Categories: ವೈರಲ್

ಆನ್‌ಲೈನ್ ಪ್ರೇಮಿಯನ್ನು ಹುಡುಕುತ್ತಾ ಖಂಡಗಳನ್ನು ದಾಟಿ ಭಾರತಕ್ಕೆ ಬಂದ ಪ್ರಿಯತಮೆ

ಪ್ರೀತಿಗೆ ಕಣ್ಣಿಲ್ಲ. ಇತಿ‌ಮಿತಿ, ಎಲ್ಲೆಗಿಲ್ಲೆ, ಗಡಿಗಳಿಲ್ಲ. ಪ್ರೀತಿ ಎಂಬುದು ಜಾತಿ, ಧರ್ಮ, ಬಣ್ಣ, ಭಾಷೆ, ವಯಸ್ಸು, ಗಡಿ ಹಾಗೂ ಅಂತಸ್ತು ಎಲ್ಲವನ್ನು ಮೀರಿದ್ದು.

ತಾನು ಪ್ರೀತಿಸಿದ ಪ್ರಿಯತಮೆ ಅಥವಾ ಪ್ರಿಯಕರನನ್ನು ಮದುವೆಯಾಗಲು ದೇಶ ಬಿಟ್ಟು ಹೋಗುವವರೂ ಇದ್ದಾರೆ, ವಿದೇಶದಿಂದ ಬಂದವರೂ ಇದ್ದಾರೆ. ಪ್ರೀತಿ ಒಂದು ಮಧುರ ಭಾವನೆ. ಪ್ರೀತಿ ಎಂದರೆ ಎರಡು ಮನಸ್ಸುಗಳ ಮಿಲನ. ಪ್ರೀತಿಸಿದವರನ್ನು ಪಡೆದುಕೊಳ್ಳಲು ಕೆಲವರು ಏನು ಬೇಕಾದರೂ ಮಾಡುತ್ತಾರೆ. ಕೆಲವರು ಹಿರಿಯರ ವಿರೋಧ ಕಟ್ಟಿಕೊಂಡು ಪ್ರೇಮ ವಿವಾಹವನ್ನು ಮಾಡಿಕೊಂಡಿದ್ದಾರೆ. ಇನ್ನು ಕೆಲವರು ಎರಡೂ ಮನೆಯವರನ್ನು ಒಪ್ಪಿಸಿ, ಪ್ರೀತಿಯಲ್ಲಿ ಗೆದ್ದು ಮದುವೆಯಾಗಿರುವ ಉದಾಹರಣೆ ಕೂಡ ಇದೆ.

ಇತ್ತೀಚೀನ ತಾಜಾ ಘಟನೆಯೊಂದರಲ್ಲಿ ಅಮೆರಿಕ ಮೂಲದ ಯುವತಿ ಜಾಕ್ವೆಲಿನ್ ಫೊರೆರೊ, ಆನ್‌ಲೈನ್ ಪ್ರೇಮಿಯನ್ನು ಹುಡುಕುತ್ತಾ ಖಂಡಗಳನ್ನು ದಾಟಿ ಭಾರತದ ಆಂಧ್ರಪ್ರದೇಶಕ್ಕೆ ಬಂದಿದ್ದಾಳೆ.

ಇನ್‌ಸ್ಟಾಗ್ರಾಮ್‌ನಲ್ಲಿ ‘ಹಾಯ್’ ಎಂಬ ಶುಭಾಶಯದೊಂದಿಗೆ ಪ್ರಾರಂಭವಾದ ಇಬ್ಬರ ಸ್ನೇಹ, ಇದೀಗ ಮದುವೆಯವರೆಗೂ ಹೋಗಿದೆ. ಪ್ರೀತಿಗಾಗಿ ಏನು ಬೇಕಾದರೂ ಮಾಡುತ್ತಾರೆ ಎಂಬುದಕ್ಕೆ ಇದು ಒಂದು ಪರಿಪೂರ್ಣ ಉದಾಹರಣೆಯಾಗಿದೆ.

ಸಾವಿರಾರು ಮೈಲುಗಳಷ್ಟು ಪ್ರಯಾಣಿಸಿದ ನಂತರ, ಫೊರೆರೊ ತನ್ನ ತಾಯಿಯೊಂದಿಗೆ ಆಂಧ್ರ ಪ್ರದೇಶದ ದೂರದ ಹಳ್ಳಿಗೆ ಬಂದಿದ್ದಾರೆ. ಇದಕ್ಕೆ ಸಂಬಂಧಿಸಿದ ದೃಶ್ಯಗಳನ್ನು ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಪೊರೆರೊ ಹಂಚಿಕೊಂಡಿದ್ದಾರೆ.

