ಆನ್ ಲೈನ್ ಗೇಮ್ ಚಟ: ಕೈತುಂಬಾ ಸಾಲ: ಹೆಡ್‌ ಕಾನ್ಸ್ಟೇಬಲ್‌ ಆತ್ಮಹತ್ಯೆ

ಚಿಕ್ಕಬಳ್ಳಾಪುರ: ಆತ ಪೊಲೀಸ್ ಹೆಡ್‌ ಕಾನ್ಸ್ಟೇಬಲ್‌. ಒಂದೇ ಠಾಣೆಯಲ್ಲಿ ಸುಮಾರು ಮೂರು ವರ್ಷಗಳಿಂದ ಕೆಲಸ ಮಾಡಿದ್ದ ಅನುಭವ ಹೊಂದಿದ್ದ. ಉತ್ತಮ ಜನಸ್ನೇಹಿ ಪೊಲೀಸ್‌ ಆಗಿ ಕೂಡ ಕೆಲಸ ಮಾಡ್ತಿದ್ದ. ತನ್ನ ಸಹಪಾಟಿಳೊಂದಿಗೂ ಫ್ರೆಂಡ್ಲಿಯಾಗಿಯೇ ಇದ್ದ. ನಿನ್ನೆ ರಾತ್ರಿ ಜಾತ್ರೆಗೆ ಬಂದೋಬಸ್ತ್‌ ನೈಟ್‌ ಡ್ಯೂಟಿ ಮುಗಿಸಿ…. ರಾತ್ರಿ ಮೂರು ಗಂಟೆಗೆ ಮನೆಗೆ ಹೋಗಿ ಸ್ವಲ್ಪ ಸಮಯ ರೆಸ್ಟ್‌ ಮಾಡಿದ್ದಾನೆ. ಪುನಃ ಮುಂಜಾನೆ ಏಳೂವರೆಗೆ ಡ್ಯೂಟಿಗೆ ಹೋಗ್ಬೇಕು ಅಂತ ಮನೆಯವರಿಗೆ ಹೇಳಿ ಠಾಣೆ ಬಳಿ ಬಂದವನು, ಠಾಣೆ ಆವರಣದ ರೆಸ್ಟ್‌ ರೂಮ್‌ ನಲ್ಲಿ ಹೆಣವಾಗಿ ಕಂಡುಬಂದಿದ್ದಾನೆ.

ಪೊಲೀಸ್‌ ಠಾಣೆಯ ಆವರಣದಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವ ಪೊಲೀಸಪ್ಪನ ಹೆಸರು ರಾಜಶೇಖರ್(48), ಇಪ್ಪತ್ತೈದು ವರ್ಷ ಹಿಂದೆ ಪೊಲೀಸ್‌ ಹುದ್ದೆಗೆ ಸೇರಿದ್ದ. ಶಿಡ್ಲಘಟ್ಟ ಚಿಂತಾಮಣಿ ಸೇರಿದಂತೆ ಜಿಲ್ಲೆಯ ಹಲವು ಪೊಲೀಸ್‌ ಠಾಣೆಗಳಲ್ಲಿ ಕೆಲಸ ಮಾಡಿರುವ ಅನುಭವ ಇತ್ತು. ಜನಸಾಮಾನ್ಯರೊಂದಿಗೆ ಉತ್ತಮ ಬಾಂದವ್ಯ ಇಟ್ಟುಕೊಂಡಿದ್ದ. ಕೈ ತುಂಬಾ ಸಂಬಳ. ಮಡದಿ ಇಬ್ಬರು ಮಕ್ಕಳೊಂದಿಗೆ ನೆಮ್ಮದಿಯಿಂದ ಇದ್ದ. ಹೆಚ್ಚಿನ ಹಣ ಸಂಪಾದಣೆ ಆಸಗೆ ಅಡ್ಡದಾರಿ ಹಿಡಿದ ಪೊಲೀಸಪ್ಪ ರಮ್ಮಿಸರ್ಕಲ್‌ ಎಂಬ ಆನ್‌ಲೈನ್‌ ಗೇಮ್‌ ಚಟ ಬೆಳಸಿಕೊಂಡಿದ್ದ. ದಿನದಿಂದ ದಿನಕ್ಕೆ ಹಣ ಕಳೆದುಕೊಂಡು ಕೊನೆಗೆ ನಲವತ್ತ ಲಕ್ಷಕ್ಕೂ ಹೆಚ್ಚಿನ ಹಣ ಕಳೆದುಕೊಂಡಿದ್ದಾನೆ. ಇಷ್ಟೇ ಅಲ್ಲದೆ ಸಾಲ ಮಾಡಿದ್ದಾನೆ. ಇದೇ ವಿಚಾರಕ್ಕೆ ಮನೆಯಲ್ಲಿ ಮನಸ್ತಾಪ ಮೂಡಿದೆ. ಇದರಿಂದ ಮನನೊಂದು ಬೇರೆ ದಾರಿ ಕಾಣದ ರಾಜಶೇಖರ್‌ ತಾನು ಕೆಲಸ ಮಾಡುತಿದ್ದ ಪೊಲೀಸ್‌ ಠಾಣೆ ಆವರಣದ ವಿಶ್ರಾಂತಿಗೃಹದಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ..

