ಆನ್ ಲೈನ್ ಗೇಮ್ ಚಟ: ಕೈತುಂಬಾ ಸಾಲ: ಹೆಡ್‌ ಕಾನ್ಸ್ಟೇಬಲ್‌ ಆತ್ಮಹತ್ಯೆ

ಚಿಕ್ಕಬಳ್ಳಾಪುರ: ಆತ ಪೊಲೀಸ್ ಹೆಡ್‌ ಕಾನ್ಸ್ಟೇಬಲ್‌. ಒಂದೇ ಠಾಣೆಯಲ್ಲಿ ಸುಮಾರು ಮೂರು ವರ್ಷಗಳಿಂದ ಕೆಲಸ ಮಾಡಿದ್ದ ಅನುಭವ ಹೊಂದಿದ್ದ. ಉತ್ತಮ ಜನಸ್ನೇಹಿ ಪೊಲೀಸ್‌ ಆಗಿ ಕೂಡ ಕೆಲಸ ಮಾಡ್ತಿದ್ದ. ತನ್ನ ಸಹಪಾಟಿಳೊಂದಿಗೂ ಫ್ರೆಂಡ್ಲಿಯಾಗಿಯೇ ಇದ್ದ. ನಿನ್ನೆ ರಾತ್ರಿ ಜಾತ್ರೆಗೆ ಬಂದೋಬಸ್ತ್‌ ನೈಟ್‌ ಡ್ಯೂಟಿ ಮುಗಿಸಿ…. ರಾತ್ರಿ ಮೂರು ಗಂಟೆಗೆ ಮನೆಗೆ ಹೋಗಿ ಸ್ವಲ್ಪ ಸಮಯ ರೆಸ್ಟ್‌ ಮಾಡಿದ್ದಾನೆ. ಪುನಃ ಮುಂಜಾನೆ ಏಳೂವರೆಗೆ ಡ್ಯೂಟಿಗೆ ಹೋಗ್ಬೇಕು ಅಂತ ಮನೆಯವರಿಗೆ ಹೇಳಿ ಠಾಣೆ ಬಳಿ ಬಂದವನು, ಠಾಣೆ ಆವರಣದ ರೆಸ್ಟ್‌ ರೂಮ್‌ ನಲ್ಲಿ ಹೆಣವಾಗಿ ಕಂಡುಬಂದಿದ್ದಾನೆ.

ಪೊಲೀಸ್‌ ಠಾಣೆಯ ಆವರಣದಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವ ಪೊಲೀಸಪ್ಪನ ಹೆಸರು ರಾಜಶೇಖರ್(48), ಇಪ್ಪತ್ತೈದು ವರ್ಷ ಹಿಂದೆ ಪೊಲೀಸ್‌ ಹುದ್ದೆಗೆ ಸೇರಿದ್ದ. ಶಿಡ್ಲಘಟ್ಟ ಚಿಂತಾಮಣಿ ಸೇರಿದಂತೆ ಜಿಲ್ಲೆಯ ಹಲವು ಪೊಲೀಸ್‌ ಠಾಣೆಗಳಲ್ಲಿ ಕೆಲಸ ಮಾಡಿರುವ ಅನುಭವ ಇತ್ತು. ಜನಸಾಮಾನ್ಯರೊಂದಿಗೆ ಉತ್ತಮ ಬಾಂದವ್ಯ ಇಟ್ಟುಕೊಂಡಿದ್ದ. ಕೈ ತುಂಬಾ ಸಂಬಳ. ಮಡದಿ ಇಬ್ಬರು ಮಕ್ಕಳೊಂದಿಗೆ ನೆಮ್ಮದಿಯಿಂದ ಇದ್ದ. ಹೆಚ್ಚಿನ ಹಣ ಸಂಪಾದಣೆ ಆಸಗೆ ಅಡ್ಡದಾರಿ ಹಿಡಿದ ಪೊಲೀಸಪ್ಪ ರಮ್ಮಿಸರ್ಕಲ್‌ ಎಂಬ ಆನ್‌ಲೈನ್‌ ಗೇಮ್‌ ಚಟ ಬೆಳಸಿಕೊಂಡಿದ್ದ. ದಿನದಿಂದ ದಿನಕ್ಕೆ ಹಣ ಕಳೆದುಕೊಂಡು ಕೊನೆಗೆ ನಲವತ್ತ ಲಕ್ಷಕ್ಕೂ ಹೆಚ್ಚಿನ ಹಣ ಕಳೆದುಕೊಂಡಿದ್ದಾನೆ. ಇಷ್ಟೇ ಅಲ್ಲದೆ ಸಾಲ ಮಾಡಿದ್ದಾನೆ. ಇದೇ ವಿಚಾರಕ್ಕೆ ಮನೆಯಲ್ಲಿ ಮನಸ್ತಾಪ ಮೂಡಿದೆ. ಇದರಿಂದ ಮನನೊಂದು ಬೇರೆ ದಾರಿ ಕಾಣದ ರಾಜಶೇಖರ್‌ ತಾನು ಕೆಲಸ ಮಾಡುತಿದ್ದ ಪೊಲೀಸ್‌ ಠಾಣೆ ಆವರಣದ ವಿಶ್ರಾಂತಿಗೃಹದಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ..

