Categories: ಕೊಡಗು

ಆನ್ ಲೈನ್ ವಂಚಕರಿಂದ ಮೋಸ ಹೋದ ಡಿವೈಎಸ್​ಪಿ…!: ರೂ. 15,98,761 ಗುಳುಂ ಮಾಡಿದ ಆನ್ ಲೈನ್ ಖದೀಮರು

ಆನ್ ಲೈನ್ ಖದೀಮರು ಡಿವೈಎಸ್​ಪಿವೊಬ್ಬರ ಎರಡು ಬ್ಯಾಂಕ್​ ಖಾತೆಗಳಿಗೆ ಕನ್ನ ಹಾಕಿ ಅವರ ಅರಿವಿಗೆ ಬಾರದಂತೆ 15,98,761 ರೂ. ಗಳನ್ನು ವರ್ಗಾವಣೆ ಮಾಡಿಕೊಂಡು ವಂಚಿಸಿರುವ ಘಟನೆ ವರದಿಯಾಗಿದೆ. ಇಂತಹ ದಗಾಕೋರತನವನ್ನು ಮಟ್ಟ ಹಾಕಬೇಕಾಗಿದ್ದ ಪೊಲೀಸ್ ಅಧಿಕಾರಿಯೇ ಜನಸಾಮಾನ್ಯರಂತೆ ವಂಚಕರಿಂದ ಚಳ್ಳೆಹಣ್ಣು ತಿಂದಿದ್ದಾರೆ.

ಈ ವಂಚನೆ ಪ್ರಕರಣ ಹಾಸನದಲ್ಲಿ ನಡೆದಿದ್ದು, ಕೊಡಗಿನ ಎರಡು ಪ್ರಮುಖ ಬ್ಯಾಂಕ್ ಗಳಲ್ಲಿದ್ದ ಇವರ ಹಣವನ್ನು  ಎಗರಿಸಲಾಗಿದೆ.

ಹಾಸನ ಉಪವಿಭಾಗದ ಡಿವೈಎಸ್​ಪಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಪಿ.ಕೆ.ಮುರಳೀಧರ್ ಅವರೇ ಲಕ್ಷಾಂತರ ರೂ. ವನ್ನು ಕಳೆದುಕೊಂಡು ಸ್ವತಃ ದೂರಿನೊಂದಿಗೆ  ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಾರೆ.

ಡಿವೈಎಸ್​ಪಿ ಪಿ.ಕೆ.ಮುರಳೀಧರ್ ಅವರು ಮಡಿಕೇರಿಯ ಕೆನರಾ ಬ್ಯಾಂಕ್ ನ ಮೈನ್ ಬ್ರ್ಯಾಂಚ್ ನಲ್ಲಿ ಮತ್ತು ಭಾಗಮಂಡಲದ ಕೆನರಾ ಬ್ಯಾಂಕ್‌ ಶಾಖೆಯಲ್ಲಿ ಖಾತೆಗಳನ್ನು ಹೊಂದಿದ್ದಾರೆ. ಮೇ. 20 ರಂದು ಮಧ್ಯಾಹ್ನ 1.30ರ ಸಮಯದಲ್ಲಿ ಇವರ ಫೋನ್​ಗೆ ಬಂದ ಮೆಸೇಜ್‌ಗಳನ್ನು ನೋಡಿ ಹೌಹಾರಿದ್ದಾರೆ. ಆ ಮೆಸೇಜ್‌ಗಳ ಮೂಲಕ  ಖದೀಮರ ಕೈಚಳಕ ಬೆಳಕಿಗೆ ಬಂದಿದೆ. ಡಿವೈಎಸ್‌ಪಿ ಅವರ  ಗಮನಕ್ಕೆ ಬಾರದೆ ಈ ಎರಡೂ ಖಾತೆಗಳಿಂದ ಖತರ್ನಾಕ್ ಚೋರರ ಬೇರೆ ಬೇರೆ ಖಾತೆಗಳಿಗೆ ಹಣ ವರ್ಗಾವಣೆ ಆಗಿದೆ.

ಕೆನರಾ ಬ್ಯಾಂಕ್ ಮಡಿಕೇರಿ ಮೈನ್ ಬ್ರ್ಯಾಂಚ್ ನ ಖಾತೆಯಿಂದ ಬೆಳಗ್ಗೆ 10.29 ಗಂಟೆಯಿಂದ ಮಧ್ಯಾಹ್ನ 1.30 ಗಂಟೆವರೆಗೆ ಒಟ್ಟು 25 ವರ್ಗಾವಣೆಗಳ ಮೂಲಕ ಒಟ್ಟು 12,12,711 ರೂ. ಗಳಿಗೆ ಕನ್ನ ಹಾಕಲಾಗಿದೆ.

ಭಾಗಮಂಡಲ ಕೆನರಾಬ್ಯಾಂಕ್ ಶಾಖೆ ಖಾತೆಯಿಂದ ಬೆಳಿಗ್ಗೆ 10.28 ಗಂಟೆಯಿಂದ ಮಧ್ಯಾಹ್ನ 12.56 ಗಂಟೆವರೆಗೆ ಒಟ್ಟು 10 ವರ್ಗಾವಣೆ ಮೂಲಕ ಒಟ್ಟು 3,88,050 ರೂ. ಗಳನ್ನು ಮಂಗಮಾಯ ಮಾಡಲಾಗಿದೆ.

ಈ ಎರಡು ಕೆನರಾ ಬ್ಯಾಂಕ್ ಖಾತೆಗಳಿಂದ ಒಟ್ಟು 15,98,761 ರೂ. ವನ್ನು  ವಂಚಕರು ಬೇರೆ ಬೇರೆ ಬ್ಯಾಂಕ್ ಖಾತೆಗಳಿಗೆ ವರ್ಗಾವಣೆ ಮಾಡಿಕೊಂಡಿದ್ದಾರೆ. ಹಾಸನದ ಸೆನ್ ಪೊಲೀಸ್ ಠಾಣೆಗೆ ದೂರು ನೀಡಿರುವ  ಡಿವೈಎಸ್​ಪಿ  ಪಿ.ಕೆ. ಮುರಳೀಧರ್ ಅವರು ಆನ್ ಲೈನ್ ಖದೀಮರನ್ನು ಪತ್ತೆ ಮಾಡಿ  ಹಣ ವಾಪಸ್ ಕೊಡಿಸುವಂತೆ ಕೇಳಿಕೊಂಡಿದ್ದಾರೆ.

Ramesh Babu

Journalist

Recent Posts

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

12 hours ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

19 hours ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

22 hours ago

ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆದ ನಟ ದರ್ಶನ್

ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…

22 hours ago

ಭೀಮನ ಅಮವಾಸ್ಯೆ ದಿನದಂದು ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವು

ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…

1 day ago

ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ರೈತರು ಬೆಳೆ ವಿಮೆಗೆ ನೊಂದಾಯಿಸಿ

ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…

1 day ago