ಆನ್ ಲೈನ್ ಕ್ರಿಕೆಟ್ ಬೆಟ್ಟಿಂಗ್ ಆಡುತ್ತೀರಾ..? ಹಾಗಾದರೆ ಹುಷಾರ್… ಕ್ರಿಕೆಟ್ ಬೆಟ್ಟಿಂಗ್ ಆಡಲು ಹೋಗಿ ಬರೋಬ್ಬರಿ 2,38,995 ರೂ. ಕಳೆದುಕೊಂಡ ಕಾಲೇಜು ವಿದ್ಯಾರ್ಥಿ

ತಾಲೂಕಿನ ಕಾಲೇಜೊಂದರಲ್ಲಿ ಅಂತಿಮ‌ ವರ್ಷದ ಬಿ.ಕಾಂ ಓದುತ್ತಿರುವ ವಿದ್ಯಾರ್ಥಿಯೊಬ್ಬ ಡ್ರೀಮ್ 11 ನಲ್ಲಿ ಕ್ರಿಕೆಟ್ ಬೆಟ್ಟಿಂಗ್ ಆಡಲು ಹೋಗಿ ಬರೋಬ್ಬರಿ 2,38,995 ರೂ. ಕಳೆದುಕೊಂಡಿದ್ದಾನೆ.

ಈ ವಿದ್ಯಾರ್ಥಿ ಮೊದಲಿನಿಂದಲೂ ಡ್ರೀಮ್ 11 ನಲ್ಲಿ ಬೆಟ್ಟಿಂಗ್ ಆಡುತ್ತಿರುತ್ತಾನೆ. ಇನ್‌ಸ್ಟಾಗ್ರಾಮ್ ಅನ್ನು ಬಳಸುತ್ತಿದ್ದಾಗ, ಅದರಲ್ಲಿ ಒಂದು ಟೆಲಿಗ್ರಾಮ್ ಲಿಂಕ್ ಅನ್ನು ಕೊಟ್ಟಿದ್ದು, ನೀವು ಸೇರಿಕೊಂಡರೆ ನಾವು ನಿಮಗೆ 7 ಕ್ರಿಕೆಟ್ ತಂಡಗಳನ್ನು ನೀಡುತ್ತೇವೆ ಅವುಗಳನ್ನು ತೆಗೆದುಕೊಂಡು ಡ್ರೀಮ್ 11 ರಲ್ಲಿ ತಂಡವನ್ನು ರಚಿಸಿದರೆ, ನೀವು 1 ಕೋಟಿ ಹಣವನ್ನು ಗೆಲ್ಲಬಹುದು ಎಂದು ತಿಳಿಸುತ್ತಾರೆ. ನೀವು ಈ ಗುಂಪಿಗೆ ಸೇರಲು ಬಯಸಿದರೆ, ನೀವು ಹಣ ಕಟ್ಟಬೇಕೆಂದು ಹೇಳಿ ಜೂ.20 ರಂದು ಬೆಳಿಗ್ಗೆ 9.09 ಗಂಟೆಗೆ QR ಕೋಡ್ ಕಳುಹಿಸಲಾಗಿದ್ದು, ಇದಕ್ಕಾಗಿ ಈ ಯುವಕ ಫೋನ್ ಪೇ‌ ಮೂಲಕ 1,999, 14,999, 21,999, 49,999 ಸೇರಿ ಒಟ್ಟು 88,996 ರೂ. ಹಣ ಪಾವತಿಸಿ ರಾಮ್ ಚೌಧರಿ ಎಂಬ ಹೆಸರಿನ ಟೆಲಿಗ್ರಾಮ್ ಗುಂಪಿಗೆ ಸೇರುತ್ತಾನೆ.

