ಆನ್ ಲೈನ್ ಗೇಮ್ ಚಟ: ಕೈತುಂಬಾ ಸಾಲ: ಹೆಡ್‌ ಕಾನ್ಸ್ಟೇಬಲ್‌ ಆತ್ಮಹತ್ಯೆ

ಚಿಕ್ಕಬಳ್ಳಾಪುರ: ಆತ ಪೊಲೀಸ್ ಹೆಡ್‌ ಕಾನ್ಸ್ಟೇಬಲ್‌. ಒಂದೇ ಠಾಣೆಯಲ್ಲಿ ಸುಮಾರು ಮೂರು ವರ್ಷಗಳಿಂದ ಕೆಲಸ ಮಾಡಿದ್ದ ಅನುಭವ ಹೊಂದಿದ್ದ. ಉತ್ತಮ ಜನಸ್ನೇಹಿ ಪೊಲೀಸ್‌ ಆಗಿ ಕೂಡ ಕೆಲಸ ಮಾಡ್ತಿದ್ದ. ತನ್ನ ಸಹಪಾಟಿಳೊಂದಿಗೂ ಫ್ರೆಂಡ್ಲಿಯಾಗಿಯೇ ಇದ್ದ. ನಿನ್ನೆ ರಾತ್ರಿ ಜಾತ್ರೆಗೆ ಬಂದೋಬಸ್ತ್‌ ನೈಟ್‌ ಡ್ಯೂಟಿ ಮುಗಿಸಿ…. ರಾತ್ರಿ ಮೂರು ಗಂಟೆಗೆ ಮನೆಗೆ ಹೋಗಿ ಸ್ವಲ್ಪ ಸಮಯ ರೆಸ್ಟ್‌ ಮಾಡಿದ್ದಾನೆ. ಪುನಃ ಮುಂಜಾನೆ ಏಳೂವರೆಗೆ ಡ್ಯೂಟಿಗೆ ಹೋಗ್ಬೇಕು ಅಂತ ಮನೆಯವರಿಗೆ ಹೇಳಿ ಠಾಣೆ ಬಳಿ ಬಂದವನು, ಠಾಣೆ ಆವರಣದ ರೆಸ್ಟ್‌ ರೂಮ್‌ ನಲ್ಲಿ ಹೆಣವಾಗಿ ಕಂಡುಬಂದಿದ್ದಾನೆ.

ಪೊಲೀಸ್‌ ಠಾಣೆಯ ಆವರಣದಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವ ಪೊಲೀಸಪ್ಪನ ಹೆಸರು ರಾಜಶೇಖರ್(48), ಇಪ್ಪತ್ತೈದು ವರ್ಷ ಹಿಂದೆ ಪೊಲೀಸ್‌ ಹುದ್ದೆಗೆ ಸೇರಿದ್ದ. ಶಿಡ್ಲಘಟ್ಟ ಚಿಂತಾಮಣಿ ಸೇರಿದಂತೆ ಜಿಲ್ಲೆಯ ಹಲವು ಪೊಲೀಸ್‌ ಠಾಣೆಗಳಲ್ಲಿ ಕೆಲಸ ಮಾಡಿರುವ ಅನುಭವ ಇತ್ತು. ಜನಸಾಮಾನ್ಯರೊಂದಿಗೆ ಉತ್ತಮ ಬಾಂದವ್ಯ ಇಟ್ಟುಕೊಂಡಿದ್ದ. ಕೈ ತುಂಬಾ ಸಂಬಳ. ಮಡದಿ ಇಬ್ಬರು ಮಕ್ಕಳೊಂದಿಗೆ ನೆಮ್ಮದಿಯಿಂದ ಇದ್ದ. ಹೆಚ್ಚಿನ ಹಣ ಸಂಪಾದಣೆ ಆಸಗೆ ಅಡ್ಡದಾರಿ ಹಿಡಿದ ಪೊಲೀಸಪ್ಪ ರಮ್ಮಿಸರ್ಕಲ್‌ ಎಂಬ ಆನ್‌ಲೈನ್‌ ಗೇಮ್‌ ಚಟ ಬೆಳಸಿಕೊಂಡಿದ್ದ. ದಿನದಿಂದ ದಿನಕ್ಕೆ ಹಣ ಕಳೆದುಕೊಂಡು ಕೊನೆಗೆ ನಲವತ್ತ ಲಕ್ಷಕ್ಕೂ ಹೆಚ್ಚಿನ ಹಣ ಕಳೆದುಕೊಂಡಿದ್ದಾನೆ. ಇಷ್ಟೇ ಅಲ್ಲದೆ ಸಾಲ ಮಾಡಿದ್ದಾನೆ. ಇದೇ ವಿಚಾರಕ್ಕೆ ಮನೆಯಲ್ಲಿ ಮನಸ್ತಾಪ ಮೂಡಿದೆ. ಇದರಿಂದ ಮನನೊಂದು ಬೇರೆ ದಾರಿ ಕಾಣದ ರಾಜಶೇಖರ್‌ ತಾನು ಕೆಲಸ ಮಾಡುತಿದ್ದ ಪೊಲೀಸ್‌ ಠಾಣೆ ಆವರಣದ ವಿಶ್ರಾಂತಿಗೃಹದಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ..

