Categories: ವೈರಲ್

ಆನ್‌ಲೈನ್ ಪ್ರೇಮಿಯನ್ನು ಹುಡುಕುತ್ತಾ ಖಂಡಗಳನ್ನು ದಾಟಿ ಭಾರತಕ್ಕೆ ಬಂದ ಪ್ರಿಯತಮೆ

ಪ್ರೀತಿಗೆ ಕಣ್ಣಿಲ್ಲ. ಇತಿ‌ಮಿತಿ, ಎಲ್ಲೆಗಿಲ್ಲೆ, ಗಡಿಗಳಿಲ್ಲ. ಪ್ರೀತಿ ಎಂಬುದು ಜಾತಿ, ಧರ್ಮ, ಬಣ್ಣ, ಭಾಷೆ, ವಯಸ್ಸು, ಗಡಿ ಹಾಗೂ ಅಂತಸ್ತು ಎಲ್ಲವನ್ನು ಮೀರಿದ್ದು.

ತಾನು ಪ್ರೀತಿಸಿದ ಪ್ರಿಯತಮೆ ಅಥವಾ ಪ್ರಿಯಕರನನ್ನು ಮದುವೆಯಾಗಲು ದೇಶ ಬಿಟ್ಟು ಹೋಗುವವರೂ ಇದ್ದಾರೆ, ವಿದೇಶದಿಂದ ಬಂದವರೂ ಇದ್ದಾರೆ. ಪ್ರೀತಿ ಒಂದು ಮಧುರ ಭಾವನೆ. ಪ್ರೀತಿ ಎಂದರೆ ಎರಡು ಮನಸ್ಸುಗಳ ಮಿಲನ. ಪ್ರೀತಿಸಿದವರನ್ನು ಪಡೆದುಕೊಳ್ಳಲು ಕೆಲವರು ಏನು ಬೇಕಾದರೂ ಮಾಡುತ್ತಾರೆ. ಕೆಲವರು ಹಿರಿಯರ ವಿರೋಧ ಕಟ್ಟಿಕೊಂಡು ಪ್ರೇಮ ವಿವಾಹವನ್ನು ಮಾಡಿಕೊಂಡಿದ್ದಾರೆ. ಇನ್ನು ಕೆಲವರು ಎರಡೂ ಮನೆಯವರನ್ನು ಒಪ್ಪಿಸಿ, ಪ್ರೀತಿಯಲ್ಲಿ ಗೆದ್ದು ಮದುವೆಯಾಗಿರುವ ಉದಾಹರಣೆ ಕೂಡ ಇದೆ.

ಇತ್ತೀಚೀನ ತಾಜಾ ಘಟನೆಯೊಂದರಲ್ಲಿ ಅಮೆರಿಕ ಮೂಲದ ಯುವತಿ ಜಾಕ್ವೆಲಿನ್ ಫೊರೆರೊ, ಆನ್‌ಲೈನ್ ಪ್ರೇಮಿಯನ್ನು ಹುಡುಕುತ್ತಾ ಖಂಡಗಳನ್ನು ದಾಟಿ ಭಾರತದ ಆಂಧ್ರಪ್ರದೇಶಕ್ಕೆ ಬಂದಿದ್ದಾಳೆ.

ಇನ್‌ಸ್ಟಾಗ್ರಾಮ್‌ನಲ್ಲಿ ‘ಹಾಯ್’ ಎಂಬ ಶುಭಾಶಯದೊಂದಿಗೆ ಪ್ರಾರಂಭವಾದ ಇಬ್ಬರ ಸ್ನೇಹ, ಇದೀಗ ಮದುವೆಯವರೆಗೂ ಹೋಗಿದೆ. ಪ್ರೀತಿಗಾಗಿ ಏನು ಬೇಕಾದರೂ ಮಾಡುತ್ತಾರೆ ಎಂಬುದಕ್ಕೆ ಇದು ಒಂದು ಪರಿಪೂರ್ಣ ಉದಾಹರಣೆಯಾಗಿದೆ.