ಚಂದನ್, ಆಂಧ್ರ ಪ್ರದೇಶದ ಹಳ್ಳಿಯ ಯುವಕ. ಆತ ಛಾಯಾಗ್ರಾಹಕನಾಗಿ ಕೆಲಸ ಮಾಡುತ್ತಿದ್ದಾನೆ.  ಇನ್‌ಸ್ಟಾಗ್ರಾಮ್‌ನಲ್ಲಿ ಚಂದನ್‌ನ ಪ್ರೊಫೈಲ್ ನೋಡಿದ ನಂತರ ಫೊರೆರೊ ಆತನನ್ನು ಪ್ರೀತಿಸಲು ಶುರು ಮಾಡಿದಳು.

ಮೊದಲು ಹಾಯ್ ಎಂದು ಮೆಸೇಜ್ ಕಳುಹಿಸಿದ್ದೇ ಆಕೆ. ಹಾಗೆ ಪ್ರಾರಂಭವಾದ ಸಂಭಾಷಣೆ ಇಬ್ಬರನ್ನು ಪ್ರೀತಿಯಲ್ಲಿ ಸಿಲುಕಿತು. ಶೀಘ್ರದಲ್ಲೇ, ಇಬ್ಬರೂ ಮದುವೆಯಾಗಲು ನಿರ್ಧರಿಸಿದ್ದಾರೆ. 14 ತಿಂಗಳ ನಂತರ, ಹೊಸ ಅಧ್ಯಾಯಕ್ಕೆ ಸಿದ್ಧರಾಗುತ್ತಿದ್ದೇವೆ ಎಂದು ಹೇಳಿದ್ದಾರೆ. ಚಂದನ್ ಅವರ ಆಸಕ್ತಿಗಳು ಅವಳನ್ನು ಆಕರ್ಷಿಸಿವೆ ಎಂದು ಫೊರೆರೊ ತಿಳಿಸಿದ್ದಾರೆ.

8 ತಿಂಗಳ ಆನ್‌ಲೈನ್ ಡೇಟಿಂಗ್ ನಂತರ ನಾನು ಚಂದನ್ ಅವರನ್ನು ಮದುವೆಯಾಗಲು ನನ್ನ ತಾಯಿ ಒಪ್ಪಿಕೊಂಡಿದ್ದಾರೆ ಎಂದು ಪೊರೆರೊ ಹೇಳಿದ್ದಾರೆ. ಜೀವನ ಸಂಗಾತಿಯನ್ನು ಹುಡುಕುತ್ತಾ ತನ್ನ ತಾಯಿಯೊಂದಿಗೆ ಭಾರತಕ್ಕೆ ಬಂದಿದ್ದೇನೆ. ಚಂದನ್ ವೀಸಾ ಪಡೆಯಲು ನಾವು ಪ್ರಯತ್ನಿಸುತ್ತಿದ್ದೇವೆ ಮತ್ತು ಇಬ್ಬರೂ ಅಮೆರಿಕದಲ್ಲಿ ಹೊಸ ಜೀವನವನ್ನು ಪ್ರಾರಂಭಿಸುತ್ತೇವೆ ಎಂದು ಫೊರೆರೊ ಹೇಳಿದ್ದಾರೆ. ಇದೇ ಸಂದರ್ಭದಲ್ಲಿ ಆನ್‌ಲೈನ್ ಪ್ರಿಯರಿಗೆ ನೆಟ್ಟಿಗರು ಬೆಂಬಲ ವ್ಯಕ್ತಪಡಿಸಿದ್ದಾರೆ. ಇಬ್ಬರಿಗೂ ಸಂತೋಷ ಮತ್ತು ಆರೋಗ್ಯಕರ ಜೀವನ ಸಿಗಲೆಂದು ಹಾರೈಸುತ್ತಿದ್ದಾರೆ.

Ramesh Babu

Journalist

Share
Published by
Ramesh Babu

Recent Posts

ಪ್ರತಿಭಟನೆ – ಮುಷ್ಕರ – ಮುತ್ತಿಗೆ – ಚಳವಳಿ – ಬಂದ್ – ಸತ್ಯಾಗ್ರಹ – ಹರತಾಳ – ಅಮರಣಾಂತ ಉಪವಾಸ – ಜೈಲ್ ಭರೋ ..

