ಕೋಲಾರ: ಅಮೆಜಾನ್ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ ಖಂಡನೀಯ ಹಾಗೂ ರೈತರ ಆಕ್ರೋಶವನ್ನು ಆಹ್ವಾನಿಸುವಂತದ್ದಾಗಿದ್ದು, ಕೂಡಲೇ ಈ ಮಾರಾಟವನ್ನು ನಿಲ್ಲಿಸುವಂತೆ ಆನ್ ಲೈನ್ ವೇದಿಕೆಗಳನ್ನು ನಿರ್ಬಂಧಿಸಬೇಕು ಎಂದು ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಉಪಾಧ್ಯಕ್ಷ ನುಕ್ಕನಹಳ್ಳಿ ಶ್ರೀರಾಮ್ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳನ್ನು ಆಗ್ರಹಿಸಿದರು.
ಈ ಕುರಿತು ಪತ್ರಿಕಾ ಹೇಳಿಕೆ ಮೂಲಕ ಖಂಡಿಸಿದ ಅವರು, ಕೋಟ್ಯಾಂತರ ಸಂಖ್ಯೆಯಲ್ಲಿ ರೈತರು ಹೈನುಗಾರಿಕೆಯಲ್ಲಿ ತೊಡಗಿಕೊಂಡಿದ್ದು ತಮ್ಮ ಜೀವನೋಪಾಯಕ್ಕಾಗಿ ಅವಲಂಬಿಸಿದ್ದಾರೆ. ಕರ್ನಾಟಕ ಹಾಲು ಒಕ್ಕೂಟ ಒಂದು ಕಡೆ ರೈತರಿಗೆ ಉತ್ಪಾದನಾ ವೆಚ್ಚ ನೀಡಲು ಇನ್ನೊಂದು ಕಡೆ ಸಂಗ್ರಹಿಸಿದ ಹಾಲನ್ನು ಪೂರ್ಣವಾಗಿ ಮಾರಾಟ ಮಾಡುವುದಕ್ಕೆ ಪ್ರಯಾಸ ಪಡುತ್ತಿವೆ.ಇಂತಹ ತೀವ್ರ ವಿಷಮ ಪರಿಸ್ಥಿತಿಯಲ್ಲಿ ಸಹಕಾರಿ ಹಾಲು ಒಕ್ಕೂಟವನ್ನು ತೀವ್ರ ಬಿಕ್ಕಟ್ಟಿಗೆ ದೂಡುವ ಇಂತಹ ಅಮೆಜಾನ್ ಮತ್ತು ಪ್ಲಿಪ್ ಕಾರ್ಟ್ ಮಾರಾಟದ ಕುತಂತ್ರವನ್ನು ತಕ್ಷಣ ನಿಲ್ಲಿಸಿದಿದ್ದರೆ ಅಮೇಜಾನ್ ಕಚೇರಿಗಳ ಎದುರು ಹೈನುಗಾರಿಕೆ ರೈತರ ತೀವ್ರ ಪ್ರತಿಭಟನೆ ಯನ್ನು ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು,
ಈ ಮಾರುಕಟ್ಟೆ ಕುತಂತ್ರದ ವಿರುದ್ಧ ಸಹಕಾರಿ ಒಕ್ಕೂಟ ಗಳನ್ನು ರಕ್ಷಿಸಲು ವಿಫಲರಾಗಿರುವ ಹಾಗೂ
ಒಕ್ಕೂಟ ವ್ಯವಸ್ಥೆಗೆ ವಿರುದ್ದವಾಗಿ ಸಹಕಾರಿ ಸಂಸ್ಥೆಗಳ ಮೇಲೆ ಸವಾರಿ ಮಾಡುವ ಮೂಲಕ ಕಾರ್ಪೊರೇಟ್ ದಾಳಿಗೆ ಸಿಲುಕಿಸುತ್ತಿರುವ ಕೇಂದ್ರ ಸಹಕಾರಿ ಸಚಿವ ಅಮಿತ್ ಷಾ ರವರು ಈ ಮಾರಾಟ ಕುತಂತ್ರದ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ನುಕ್ಕನಹಳ್ಳಿ ಶ್ರೀರಾಮ್ ಒತ್ತಾಯಿಸಿದರು.
ಭಾರತದ ಬಹಳಷ್ಟು ಮಧ್ಯಮ ವರ್ಗದ ಜನರಲ್ಲಿ ಜೀವನೋತ್ಸಾಹ ಕಡಿಮೆಯಾಗುತ್ತಿದೇಯೇ ಎಂಬ ಅನುಮಾನ ಶುರುವಾಗಿದೆ. ನಿಜಕ್ಕೂ ಬೃಹತ್ ಸಂಖ್ಯೆಯ ಮಧ್ಯಮ ವರ್ಗದವರು…
ದೊಡ್ಡಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಕಳ್ಳತನ ಪ್ರಕರಣಗಳು ಆತಂಕಕಾರಿ ಪ್ರಮಾಣದಲ್ಲಿ ಹೆಚ್ಚಾಗುತ್ತಿದ್ದು, ಜನಸಾಮಾನ್ಯರ ನೆಮ್ಮದಿ ಕದಡಿದೆ. ಮಹಿಳೆಯರ ಚಿನ್ನಾಭರಣ,…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಸೇರಿದಂತೆ ತಮ್ಮೊಂದಿಗೆ ಬುಧವಾರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ 13 ಸಚಿವರಿಗೆ ಗುರುವಾರ ಖಾತೆ…
ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರವ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ವಸತಿ ಶಾಲೆಗಳಲ್ಲಿ ತಾತ್ಕಾಲಿಕವಾಗಿ ಗೌರವಧನ ಆಧಾರದ…
ಮಾವು ಮತ್ತು ಹಲಸು ಹಣ್ಣಿನ ಋತುಮಾನದ ಈ ಸಂದರ್ಭದಲ್ಲಿ ತೋಟಗಾರಿಕೆ ಇಲಾಖೆ ವತಿಯಿಂದ ರೈತರಿಗೆ ಹಾಗೂ ಗ್ರಾಹಕರಿಗೆ ಅನುಕೂಲವಾಗಲೆಂದು ಒಂದೇ…
ದೊಡ್ಡಬಳ್ಳಾಪುರ ನಗರದ ಡಿ ಕ್ರಾಸ್ ಬಳಿ ನಿಲ್ಲಿಸಿದ್ದ ಟಿವಿಎಸ್ ಎಕ್ಸ್ಎಲ್-100 ವಾಹನವನ್ನು ಕಳ್ಳನೊಬ್ಬ ಕಳವು ಮಾಡಿಕೊಂಡು ಹೋಗಿರುವ ಘಟನೆ ಬುಧವಾರ…