ಸಾವಿರಾರು ಮೈಲುಗಳಷ್ಟು ಪ್ರಯಾಣಿಸಿದ ನಂತರ, ಫೊರೆರೊ ತನ್ನ ತಾಯಿಯೊಂದಿಗೆ ಆಂಧ್ರ ಪ್ರದೇಶದ ದೂರದ ಹಳ್ಳಿಗೆ ಬಂದಿದ್ದಾರೆ. ಇದಕ್ಕೆ ಸಂಬಂಧಿಸಿದ ದೃಶ್ಯಗಳನ್ನು ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಪೊರೆರೊ ಹಂಚಿಕೊಂಡಿದ್ದಾರೆ.

ಚಂದನ್, ಆಂಧ್ರ ಪ್ರದೇಶದ ಹಳ್ಳಿಯ ಯುವಕ. ಆತ ಛಾಯಾಗ್ರಾಹಕನಾಗಿ ಕೆಲಸ ಮಾಡುತ್ತಿದ್ದಾನೆ.  ಇನ್‌ಸ್ಟಾಗ್ರಾಮ್‌ನಲ್ಲಿ ಚಂದನ್‌ನ ಪ್ರೊಫೈಲ್ ನೋಡಿದ ನಂತರ ಫೊರೆರೊ ಆತನನ್ನು ಪ್ರೀತಿಸಲು ಶುರು ಮಾಡಿದಳು.

ಮೊದಲು ಹಾಯ್ ಎಂದು ಮೆಸೇಜ್ ಕಳುಹಿಸಿದ್ದೇ ಆಕೆ. ಹಾಗೆ ಪ್ರಾರಂಭವಾದ ಸಂಭಾಷಣೆ ಇಬ್ಬರನ್ನು ಪ್ರೀತಿಯಲ್ಲಿ ಸಿಲುಕಿತು. ಶೀಘ್ರದಲ್ಲೇ, ಇಬ್ಬರೂ ಮದುವೆಯಾಗಲು ನಿರ್ಧರಿಸಿದ್ದಾರೆ. 14 ತಿಂಗಳ ನಂತರ, ಹೊಸ ಅಧ್ಯಾಯಕ್ಕೆ ಸಿದ್ಧರಾಗುತ್ತಿದ್ದೇವೆ ಎಂದು ಹೇಳಿದ್ದಾರೆ. ಚಂದನ್ ಅವರ ಆಸಕ್ತಿಗಳು ಅವಳನ್ನು ಆಕರ್ಷಿಸಿವೆ ಎಂದು ಫೊರೆರೊ ತಿಳಿಸಿದ್ದಾರೆ.

8 ತಿಂಗಳ ಆನ್‌ಲೈನ್ ಡೇಟಿಂಗ್ ನಂತರ ನಾನು ಚಂದನ್ ಅವರನ್ನು ಮದುವೆಯಾಗಲು ನನ್ನ ತಾಯಿ ಒಪ್ಪಿಕೊಂಡಿದ್ದಾರೆ ಎಂದು ಪೊರೆರೊ ಹೇಳಿದ್ದಾರೆ. ಜೀವನ ಸಂಗಾತಿಯನ್ನು ಹುಡುಕುತ್ತಾ ತನ್ನ ತಾಯಿಯೊಂದಿಗೆ ಭಾರತಕ್ಕೆ ಬಂದಿದ್ದೇನೆ. ಚಂದನ್ ವೀಸಾ ಪಡೆಯಲು ನಾವು ಪ್ರಯತ್ನಿಸುತ್ತಿದ್ದೇವೆ ಮತ್ತು ಇಬ್ಬರೂ ಅಮೆರಿಕದಲ್ಲಿ ಹೊಸ ಜೀವನವನ್ನು ಪ್ರಾರಂಭಿಸುತ್ತೇವೆ ಎಂದು ಫೊರೆರೊ ಹೇಳಿದ್ದಾರೆ. ಇದೇ ಸಂದರ್ಭದಲ್ಲಿ ಆನ್‌ಲೈನ್ ಪ್ರಿಯರಿಗೆ ನೆಟ್ಟಿಗರು ಬೆಂಬಲ ವ್ಯಕ್ತಪಡಿಸಿದ್ದಾರೆ. ಇಬ್ಬರಿಗೂ ಸಂತೋಷ ಮತ್ತು ಆರೋಗ್ಯಕರ ಜೀವನ ಸಿಗಲೆಂದು ಹಾರೈಸುತ್ತಿದ್ದಾರೆ.