ಪ್ರತಿಭಟನೆ - ಮುಷ್ಕರ - ಮುತ್ತಿಗೆ - ಚಳವಳಿ - ಬಂದ್ - ಸತ್ಯಾಗ್ರಹ - ಹರತಾಳ - ಅಮರಣಾಂತ…

6 hours ago

ಕೆ.ಜಿ.ಹಳ್ಳಿ ಮೂಲಸೌಕರ್ಯ ಸಮಸ್ಯೆಗಳ ಪರಿಹಾರಕ್ಕೆ ಇಂಧನ ಸಚಿವ ಕೆ.ಜೆ.ಜಾರ್ಜ್ ಸೂಚನೆ

‘ಪ್ರಜಾಪ್ರಭುತ್ವದಲ್ಲಿ ಜನರೇ ಪ್ರಭುಗಳು. ಅವರು ಕೇಳಿದ ಕೆಲಸ ಮಾಡಿಕೊಡಬೇಕು, ವಿಳಂಬ ಮಾಡಬೇಡಿ’ ಎಂದು ಇಂಧನ ಸಚಿವ ಹಾಗೂ ಸರ್ವಜ್ಞ ನಗರ…

17 hours ago

ಯೂರಿಯಾ ಅಕ್ರಮ ದಾಸ್ತಾನು ಗೋದಾಮುಗಳ ಮೇಲೆ ಕೃಷಿ ಇಲಾಖೆ ಅಧಿಕಾರಿಗಳ ದಾಳಿ…18 ಲಕ್ಷ ಮೌಲ್ಯದ ಗೊಬ್ಬರ ವಶ..1296 ಮೂಟೆ ಯೂರಿಯಾ ವಶ…

ಅಕ್ರಮವಾಗಿ ರಸಗೊಬ್ಬರ ದಾಸ್ತಾನು ಮಾಡಲಾಗಿದ್ದ ಗೋದಾಮುಗಳ ಮೇಲೆ ಕೃಷಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ 18 ಲಕ್ಷ ಮೌಲ್ಯದ 1296…

17 hours ago

ಖಾಸಗಿ‌ ಕಂಪನಿ ಅವರಣದಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಅಸ್ಥಿಪಂಜರ ಪತ್ತೆ

ಹೊಂಗೆ ಮರದಲ್ಲಿ ನೇತಾಡುತ್ತಿರುವ ಸ್ಥಿತಿಯಲ್ಲಿ ತಲೆ ಬುರುಡೆ ಪತ್ತೆಯಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಬ್ಯಾಂಕ್ ಸರ್ಕಲ್…

22 hours ago

ಲಾರಿ ಪಲ್ಟಿ, ರಸ್ತೆಗೆ ಚೆಲ್ಲಿದ ಡೀಸೆಲ್: 112 ಸಿಬ್ಬಂದಿ ಸಮಯಪ್ರಜ್ಞೆಗೆ ಶ್ಲಾಘನೆ

ಸಿದ್ದಾಪುರ: ಪಟ್ಟಣದ ಪೊಲೀಸ್ ಠಾಣಾ ವ್ಯಾಪ್ತಿಯ ಜೋಗಿನ್ ಮಠ ಕ್ರಾಸ್ ಬಳಿ ಜಲ್ಲಿ ತುಂಬಿದ ಲಾರಿಯೊಂದು ರಸ್ತೆಗೆ ಉರುಳಿದ ಪರಿಣಾಮ,…

24 hours ago

ಹೆಂಡತಿಯ ಕೊಂ*ದು ಮನೆ ಬಳಿಯೇ ಹೂತು ಕಣ್ಮರೆ ಅಂತ ದೂರು ಕೊಟ್ಟ ಪಾಪಿ ಪತಿ…!

ದೇವರಹಿಪ್ಪರಗಿ: ‍ಪತ್ನಿಯನ್ನು ತಾನೇ ಕೊಂ*ದು ಶವವನ್ನು ಮನೆಯ ಆವರಣದಲ್ಲೇ ಹೂತುಹಾಕಿ ಆಕೆ ನಾಪತ್ತೆಯಾಗಿದ್ದಾಳೆ ಎಂದು ಕಥೆ ಕಟ್ಟಿದ್ದ ಆರೋಪಿಯನ್ನು ಬಂಧಿಸುವಲ್ಲಿ…

1 day ago