ಕೋಲಾರ: ಅಮೆಜಾನ್ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ ಖಂಡನೀಯ ಹಾಗೂ ರೈತರ ಆಕ್ರೋಶವನ್ನು ಆಹ್ವಾನಿಸುವಂತದ್ದಾಗಿದ್ದು, ಕೂಡಲೇ ಈ ಮಾರಾಟವನ್ನು ನಿಲ್ಲಿಸುವಂತೆ ಆನ್ ಲೈನ್ ವೇದಿಕೆಗಳನ್ನು ನಿರ್ಬಂಧಿಸಬೇಕು ಎಂದು ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಉಪಾಧ್ಯಕ್ಷ ನುಕ್ಕನಹಳ್ಳಿ ಶ್ರೀರಾಮ್ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳನ್ನು ಆಗ್ರಹಿಸಿದರು.
ಈ ಕುರಿತು ಪತ್ರಿಕಾ ಹೇಳಿಕೆ ಮೂಲಕ ಖಂಡಿಸಿದ ಅವರು, ಕೋಟ್ಯಾಂತರ ಸಂಖ್ಯೆಯಲ್ಲಿ ರೈತರು ಹೈನುಗಾರಿಕೆಯಲ್ಲಿ ತೊಡಗಿಕೊಂಡಿದ್ದು ತಮ್ಮ ಜೀವನೋಪಾಯಕ್ಕಾಗಿ ಅವಲಂಬಿಸಿದ್ದಾರೆ. ಕರ್ನಾಟಕ ಹಾಲು ಒಕ್ಕೂಟ ಒಂದು ಕಡೆ ರೈತರಿಗೆ ಉತ್ಪಾದನಾ ವೆಚ್ಚ ನೀಡಲು ಇನ್ನೊಂದು ಕಡೆ ಸಂಗ್ರಹಿಸಿದ ಹಾಲನ್ನು ಪೂರ್ಣವಾಗಿ ಮಾರಾಟ ಮಾಡುವುದಕ್ಕೆ ಪ್ರಯಾಸ ಪಡುತ್ತಿವೆ.ಇಂತಹ ತೀವ್ರ ವಿಷಮ ಪರಿಸ್ಥಿತಿಯಲ್ಲಿ ಸಹಕಾರಿ ಹಾಲು ಒಕ್ಕೂಟವನ್ನು ತೀವ್ರ ಬಿಕ್ಕಟ್ಟಿಗೆ ದೂಡುವ ಇಂತಹ ಅಮೆಜಾನ್ ಮತ್ತು ಪ್ಲಿಪ್ ಕಾರ್ಟ್ ಮಾರಾಟದ ಕುತಂತ್ರವನ್ನು ತಕ್ಷಣ ನಿಲ್ಲಿಸಿದಿದ್ದರೆ ಅಮೇಜಾನ್ ಕಚೇರಿಗಳ ಎದುರು ಹೈನುಗಾರಿಕೆ ರೈತರ ತೀವ್ರ ಪ್ರತಿಭಟನೆ ಯನ್ನು ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು,
ಈ ಮಾರುಕಟ್ಟೆ ಕುತಂತ್ರದ ವಿರುದ್ಧ ಸಹಕಾರಿ ಒಕ್ಕೂಟ ಗಳನ್ನು ರಕ್ಷಿಸಲು ವಿಫಲರಾಗಿರುವ ಹಾಗೂ
ಒಕ್ಕೂಟ ವ್ಯವಸ್ಥೆಗೆ ವಿರುದ್ದವಾಗಿ ಸಹಕಾರಿ ಸಂಸ್ಥೆಗಳ ಮೇಲೆ ಸವಾರಿ ಮಾಡುವ ಮೂಲಕ ಕಾರ್ಪೊರೇಟ್ ದಾಳಿಗೆ ಸಿಲುಕಿಸುತ್ತಿರುವ ಕೇಂದ್ರ ಸಹಕಾರಿ ಸಚಿವ ಅಮಿತ್ ಷಾ ರವರು ಈ ಮಾರಾಟ ಕುತಂತ್ರದ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ನುಕ್ಕನಹಳ್ಳಿ ಶ್ರೀರಾಮ್ ಒತ್ತಾಯಿಸಿದರು.
ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…
ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…