ಆ ದಿನವೇ ಭಾರತ vs ಅಫ್ಘಾನಿಸ್ತಾನ ಕ್ರಿಕೆಟ್ ಪಂದ್ಯವಿದ್ದು, ಟೆಲಿಗ್ರಾಮ್ ನಲ್ಲಿ 7 ಪಂದ್ಯಗಳನ್ನು ಕಳುಹಿಸುತ್ತಾರೆ.  ಈ 7 ಪಂದ್ಯಗಳ ಪೈಕಿ ಡ್ರೀಮ್ 11 ರಲ್ಲಿ ಪಂದ್ಯಗಳನ್ನು ಆಯ್ಕೆ ಮಾಡುವಷ್ಟರಲ್ಲಿ ಸಮಯ ಆಗಿದ್ದರಿಂದ ಕೇವಲ 3 ಪಂದ್ಯಗಳನ್ನು ಮಾತ್ರ ಆಯ್ಕೆ ಮಾಡಿದ್ದಾನೆ. ಪಂದ್ಯ ಮುಗಿದ ನಂತರ ಅವರು ಕಳುಹಿಸಿದ 7 ತಂಡಗಳಲ್ಲಿ ಕೊನೆಯ ತಂಡವು ಗೆದ್ದಿದ್ದು, ಆತನಿಗೆ ಹಣ ಸಿಗಲಿಲ್ಲ.ಆಗ ಆತ ನನ್ನ ಹಣ ವಾಪಸ್ ಕೊಡಿ ಎಂದು ಕೇಳಿದ್ದಕ್ಕೆ ನಿಮ್ಮ ಹಣವನ್ನು ವಾಪಸ್ ಕೊಡುವುದಿಲ್ಲ. ನಿಮ್ಮ ಡೀಮ್ 11 ಐಡಿ ಮತ್ತೆ ಕ್ರಿಕೆಟ್ ಪಂದ್ಯದಲ್ಲಿ ತಂಡಗಳನ್ನು ಕಳುಹಿಸಿ ನಿಮ್ಮನ್ನು ಗೆಲ್ಲಿಸಿ ನಿಮ್ಮ ವಾಲೆಟ್ ಗೆ ಹಣ ಬರುತ್ತದೆ ಎಂದು ತಿಳಿಸುತ್ತಾರೆ.

ಆಗ ಜೂ.22ರಂದು ರಾತ್ರಿ 9.30ಕ್ಕೆ ಭಾರತ ಮತ್ತು ಬಾಂಗ್ಲಾದೇಶ ಪಂದ್ಯಗಳು ಇದ್ದಾಗ ಟೆಲಿಗ್ರಾಮ್‌ನಲ್ಲಿ ವಿದ್ಯಾರ್ಥಿಗೆ ನಿಮ್ಮ ಡ್ರೀಮ್ 11 ID ಅನ್ನು ಕಳುಹಿಸಿ ನಾವೇ ಟೀಮ್ ನ್ನು ಕಟ್ಟಿ ನಿಮ್ಮನ್ನು ಗೆಲ್ಲಿಸಿ ನಿಮ್ಮ ಹಣವನ್ನು ನಿಮಗೆ ಬರುವಂತೆ ಮಾಡುತ್ತೇವೆಂದು ಹೇಳಿ ಡ್ರೀಮ್ 11ಗೆ ಸೇರಿಸಲು ಹಣ ಕಟ್ಟಬೇಕೆಂದು ಹೇಳಿ 50 ಸಾವಿರ ರೂ.ಗಳನ್ನು ಫೋನ್ ಪೇ ಮಾಡಿಸಿಕೊಳ್ಳುತ್ತಾರೆ.

ಪಂದ್ಯ ಮುಗಿದ ನಂತರ, ನೀವು ಡ್ರೀಮ್ 11 ಪಂದ್ಯದಲ್ಲಿ 1.5 ಕೋಟಿ ಗೆದ್ದಿದ್ದೀರಾ ಎಂದು ಹೇಳಿ ಫೈನಲ್ ಪ್ರೋಸೆಸ್ ಗೆ ಹಣ ಬೇಕೆಂದು ಒಂದು ಬಾರಿ ರೂ. 54,999/- ಮತ್ತು ಇನ್ನೊಂದು ಬಾರಿ ರೂ. 45,000/-ಗಳನ್ನು ಫೋನ್ ಪೇ ಮೂಲಕ ಪಾವತಿ ಮಾಡಿಸಿಕೊಂಡಿರುತ್ತಾರೆ.