ಬೇರೆಯವರಿಗೆ ಬುದ್ದಿವಾದ ಹೇಳಬೇಕಾದ ಪೊಲೀಸ್ ಕಾನ್ಸ್ಟೇಬಲ್ ಆನ್ ಲೈನ್ ಗೇಮ್ ನಲ್ಲಿ ಹಣ ಕಳೆದುಕೊಂಡ ಹಿನ್ನೆಲೆ ಮನನೊಂದು ಪೊಲೀಸ್ ಠಾಣೆ ಆವರಣದಲ್ಲೇ ಸೂಸೈಡ್ ಮಾಡಿಕೊಂಡಿದ್ದಾನೆ. ಈತ ಹಲವು ವರ್ಷಗಳಿಂದ ರಮ್ಮಿ ಸರ್ಕಲ್ ಆನ್ ಲೈನ್ ಗೇಮ್ ಹುಚ್ಚುಬೆಳೆಸಿಕೊಂಡಿದ್ದು, ಸಾಕಷ್ಟು ಹಣ ಕಳೆದುಕೊಂಡಿದ್ದಲ್ಲೆ ಅದಕ್ಕೆ ಸಾಲ ಸಹ ಮಾಡಿಕೊಂಡಿದ್ದನಂತೆ.

ಇದೇ ವಿಚಾರದಲ್ಲಿ ಹಣ ಕಳೆದುಕೊಂಡಿರೋದಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಹೇಳಲಾಗುತ್ತಿದೆ.

ಘಟನೆ ಸಂಬಂದ ಚಿಕ್ಕಬಳ್ಳಾಪುರ ಎಸ್ಪಿ ಕುಶಲ್ ಚೌಕ್ಸೆ ಹಾಗೂ ಮಂಚೇನಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಶವವನ್ನ ಮರಣೋತ್ತರ ಪರೀಕ್ಷೆಗೆ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ಸಾಗಿಸಿದ್ದಾರೆ..

ಇನ್ನೂ ಈ ಬಗ್ಗೆ ದೂರು ದಾಖಲಿಸಿಕೊಂಡ ಮಂಚೇನಹಳ್ಳಿ ಪೊಲೀಸರು ಮುಂದಿನ ಕ್ರಮ ಜರುಗಿಸಿದ್ದಾರೆ. ಒಟ್ಟಾರೆ ಜನಸಾಮನ್ಯರು ತಪ್ಪು ಮಾಡಿದರೆ ತಿದ್ದು ಬುದ್ದಿ ಹೇಳಬೇಕಾದ ಪೊಲೀಸರೇ ಮಾಡಬಾರದ ತಪ್ಪು ಪೊಲೀಸ್‌ ಠಾಣೆ ಆವರಣದಲ್ಲೇ ಆತ್ಮಹತ್ಯೆ ಮಡಿಕೊಂಡರೇ, ಸಮಾಜವನ್ನು ತಿದ್ದಿ ಬುದ್ದಿ ಹೇಳೋರು ಯಾರು…?

