ಕೋಲಾರ: ಅಮೆಜಾನ್ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ ಖಂಡನೀಯ ಹಾಗೂ ರೈತರ ಆಕ್ರೋಶವನ್ನು ಆಹ್ವಾನಿಸುವಂತದ್ದಾಗಿದ್ದು, ಕೂಡಲೇ ಈ ಮಾರಾಟವನ್ನು ನಿಲ್ಲಿಸುವಂತೆ ಆನ್ ಲೈನ್ ವೇದಿಕೆಗಳನ್ನು ನಿರ್ಬಂಧಿಸಬೇಕು ಎಂದು ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಉಪಾಧ್ಯಕ್ಷ ನುಕ್ಕನಹಳ್ಳಿ ಶ್ರೀರಾಮ್ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳನ್ನು ಆಗ್ರಹಿಸಿದರು.
ಈ ಕುರಿತು ಪತ್ರಿಕಾ ಹೇಳಿಕೆ ಮೂಲಕ ಖಂಡಿಸಿದ ಅವರು, ಕೋಟ್ಯಾಂತರ ಸಂಖ್ಯೆಯಲ್ಲಿ ರೈತರು ಹೈನುಗಾರಿಕೆಯಲ್ಲಿ ತೊಡಗಿಕೊಂಡಿದ್ದು ತಮ್ಮ ಜೀವನೋಪಾಯಕ್ಕಾಗಿ ಅವಲಂಬಿಸಿದ್ದಾರೆ. ಕರ್ನಾಟಕ ಹಾಲು ಒಕ್ಕೂಟ ಒಂದು ಕಡೆ ರೈತರಿಗೆ ಉತ್ಪಾದನಾ ವೆಚ್ಚ ನೀಡಲು ಇನ್ನೊಂದು ಕಡೆ ಸಂಗ್ರಹಿಸಿದ ಹಾಲನ್ನು ಪೂರ್ಣವಾಗಿ ಮಾರಾಟ ಮಾಡುವುದಕ್ಕೆ ಪ್ರಯಾಸ ಪಡುತ್ತಿವೆ.ಇಂತಹ ತೀವ್ರ ವಿಷಮ ಪರಿಸ್ಥಿತಿಯಲ್ಲಿ ಸಹಕಾರಿ ಹಾಲು ಒಕ್ಕೂಟವನ್ನು ತೀವ್ರ ಬಿಕ್ಕಟ್ಟಿಗೆ ದೂಡುವ ಇಂತಹ ಅಮೆಜಾನ್ ಮತ್ತು ಪ್ಲಿಪ್ ಕಾರ್ಟ್ ಮಾರಾಟದ ಕುತಂತ್ರವನ್ನು ತಕ್ಷಣ ನಿಲ್ಲಿಸಿದಿದ್ದರೆ ಅಮೇಜಾನ್ ಕಚೇರಿಗಳ ಎದುರು ಹೈನುಗಾರಿಕೆ ರೈತರ ತೀವ್ರ ಪ್ರತಿಭಟನೆ ಯನ್ನು ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು,
ಈ ಮಾರುಕಟ್ಟೆ ಕುತಂತ್ರದ ವಿರುದ್ಧ ಸಹಕಾರಿ ಒಕ್ಕೂಟ ಗಳನ್ನು ರಕ್ಷಿಸಲು ವಿಫಲರಾಗಿರುವ ಹಾಗೂ
ಒಕ್ಕೂಟ ವ್ಯವಸ್ಥೆಗೆ ವಿರುದ್ದವಾಗಿ ಸಹಕಾರಿ ಸಂಸ್ಥೆಗಳ ಮೇಲೆ ಸವಾರಿ ಮಾಡುವ ಮೂಲಕ ಕಾರ್ಪೊರೇಟ್ ದಾಳಿಗೆ ಸಿಲುಕಿಸುತ್ತಿರುವ ಕೇಂದ್ರ ಸಹಕಾರಿ ಸಚಿವ ಅಮಿತ್ ಷಾ ರವರು ಈ ಮಾರಾಟ ಕುತಂತ್ರದ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ನುಕ್ಕನಹಳ್ಳಿ ಶ್ರೀರಾಮ್ ಒತ್ತಾಯಿಸಿದರು.
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…
ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…
ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…