Categories: ಕೊಡಗು

ಆನ್ ಲೈನ್ ವಂಚಕರಿಂದ ಮೋಸ ಹೋದ ಡಿವೈಎಸ್​ಪಿ…!: ರೂ. 15,98,761 ಗುಳುಂ ಮಾಡಿದ ಆನ್ ಲೈನ್ ಖದೀಮರು

ಆನ್ ಲೈನ್ ಖದೀಮರು ಡಿವೈಎಸ್​ಪಿವೊಬ್ಬರ ಎರಡು ಬ್ಯಾಂಕ್​ ಖಾತೆಗಳಿಗೆ ಕನ್ನ ಹಾಕಿ ಅವರ ಅರಿವಿಗೆ ಬಾರದಂತೆ 15,98,761 ರೂ. ಗಳನ್ನು ವರ್ಗಾವಣೆ ಮಾಡಿಕೊಂಡು ವಂಚಿಸಿರುವ ಘಟನೆ ವರದಿಯಾಗಿದೆ. ಇಂತಹ ದಗಾಕೋರತನವನ್ನು ಮಟ್ಟ ಹಾಕಬೇಕಾಗಿದ್ದ ಪೊಲೀಸ್ ಅಧಿಕಾರಿಯೇ ಜನಸಾಮಾನ್ಯರಂತೆ ವಂಚಕರಿಂದ ಚಳ್ಳೆಹಣ್ಣು ತಿಂದಿದ್ದಾರೆ.

ಈ ವಂಚನೆ ಪ್ರಕರಣ ಹಾಸನದಲ್ಲಿ ನಡೆದಿದ್ದು, ಕೊಡಗಿನ ಎರಡು ಪ್ರಮುಖ ಬ್ಯಾಂಕ್ ಗಳಲ್ಲಿದ್ದ ಇವರ ಹಣವನ್ನು  ಎಗರಿಸಲಾಗಿದೆ.

ಹಾಸನ ಉಪವಿಭಾಗದ ಡಿವೈಎಸ್​ಪಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಪಿ.ಕೆ.ಮುರಳೀಧರ್ ಅವರೇ ಲಕ್ಷಾಂತರ ರೂ. ವನ್ನು ಕಳೆದುಕೊಂಡು ಸ್ವತಃ ದೂರಿನೊಂದಿಗೆ  ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಾರೆ.

ಡಿವೈಎಸ್​ಪಿ ಪಿ.ಕೆ.ಮುರಳೀಧರ್ ಅವರು ಮಡಿಕೇರಿಯ ಕೆನರಾ ಬ್ಯಾಂಕ್ ನ ಮೈನ್ ಬ್ರ್ಯಾಂಚ್ ನಲ್ಲಿ ಮತ್ತು ಭಾಗಮಂಡಲದ ಕೆನರಾ ಬ್ಯಾಂಕ್‌ ಶಾಖೆಯಲ್ಲಿ ಖಾತೆಗಳನ್ನು ಹೊಂದಿದ್ದಾರೆ. ಮೇ. 20 ರಂದು ಮಧ್ಯಾಹ್ನ 1.30ರ ಸಮಯದಲ್ಲಿ ಇವರ ಫೋನ್​ಗೆ ಬಂದ ಮೆಸೇಜ್‌ಗಳನ್ನು ನೋಡಿ ಹೌಹಾರಿದ್ದಾರೆ. ಆ ಮೆಸೇಜ್‌ಗಳ ಮೂಲಕ  ಖದೀಮರ ಕೈಚಳಕ ಬೆಳಕಿಗೆ ಬಂದಿದೆ. ಡಿವೈಎಸ್‌ಪಿ ಅವರ  ಗಮನಕ್ಕೆ ಬಾರದೆ ಈ ಎರಡೂ ಖಾತೆಗಳಿಂದ ಖತರ್ನಾಕ್ ಚೋರರ ಬೇರೆ ಬೇರೆ ಖಾತೆಗಳಿಗೆ ಹಣ ವರ್ಗಾವಣೆ ಆಗಿದೆ.

ಕೆನರಾ ಬ್ಯಾಂಕ್ ಮಡಿಕೇರಿ ಮೈನ್ ಬ್ರ್ಯಾಂಚ್ ನ ಖಾತೆಯಿಂದ ಬೆಳಗ್ಗೆ 10.29 ಗಂಟೆಯಿಂದ ಮಧ್ಯಾಹ್ನ 1.30 ಗಂಟೆವರೆಗೆ ಒಟ್ಟು 25 ವರ್ಗಾವಣೆಗಳ ಮೂಲಕ ಒಟ್ಟು 12,12,711 ರೂ. ಗಳಿಗೆ ಕನ್ನ ಹಾಕಲಾಗಿದೆ.