ಆನ್‌ ಲೈನ್‌ ವಂಚಕರನ್ನ ಎಡೆಮುರಿ ಕಟ್ಟಬೇಕಿದ್ದ ಪೊಲೀಸರೇ ಆನ್‌ ಲೈನ್‌ ಗೇಮ್‌ ವಂಚನೆಗೆ ಇದ್ದಬದ್ದ ಹಣದ ಜೊತೆಗೆ ಪ್ರಾಣ ಕಳೆದುಕೊಂಡು ಇದ್ದ ಇಬ್ಬರು ಮಕ್ಕಳು ಮಡದಿಯನ್ನು ಅನಾಥರನ್ನಾಗಿ ಮಾಡಿರುವುದು ದುರಂತ…..

Ramesh Babu

Journalist

Recent Posts

PUC Result: ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ….ಈ ಕಥೆ ಕೇಳಿದರೆ ಎಂಥವರ ಕಣ್ಣಲ್ಲೂ ನೀರು ಬರುವುದು ಗ್ಯಾರಂಟಿ

600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…

7 hours ago

ತೂಬಗೆರೆ ಸರ್ಕಾರಿ ಪಿಯು ಕಾಲೇಜಿಗೆ ಮತ್ತೊಮ್ಮೆ ಮೆರುಗು: ಶೇ.95.45 ಫಲಿತಾಂಶ

ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…

7 hours ago

ದೊಡ್ಡಬಳ್ಳಾಪುರ ರೈಲ್ವೆ ಸ್ಟೇಷನ್ ಬಳಿ ಅಂಡರ್ ಪಾಸ್ ಅವೈಜ್ಞಾನಿಕ- ಮೇಲ್ಸೇತುವೆ ಅಗತ್ಯ- ಸಂಸದ ಡಾ. ಕೆ. ಸುಧಾಕರ್

ಕೇಂದ್ರ ಸರಕಾರದ ಜನಪರ ಯೋಜನೆಗಳನ್ನು ಕಾಲಮಿತಿಯೊಳಗೆ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ, ಅರ್ಹ ಫಲಾನುಭವಿಗಳಿಗೆ ತ್ವರಿತವಾಗಿ ಸೌಲಭ್ಯಗಳು ತಲುಪುವಂತೆ ಕ್ರಮವಹಿಸಿ ಎಂದು ಅಧಿಕಾರಿಗಳಿಗೆ…

7 hours ago

ಮುಂದಿನ ದಿನಗಳಲ್ಲಿ 1000 ಸಬ್ ಇನ್ಸ್ ಪೆಕ್ಟರ್, 8000 ಕಾನ್ಸ್ಟೇಬಲ್ ಗಳ ನೇಮಕ – ಗೃಹ ಸಚಿವ ಪರಮೇಶ್ವರ್

  ಪೊಲೀಸ್ ಇಲಾಖೆಯಲ್ಲಿ 1000 ಸಬ್ ಇನ್ಸ್ಪೆಕ್ಟರ್ ಹಾಗೂ 8000 ಕಾನ್ಸ್ಟೇಬಲ್ ಗಳನ್ನು ಆದಷ್ಟು ಶೀಘ್ರ ನೇಮಕ ಮಾಡಲಾಗುವುದು ಎಂದು…

8 hours ago

ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟ

ಇಂದು ಮಧ್ಯಾಹ್ನ 3.00 ಗಂಟೆಗೆ 2026ರ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ…

11 hours ago

ಪಿಯುಸಿ ವಿದ್ಯಾರ್ಥಿಗಳಿಗೆ National Academic Depository (NAD) – DigiLocker ಮೂಲಕ ಫಲಿತಾಂಶದ ದಿನವೇ ಅಂಕಪಟ್ಟಿ

2025-26ನೇ ಶೈಕ್ಷಣಿಕ ಸಾಲಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳ ಅಂಕಪಟ್ಟಿಯನ್ನು ಫಲಿತಾಂಶ ಪ್ರಕಟವಾದ ದಿನವೇ National Academic Depository…

14 hours ago