ಕೋಲಾರ: ಅಮೆಜಾನ್ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ ಖಂಡನೀಯ ಹಾಗೂ ರೈತರ ಆಕ್ರೋಶವನ್ನು ಆಹ್ವಾನಿಸುವಂತದ್ದಾಗಿದ್ದು, ಕೂಡಲೇ ಈ ಮಾರಾಟವನ್ನು ನಿಲ್ಲಿಸುವಂತೆ ಆನ್ ಲೈನ್ ವೇದಿಕೆಗಳನ್ನು ನಿರ್ಬಂಧಿಸಬೇಕು ಎಂದು ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಉಪಾಧ್ಯಕ್ಷ ನುಕ್ಕನಹಳ್ಳಿ ಶ್ರೀರಾಮ್ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳನ್ನು ಆಗ್ರಹಿಸಿದರು.
ಈ ಕುರಿತು ಪತ್ರಿಕಾ ಹೇಳಿಕೆ ಮೂಲಕ ಖಂಡಿಸಿದ ಅವರು, ಕೋಟ್ಯಾಂತರ ಸಂಖ್ಯೆಯಲ್ಲಿ ರೈತರು ಹೈನುಗಾರಿಕೆಯಲ್ಲಿ ತೊಡಗಿಕೊಂಡಿದ್ದು ತಮ್ಮ ಜೀವನೋಪಾಯಕ್ಕಾಗಿ ಅವಲಂಬಿಸಿದ್ದಾರೆ. ಕರ್ನಾಟಕ ಹಾಲು ಒಕ್ಕೂಟ ಒಂದು ಕಡೆ ರೈತರಿಗೆ ಉತ್ಪಾದನಾ ವೆಚ್ಚ ನೀಡಲು ಇನ್ನೊಂದು ಕಡೆ ಸಂಗ್ರಹಿಸಿದ ಹಾಲನ್ನು ಪೂರ್ಣವಾಗಿ ಮಾರಾಟ ಮಾಡುವುದಕ್ಕೆ ಪ್ರಯಾಸ ಪಡುತ್ತಿವೆ.ಇಂತಹ ತೀವ್ರ ವಿಷಮ ಪರಿಸ್ಥಿತಿಯಲ್ಲಿ ಸಹಕಾರಿ ಹಾಲು ಒಕ್ಕೂಟವನ್ನು ತೀವ್ರ ಬಿಕ್ಕಟ್ಟಿಗೆ ದೂಡುವ ಇಂತಹ ಅಮೆಜಾನ್ ಮತ್ತು ಪ್ಲಿಪ್ ಕಾರ್ಟ್ ಮಾರಾಟದ ಕುತಂತ್ರವನ್ನು ತಕ್ಷಣ ನಿಲ್ಲಿಸಿದಿದ್ದರೆ ಅಮೇಜಾನ್ ಕಚೇರಿಗಳ ಎದುರು ಹೈನುಗಾರಿಕೆ ರೈತರ ತೀವ್ರ ಪ್ರತಿಭಟನೆ ಯನ್ನು ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು,
ಈ ಮಾರುಕಟ್ಟೆ ಕುತಂತ್ರದ ವಿರುದ್ಧ ಸಹಕಾರಿ ಒಕ್ಕೂಟ ಗಳನ್ನು ರಕ್ಷಿಸಲು ವಿಫಲರಾಗಿರುವ ಹಾಗೂ
ಒಕ್ಕೂಟ ವ್ಯವಸ್ಥೆಗೆ ವಿರುದ್ದವಾಗಿ ಸಹಕಾರಿ ಸಂಸ್ಥೆಗಳ ಮೇಲೆ ಸವಾರಿ ಮಾಡುವ ಮೂಲಕ ಕಾರ್ಪೊರೇಟ್ ದಾಳಿಗೆ ಸಿಲುಕಿಸುತ್ತಿರುವ ಕೇಂದ್ರ ಸಹಕಾರಿ ಸಚಿವ ಅಮಿತ್ ಷಾ ರವರು ಈ ಮಾರಾಟ ಕುತಂತ್ರದ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ನುಕ್ಕನಹಳ್ಳಿ ಶ್ರೀರಾಮ್ ಒತ್ತಾಯಿಸಿದರು.
Instant play casinos allow you to play casino games online without installing any software. These…
2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು, ದೊಡ್ಡಬಳ್ಳಾಪುರ ತಾಲೂಕಿನ ಕಂಟನಕುಂಟೆ ಗ್ರಾಮದ ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆಯು…
ಟೀ ಅಂಗಡಿ ಹುಡುಗನ ಮೇಲೆ ಪೊಲೀಸ್ ಇನ್ಸ್ ಪೆಕ್ಟರ್ ದರ್ಪ ಮೆರೆದಿರುವ ಘಟನೆ ದೇವನಹಳ್ಳಿಯ ಕನ್ನಮಂಗಲ ಗ್ರಾಮದಲ್ಲಿ ಹಾದುಹೋಗುವ ರಾಷ್ಟ್ರೀಯ…
Das Schreiben einer Facharbeit ist ein wichtiger Bestandteil des akademischen Lebens und erfordert sowohl Planung…
Welcome to our thorough overview on the very best online slots online casinos. If you're…
ಪರಿಶಿಷ್ಟ ಜಾತಿಯ ಎಲ್ಲಾ ಸಮುದಾಯಗಳಿಗೂ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಸಚಿವ ಸಂಪುಟ ಸಭೆ ಐತಿಹಾಸಿಕ ನಿರ್ಧಾರವನ್ನು ತೆಗೆದುಕೊಂಡಿದೆ. ಎಡ, ಬಲ…