ಬೇರೆಯವರಿಗೆ ಬುದ್ದಿವಾದ ಹೇಳಬೇಕಾದ ಪೊಲೀಸ್ ಕಾನ್ಸ್ಟೇಬಲ್ ಆನ್ ಲೈನ್ ಗೇಮ್ ನಲ್ಲಿ ಹಣ ಕಳೆದುಕೊಂಡ ಹಿನ್ನೆಲೆ ಮನನೊಂದು ಪೊಲೀಸ್ ಠಾಣೆ ಆವರಣದಲ್ಲೇ ಸೂಸೈಡ್ ಮಾಡಿಕೊಂಡಿದ್ದಾನೆ. ಈತ ಹಲವು ವರ್ಷಗಳಿಂದ ರಮ್ಮಿ ಸರ್ಕಲ್ ಆನ್ ಲೈನ್ ಗೇಮ್ ಹುಚ್ಚುಬೆಳೆಸಿಕೊಂಡಿದ್ದು, ಸಾಕಷ್ಟು ಹಣ ಕಳೆದುಕೊಂಡಿದ್ದಲ್ಲೆ ಅದಕ್ಕೆ ಸಾಲ ಸಹ ಮಾಡಿಕೊಂಡಿದ್ದನಂತೆ.

ಇದೇ ವಿಚಾರದಲ್ಲಿ ಹಣ ಕಳೆದುಕೊಂಡಿರೋದಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಹೇಳಲಾಗುತ್ತಿದೆ.

ಘಟನೆ ಸಂಬಂದ ಚಿಕ್ಕಬಳ್ಳಾಪುರ ಎಸ್ಪಿ ಕುಶಲ್ ಚೌಕ್ಸೆ ಹಾಗೂ ಮಂಚೇನಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಶವವನ್ನ ಮರಣೋತ್ತರ ಪರೀಕ್ಷೆಗೆ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ಸಾಗಿಸಿದ್ದಾರೆ..

ಇನ್ನೂ ಈ ಬಗ್ಗೆ ದೂರು ದಾಖಲಿಸಿಕೊಂಡ ಮಂಚೇನಹಳ್ಳಿ ಪೊಲೀಸರು ಮುಂದಿನ ಕ್ರಮ ಜರುಗಿಸಿದ್ದಾರೆ. ಒಟ್ಟಾರೆ ಜನಸಾಮನ್ಯರು ತಪ್ಪು ಮಾಡಿದರೆ ತಿದ್ದು ಬುದ್ದಿ ಹೇಳಬೇಕಾದ ಪೊಲೀಸರೇ ಮಾಡಬಾರದ ತಪ್ಪು ಪೊಲೀಸ್‌ ಠಾಣೆ ಆವರಣದಲ್ಲೇ ಆತ್ಮಹತ್ಯೆ ಮಡಿಕೊಂಡರೇ, ಸಮಾಜವನ್ನು ತಿದ್ದಿ ಬುದ್ದಿ ಹೇಳೋರು ಯಾರು…?

ಆನ್‌ ಲೈನ್‌ ವಂಚಕರನ್ನ ಎಡೆಮುರಿ ಕಟ್ಟಬೇಕಿದ್ದ ಪೊಲೀಸರೇ ಆನ್‌ ಲೈನ್‌ ಗೇಮ್‌ ವಂಚನೆಗೆ ಇದ್ದಬದ್ದ ಹಣದ ಜೊತೆಗೆ ಪ್ರಾಣ ಕಳೆದುಕೊಂಡು ಇದ್ದ ಇಬ್ಬರು ಮಕ್ಕಳು ಮಡದಿಯನ್ನು ಅನಾಥರನ್ನಾಗಿ ಮಾಡಿರುವುದು ದುರಂತ…..

Ramesh Babu

Journalist

Recent Posts

ಬಿಎಲ್‌ಒ ಕೆಲಸ ಬೇಡ: ಅಂಗನವಾಡಿಗಳಲ್ಲೇ ಎಲ್‌ಕೆಜಿ–ಯುಕೆಜಿ ಆರಂಭಕ್ಕೆ ಅಂಗನವಾಡಿ ನೌಕರರ ಸಂಘ ಒತ್ತಾಯ

ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…

13 hours ago

ಟ್ರಂಪ್ ಕಾರ್ಡ್…….

ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…

23 hours ago

ಚಿಕ್ಕಮಧುರೆ ಶನಿಮಹಾತ್ಮ ದೇವಾಲಯ ಬಳಿ ಕ್ಯಾಂಟರ್ ಪಲ್ಟಿ: ರಸ್ತೆಬದಿಯ ಅಂಗಡಿಗಳು ಜಖಂ

ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…

24 hours ago

ಹಾಲಿನ ಖರೀದಿ ದರ ಹೆಚ್ಚಳಕ್ಕೆ ರೈತರ ಬೃಹತ್ ಪ್ರತಿಭಟನೆ

ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…

1 day ago

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರ ಉನ್ನತೀಕರಣಕ್ಕೆ ಗುದ್ದಲಿ ಪೂಜೆ

ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್‌ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…

1 day ago

ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್‌ನಲ್ಲಿ ಕರಡಿಗಳ ಪ್ರತ್ಯಕ್ಷ: ನಂದಿಬೆಟ್ಟ ಸಮೀಪ ವನ್ಯಜೀವಿಗಳ ಓಡಾಟದಿಂದ ಆತಂಕ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…

1 day ago