ಭಾಗಮಂಡಲ ಕೆನರಾಬ್ಯಾಂಕ್ ಶಾಖೆ ಖಾತೆಯಿಂದ ಬೆಳಿಗ್ಗೆ 10.28 ಗಂಟೆಯಿಂದ ಮಧ್ಯಾಹ್ನ 12.56 ಗಂಟೆವರೆಗೆ ಒಟ್ಟು 10 ವರ್ಗಾವಣೆ ಮೂಲಕ ಒಟ್ಟು 3,88,050 ರೂ. ಗಳನ್ನು ಮಂಗಮಾಯ ಮಾಡಲಾಗಿದೆ.

ಈ ಎರಡು ಕೆನರಾ ಬ್ಯಾಂಕ್ ಖಾತೆಗಳಿಂದ ಒಟ್ಟು 15,98,761 ರೂ. ವನ್ನು  ವಂಚಕರು ಬೇರೆ ಬೇರೆ ಬ್ಯಾಂಕ್ ಖಾತೆಗಳಿಗೆ ವರ್ಗಾವಣೆ ಮಾಡಿಕೊಂಡಿದ್ದಾರೆ. ಹಾಸನದ ಸೆನ್ ಪೊಲೀಸ್ ಠಾಣೆಗೆ ದೂರು ನೀಡಿರುವ  ಡಿವೈಎಸ್​ಪಿ  ಪಿ.ಕೆ. ಮುರಳೀಧರ್ ಅವರು ಆನ್ ಲೈನ್ ಖದೀಮರನ್ನು ಪತ್ತೆ ಮಾಡಿ  ಹಣ ವಾಪಸ್ ಕೊಡಿಸುವಂತೆ ಕೇಳಿಕೊಂಡಿದ್ದಾರೆ.

Ramesh Babu

Journalist

Recent Posts

ರಣ ಬಿಸಿಲಿನಿಂದ ಕಂಗೆಟ್ಟಿದ್ದ ಜನ: ಧರೆಗಿಳಿದ ವರ್ಷದ ಮೊದಲ ಮಳೆ: ಬಿಸಿಲಿನ ಬೇಗೆಗೆ ಬೆಂದಿದ್ದ ಭೂಮಿ ತಂಪು ತಂಪು: ಗುಡುಗು ಸಹಿತ ಬಿದ್ದ ಮಳೆ ಹನಿಗೆ ಜನ ಫುಲ್ ಖುಷ್

ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರದ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿಯಿತು. ಬಂಗಾಳ…

55 minutes ago

ನಾಳೆ (ಮಾ.18) ಎಸ್.ಎಸ್.ಎಲ್.ಸಿ ಪರೀಕ್ಷೆ -01: ಬೆಂ. ಗ್ರಾ ಜಿಲ್ಲೆಯಲ್ಲಿ 14,314 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…

3 hours ago

ನೂತನ ಶಾಲಾ ಕಟ್ಟಡ ಮತ್ತು ಅಂಗನವಾಡಿ ಕೇಂದ್ರ ಉದ್ಘಾಟನೆ

ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್‌ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ…

9 hours ago

ಮೂಡಬಿದ್ರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿಜಿ ಕಾಮಕಾಂಡ ಬಯಲು: ದೂರು ನೀಡಲು ಬಂದ ಮಹಿಳೆಯನ್ನೇ ಲೈಂಗಿಕವಾಗಿ ಬಳಸಿಕೊಳ್ಳಲು ಸಂಚು: ಸಂತ್ರಸ್ತೆಯ ಅಪ್ರಾಪ್ತ ಮಗಳಿಗೂ ಇನ್ಸ್‌ಪೆಕ್ಟರ್ ಬೆದರಿಕೆ ಆರೋಪ

ಕಾನೂನು ರಕ್ಷಕನೇ ಭಕ್ಷಕನಾದರೆ ಸಾಮಾನ್ಯ ಜನರ ಗತಿ ಏನು? ದೂರು ನೀಡಲು ಬಂದವರನ್ನೇ ಲೈಂಗಿಕವಾಗಿ ಬಳಸಿಕೊಳ್ಳುವ ಕಾಮುಕ ಪೊಲೀಸ್ ಅಧಿಕಾರಿಯೊಬ್ಬನ…

10 hours ago

ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆ: ಮುಗಿಲು ಮುಟ್ಟಿದ ಕುಟುಂಬಸ್ಥರ ಅಳಲು

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಅಲಸಹಳ್ಳಿ ಗೇಟ್ ಸಮೀಪದ ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನೊಬ್ಬನ ಶವ…

11 hours ago

ನೈತಿಕತೆ, ಸಾಹಿತ್ಯ ಮತ್ತು ಜ್ಞಾನಪೀಠ ಪ್ರಶಸ್ತಿ…

ಭಾರತ ಸಾಹಿತ್ಯದ ನೊಬೆಲ್ ಎಂದೇ ಹೆಸರಾದ ಜ್ಞಾನಪೀಠ ಪ್ರಶಸ್ತಿ ಸಾಹಿತ್ಯ ಕ್ಷೇತ್ರದ ಅತ್ಯುನ್ನತ ಪ್ರಶಸ್ತಿ ಮಾತ್ರವಲ್ಲ, ಅದನ್ನು ಪಡೆದ ವ್ಯಕ್ತಿಗಳು…

12 hours ago