿಕೋಟಿ ಹಣ ಲೂಟಿ ಮಾಡಿ ನಾಪತ್ತೆಯಾಗುವ ಬ್ಲೇಡ್ ಕಂಪನಿಗಳಿಂದ ಬಡವರನ್ನು ರಕ್ಷಣೆ ಮಾಡಲು ಕರ ಪತ್ರದ ಮುಖಾಂತರ ಪೊಲೀಸ್ ಇಲಾಖೆ ಜಾಗೃತಿ ಮೂಡಿಸಬೇಕೆಂದು ಆಗ್ರಹಿಸಿದರು.

ಒಂದು ಕಡೆ ಸರ್ಕಾರಿ ಬ್ಯಾಂಕ್ ಗಳಲ್ಲಿ ಸಾಲ ಸಿಗದೆ ಖಾಸಗಿ ಮೈಕ್ರೋ ಫೈನಾನ್ಸ್ ಹಾವಳಿಗೆ ಸಿಲುಕಿ ರಾಜ್ಯಾದ್ಯಂತ ಫೈನಾನ್ಸ್ ಕಂಪನಿಗಳ ಕಿರುಕುಳಕ್ಕೆ ರಾಜ್ಯಾದ್ಯಂತ ನೂರಾರು ಜನ ಆತ್ಮಹತ್ಯೆಗಳು ನಡೆಯುತ್ತಿರುವ ಸಮಸ್ಯೆ ಗಂಭೀರವಾಗಿರುವ ಸಮಯದಲ್ಲಿ ಮತ್ತೊಂದು ಚೈನ್ ಲಿಂಕ್ ಡ್ರೀಮ್ ಡೀಲ್ ಗ್ರೂಪ್ ಹೆಸರಿನಲ್ಲಿ ಬಡ ರೈತ ಕೂಲಿಕಾರ್ಮಿಕರನ್ನು ವಂಚನೆ ಮಾಡಲು ಮುಂದಾಗಿರುವುದನ್ನು ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಿ ಮೋಸ ಹೋಗದಂತೆ ಜಾಗೃತಿ ಮೂಡಿಸಬೇಕೆಂದು ಒತ್ತಾಯಿಸಿದರು.

ರಾಜ್ಯ ಸಂಚಾಲಕ ಬಂಗವಾದಿ ನಾಗರಾಜಗೌಡ ಮಾತನಾಡಿ, ವಿದ್ಯಾಭ್ಯಾಸ ಮಾಡಿ ಕೆಲಸ ಸಿಗದ ಸಾವಿರಾರು ಯುವಕರು ತಮ್ಮ ಭವಿಷ್ಯ ರೂಪಿಸಿಕೊಳ್ಳಲಾಗದೆ ಕೆಲಸವೂ ಸಿಗದೆ ಮಾನಸಿಕವಾಗಿ ಹಿಂಸೆ ಪಡುತ್ತಿರುವ ಯುವಕರನ್ನೇ ಗುರಿಯಾಗಿಸಿಕೊಂಡು ಕೆಲವು ಆನ್ ಲೈನ್ ಜೂಜಾಟದಲ್ಲಿ ಹಣಗಳಿಸಿ ಶ್ರೀಮಂತರಾಗಿ ಎಂಬ ಜಾಹಿರಾತುಗಳಿಗೆ ಯುವ ಪೀಳಿಗೆ ಬಲಿಯಾಗುತ್ತಿದ್ದು, ಕೆಲಸವಿಲ್ಲದೆ ನಿರುದ್ಯೋಗಿಯಾಗಿರುವವರಿಗೆ ಮತ್ತೆ ಸುಲಭ ರೀತಿಯಲ್ಲಿ ಹಣ ಗಳಿಸಲು ಅನ್ಯ ಮಾರ್ಗಗಳನ್ನು ಆಯ್ಕೆ ಮಾಡಿಕೊಂಡು ಮತ್ತೆ ಸೋತು ಸಾಲಗಾರರಗಾಗಿ ಜೀವವನ್ನು ಕಳೆದುಕೊಳ್ಳುತ್ತಿದ್ದು, ಈ ವಿಚಾರವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ ಮುಂದಿನ ಭವಿಷ್ಯದ ಯುವಕರನ್ನು ರಕ್ಷಣೆ ಮಾಡಬೇಕೆಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಈಕಂಬಳ್ಳಿ ಮಂಜುನಾಥ್, ತೆರ್ನಹಳ್ಳಿ ಆಂಜಿನಪ್ಪ, ಸುಪ್ರೀಂಚಲ, ಆಲವಾಟ ಶಿವು, ರಾಜೇಂದ್ರಗೌಡ, ಶೇಖ್ ಷಫೀಉಲ್ಲಾ, ಮುನಿರಾಜು, ಹೆಬ್ಬಣಿ ಆನಂದರೆಡ್ಡಿ, ಮಂಗಸಂದ್ರ ತಿಮ್ಮಣ್ಣ, ಶಿವಾರೆಡ್ಡಿ ಮುಂತಾದವರಿದ್ದರು.

Ramesh Babu

Journalist

Recent Posts

ಘಾಟಿ ಕ್ಷೇತ್ರದಲ್ಲಿ ನಾಗರ ಪಂಚಮಿ ಸಂಭ್ರಮ

ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…

9 hours ago

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

1 day ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

1 day ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

2 days ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

2 days ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

2 days ago