ಆನ್ ಲೈನ್ ಕ್ರಿಕೆಟ್ ಬೆಟ್ಟಿಂಗ್ ಆಡುತ್ತೀರಾ..? ಹಾಗಾದರೆ ಹುಷಾರ್… ಕ್ರಿಕೆಟ್ ಬೆಟ್ಟಿಂಗ್ ಆಡಲು ಹೋಗಿ ಬರೋಬ್ಬರಿ 2,38,995 ರೂ. ಕಳೆದುಕೊಂಡ ಕಾಲೇಜು ವಿದ್ಯಾರ್ಥಿ

ತಾಲೂಕಿನ ಕಾಲೇಜೊಂದರಲ್ಲಿ ಅಂತಿಮ‌ ವರ್ಷದ ಬಿ.ಕಾಂ ಓದುತ್ತಿರುವ ವಿದ್ಯಾರ್ಥಿಯೊಬ್ಬ ಡ್ರೀಮ್ 11 ನಲ್ಲಿ ಕ್ರಿಕೆಟ್ ಬೆಟ್ಟಿಂಗ್ ಆಡಲು ಹೋಗಿ ಬರೋಬ್ಬರಿ 2,38,995 ರೂ. ಕಳೆದುಕೊಂಡಿದ್ದಾನೆ.

ಈ ವಿದ್ಯಾರ್ಥಿ ಮೊದಲಿನಿಂದಲೂ ಡ್ರೀಮ್ 11 ನಲ್ಲಿ ಬೆಟ್ಟಿಂಗ್ ಆಡುತ್ತಿರುತ್ತಾನೆ. ಇನ್‌ಸ್ಟಾಗ್ರಾಮ್ ಅನ್ನು ಬಳಸುತ್ತಿದ್ದಾಗ, ಅದರಲ್ಲಿ ಒಂದು ಟೆಲಿಗ್ರಾಮ್ ಲಿಂಕ್ ಅನ್ನು ಕೊಟ್ಟಿದ್ದು, ನೀವು ಸೇರಿಕೊಂಡರೆ ನಾವು ನಿಮಗೆ 7 ಕ್ರಿಕೆಟ್ ತಂಡಗಳನ್ನು ನೀಡುತ್ತೇವೆ ಅವುಗಳನ್ನು ತೆಗೆದುಕೊಂಡು ಡ್ರೀಮ್ 11 ರಲ್ಲಿ ತಂಡವನ್ನು ರಚಿಸಿದರೆ, ನೀವು 1 ಕೋಟಿ ಹಣವನ್ನು ಗೆಲ್ಲಬಹುದು ಎಂದು ತಿಳಿಸುತ್ತಾರೆ. ನೀವು ಈ ಗುಂಪಿಗೆ ಸೇರಲು ಬಯಸಿದರೆ, ನೀವು ಹಣ ಕಟ್ಟಬೇಕೆಂದು ಹೇಳಿ ಜೂ.20 ರಂದು ಬೆಳಿಗ್ಗೆ 9.09 ಗಂಟೆಗೆ QR ಕೋಡ್ ಕಳುಹಿಸಲಾಗಿದ್ದು, ಇದಕ್ಕಾಗಿ ಈ ಯುವಕ ಫೋನ್ ಪೇ‌ ಮೂಲಕ 1,999, 14,999, 21,999, 49,999 ಸೇರಿ ಒಟ್ಟು 88,996 ರೂ. ಹಣ ಪಾವತಿಸಿ ರಾಮ್ ಚೌಧರಿ ಎಂಬ ಹೆಸರಿನ ಟೆಲಿಗ್ರಾಮ್ ಗುಂಪಿಗೆ ಸೇರುತ್ತಾನೆ.

ಆ ದಿನವೇ ಭಾರತ vs ಅಫ್ಘಾನಿಸ್ತಾನ ಕ್ರಿಕೆಟ್ ಪಂದ್ಯವಿದ್ದು, ಟೆಲಿಗ್ರಾಮ್ ನಲ್ಲಿ 7 ಪಂದ್ಯಗಳನ್ನು ಕಳುಹಿಸುತ್ತಾರೆ.  ಈ 7 ಪಂದ್ಯಗಳ ಪೈಕಿ ಡ್ರೀಮ್ 11 ರಲ್ಲಿ ಪಂದ್ಯಗಳನ್ನು ಆಯ್ಕೆ ಮಾಡುವಷ್ಟರಲ್ಲಿ ಸಮಯ ಆಗಿದ್ದರಿಂದ ಕೇವಲ 3 ಪಂದ್ಯಗಳನ್ನು ಮಾತ್ರ ಆಯ್ಕೆ ಮಾಡಿದ್ದಾನೆ. ಪಂದ್ಯ ಮುಗಿದ ನಂತರ ಅವರು ಕಳುಹಿಸಿದ 7 ತಂಡಗಳಲ್ಲಿ ಕೊನೆಯ ತಂಡವು ಗೆದ್ದಿದ್ದು, ಆತನಿಗೆ ಹಣ ಸಿಗಲಿಲ್ಲ.ಆಗ ಆತ ನನ್ನ ಹಣ ವಾಪಸ್ ಕೊಡಿ ಎಂದು ಕೇಳಿದ್ದಕ್ಕೆ ನಿಮ್ಮ ಹಣವನ್ನು ವಾಪಸ್ ಕೊಡುವುದಿಲ್ಲ. ನಿಮ್ಮ ಡೀಮ್ 11 ಐಡಿ ಮತ್ತೆ ಕ್ರಿಕೆಟ್ ಪಂದ್ಯದಲ್ಲಿ ತಂಡಗಳನ್ನು ಕಳುಹಿಸಿ ನಿಮ್ಮನ್ನು ಗೆಲ್ಲಿಸಿ ನಿಮ್ಮ ವಾಲೆಟ್ ಗೆ ಹಣ ಬರುತ್ತದೆ ಎಂದು ತಿಳಿಸುತ್ತಾರೆ.