Ramesh Babu

Journalist

Recent Posts

ಸಿನಿಮಾ ಸ್ಟೈಲ್‌ನಲ್ಲಿ ಪೊಲೀಸರ ಚೇಸಿಂಗ್: ಎರಡೇ ಗಂಟೆಗಳಲ್ಲಿ ಕಳವು ಮಾಡಿದ್ದ ಕ್ಯಾಷ್‌ ಸಮೇತ ಕಳ್ಳರ ಬಂಧನ

ಚಿಕ್ಕಬಳ್ಳಾಪುರ-‌ ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…

4 hours ago

ನಮ್ಮ ದೇಶದ ಪ್ರಗತಿ ಯುವಜನರಿಂದಲೇ ಆಗಬೇಕಿದೆ-ಇಂಧನ‌ ಸಚಿವ ಕೆ.ಜೆ.ಜಾರ್ಜ್

ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ ಆಫ್…

5 hours ago

ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಭೀಕರ ಅಪಘಾತ: ಬೈಕ್ ಸವಾರ ದುರ್ಮರಣ

ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟಿರುವ ಘಟನೆ ಮೇ.12ರ ರಾತ್ರಿ…

9 hours ago

‘ಪಬ್ಲಿಕ್ ಮಿರ್ಚಿ’ ವರದಿ ಫಲಶೃತಿ: ಕೊನೆಗೂ ಹೊಸಹಳ್ಳಿ ರಸ್ತೆಗೆ ಡಾಂಬರ್ ಭಾಗ್ಯ – ಜನರಲ್ಲಿ ಸಂತಸ

ದೊಡ್ಡಬಳ್ಳಾಪುರ: ತಾಲ್ಲೂಕಿನ ಸಾಸಲು–ಆರೂಢಿ ಭಾಗದ ಜನರ ಪ್ರಮುಖ ಸಂಪರ್ಕ ರಸ್ತೆಯಾಗಿರುವ ಗುಂಡಮಗೆರೆ–ಹೊಸಹಳ್ಳಿ ರಸ್ತೆಗೆ ಕೊನೆಗೂ ಡಾಂಬರೀಕರಣ ಕಾಮಗಾರಿ ಆರಂಭವಾಗಿದ್ದು, ಗ್ರಾಮಸ್ಥರಲ್ಲಿ…

10 hours ago

ಐದು ದಶಕಗಳಿಂದ ಗುಡಿಸಲಲ್ಲೇ ಬದುಕು: ಮೂಲಭೂತ ಸೌಲಭ್ಯಕ್ಕಾಗಿ ಹಕ್ಕಿಪಿಕ್ಕಿ ಕುಟುಂಬಗಳ ನರಳಾಟ

ದೊಡ್ಡಬಳ್ಳಾಪುರ: ಸರ್ಕಾರ ಆಶ್ರಯ ಯೋಜನೆ ಮೂಲಕ ಗುಡಿಸಲು ಮುಕ್ತ ರಾಜ್ಯ ನಿರ್ಮಾಣದ ಘೋಷಣೆ ಮಾಡುತ್ತಿದ್ದರೂ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ…

15 hours ago

ಓದು ಮುಖ್ಯ. ಗ್ರಹಿಕೆ ಅತಿಮುಖ್ಯ. ಮಾನವೀಯ ಸ್ಪಂದನೆ ಎಲ್ಲಕ್ಕಿಂತ ಮುಖ್ಯ

ಅನಕ್ಷರಸ್ಥರ ಬುದ್ದಿವಂತಿಕೆ ಪ್ರಶ್ನಿಸುವವರು ಅಕ್ಷರಸ್ಥರ ಮಾನವೀಯತೆಯನ್ನು ಪ್ರಶ್ನಿಸಬೇಕಲ್ಲವೇ........ ......ಒಂದು ಟ್ವೀಟ್... ಅಕ್ಷರ ಕಲಿಕೆ ಒಂದು ನೈಪುಣ್ಯ ಅಥವಾ ಸುಲಭವಾಗಿ ಮಾಹಿತಿ…

17 hours ago