ಬೇರೆಯವರಿಗೆ ಬುದ್ದಿವಾದ ಹೇಳಬೇಕಾದ ಪೊಲೀಸ್ ಕಾನ್ಸ್ಟೇಬಲ್ ಆನ್ ಲೈನ್ ಗೇಮ್ ನಲ್ಲಿ ಹಣ ಕಳೆದುಕೊಂಡ ಹಿನ್ನೆಲೆ ಮನನೊಂದು ಪೊಲೀಸ್ ಠಾಣೆ ಆವರಣದಲ್ಲೇ ಸೂಸೈಡ್ ಮಾಡಿಕೊಂಡಿದ್ದಾನೆ. ಈತ ಹಲವು ವರ್ಷಗಳಿಂದ ರಮ್ಮಿ ಸರ್ಕಲ್ ಆನ್ ಲೈನ್ ಗೇಮ್ ಹುಚ್ಚುಬೆಳೆಸಿಕೊಂಡಿದ್ದು, ಸಾಕಷ್ಟು ಹಣ ಕಳೆದುಕೊಂಡಿದ್ದಲ್ಲೆ ಅದಕ್ಕೆ ಸಾಲ ಸಹ ಮಾಡಿಕೊಂಡಿದ್ದನಂತೆ.

ಇದೇ ವಿಚಾರದಲ್ಲಿ ಹಣ ಕಳೆದುಕೊಂಡಿರೋದಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಹೇಳಲಾಗುತ್ತಿದೆ.

ಘಟನೆ ಸಂಬಂದ ಚಿಕ್ಕಬಳ್ಳಾಪುರ ಎಸ್ಪಿ ಕುಶಲ್ ಚೌಕ್ಸೆ ಹಾಗೂ ಮಂಚೇನಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಶವವನ್ನ ಮರಣೋತ್ತರ ಪರೀಕ್ಷೆಗೆ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ಸಾಗಿಸಿದ್ದಾರೆ..

ಇನ್ನೂ ಈ ಬಗ್ಗೆ ದೂರು ದಾಖಲಿಸಿಕೊಂಡ ಮಂಚೇನಹಳ್ಳಿ ಪೊಲೀಸರು ಮುಂದಿನ ಕ್ರಮ ಜರುಗಿಸಿದ್ದಾರೆ. ಒಟ್ಟಾರೆ ಜನಸಾಮನ್ಯರು ತಪ್ಪು ಮಾಡಿದರೆ ತಿದ್ದು ಬುದ್ದಿ ಹೇಳಬೇಕಾದ ಪೊಲೀಸರೇ ಮಾಡಬಾರದ ತಪ್ಪು ಪೊಲೀಸ್‌ ಠಾಣೆ ಆವರಣದಲ್ಲೇ ಆತ್ಮಹತ್ಯೆ ಮಡಿಕೊಂಡರೇ, ಸಮಾಜವನ್ನು ತಿದ್ದಿ ಬುದ್ದಿ ಹೇಳೋರು ಯಾರು…?

ಆನ್‌ ಲೈನ್‌ ವಂಚಕರನ್ನ ಎಡೆಮುರಿ ಕಟ್ಟಬೇಕಿದ್ದ ಪೊಲೀಸರೇ ಆನ್‌ ಲೈನ್‌ ಗೇಮ್‌ ವಂಚನೆಗೆ ಇದ್ದಬದ್ದ ಹಣದ ಜೊತೆಗೆ ಪ್ರಾಣ ಕಳೆದುಕೊಂಡು ಇದ್ದ ಇಬ್ಬರು ಮಕ್ಕಳು ಮಡದಿಯನ್ನು ಅನಾಥರನ್ನಾಗಿ ಮಾಡಿರುವುದು ದುರಂತ…..

Ramesh Babu

Journalist

Recent Posts

ಒಂದೇ ರಾತ್ರಿ ಎರಡು ಕಡೆ ಶ್ರೀಗಂಧದ ಮರಗಳ ಕಳವು

ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…

6 hours ago

ಬೈಕ್‌ಗೆ ಟಿಟಿ ವಾಹನ ಡಿಕ್ಕಿ ಪ್ರಕರಣ: ಇಬ್ಬರು ಯುವತಿಯರ ದುರ್ಮರಣ – ಮೃತರ ಕಣ್ಣು ದಾನ ಮಾಡಿ ಸಾರ್ಥಕತೆ ಮೆರೆದ ಕುಟುಂಬಸ್ಥರು

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…

7 hours ago

ಬೈಕ್ ಗೆ ಟಿಟಿ ವಾಹನ ಡಿಕ್ಕಿ: ಮಹಿಳೆ ಸಾವು: ಮತ್ತೋರ್ವ ಯುವತಿಗೆ ಗಂಭೀರ ಗಾಯ

ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ‌ ಬಾಶೆಟ್ಟಿಹಳ್ಳಿ ಕೈಗಾರಿಕಾ…

12 hours ago

ಹೆಣ್ಣು ಕೊಟ್ಟ ಮಾವನನ್ನೇ ಕೊಲೆಗೈದ ಅಳಿಯ

ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…

14 hours ago

ಕರ್ನಾಟಕದ ಮುಖ್ಯಮಂತ್ರಿ  ಡಿಕೆ ಶಿವಕುಮಾರ್ ಅವರಿಗೊಂದು ಬಹಿರಂಗ ಪತ್ರ..

ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…

17 hours ago

ಕರ್ನಾಟಕ ಹೆಚ್ಚು ತೆರಿಗೆ ನೀಡುತ್ತಿದ್ದು, ಇಲ್ಲಿಗೆ ಹೆಚ್ಚು ಅನುದಾನ ಬರಬೇಕೆಂಬ ತತ್ವ- ಚಿಂತನೆ ಸರಿಯಲ್ಲ. ಇದೆಲ್ಲವನ್ನು ಹಣಕಾಸು ಆಯೋಗ ನಿರ್ಧರಿಸುತ್ತದೆ- ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್‌ಪ್ರೆಸ್‌ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…

1 day ago