ಆಗ ಜೂ.22ರಂದು ರಾತ್ರಿ 9.30ಕ್ಕೆ ಭಾರತ ಮತ್ತು ಬಾಂಗ್ಲಾದೇಶ ಪಂದ್ಯಗಳು ಇದ್ದಾಗ ಟೆಲಿಗ್ರಾಮ್‌ನಲ್ಲಿ ವಿದ್ಯಾರ್ಥಿಗೆ ನಿಮ್ಮ ಡ್ರೀಮ್ 11 ID ಅನ್ನು ಕಳುಹಿಸಿ ನಾವೇ ಟೀಮ್ ನ್ನು ಕಟ್ಟಿ ನಿಮ್ಮನ್ನು ಗೆಲ್ಲಿಸಿ ನಿಮ್ಮ ಹಣವನ್ನು ನಿಮಗೆ ಬರುವಂತೆ ಮಾಡುತ್ತೇವೆಂದು ಹೇಳಿ ಡ್ರೀಮ್ 11ಗೆ ಸೇರಿಸಲು ಹಣ ಕಟ್ಟಬೇಕೆಂದು ಹೇಳಿ 50 ಸಾವಿರ ರೂ.ಗಳನ್ನು ಫೋನ್ ಪೇ ಮಾಡಿಸಿಕೊಳ್ಳುತ್ತಾರೆ.

ಪಂದ್ಯ ಮುಗಿದ ನಂತರ, ನೀವು ಡ್ರೀಮ್ 11 ಪಂದ್ಯದಲ್ಲಿ 1.5 ಕೋಟಿ ಗೆದ್ದಿದ್ದೀರಾ ಎಂದು ಹೇಳಿ ಫೈನಲ್ ಪ್ರೋಸೆಸ್ ಗೆ ಹಣ ಬೇಕೆಂದು ಒಂದು ಬಾರಿ ರೂ. 54,999/- ಮತ್ತು ಇನ್ನೊಂದು ಬಾರಿ ರೂ. 45,000/-ಗಳನ್ನು ಫೋನ್ ಪೇ ಮೂಲಕ ಪಾವತಿ ಮಾಡಿಸಿಕೊಂಡಿರುತ್ತಾರೆ.

ನಂತರ ಆ ಯುವಕ ಹಣ ಕೇಳಿದರೆ ಮತ್ತೆ 25,000/- ಹಾಕಿದರೆ ನಿಮ್ಮ ಹಣ ನಿಮ್ಮ ವಾಲೆಟ್ ಗೆ ಹಾಕುತ್ತೇವೆ ಎನ್ನುತ್ತಾರೆ. ಹೀಗೆ ಮೋಸ ಮಾಡಿ ವಿದ್ಯಾರ್ಥಿಯ ಫೋನ್ ಪೇಯಿಂದ ಒಟ್ಟು ರೂ.2,38,995 ಪಾವತಿ ಮಾಡಿಸಿಕೊಂಡಿದ್ದಾರೆ.

ಮೋಸ ಹೋದ ನಂತರ ವಿದ್ಯಾರ್ಥಿ‌ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆಯಲ್ಲಿ ದೂರು ನೀಡಿ, ಠೇವಣಿ ಮಾಡಿದ ರಾಮ್ ಚೌಧರಿ ಟೆಲಿಗ್ರಾಮ್ ಗ್ರೂಪ್ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಒತ್ತಾಯಿಸಿದ್ದಾನೆ.

ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ramesh Babu

Journalist

Recent Posts

ಜನರನ್ನು ತಾಲೂಕು ಕಚೇರಿಗೆ ಅಲೆದಾಟ ತಪ್ಪಿಸಿ ಸ್ಥಳದಲ್ಲೇ ಸಮಸ್ಯೆ ಪರಿಹರಿಸಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…

35 minutes ago

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

4 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

12 hours ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

13 hours ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

1 day ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

1 day ago