ನಂತರ ಆ ಯುವಕ ಹಣ ಕೇಳಿದರೆ ಮತ್ತೆ 25,000/- ಹಾಕಿದರೆ ನಿಮ್ಮ ಹಣ ನಿಮ್ಮ ವಾಲೆಟ್ ಗೆ ಹಾಕುತ್ತೇವೆ ಎನ್ನುತ್ತಾರೆ. ಹೀಗೆ ಮೋಸ ಮಾಡಿ ವಿದ್ಯಾರ್ಥಿಯ ಫೋನ್ ಪೇಯಿಂದ ಒಟ್ಟು ರೂ.2,38,995 ಪಾವತಿ ಮಾಡಿಸಿಕೊಂಡಿದ್ದಾರೆ.

ಮೋಸ ಹೋದ ನಂತರ ವಿದ್ಯಾರ್ಥಿ‌ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆಯಲ್ಲಿ ದೂರು ನೀಡಿ, ಠೇವಣಿ ಮಾಡಿದ ರಾಮ್ ಚೌಧರಿ ಟೆಲಿಗ್ರಾಮ್ ಗ್ರೂಪ್ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಒತ್ತಾಯಿಸಿದ್ದಾನೆ.

ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ramesh Babu

Journalist

Recent Posts

ಒಂದೇ ರಾತ್ರಿ ಎರಡು ಕಡೆ ಶ್ರೀಗಂಧದ ಮರಗಳ ಕಳವು

ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…

2 hours ago

ಬೈಕ್‌ಗೆ ಟಿಟಿ ವಾಹನ ಡಿಕ್ಕಿ ಪ್ರಕರಣ: ಇಬ್ಬರು ಯುವತಿಯರ ದುರ್ಮರಣ – ಮೃತರ ಕಣ್ಣು ದಾನ ಮಾಡಿ ಸಾರ್ಥಕತೆ ಮೆರೆದ ಕುಟುಂಬಸ್ಥರು

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…

4 hours ago

ಬೈಕ್ ಗೆ ಟಿಟಿ ವಾಹನ ಡಿಕ್ಕಿ: ಮಹಿಳೆ ಸಾವು: ಮತ್ತೋರ್ವ ಯುವತಿಗೆ ಗಂಭೀರ ಗಾಯ

ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ‌ ಬಾಶೆಟ್ಟಿಹಳ್ಳಿ ಕೈಗಾರಿಕಾ…

9 hours ago

ಹೆಣ್ಣು ಕೊಟ್ಟ ಮಾವನನ್ನೇ ಕೊಲೆಗೈದ ಅಳಿಯ

ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…

10 hours ago

ಕರ್ನಾಟಕದ ಮುಖ್ಯಮಂತ್ರಿ  ಡಿಕೆ ಶಿವಕುಮಾರ್ ಅವರಿಗೊಂದು ಬಹಿರಂಗ ಪತ್ರ..

ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…

13 hours ago

ಕರ್ನಾಟಕ ಹೆಚ್ಚು ತೆರಿಗೆ ನೀಡುತ್ತಿದ್ದು, ಇಲ್ಲಿಗೆ ಹೆಚ್ಚು ಅನುದಾನ ಬರಬೇಕೆಂಬ ತತ್ವ- ಚಿಂತನೆ ಸರಿಯಲ್ಲ. ಇದೆಲ್ಲವನ್ನು ಹಣಕಾಸು ಆಯೋಗ ನಿರ್ಧರಿಸುತ್ತದೆ- ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್‌ಪ್ರೆಸ್‌ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…

1 day ago